Homeಮುಖಪುಟಆಗ ’ತುಕುಡೆ ಗ್ಯಾಂಗ್’, ಈಗ ಕೃಷಿಕರು: ಸಂಸದೆ ಶೋಭಾ ಕರಂದ್ಲಾಜೆಯ ಇಬ್ಬಂದಿತನ

ಆಗ ’ತುಕುಡೆ ಗ್ಯಾಂಗ್’, ಈಗ ಕೃಷಿಕರು: ಸಂಸದೆ ಶೋಭಾ ಕರಂದ್ಲಾಜೆಯ ಇಬ್ಬಂದಿತನ

- Advertisement -
- Advertisement -

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಇಂದಿಗೆ 36 ನೇ ದಿನಕ್ಕೆ ಕಾಲಿಟ್ಟದೆ. ಕೇಂದ್ರವು ಇದುವರೆಗೆ 6 ಬಾರಿ ರೈತರೊಂದಿಗೆ ಮಾತುಕತೆ ನಡೆಸಿದೆಯಾದರೂ ಕೃಷಿ ಕಾನೂನಗಳನ್ನು ವಾಪಾಸು ಪಡೆಯುವುದಿಲ್ಲ ಎಂದು ಹೇಳಿ ತನ್ನ ಹಠಮಾರಿ ಧೋರಣೆಯನ್ನು ಮುಂದುವರೆಸಿದೆ. ರೈತರು ಕೂಡಾ ಕಾನೂನನ್ನು ವಾಪಾಸು ಪಡೆಯುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಮತ್ತೆ ಘೋಷಿಸಿದ್ದಾರೆ.

ಪ್ರತಿಭಟನಾ ನಿರತ ರೈತರು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಪ್ರತಿ ಸುತ್ತಿನಲ್ಲೂ, ಸರ್ಕಾರ ನೀಡುವ ನೀರನ್ನು ಕೂಡಾ ಮುಟ್ಟದೇ, ತಾವೇ ಒಯ್ದಿದ್ದ ಆಹಾರವನ್ನು ಹಂಚಿಕೊಂಡು ತಿಂದು ಸ್ವಾಭಿಮಾನ ಮೆರೆದಿದ್ದರು. ಇದು 6 ನೇ ಸುತ್ತಿನ ಮಾತುಕತೆಯ ವಿರಾಮದ ಸಮಯದಲ್ಲೂ ಮುಂದುವರೆದಿತ್ತು. ಆದರೆ ಈ ಭಾರಿ ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್‌ ಮತ್ತು ಪಿಯೂಷ್ ಗೋಯಲ್ ರೈತರು ತಂದಿದ್ದ ಊಟ ಮಾಡಿದ್ದರು.

ಇದನ್ನೂ ಓದಿ: ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರಿಂದ FIR

ಕೇಂದ್ರ ಸಚಿವರಿಬ್ಬರು ರೈತರೊಂದಿಗೆ ಊಟ ಮಾಡುತ್ತಿರುವ ಈ ಚಿತ್ರವನ್ನು, ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ತಮ್ಮ ಫೇಸ್‌ಬುಕ್ ಮತ್ತು ಟ್ವಿಟ್ಟರ್‌ ಖಾತೆಗಳಲ್ಲಿ ಹಂಚಿಕೊಂಡಿದ್ದರು. “ಕೃಷಿಕ ಸಂಘಟನೆಗಳೊಂದಿಗೆ ಮಾತುಕತೆಯ ಸಂದರ್ಭದಲ್ಲಿ ಕೃಷಿಕರೊಂದಿಗೆ ಭೋಜನ ಸೇವಿಸಿದ ಕೇಂದ್ರ ಕೃಷಿ ಮಂತ್ರಿ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಕೇಂದ್ರ ರೈಲ್ವೆ ಸಚಿವ ಶ್ರೀ ಪಿಯೂಷ್ ಗೋಯಲ್” ಎಂದು ಶೋಭಾ ತಮ್ಮ ಫೇಸ್‌‌ಬುಕ್ ಖಾತೆಗಳಲ್ಲಿ ಬರೆದಿದ್ದಾರೆ.

ಆದರೆ ಇದೇ ಶೋಭಾ ಕರಂದ್ಲಾಜೆ ಡಿಸೆಂಬರ್‌ 22 ರಂದು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ, “ರೈತರ ಸೋಗಿನಲ್ಲಿ ತುಕುಡೇ ಗ್ಯಾಂಗ್ ದೆಹಲಿಯಲ್ಲಿ ನಡೆಯುತ್ತಿರುವ ಕೃಷಿ ಮಸೂದೆ ವಿರೋಧಿ ಹೋರಾಟದ ನೇತೃತ್ವ ವಹಿಸಿದೆ. ಕೃಷಿಕರ ಅಭ್ಯುದಯದ ಚಿಂತನೆಯನ್ನು ನಡೆಸದೆ ಕೇವಲ ರಾಜಕೀಯ ಮಾಡುವ ನಿಟ್ಟಿನಲ್ಲಿ ದೇಶದ ಜನರ ದಾರಿ ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ಹಾಗು ಇತರ ಪಕ್ಷಗಳು ಮಾಡುತ್ತಿವೆ” ಎಂದು ಬರೆಯುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಭಾರತದ ಭೂಪಟದಿಂದ ಪಾಕ್‌ ಆಕ್ರಮಿತ ಕಾಶ್ಮಿರ ಕೈಬಿಟ್ಟ ರಾಷ್ಟ್ರ ಜಾಗರಣ ಸಮಿತಿ.. ಶೋಭಾ ಕರಂದ್ಲಾಚೆ ವಿರುದ್ಧ ನೆಟ್ಟಿಗರ ಕಿಡಿ


ಇದರ ಆರ್ಕೈವ್ ಇಲ್ಲಿದೆ

ಜೊತೆಗೆ, ಟಿವಿ ಕಾರ್ಯಕ್ರಮದಲ್ಲಿ ತಾವು ನೀಡಿದ್ದ ಹೇಳಿಕೆಯ ವಿಡಿಯೋವನ್ನು ಕೂಡಾ ತಮ್ಮ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದರು. ವಿಡಿಯೋದಲ್ಲಿ, “ರೈತರ ಪ್ರತಿಭಟನೆಗೆ ಖಲಿಸ್ತಾನ್‌ಗಳಿಂದ ಹಣ ಬರುತ್ತಿದೆ, ತುಕ್ಡೆ ಗ್ಯಾಂಗ್‌ನವರು ನೇತೃತ್ವ ಸೇರಿದಂತೆ, ಅರ್ಬನ್ ನಕ್ಸಲ್‌ರು ಕೂಡಾ ಈ ಪ್ರತಿಭಟನೆಗೆ ನೇತೃತ್ವ ನೀಡುತ್ತಿದೆ” ಎಂದು ಟೀಕಿಸಿದ್ದರು.

ಇದು ಶೋಭಾ ಕರಂದ್ಲಾಜೆಯವರ ಇಬ್ಬಂದಿತನವಲ್ಲವೇ ಎಂಬ ಪ್ರಶ್ನೆ ಎದ್ದಿದೆ. ತಮಗೆ ಮನ ಬಂದಾಗ ರೈತರನ್ನು ಟೀಕಿಸಿವುದು, ಮನಬಂದಾಗ ಅವರನ್ನು ಹೊಗಳುವುದು ಎಷ್ಟು ಸರಿ? ನಮ್ಮ ಟೀಕೆ ಮತ್ತು ಹೊಗಳಿಕೆಗಳು ವಾಸ್ತವ ಅಂಶಗಳ ಆಧಾರದಲ್ಲಿರಬೇಕು ಮತ್ತು ಇತಿಮಿತಿಯಲ್ಲಿರಬೇಕು ಎಂಬ ಅಭಿಪ್ರಾಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಕಾನೂನಿನ ವಿರುದ್ದ ದೆಹಲಿಯ ಭಾರಿ ಚಳಿಯ ಹೊರತಾಗಿಯೂ ರೈತರು ಚಳುವಳಿ ಮುಂದುವರೆಸಿದ್ದಾರೆ. ಪ್ರತಿಭಟನೆಯಲ್ಲಿ ವೃದ್ದರು, ಮಕ್ಕಳು ಸೇರಿದಂತೆ ಮಹಿಳೆಯರು ಕೂಡಾ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರೈತರ ಹೋರಾಟವನ್ನು ಖಲಿಸ್ತಾನಿಗಳು, ಅರ್ಬನ್ ನಕ್ಸಲರು, ತುಕ್ಡೆ ಗ್ಯಾಂಗ್‌‌ನವರು ಎಂದು ಹೇಳಿರುವುದು ಕೇವಲ ಸಂಸದೆ ಶೋಭ ಕರಂದ್ಲಾಜೆ ಮಾತ್ರವಲ್ಲ, ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಬಿಜೆಪಿ ನಾಯಕರು ಸೇರಿದಂತೆ ಸಚಿವರು ಕೂಡಾ ಇದನ್ನು ಉಚ್ಚರಿಸಿದ್ದರು. ಆದರೆ ಅದೇ ಹೋರಾಟಗಾರೊಂದಿಗೆ ಕೇಂದ್ರ ಸರ್ಕಾರ ಆರು ಬಾರಿ ಮಾತುಕತೆ ನಡೆಸಿದೆ. ಆರನೇ ಸುತ್ತಿನ ಮಾತುಕತೆಯಲ್ಲಿ ಅವರ ನಾಲ್ಕು ಬೇಡಿಕೆಗಳಲ್ಲಿ ಎರಡನ್ನು ಪರಿಶೀಲಿಸುವುದಾಗಿ ಒಪ್ಪಿಕೊಂಡಿದೆ. ಪ್ರಮುಖ ಬೇಡಿಕೆಯಾದ ನೂತನ ಕೃಷಿ ಕಾನೂನನ್ನು ವಾಪಾಸು ಪಡೆಯುವವರೆಗೂ ಹೋರಾಟದಿಂದ ಒಂದಿಂಚೂ ಹಿಂದೆ ಸರಿಯಲ್ಲ ಎಂದು ರೈತರು ಮತ್ತೆ ಘೋಷಿಸಿದ್ದಾರೆ.

ಇದನ್ನೂ ಓದಿ: ಶೋಭಾ ಕರಂದ್ಲಾಚೆಗೆ ಈರುಳ್ಳಿ ಹಾರ ಹಾಕಿ ಪ್ರತಿಭಟನೆಗೆ ಯತ್ನ: ಸ್ಥಳದಿಂದ ಕಾಲ್ಕಿತ್ತ ಸಂಸದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....