Homeಮುಖಪುಟಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ 'ಈ ಪಕ್ಷಗಳ ಬೆಂಬಲಿತರ' ಸಾಧನೆ ಎಷ್ಟು?

ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

ಸ್ವರಾಜ್‌ ಇಂಡಿಯಾ, SDPI, ಸಿಪಿಐ(ಎಂ), ಸಿಪಿಐ, ಬಹುಜನ ಸಮಾಜ ಪಕ್ಷ, ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾ, ಆಮ್‌ ಆದ್ಮಿ ಪಕ್ಷ ಸೇರಿ ಹಲವು ಪಕ್ಷಗಳ ಬೆಂಬಲಿಗರು ಚುನಾಯಿತರಾದ ಮಾಹಿತಿ ಇಲ್ಲಿದೆ.

- Advertisement -
- Advertisement -

ಗ್ರಾಮೀಣ ಅಭಿವೃದ್ದಿಯ ಕನಸುಗಳೊಂದಿಗೆ ಗ್ರಾಮ ಪಂಚಾಯ್ತಿ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ. ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಎಂಬ ಮುಖ್ಯವಾಹಿನಿಯಲ್ಲಿರುವ ಪಕ್ಷಗಳು ತಮ್ಮ ಬೆಂಬಲಿತ ಅಭ್ಯರ್ಥಿಗಳು ಇಷ್ಟು ಸ್ಥಾನಗಳಲ್ಲಿ ಚುನಾಯಿತರಾಗಿದ್ದಾರೆ ಎಂದು ಘೋಷಿಸಿಕೊಂಡಿದ್ದಾರೆ. ಈ ಮೂರು ಪಕ್ಷಗಳಲ್ಲದೆ ಇತರ ಪಕ್ಷಗಳು ಸಹ ತಳಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದು ಅದರ ವರದಿ ಇಲ್ಲಿದೆ.

ಸ್ವರಾಜ್‌ ಇಂಡಿಯಾ, ಎಸ್.ಡಿ.ಪಿ.ಐ, ಸಿಪಿಐ(ಎಂ), ಸಿಪಿಐ, ಬಹುಜನ ಸಮಾಜ ಪಕ್ಷ, ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾ, ಆಮ್‌ ಆದ್ಮಿ ಪಕ್ಷ ಸೇರಿ ಹಲವು ಪಕ್ಷಗಳ ಬೆಂಬಲಿಗರು ಹಲವಾರು ಕಡೆ ಚುನಾಯಿತರಾಗಿದ್ದಾರೆ.

ಸ್ವರಾಜ್‌ ಇಂಡಿಯಾ

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಗಳು ಸ್ವರಾಜ್ ಇಂಡಿಯಾ ರಾಜಕೀಯ ಪಕ್ಷವಾಗಿ ಒಗ್ಗೂಡಿ ಚುನಾವಣೆ ಎದುರಿಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ‌ರವರು ಮಾತನಾಡಿ “ನಾವು ಒಟ್ಟು 3000ಕ್ಕೂ ಹೆಚ್ಚು ಜನರನ್ನು ಬೆಂಬಲಿಸಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಣಕ್ಕಿಳಿಸಿದೆವು. 1800ಕ್ಕೂ ಅಧಿಕ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ. ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹೆಚ್ಚಿನ ಜನ ಆಯ್ಕೆಯಾಗಿದ್ದಾರೆಂದು” ಮಾಹಿತಿ ನೀಡಿದ್ದಾರೆ. ಅಲ್ಲದೇ ಪಾಂಡವಪುರ ತಾಲ್ಲೂಕಿನ ಬಹುತೇಕ ಗ್ರಾಮ ಪಂಚಾಯ್ತಿಗಳಲ್ಲಿ ನಮ್ಮ ಅಭ್ಯರ್ಥಿಗಳೆ ಅಧಿಕಾರ ಹಿಡಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಎಸ್.ಡಿ.ಪಿ.ಐ

2015ರ ಗ್ರಾಮ ಪಂಚಾಯತ್ ಚುನಾವಣೆಗೆ ಹೋಲಿಸಿದರೆ ಅದಕ್ಕಿಂತ ಈ ಬಾರಿ 300 ಪಟ್ಟು ಅಧಿಕ ಸ್ಥಾನಗಳಲ್ಲಿ SDPI ಬೆಂಬಲಿತ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ ರಾಜ್ಯಧ್ಯಕ್ಷರಾದ ಇಲ್ಯಾಸ್‌ ತುಂಬೆಯವರು. ನಾನುಗೌರಿ ಜೊತೆ ಮಾತನಾಡಿದ ಅವರು, “ಒಟ್ಟು ರಾಜ್ಯದಾದ್ಯಂತ ನಮ್ಮ 221 ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಮೂರು ಗ್ರಾಮ ಪಂಚಾಯ್ತಿಗಳಲ್ಲಿ ನಾವು ಸ್ಪಷ್ಟ ಬಹುಮತ ಪಡೆದಿದ್ದೇವೆ. 10 ಗ್ರಾಮ ಪಂಚಾಯ್ತಿಗಳಲ್ಲಿ ಅಧ್ಯಕ್ಷರು ಯಾರಾಗಬೇಕು ಎಂದು ನಿರ್ಧರಿಸುವ ಸ್ಥಾನದಲ್ಲಿ SDPI ಇದೆ” ಎಂದಿದ್ದಾರೆ.

ಒಟ್ಟು ಜಯಗಳಿಸಿದವರಲ್ಲಿ ಶೇ.50ಕ್ಕಿಂತ ಹೆಚ್ಚು ಮಹಿಳೆಯರರಾಗಿದ್ದರೆ ಶೇ.20 ರಷ್ಟು ದಲಿತರು ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿದ್ದಾರೆ. ರಾಜ್ಯದಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚಿನ ಗೆಲುವು ಸಾಧಿಸಿದ್ದೇವೆ. ಜಿಲ್ಲೆಯಲ್ಲಿ 485 ಕಡೆಗಳಲ್ಲಿ ಸ್ಪರ್ಧಿಸಿದ್ದು, 171 ಜನ ಜಯಶೀಲರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಮಳ್ಳೂರು, ಸಜೀಪ ನಡು ಮತ್ತು ಸಜೀಪ ಮುನ್ನೂರು ಗ್ರಾಮ ಪಂಚಾಯಿತಿಗಳು SDPI ತೆಕ್ಕೆಗೆ ಬಂದಿವೆ.

ಸಿಪಿಐ(ಎಂ)

ಭಾರತೀಯ ಕಮ್ಯುನಿಷ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪಕ್ಷವು ಈ ಚುನಾವಣೆಯಲ್ಲಿ ಗಮನಾರ್ಹ ಸಾಧನೆಗೈದಿದೆ. ರಾಜ್ಯದ 20 ಜಿಲ್ಲೆಗಳ 70 ತಾಲೂಕುಗಳಲ್ಲಿ 726 ಅಭ್ಯರ್ಥಿಗಳು ಸಿಪಿಐ(ಎಂ) ಪಕ್ಷ ಮತ್ತು DYFI, SFI ಬೆಂಬಲದಿಂದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇದರಲ್ಲಿ 231 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಬಸವರಾಜು ಮಾಹಿತಿ ನೀಡಿದ್ದಾರೆ.

“ಈಗಾಗಲೇ ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲೂಕಿನ ಮೂರು ಗ್ರಾಮ ಪಂಚಾಯತ್‌ಗಳು ನಮ್ಮ ತೆಕ್ಕೆಗೆ ಬಂದಿದೆ. ಅಲ್ಲಿನ ಇನ್ನೂ ಎರಡು ಗ್ರಾಮ ಪಂಚಾಯತ್‌ಗಳಲ್ಲಿ ಪಕ್ಷದ ಬೆಂಬಲಿತ ಸದಸ್ಯರು ಗೆದ್ದಿದ್ದಾರೆ. ಅವುಗಳೂ ಇತರ ಮಿತ್ರಪಕ್ಷಗಳ ಸಹಾಯದಿಂದ ನಮ್ಮ ತೆಕ್ಕೆಗೆ ಬರಲಿದೆ. ಗುಲ್ಬರ್ಗ ಜಿಲ್ಲೆಯ ಚಿಂಚೊಳಿ ಮತ್ತು ಅಳಂದ ತಾಲೂಕುಗಳ ಗ್ರಾಮಗಳಲ್ಲಿ ನಮ್ಮ ಮಿತ್ರಪಕ್ಷಗಳ ಸದಸ್ಯರ ಸಹಾಯದಿಂದ ಇನ್ನೂ ನಾಲ್ಕು ಪಂಚಾಯತ್‌ಗಳು ನಮ್ಮ ತೆಕ್ಕೆಗೆ ಬರಲಿದೆ” ಎಂದು ಅವರು ಹೇಳಿದ್ದಾರೆ.

ಸಿಪಿಐ

ಸಿಪಿಐ ಬೆಂಬಲಿತರು 350 ಸ್ಥಾನಗಳಿಗೆ ಸ್ಪರ್ಧಿಸಿದ್ದು, ಅದರಲ್ಲಿ 88 ಸ್ಥಾನಗಳಲ್ಲಿ ಗೆದ್ದಿದ್ದಾರೆ. ಅಲ್ಲದೆ ತರಿಕೆರೆ ತಾಲೂಕಿನ ಸಂತೆಊರು ಗ್ರಾಮ ಪಂಚಾಯತ್‌‌ನಲ್ಲಿ 11 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಪಡೆದು ಗ್ರಾಮಪಂಚಾಯತ್‌‌ ತೆಕ್ಕೆಗೆ ಪಡೆದಿದ್ದಾರೆ. ಅಲ್ಲದೆ ಬಂಟ್ವಾಳದ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಮೂರು ಸ್ಥಾನಗಳನ್ನು ಪಡೆದಿದ್ದು ಉಪಾಧಕ್ಷಸ್ಥಾನ ಒಳಿದು ಬರಲಿದೆ. ಇದಲ್ಲದೆ ತುಮಕೂರನ ಶಿರಾ ತಾಲೂಕಿನಲ್ಲಿ 17 ಸ್ಥಾನಗಳಲ್ಲಿ ಗೆದ್ದಿದ್ದಾರೆ.

ನಮ್ಮ ಪಕ್ಷದ ಪ್ರಭಾವವಿರುವ ಚಿಕ್ಕಮಗಳೂರಿನ ಕೆಲವು ಗ್ರಾಮ ಪಂಚಾಯತ್‌ನಲ್ಲಿ ಚುನಾವಣೆ ನಡೆದಿಲ್ಲ, ಇಲ್ಲವೆಂದರೆ ಅಲ್ಲೂ ಒಂದಷ್ಟು ಸ್ಥಾನಗಳು ಪಡೆಯುತ್ತಿದ್ದೆವು ಎಂದು ಪಕ್ಷದ ಮುಖಂಡರಾದ ಶಿವರಾಜ್ ಬಿರದಾರ್‌ ತಿಳಿಸಿದ್ದಾರೆ.

ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾ

ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾವು ಕರ್ನಾಟಕದ 10 ಜಿಲ್ಲೆಗಳಲ್ಲಿ 125 ಗ್ರಾಮ ಪಂಚಾಯಿತಿ ಸ್ಥಾನಗಳ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿತ್ತು. ಅವರಲ್ಲಿ 43 ಜನ ಜಯಗಳಿಸಿದ್ದಾರೆ ಎಂದು ಮಾಹಿತಿ ದೊರಕಿದೆ.

ಆಮ್ ಆದ್ಮಿ ಪಕ್ಷ

ಆಮ್ ಆದ್ಮಿ ಪಕ್ಷದಿಂದ 600 ಅಭ್ಯರ್ಥಿಗಳನ್ನು ಬೆಂಬಲಿಸಿದ್ದು, ಅದರಲ್ಲಿ 286 ಜನ ಚುನಾಯಿತರಾಗಿದ್ದಾರೆ. ಆಮ್ ಆದ್ಮಿ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಹೈದರಾಬಾದ್ ಕರ್ನಾಟಕ ಭಾಗ ಬೀದರ್, ಕಲ್ಬುರ್ಗಿ, ಬಾಗಲಕೋಟೆ, ವಿಜಯಪುರ, ಕೋಲಾರ ಉತ್ತರ ಕನ್ನಡ ಭಾಗದಲ್ಲಿ ಹೆಚ್ಚು ಜಯಗಳಿಸಿದ್ದಾರೆ.

ಈ ದೇಶದ ಕಾನೂನಿಗೆ ಗೌರವ ಕೊಟ್ಟ ಆಮ್ ಆದ್ಮಿ ಪಕ್ಷ ಎಲ್ಲಿಯೂ ಸಹ ಪಕ್ಷದ ಅಭ್ಯರ್ಥಿಗಳ ಎಂದು ಪ್ರಚಾರ ಮಾಡಲಿಲ್ಲ, ಆದರೆ ಗೆದ್ದಿರುವ ಎಲ್ಲಾ ಅಭ್ಯರ್ಥಿಗಳು ಆಮ್ ಆದ್ಮಿ ಪಕ್ಷದ ಸಕ್ರಿಯ ಕಾರ್ಯಕರ್ತರು ಎಂಬುದು ನಮ್ಮ ಹೆಮ್ಮೆಯಾಗಿದೆ. ಗ್ರಾಮ ಮಟ್ಟದಲ್ಲಿ ಬದಲಾವಣೆ ತರುತ್ತಾರೆ ಎನ್ನುವ ಭರವಸೆ ಇದೆ ಎಂದು ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ತಿಳಿಸಿದರು.

ಬಿಎಸ್‌ಪಿ

ಬಹುಜನನ ಸಮಾಜ ಪಕ್ಷವು ರಾಜ್ಯದ್ಯಂತ ಸುಮಾರು 525 ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿತ್ತು. ಅದರಲ್ಲಿ ಇದುವರೆಗೂ 236 ಜನ ಚುನಾಯಿತರಾಗಿದ್ದರೆಂದು ಬಿಎಸ್‌ಪಿ ಮುಖಂಡರಾದ ಕೃಷ್ಣಮೂರ್ತಿಯವರು ಮಾಹಿತಿ ನೀಡಿದ್ದಾರೆ.

ಅಲ್ಲದೆ SUCI, ಕರ್ನಾಟಕ ರಾಷ್ಟ್ರ ಸಮಿತಿ, ಸಿಪಿಐ (ಎಂಎಲ್ ಲಿಬರೇಷನ್), ಸಿಪಿಐ (ಎಂಎಲ್ ರೆಡ್‌ಸ್ಟಾರ್) ಪಕ್ಷಗಳು ಸಹ ಹಲವು ಅಭ್ಯರ್ಥಿಗಳನ್ನು ಬೆಂಬಲಿಸಿದ್ದವು. ಅವುಗಳ ಮಾಹಿತಿ ಪಡೆಯಲು ಸಂಪರ್ಕಿಸಿತ್ತಾದರೂ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಸಂಪರ್ಕ ಸಿಕ್ಕ ನಂತರ ಈ ವರದಿಯನ್ನು ಅಪ್‌ಡೇಟ್‌ ಮಾಡಲಾಗುವುದು.


ಇದನ್ನೂ ಓದಿ: ಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ – ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...