Homeಮುಖಪುಟಮಧ್ಯಪ್ರದೇಶದಲ್ಲಿ ಕೃಷಿ ಕಾಯ್ದೆಗಳ ಜಾರಿ: ವರ್ತಕರಿಂದ ಸುಮಾರು 5 ಕೋಟಿ ರೂ ವಂಚನೆಯಾಗಿದೆ ಎಂದು ರೈತರ...

ಮಧ್ಯಪ್ರದೇಶದಲ್ಲಿ ಕೃಷಿ ಕಾಯ್ದೆಗಳ ಜಾರಿ: ವರ್ತಕರಿಂದ ಸುಮಾರು 5 ಕೋಟಿ ರೂ ವಂಚನೆಯಾಗಿದೆ ಎಂದು ರೈತರ ಆರೋಪ

ಸೆಪ್ಟಂಬರ್ ತಿಂಗಳಿನಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳ ಜಾರಿಯಾದಾಗಿನಿಂದ ರಾಜ್ಯ ಸರ್ಕಾರವು ಮಂಡಿಗಳ ಹೊರಗೆ ಹೋಲ್‌ಸೇಲ್‌ನಲ್ಲಿ ಬೆಳೆಗಳನ್ನು ಮಾರಾಟ ಮಾಡಲು ಅವಕಾಶ ನೀಡಿದೆ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಸೇರಿದಂತೆ ದೇಶಾದ್ಯಂತ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬೃಹತ್ ರೈತ ಹೋರಾಟ ನಡೆಯುತ್ತಿದೆ. ಈ ಬೆನ್ನಲ್ಲೆ ಆ ಕಾಯ್ದೆಗಳನ್ನು ಈಗಾಗಲೇ ಜಾರಿಗೊಳಿಸುತ್ತಿರುವ ಮಧ್ಯಪ್ರದೇಶ ಬಿಜೆಪಿ ಸರ್ಕಾರಕ್ಕೆ ಮುಖಭಂಗವಾಗುವ ಬೆಳವಣಿಗೆಯೊಂದು ನಡೆದಿದೆ. ಅಲ್ಲಿನ 250ಕ್ಕೂ ಹೆಚ್ಚು ರೈತರಿಂದ ವರ್ತಕರು 2600 ಕ್ವಿಂಟಾಲ್ ಬೆಳಗಳನ್ನು ಕೊಂಡು ಹಣ ನೀಡದೇ ಸುಮಾರು 5 ಕೋಟಿ ರೂ ವಂಚಿಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಸೆಪ್ಟಂಬರ್ ತಿಂಗಳಿನಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳ ಜಾರಿಯಾದಾಗಿನಿಂದ ರಾಜ್ಯ ಸರ್ಕಾರವು ಮಂಡಿಗಳ ಹೊರಗೆ ಹೋಲ್‌ಸೇಲ್‌ನಲ್ಲಿ ಬೆಳೆಗಳನ್ನು ಮಾರಾಟ ಮಾಡಲು ಅವಕಾಶ ನೀಡಿದೆ. ಆದರೆ ಈ ರೀತಿಯಾಗಿ ಮಂಡಿಯಿಂದ ಹೊರಗೆ ಮಾರಾಟ ಮಾಡಿದ್ದ ರೈತರಿಗೆ ವರ್ತಕರು ಹಣ ನೀಡದೇ ವಂಚಿಸಿದ್ದಾರೆ ಎಂದು ಹಲವು ರೈತರು ದಿವಾಸ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕುರಿತು ರೈತರು ತಮಗೆ ವಂಚನೆಯಾಗಿದೆ ಎಂದು ದೂರು ಸಲ್ಲಿಸಿದ್ದಾರೆ. ಅದರ ಪ್ರಕಾರ ರಾಜ್ಯದ ಮುಖ್ಯಮಂತ್ರಿ ಮತ್ತು ಕೃಷಿ ಸಚಿವರ ತವರು ಜಿಲ್ಲೆಗಳ ರೈತರಿಂದ ವರ್ತಕರು ಬೆಳೆಗಳನ್ನು ಖರೀದಿಸಿ ಚೆಕ್ ನೀಡಿದ್ದಾರೆ. ಆದರೆ ಆ ಚೆಕ್‌ಗಳೆಲ್ಲವೂ ಬೌನ್ಸ್ ಆಗಿವೆ. ದಿವಾಸ್‌ನ ಮಂಡಿಗಳಿಂದ ಅವರಿಗೆ ಅವಧಿ ಮೀರಿದ ಲೈಸೆನ್ಸ್‌ ನೀಡಿದ್ದಾರೆ ಎಂದು ಆರೋಪಿಸಿ ರೈತರು ಮಂಡಿಗೆ ಹೋಗಿ ವಿಚಾರಿಸಿದರೆ ಅಲ್ಲಿಂದ ಅವರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.

ನಾವು ಮಾತುಕತೆಯಾದ ದರಕ್ಕೆ ನಮ್ಮ ಬೆಳೆಗಳನ್ನು ಮಾರಿದ್ದೇವೆ. ಶೆಹೋರ್, ಹರ್ಡಾ, ಹೋಶಾಂಗ್‌ಬಾದ್‌ನ ಹಲವು ರೈತರು ಸಹ ಮಾರಿದ್ದಾರೆ. ಆದರೆ ನಮ್ಮಿಂದ ಬೆಳೆ ಪಡೆದವರು ಹಣ ನೀಡದೆ ಪರಾರಿಯಾಗಿದ್ದಾರೆ. ಹಾಗಾಗಿ ಮುಖ್ಯಮಂತ್ರಿಗಳು ಕೂಡಲೇ ಆರೋಪಿಗಳನ್ನು ಬಂಧಿಸಿ, ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡು ನಮ್ಮ ಹಣ ನೀಡಬೇಕೆಂದು ರೈತರೊಬ್ಬರು ಒತ್ತಾಯಿಸಿದ್ದಾರೆ.

ಹಾರ್ಡಾ, ಗ್ವಾಲಿಯರ್, ಬಮೋರಿ ಸೇರಿದಂತೆ ಹಲವೆಡೆ ನೂರಾರು ರೈತರು ಇದೇ ರೀತಿಯ ದೂರುಗಳನ್ನು ಸಲ್ಲಿಸಿದ್ದಾರೆ.

“ಈಗ ಮೋಸ ಮಾಡಿರುವ ಹಲವು ಕಂಪನಿಗಳು ಈ ಹಿಂದೆ ಮಂಡಿಗಳಲ್ಲಿ ನಮ್ಮಿಂದ ಖರೀದಿಸುತ್ತಿದ್ದರು. ಆದರೆ ಅಲ್ಲಿ ನಮಗೆ ಪಾವತಿಯ ಗ್ಯಾರಂಟಿಯಿತ್ತು. ಆದರೆ ಹೊಸ ಮಾದರಿ ಮಂಡಿ ಕಾಯ್ದೆಗಳಿಂದ ಆ ಗ್ಯಾರಂಟಿ ಇಲ್ಲವಾಗಿದೆ” ಎಂದು ರೈತರು ದೂರಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೃಷಿ ಸಚಿವ ಕಮಲ್ ಪಟೇಲ್ “ಈ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತದೆ ಮತ್ತು ರೈತರಿಗೆ ಅವರ ಹಣವನ್ನು ಮರಳಿ ಕೊಡಿಸಲಾಗುತ್ತದೆ. ಇನ್ನು ಮುಂದೆ ರೈತರು ಕೇವಲ ನಗದು ವ್ಯವಹಾರದಲ್ಲಿ ಮಾತ್ರ ತಮ್ಮ ಬೆಳೆಗಳನ್ನು ಮಾರಬೇಕು. ಅದು ಕಷ್ಟವಾದರೂ ಸಾಧ್ಯ” ಎಂದಿದ್ದಾರೆ.

ಈ ಪ್ರಕರಣದಲ್ಲಿ ನ್ಯಾಯಾಲಯ ನಮ್ಮ ಪರವಿರುತ್ತದೆ ಎಂದು ಹೇಳಲು ಬರುವುದಿಲ್ಲ. ಸರ್ಕಾರ ರಚಿಸುವ ಸಮಿತಿಯು ನೀಡುವ ಪರಿಹಾರವನ್ನು ಸ್ವೀಕರಿಸುವುದನ್ನು ಬಿಟ್ಟು ನಮಗೆ ಬೇರೆ ದಾರಿಗಳಿಲ್ಲ ಎಂದು ರೈತರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಈ ಕೃಷಿ ಕಾಯ್ದೆಗಳಿಂದ ನಿಧಾನವಾಗಿ ಮಂಡಿಗಳು ನಶಿಸುವುದರಿಂದ ರೈತರು ವರ್ತಕರು ಕೇಳಿದ ಬೆಲೆಗೆ, ಅವರು ಕೊಡುವ ಚೆಕ್ ಅಥವಾ ಮತ್ತಿತರ ವಿಧಾನಗಳ ಮೂಲಕವೇ ಮಾರಬೇಕಾದ ಪರಿಸ್ಥಿತಿ ರೈತರಿಗೆ ಬರುತ್ತದೆ ಎಂಬುದನ್ನು ಈ ಮೇಲಿನ ಪ್ರಕರಣಗಳು ಸೂಚಿಸುತ್ತವೆ. ಏಕೆಂದರೆ ರೈತರ ಬಳಿ ಬೆಳೆಗಳನ್ನು ಹಲವು ದಿನ ಇಟ್ಟುಕೊಳ್ಳುವ ವ್ಯವಸ್ಥೆ ಇಲ್ಲ. ಇದು ದೊಡ್ಡ ದೊಡ್ಡ ಕಾರ್ಪೊರೇಟ್‌ಗಳಿಗಷ್ಟೇ ಲಾಭ ತಂದುಕೊಡುತ್ತದೆ ಎಂಬುದು ರೈತರ ಆರೋಪ.


ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...