Homeಮುಖಪುಟಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ 'ಈ ಪಕ್ಷಗಳ ಬೆಂಬಲಿತರ' ಸಾಧನೆ ಎಷ್ಟು?

ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

ಸ್ವರಾಜ್‌ ಇಂಡಿಯಾ, SDPI, ಸಿಪಿಐ(ಎಂ), ಸಿಪಿಐ, ಬಹುಜನ ಸಮಾಜ ಪಕ್ಷ, ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾ, ಆಮ್‌ ಆದ್ಮಿ ಪಕ್ಷ ಸೇರಿ ಹಲವು ಪಕ್ಷಗಳ ಬೆಂಬಲಿಗರು ಚುನಾಯಿತರಾದ ಮಾಹಿತಿ ಇಲ್ಲಿದೆ.

- Advertisement -
- Advertisement -

ಗ್ರಾಮೀಣ ಅಭಿವೃದ್ದಿಯ ಕನಸುಗಳೊಂದಿಗೆ ಗ್ರಾಮ ಪಂಚಾಯ್ತಿ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ. ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಎಂಬ ಮುಖ್ಯವಾಹಿನಿಯಲ್ಲಿರುವ ಪಕ್ಷಗಳು ತಮ್ಮ ಬೆಂಬಲಿತ ಅಭ್ಯರ್ಥಿಗಳು ಇಷ್ಟು ಸ್ಥಾನಗಳಲ್ಲಿ ಚುನಾಯಿತರಾಗಿದ್ದಾರೆ ಎಂದು ಘೋಷಿಸಿಕೊಂಡಿದ್ದಾರೆ. ಈ ಮೂರು ಪಕ್ಷಗಳಲ್ಲದೆ ಇತರ ಪಕ್ಷಗಳು ಸಹ ತಳಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದು ಅದರ ವರದಿ ಇಲ್ಲಿದೆ.

ಸ್ವರಾಜ್‌ ಇಂಡಿಯಾ, ಎಸ್.ಡಿ.ಪಿ.ಐ, ಸಿಪಿಐ(ಎಂ), ಸಿಪಿಐ, ಬಹುಜನ ಸಮಾಜ ಪಕ್ಷ, ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾ, ಆಮ್‌ ಆದ್ಮಿ ಪಕ್ಷ ಸೇರಿ ಹಲವು ಪಕ್ಷಗಳ ಬೆಂಬಲಿಗರು ಹಲವಾರು ಕಡೆ ಚುನಾಯಿತರಾಗಿದ್ದಾರೆ.

ಸ್ವರಾಜ್‌ ಇಂಡಿಯಾ

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಗಳು ಸ್ವರಾಜ್ ಇಂಡಿಯಾ ರಾಜಕೀಯ ಪಕ್ಷವಾಗಿ ಒಗ್ಗೂಡಿ ಚುನಾವಣೆ ಎದುರಿಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ‌ರವರು ಮಾತನಾಡಿ “ನಾವು ಒಟ್ಟು 3000ಕ್ಕೂ ಹೆಚ್ಚು ಜನರನ್ನು ಬೆಂಬಲಿಸಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಣಕ್ಕಿಳಿಸಿದೆವು. 1800ಕ್ಕೂ ಅಧಿಕ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ. ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹೆಚ್ಚಿನ ಜನ ಆಯ್ಕೆಯಾಗಿದ್ದಾರೆಂದು” ಮಾಹಿತಿ ನೀಡಿದ್ದಾರೆ. ಅಲ್ಲದೇ ಪಾಂಡವಪುರ ತಾಲ್ಲೂಕಿನ ಬಹುತೇಕ ಗ್ರಾಮ ಪಂಚಾಯ್ತಿಗಳಲ್ಲಿ ನಮ್ಮ ಅಭ್ಯರ್ಥಿಗಳೆ ಅಧಿಕಾರ ಹಿಡಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಎಸ್.ಡಿ.ಪಿ.ಐ

2015ರ ಗ್ರಾಮ ಪಂಚಾಯತ್ ಚುನಾವಣೆಗೆ ಹೋಲಿಸಿದರೆ ಅದಕ್ಕಿಂತ ಈ ಬಾರಿ 300 ಪಟ್ಟು ಅಧಿಕ ಸ್ಥಾನಗಳಲ್ಲಿ SDPI ಬೆಂಬಲಿತ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ ರಾಜ್ಯಧ್ಯಕ್ಷರಾದ ಇಲ್ಯಾಸ್‌ ತುಂಬೆಯವರು. ನಾನುಗೌರಿ ಜೊತೆ ಮಾತನಾಡಿದ ಅವರು, “ಒಟ್ಟು ರಾಜ್ಯದಾದ್ಯಂತ ನಮ್ಮ 221 ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಮೂರು ಗ್ರಾಮ ಪಂಚಾಯ್ತಿಗಳಲ್ಲಿ ನಾವು ಸ್ಪಷ್ಟ ಬಹುಮತ ಪಡೆದಿದ್ದೇವೆ. 10 ಗ್ರಾಮ ಪಂಚಾಯ್ತಿಗಳಲ್ಲಿ ಅಧ್ಯಕ್ಷರು ಯಾರಾಗಬೇಕು ಎಂದು ನಿರ್ಧರಿಸುವ ಸ್ಥಾನದಲ್ಲಿ SDPI ಇದೆ” ಎಂದಿದ್ದಾರೆ.

ಒಟ್ಟು ಜಯಗಳಿಸಿದವರಲ್ಲಿ ಶೇ.50ಕ್ಕಿಂತ ಹೆಚ್ಚು ಮಹಿಳೆಯರರಾಗಿದ್ದರೆ ಶೇ.20 ರಷ್ಟು ದಲಿತರು ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿದ್ದಾರೆ. ರಾಜ್ಯದಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚಿನ ಗೆಲುವು ಸಾಧಿಸಿದ್ದೇವೆ. ಜಿಲ್ಲೆಯಲ್ಲಿ 485 ಕಡೆಗಳಲ್ಲಿ ಸ್ಪರ್ಧಿಸಿದ್ದು, 171 ಜನ ಜಯಶೀಲರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಮಳ್ಳೂರು, ಸಜೀಪ ನಡು ಮತ್ತು ಸಜೀಪ ಮುನ್ನೂರು ಗ್ರಾಮ ಪಂಚಾಯಿತಿಗಳು SDPI ತೆಕ್ಕೆಗೆ ಬಂದಿವೆ.

ಸಿಪಿಐ(ಎಂ)

ಭಾರತೀಯ ಕಮ್ಯುನಿಷ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪಕ್ಷವು ಈ ಚುನಾವಣೆಯಲ್ಲಿ ಗಮನಾರ್ಹ ಸಾಧನೆಗೈದಿದೆ. ರಾಜ್ಯದ 20 ಜಿಲ್ಲೆಗಳ 70 ತಾಲೂಕುಗಳಲ್ಲಿ 726 ಅಭ್ಯರ್ಥಿಗಳು ಸಿಪಿಐ(ಎಂ) ಪಕ್ಷ ಮತ್ತು DYFI, SFI ಬೆಂಬಲದಿಂದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇದರಲ್ಲಿ 231 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಬಸವರಾಜು ಮಾಹಿತಿ ನೀಡಿದ್ದಾರೆ.

“ಈಗಾಗಲೇ ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲೂಕಿನ ಮೂರು ಗ್ರಾಮ ಪಂಚಾಯತ್‌ಗಳು ನಮ್ಮ ತೆಕ್ಕೆಗೆ ಬಂದಿದೆ. ಅಲ್ಲಿನ ಇನ್ನೂ ಎರಡು ಗ್ರಾಮ ಪಂಚಾಯತ್‌ಗಳಲ್ಲಿ ಪಕ್ಷದ ಬೆಂಬಲಿತ ಸದಸ್ಯರು ಗೆದ್ದಿದ್ದಾರೆ. ಅವುಗಳೂ ಇತರ ಮಿತ್ರಪಕ್ಷಗಳ ಸಹಾಯದಿಂದ ನಮ್ಮ ತೆಕ್ಕೆಗೆ ಬರಲಿದೆ. ಗುಲ್ಬರ್ಗ ಜಿಲ್ಲೆಯ ಚಿಂಚೊಳಿ ಮತ್ತು ಅಳಂದ ತಾಲೂಕುಗಳ ಗ್ರಾಮಗಳಲ್ಲಿ ನಮ್ಮ ಮಿತ್ರಪಕ್ಷಗಳ ಸದಸ್ಯರ ಸಹಾಯದಿಂದ ಇನ್ನೂ ನಾಲ್ಕು ಪಂಚಾಯತ್‌ಗಳು ನಮ್ಮ ತೆಕ್ಕೆಗೆ ಬರಲಿದೆ” ಎಂದು ಅವರು ಹೇಳಿದ್ದಾರೆ.

ಸಿಪಿಐ

ಸಿಪಿಐ ಬೆಂಬಲಿತರು 350 ಸ್ಥಾನಗಳಿಗೆ ಸ್ಪರ್ಧಿಸಿದ್ದು, ಅದರಲ್ಲಿ 88 ಸ್ಥಾನಗಳಲ್ಲಿ ಗೆದ್ದಿದ್ದಾರೆ. ಅಲ್ಲದೆ ತರಿಕೆರೆ ತಾಲೂಕಿನ ಸಂತೆಊರು ಗ್ರಾಮ ಪಂಚಾಯತ್‌‌ನಲ್ಲಿ 11 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಪಡೆದು ಗ್ರಾಮಪಂಚಾಯತ್‌‌ ತೆಕ್ಕೆಗೆ ಪಡೆದಿದ್ದಾರೆ. ಅಲ್ಲದೆ ಬಂಟ್ವಾಳದ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಮೂರು ಸ್ಥಾನಗಳನ್ನು ಪಡೆದಿದ್ದು ಉಪಾಧಕ್ಷಸ್ಥಾನ ಒಳಿದು ಬರಲಿದೆ. ಇದಲ್ಲದೆ ತುಮಕೂರನ ಶಿರಾ ತಾಲೂಕಿನಲ್ಲಿ 17 ಸ್ಥಾನಗಳಲ್ಲಿ ಗೆದ್ದಿದ್ದಾರೆ.

ನಮ್ಮ ಪಕ್ಷದ ಪ್ರಭಾವವಿರುವ ಚಿಕ್ಕಮಗಳೂರಿನ ಕೆಲವು ಗ್ರಾಮ ಪಂಚಾಯತ್‌ನಲ್ಲಿ ಚುನಾವಣೆ ನಡೆದಿಲ್ಲ, ಇಲ್ಲವೆಂದರೆ ಅಲ್ಲೂ ಒಂದಷ್ಟು ಸ್ಥಾನಗಳು ಪಡೆಯುತ್ತಿದ್ದೆವು ಎಂದು ಪಕ್ಷದ ಮುಖಂಡರಾದ ಶಿವರಾಜ್ ಬಿರದಾರ್‌ ತಿಳಿಸಿದ್ದಾರೆ.

ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾ

ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾವು ಕರ್ನಾಟಕದ 10 ಜಿಲ್ಲೆಗಳಲ್ಲಿ 125 ಗ್ರಾಮ ಪಂಚಾಯಿತಿ ಸ್ಥಾನಗಳ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿತ್ತು. ಅವರಲ್ಲಿ 43 ಜನ ಜಯಗಳಿಸಿದ್ದಾರೆ ಎಂದು ಮಾಹಿತಿ ದೊರಕಿದೆ.

ಆಮ್ ಆದ್ಮಿ ಪಕ್ಷ

ಆಮ್ ಆದ್ಮಿ ಪಕ್ಷದಿಂದ 600 ಅಭ್ಯರ್ಥಿಗಳನ್ನು ಬೆಂಬಲಿಸಿದ್ದು, ಅದರಲ್ಲಿ 286 ಜನ ಚುನಾಯಿತರಾಗಿದ್ದಾರೆ. ಆಮ್ ಆದ್ಮಿ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಹೈದರಾಬಾದ್ ಕರ್ನಾಟಕ ಭಾಗ ಬೀದರ್, ಕಲ್ಬುರ್ಗಿ, ಬಾಗಲಕೋಟೆ, ವಿಜಯಪುರ, ಕೋಲಾರ ಉತ್ತರ ಕನ್ನಡ ಭಾಗದಲ್ಲಿ ಹೆಚ್ಚು ಜಯಗಳಿಸಿದ್ದಾರೆ.

ಈ ದೇಶದ ಕಾನೂನಿಗೆ ಗೌರವ ಕೊಟ್ಟ ಆಮ್ ಆದ್ಮಿ ಪಕ್ಷ ಎಲ್ಲಿಯೂ ಸಹ ಪಕ್ಷದ ಅಭ್ಯರ್ಥಿಗಳ ಎಂದು ಪ್ರಚಾರ ಮಾಡಲಿಲ್ಲ, ಆದರೆ ಗೆದ್ದಿರುವ ಎಲ್ಲಾ ಅಭ್ಯರ್ಥಿಗಳು ಆಮ್ ಆದ್ಮಿ ಪಕ್ಷದ ಸಕ್ರಿಯ ಕಾರ್ಯಕರ್ತರು ಎಂಬುದು ನಮ್ಮ ಹೆಮ್ಮೆಯಾಗಿದೆ. ಗ್ರಾಮ ಮಟ್ಟದಲ್ಲಿ ಬದಲಾವಣೆ ತರುತ್ತಾರೆ ಎನ್ನುವ ಭರವಸೆ ಇದೆ ಎಂದು ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ತಿಳಿಸಿದರು.

ಬಿಎಸ್‌ಪಿ

ಬಹುಜನನ ಸಮಾಜ ಪಕ್ಷವು ರಾಜ್ಯದ್ಯಂತ ಸುಮಾರು 525 ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿತ್ತು. ಅದರಲ್ಲಿ ಇದುವರೆಗೂ 236 ಜನ ಚುನಾಯಿತರಾಗಿದ್ದರೆಂದು ಬಿಎಸ್‌ಪಿ ಮುಖಂಡರಾದ ಕೃಷ್ಣಮೂರ್ತಿಯವರು ಮಾಹಿತಿ ನೀಡಿದ್ದಾರೆ.

ಅಲ್ಲದೆ SUCI, ಕರ್ನಾಟಕ ರಾಷ್ಟ್ರ ಸಮಿತಿ, ಸಿಪಿಐ (ಎಂಎಲ್ ಲಿಬರೇಷನ್), ಸಿಪಿಐ (ಎಂಎಲ್ ರೆಡ್‌ಸ್ಟಾರ್) ಪಕ್ಷಗಳು ಸಹ ಹಲವು ಅಭ್ಯರ್ಥಿಗಳನ್ನು ಬೆಂಬಲಿಸಿದ್ದವು. ಅವುಗಳ ಮಾಹಿತಿ ಪಡೆಯಲು ಸಂಪರ್ಕಿಸಿತ್ತಾದರೂ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಸಂಪರ್ಕ ಸಿಕ್ಕ ನಂತರ ಈ ವರದಿಯನ್ನು ಅಪ್‌ಡೇಟ್‌ ಮಾಡಲಾಗುವುದು.


ಇದನ್ನೂ ಓದಿ: ಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ – ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...