Homeಮುಖಪುಟಮಧ್ಯಪ್ರದೇಶದಲ್ಲಿ ಕೃಷಿ ಕಾಯ್ದೆಗಳ ಜಾರಿ: ವರ್ತಕರಿಂದ ಸುಮಾರು 5 ಕೋಟಿ ರೂ ವಂಚನೆಯಾಗಿದೆ ಎಂದು ರೈತರ...

ಮಧ್ಯಪ್ರದೇಶದಲ್ಲಿ ಕೃಷಿ ಕಾಯ್ದೆಗಳ ಜಾರಿ: ವರ್ತಕರಿಂದ ಸುಮಾರು 5 ಕೋಟಿ ರೂ ವಂಚನೆಯಾಗಿದೆ ಎಂದು ರೈತರ ಆರೋಪ

ಸೆಪ್ಟಂಬರ್ ತಿಂಗಳಿನಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳ ಜಾರಿಯಾದಾಗಿನಿಂದ ರಾಜ್ಯ ಸರ್ಕಾರವು ಮಂಡಿಗಳ ಹೊರಗೆ ಹೋಲ್‌ಸೇಲ್‌ನಲ್ಲಿ ಬೆಳೆಗಳನ್ನು ಮಾರಾಟ ಮಾಡಲು ಅವಕಾಶ ನೀಡಿದೆ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಸೇರಿದಂತೆ ದೇಶಾದ್ಯಂತ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬೃಹತ್ ರೈತ ಹೋರಾಟ ನಡೆಯುತ್ತಿದೆ. ಈ ಬೆನ್ನಲ್ಲೆ ಆ ಕಾಯ್ದೆಗಳನ್ನು ಈಗಾಗಲೇ ಜಾರಿಗೊಳಿಸುತ್ತಿರುವ ಮಧ್ಯಪ್ರದೇಶ ಬಿಜೆಪಿ ಸರ್ಕಾರಕ್ಕೆ ಮುಖಭಂಗವಾಗುವ ಬೆಳವಣಿಗೆಯೊಂದು ನಡೆದಿದೆ. ಅಲ್ಲಿನ 250ಕ್ಕೂ ಹೆಚ್ಚು ರೈತರಿಂದ ವರ್ತಕರು 2600 ಕ್ವಿಂಟಾಲ್ ಬೆಳಗಳನ್ನು ಕೊಂಡು ಹಣ ನೀಡದೇ ಸುಮಾರು 5 ಕೋಟಿ ರೂ ವಂಚಿಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಸೆಪ್ಟಂಬರ್ ತಿಂಗಳಿನಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳ ಜಾರಿಯಾದಾಗಿನಿಂದ ರಾಜ್ಯ ಸರ್ಕಾರವು ಮಂಡಿಗಳ ಹೊರಗೆ ಹೋಲ್‌ಸೇಲ್‌ನಲ್ಲಿ ಬೆಳೆಗಳನ್ನು ಮಾರಾಟ ಮಾಡಲು ಅವಕಾಶ ನೀಡಿದೆ. ಆದರೆ ಈ ರೀತಿಯಾಗಿ ಮಂಡಿಯಿಂದ ಹೊರಗೆ ಮಾರಾಟ ಮಾಡಿದ್ದ ರೈತರಿಗೆ ವರ್ತಕರು ಹಣ ನೀಡದೇ ವಂಚಿಸಿದ್ದಾರೆ ಎಂದು ಹಲವು ರೈತರು ದಿವಾಸ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕುರಿತು ರೈತರು ತಮಗೆ ವಂಚನೆಯಾಗಿದೆ ಎಂದು ದೂರು ಸಲ್ಲಿಸಿದ್ದಾರೆ. ಅದರ ಪ್ರಕಾರ ರಾಜ್ಯದ ಮುಖ್ಯಮಂತ್ರಿ ಮತ್ತು ಕೃಷಿ ಸಚಿವರ ತವರು ಜಿಲ್ಲೆಗಳ ರೈತರಿಂದ ವರ್ತಕರು ಬೆಳೆಗಳನ್ನು ಖರೀದಿಸಿ ಚೆಕ್ ನೀಡಿದ್ದಾರೆ. ಆದರೆ ಆ ಚೆಕ್‌ಗಳೆಲ್ಲವೂ ಬೌನ್ಸ್ ಆಗಿವೆ. ದಿವಾಸ್‌ನ ಮಂಡಿಗಳಿಂದ ಅವರಿಗೆ ಅವಧಿ ಮೀರಿದ ಲೈಸೆನ್ಸ್‌ ನೀಡಿದ್ದಾರೆ ಎಂದು ಆರೋಪಿಸಿ ರೈತರು ಮಂಡಿಗೆ ಹೋಗಿ ವಿಚಾರಿಸಿದರೆ ಅಲ್ಲಿಂದ ಅವರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.

ನಾವು ಮಾತುಕತೆಯಾದ ದರಕ್ಕೆ ನಮ್ಮ ಬೆಳೆಗಳನ್ನು ಮಾರಿದ್ದೇವೆ. ಶೆಹೋರ್, ಹರ್ಡಾ, ಹೋಶಾಂಗ್‌ಬಾದ್‌ನ ಹಲವು ರೈತರು ಸಹ ಮಾರಿದ್ದಾರೆ. ಆದರೆ ನಮ್ಮಿಂದ ಬೆಳೆ ಪಡೆದವರು ಹಣ ನೀಡದೆ ಪರಾರಿಯಾಗಿದ್ದಾರೆ. ಹಾಗಾಗಿ ಮುಖ್ಯಮಂತ್ರಿಗಳು ಕೂಡಲೇ ಆರೋಪಿಗಳನ್ನು ಬಂಧಿಸಿ, ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡು ನಮ್ಮ ಹಣ ನೀಡಬೇಕೆಂದು ರೈತರೊಬ್ಬರು ಒತ್ತಾಯಿಸಿದ್ದಾರೆ.

ಹಾರ್ಡಾ, ಗ್ವಾಲಿಯರ್, ಬಮೋರಿ ಸೇರಿದಂತೆ ಹಲವೆಡೆ ನೂರಾರು ರೈತರು ಇದೇ ರೀತಿಯ ದೂರುಗಳನ್ನು ಸಲ್ಲಿಸಿದ್ದಾರೆ.

“ಈಗ ಮೋಸ ಮಾಡಿರುವ ಹಲವು ಕಂಪನಿಗಳು ಈ ಹಿಂದೆ ಮಂಡಿಗಳಲ್ಲಿ ನಮ್ಮಿಂದ ಖರೀದಿಸುತ್ತಿದ್ದರು. ಆದರೆ ಅಲ್ಲಿ ನಮಗೆ ಪಾವತಿಯ ಗ್ಯಾರಂಟಿಯಿತ್ತು. ಆದರೆ ಹೊಸ ಮಾದರಿ ಮಂಡಿ ಕಾಯ್ದೆಗಳಿಂದ ಆ ಗ್ಯಾರಂಟಿ ಇಲ್ಲವಾಗಿದೆ” ಎಂದು ರೈತರು ದೂರಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೃಷಿ ಸಚಿವ ಕಮಲ್ ಪಟೇಲ್ “ಈ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತದೆ ಮತ್ತು ರೈತರಿಗೆ ಅವರ ಹಣವನ್ನು ಮರಳಿ ಕೊಡಿಸಲಾಗುತ್ತದೆ. ಇನ್ನು ಮುಂದೆ ರೈತರು ಕೇವಲ ನಗದು ವ್ಯವಹಾರದಲ್ಲಿ ಮಾತ್ರ ತಮ್ಮ ಬೆಳೆಗಳನ್ನು ಮಾರಬೇಕು. ಅದು ಕಷ್ಟವಾದರೂ ಸಾಧ್ಯ” ಎಂದಿದ್ದಾರೆ.

ಈ ಪ್ರಕರಣದಲ್ಲಿ ನ್ಯಾಯಾಲಯ ನಮ್ಮ ಪರವಿರುತ್ತದೆ ಎಂದು ಹೇಳಲು ಬರುವುದಿಲ್ಲ. ಸರ್ಕಾರ ರಚಿಸುವ ಸಮಿತಿಯು ನೀಡುವ ಪರಿಹಾರವನ್ನು ಸ್ವೀಕರಿಸುವುದನ್ನು ಬಿಟ್ಟು ನಮಗೆ ಬೇರೆ ದಾರಿಗಳಿಲ್ಲ ಎಂದು ರೈತರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಈ ಕೃಷಿ ಕಾಯ್ದೆಗಳಿಂದ ನಿಧಾನವಾಗಿ ಮಂಡಿಗಳು ನಶಿಸುವುದರಿಂದ ರೈತರು ವರ್ತಕರು ಕೇಳಿದ ಬೆಲೆಗೆ, ಅವರು ಕೊಡುವ ಚೆಕ್ ಅಥವಾ ಮತ್ತಿತರ ವಿಧಾನಗಳ ಮೂಲಕವೇ ಮಾರಬೇಕಾದ ಪರಿಸ್ಥಿತಿ ರೈತರಿಗೆ ಬರುತ್ತದೆ ಎಂಬುದನ್ನು ಈ ಮೇಲಿನ ಪ್ರಕರಣಗಳು ಸೂಚಿಸುತ್ತವೆ. ಏಕೆಂದರೆ ರೈತರ ಬಳಿ ಬೆಳೆಗಳನ್ನು ಹಲವು ದಿನ ಇಟ್ಟುಕೊಳ್ಳುವ ವ್ಯವಸ್ಥೆ ಇಲ್ಲ. ಇದು ದೊಡ್ಡ ದೊಡ್ಡ ಕಾರ್ಪೊರೇಟ್‌ಗಳಿಗಷ್ಟೇ ಲಾಭ ತಂದುಕೊಡುತ್ತದೆ ಎಂಬುದು ರೈತರ ಆರೋಪ.


ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...