Homeಮುಖಪುಟಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ 'ಈ ಪಕ್ಷಗಳ ಬೆಂಬಲಿತರ' ಸಾಧನೆ ಎಷ್ಟು?

ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

ಸ್ವರಾಜ್‌ ಇಂಡಿಯಾ, SDPI, ಸಿಪಿಐ(ಎಂ), ಸಿಪಿಐ, ಬಹುಜನ ಸಮಾಜ ಪಕ್ಷ, ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾ, ಆಮ್‌ ಆದ್ಮಿ ಪಕ್ಷ ಸೇರಿ ಹಲವು ಪಕ್ಷಗಳ ಬೆಂಬಲಿಗರು ಚುನಾಯಿತರಾದ ಮಾಹಿತಿ ಇಲ್ಲಿದೆ.

- Advertisement -
- Advertisement -

ಗ್ರಾಮೀಣ ಅಭಿವೃದ್ದಿಯ ಕನಸುಗಳೊಂದಿಗೆ ಗ್ರಾಮ ಪಂಚಾಯ್ತಿ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ. ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಎಂಬ ಮುಖ್ಯವಾಹಿನಿಯಲ್ಲಿರುವ ಪಕ್ಷಗಳು ತಮ್ಮ ಬೆಂಬಲಿತ ಅಭ್ಯರ್ಥಿಗಳು ಇಷ್ಟು ಸ್ಥಾನಗಳಲ್ಲಿ ಚುನಾಯಿತರಾಗಿದ್ದಾರೆ ಎಂದು ಘೋಷಿಸಿಕೊಂಡಿದ್ದಾರೆ. ಈ ಮೂರು ಪಕ್ಷಗಳಲ್ಲದೆ ಇತರ ಪಕ್ಷಗಳು ಸಹ ತಳಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದು ಅದರ ವರದಿ ಇಲ್ಲಿದೆ.

ಸ್ವರಾಜ್‌ ಇಂಡಿಯಾ, ಎಸ್.ಡಿ.ಪಿ.ಐ, ಸಿಪಿಐ(ಎಂ), ಸಿಪಿಐ, ಬಹುಜನ ಸಮಾಜ ಪಕ್ಷ, ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾ, ಆಮ್‌ ಆದ್ಮಿ ಪಕ್ಷ ಸೇರಿ ಹಲವು ಪಕ್ಷಗಳ ಬೆಂಬಲಿಗರು ಹಲವಾರು ಕಡೆ ಚುನಾಯಿತರಾಗಿದ್ದಾರೆ.

ಸ್ವರಾಜ್‌ ಇಂಡಿಯಾ

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಗಳು ಸ್ವರಾಜ್ ಇಂಡಿಯಾ ರಾಜಕೀಯ ಪಕ್ಷವಾಗಿ ಒಗ್ಗೂಡಿ ಚುನಾವಣೆ ಎದುರಿಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ‌ರವರು ಮಾತನಾಡಿ “ನಾವು ಒಟ್ಟು 3000ಕ್ಕೂ ಹೆಚ್ಚು ಜನರನ್ನು ಬೆಂಬಲಿಸಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಣಕ್ಕಿಳಿಸಿದೆವು. 1800ಕ್ಕೂ ಅಧಿಕ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ. ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹೆಚ್ಚಿನ ಜನ ಆಯ್ಕೆಯಾಗಿದ್ದಾರೆಂದು” ಮಾಹಿತಿ ನೀಡಿದ್ದಾರೆ. ಅಲ್ಲದೇ ಪಾಂಡವಪುರ ತಾಲ್ಲೂಕಿನ ಬಹುತೇಕ ಗ್ರಾಮ ಪಂಚಾಯ್ತಿಗಳಲ್ಲಿ ನಮ್ಮ ಅಭ್ಯರ್ಥಿಗಳೆ ಅಧಿಕಾರ ಹಿಡಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಎಸ್.ಡಿ.ಪಿ.ಐ

2015ರ ಗ್ರಾಮ ಪಂಚಾಯತ್ ಚುನಾವಣೆಗೆ ಹೋಲಿಸಿದರೆ ಅದಕ್ಕಿಂತ ಈ ಬಾರಿ 300 ಪಟ್ಟು ಅಧಿಕ ಸ್ಥಾನಗಳಲ್ಲಿ SDPI ಬೆಂಬಲಿತ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ ರಾಜ್ಯಧ್ಯಕ್ಷರಾದ ಇಲ್ಯಾಸ್‌ ತುಂಬೆಯವರು. ನಾನುಗೌರಿ ಜೊತೆ ಮಾತನಾಡಿದ ಅವರು, “ಒಟ್ಟು ರಾಜ್ಯದಾದ್ಯಂತ ನಮ್ಮ 221 ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಮೂರು ಗ್ರಾಮ ಪಂಚಾಯ್ತಿಗಳಲ್ಲಿ ನಾವು ಸ್ಪಷ್ಟ ಬಹುಮತ ಪಡೆದಿದ್ದೇವೆ. 10 ಗ್ರಾಮ ಪಂಚಾಯ್ತಿಗಳಲ್ಲಿ ಅಧ್ಯಕ್ಷರು ಯಾರಾಗಬೇಕು ಎಂದು ನಿರ್ಧರಿಸುವ ಸ್ಥಾನದಲ್ಲಿ SDPI ಇದೆ” ಎಂದಿದ್ದಾರೆ.

ಒಟ್ಟು ಜಯಗಳಿಸಿದವರಲ್ಲಿ ಶೇ.50ಕ್ಕಿಂತ ಹೆಚ್ಚು ಮಹಿಳೆಯರರಾಗಿದ್ದರೆ ಶೇ.20 ರಷ್ಟು ದಲಿತರು ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿದ್ದಾರೆ. ರಾಜ್ಯದಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚಿನ ಗೆಲುವು ಸಾಧಿಸಿದ್ದೇವೆ. ಜಿಲ್ಲೆಯಲ್ಲಿ 485 ಕಡೆಗಳಲ್ಲಿ ಸ್ಪರ್ಧಿಸಿದ್ದು, 171 ಜನ ಜಯಶೀಲರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಮಳ್ಳೂರು, ಸಜೀಪ ನಡು ಮತ್ತು ಸಜೀಪ ಮುನ್ನೂರು ಗ್ರಾಮ ಪಂಚಾಯಿತಿಗಳು SDPI ತೆಕ್ಕೆಗೆ ಬಂದಿವೆ.

ಸಿಪಿಐ(ಎಂ)

ಭಾರತೀಯ ಕಮ್ಯುನಿಷ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪಕ್ಷವು ಈ ಚುನಾವಣೆಯಲ್ಲಿ ಗಮನಾರ್ಹ ಸಾಧನೆಗೈದಿದೆ. ರಾಜ್ಯದ 20 ಜಿಲ್ಲೆಗಳ 70 ತಾಲೂಕುಗಳಲ್ಲಿ 726 ಅಭ್ಯರ್ಥಿಗಳು ಸಿಪಿಐ(ಎಂ) ಪಕ್ಷ ಮತ್ತು DYFI, SFI ಬೆಂಬಲದಿಂದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇದರಲ್ಲಿ 231 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಬಸವರಾಜು ಮಾಹಿತಿ ನೀಡಿದ್ದಾರೆ.

“ಈಗಾಗಲೇ ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲೂಕಿನ ಮೂರು ಗ್ರಾಮ ಪಂಚಾಯತ್‌ಗಳು ನಮ್ಮ ತೆಕ್ಕೆಗೆ ಬಂದಿದೆ. ಅಲ್ಲಿನ ಇನ್ನೂ ಎರಡು ಗ್ರಾಮ ಪಂಚಾಯತ್‌ಗಳಲ್ಲಿ ಪಕ್ಷದ ಬೆಂಬಲಿತ ಸದಸ್ಯರು ಗೆದ್ದಿದ್ದಾರೆ. ಅವುಗಳೂ ಇತರ ಮಿತ್ರಪಕ್ಷಗಳ ಸಹಾಯದಿಂದ ನಮ್ಮ ತೆಕ್ಕೆಗೆ ಬರಲಿದೆ. ಗುಲ್ಬರ್ಗ ಜಿಲ್ಲೆಯ ಚಿಂಚೊಳಿ ಮತ್ತು ಅಳಂದ ತಾಲೂಕುಗಳ ಗ್ರಾಮಗಳಲ್ಲಿ ನಮ್ಮ ಮಿತ್ರಪಕ್ಷಗಳ ಸದಸ್ಯರ ಸಹಾಯದಿಂದ ಇನ್ನೂ ನಾಲ್ಕು ಪಂಚಾಯತ್‌ಗಳು ನಮ್ಮ ತೆಕ್ಕೆಗೆ ಬರಲಿದೆ” ಎಂದು ಅವರು ಹೇಳಿದ್ದಾರೆ.

ಸಿಪಿಐ

ಸಿಪಿಐ ಬೆಂಬಲಿತರು 350 ಸ್ಥಾನಗಳಿಗೆ ಸ್ಪರ್ಧಿಸಿದ್ದು, ಅದರಲ್ಲಿ 88 ಸ್ಥಾನಗಳಲ್ಲಿ ಗೆದ್ದಿದ್ದಾರೆ. ಅಲ್ಲದೆ ತರಿಕೆರೆ ತಾಲೂಕಿನ ಸಂತೆಊರು ಗ್ರಾಮ ಪಂಚಾಯತ್‌‌ನಲ್ಲಿ 11 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಪಡೆದು ಗ್ರಾಮಪಂಚಾಯತ್‌‌ ತೆಕ್ಕೆಗೆ ಪಡೆದಿದ್ದಾರೆ. ಅಲ್ಲದೆ ಬಂಟ್ವಾಳದ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಮೂರು ಸ್ಥಾನಗಳನ್ನು ಪಡೆದಿದ್ದು ಉಪಾಧಕ್ಷಸ್ಥಾನ ಒಳಿದು ಬರಲಿದೆ. ಇದಲ್ಲದೆ ತುಮಕೂರನ ಶಿರಾ ತಾಲೂಕಿನಲ್ಲಿ 17 ಸ್ಥಾನಗಳಲ್ಲಿ ಗೆದ್ದಿದ್ದಾರೆ.

ನಮ್ಮ ಪಕ್ಷದ ಪ್ರಭಾವವಿರುವ ಚಿಕ್ಕಮಗಳೂರಿನ ಕೆಲವು ಗ್ರಾಮ ಪಂಚಾಯತ್‌ನಲ್ಲಿ ಚುನಾವಣೆ ನಡೆದಿಲ್ಲ, ಇಲ್ಲವೆಂದರೆ ಅಲ್ಲೂ ಒಂದಷ್ಟು ಸ್ಥಾನಗಳು ಪಡೆಯುತ್ತಿದ್ದೆವು ಎಂದು ಪಕ್ಷದ ಮುಖಂಡರಾದ ಶಿವರಾಜ್ ಬಿರದಾರ್‌ ತಿಳಿಸಿದ್ದಾರೆ.

ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾ

ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾವು ಕರ್ನಾಟಕದ 10 ಜಿಲ್ಲೆಗಳಲ್ಲಿ 125 ಗ್ರಾಮ ಪಂಚಾಯಿತಿ ಸ್ಥಾನಗಳ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿತ್ತು. ಅವರಲ್ಲಿ 43 ಜನ ಜಯಗಳಿಸಿದ್ದಾರೆ ಎಂದು ಮಾಹಿತಿ ದೊರಕಿದೆ.

ಆಮ್ ಆದ್ಮಿ ಪಕ್ಷ

ಆಮ್ ಆದ್ಮಿ ಪಕ್ಷದಿಂದ 600 ಅಭ್ಯರ್ಥಿಗಳನ್ನು ಬೆಂಬಲಿಸಿದ್ದು, ಅದರಲ್ಲಿ 286 ಜನ ಚುನಾಯಿತರಾಗಿದ್ದಾರೆ. ಆಮ್ ಆದ್ಮಿ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಹೈದರಾಬಾದ್ ಕರ್ನಾಟಕ ಭಾಗ ಬೀದರ್, ಕಲ್ಬುರ್ಗಿ, ಬಾಗಲಕೋಟೆ, ವಿಜಯಪುರ, ಕೋಲಾರ ಉತ್ತರ ಕನ್ನಡ ಭಾಗದಲ್ಲಿ ಹೆಚ್ಚು ಜಯಗಳಿಸಿದ್ದಾರೆ.

ಈ ದೇಶದ ಕಾನೂನಿಗೆ ಗೌರವ ಕೊಟ್ಟ ಆಮ್ ಆದ್ಮಿ ಪಕ್ಷ ಎಲ್ಲಿಯೂ ಸಹ ಪಕ್ಷದ ಅಭ್ಯರ್ಥಿಗಳ ಎಂದು ಪ್ರಚಾರ ಮಾಡಲಿಲ್ಲ, ಆದರೆ ಗೆದ್ದಿರುವ ಎಲ್ಲಾ ಅಭ್ಯರ್ಥಿಗಳು ಆಮ್ ಆದ್ಮಿ ಪಕ್ಷದ ಸಕ್ರಿಯ ಕಾರ್ಯಕರ್ತರು ಎಂಬುದು ನಮ್ಮ ಹೆಮ್ಮೆಯಾಗಿದೆ. ಗ್ರಾಮ ಮಟ್ಟದಲ್ಲಿ ಬದಲಾವಣೆ ತರುತ್ತಾರೆ ಎನ್ನುವ ಭರವಸೆ ಇದೆ ಎಂದು ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ತಿಳಿಸಿದರು.

ಬಿಎಸ್‌ಪಿ

ಬಹುಜನನ ಸಮಾಜ ಪಕ್ಷವು ರಾಜ್ಯದ್ಯಂತ ಸುಮಾರು 525 ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿತ್ತು. ಅದರಲ್ಲಿ ಇದುವರೆಗೂ 236 ಜನ ಚುನಾಯಿತರಾಗಿದ್ದರೆಂದು ಬಿಎಸ್‌ಪಿ ಮುಖಂಡರಾದ ಕೃಷ್ಣಮೂರ್ತಿಯವರು ಮಾಹಿತಿ ನೀಡಿದ್ದಾರೆ.

ಅಲ್ಲದೆ SUCI, ಕರ್ನಾಟಕ ರಾಷ್ಟ್ರ ಸಮಿತಿ, ಸಿಪಿಐ (ಎಂಎಲ್ ಲಿಬರೇಷನ್), ಸಿಪಿಐ (ಎಂಎಲ್ ರೆಡ್‌ಸ್ಟಾರ್) ಪಕ್ಷಗಳು ಸಹ ಹಲವು ಅಭ್ಯರ್ಥಿಗಳನ್ನು ಬೆಂಬಲಿಸಿದ್ದವು. ಅವುಗಳ ಮಾಹಿತಿ ಪಡೆಯಲು ಸಂಪರ್ಕಿಸಿತ್ತಾದರೂ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಸಂಪರ್ಕ ಸಿಕ್ಕ ನಂತರ ಈ ವರದಿಯನ್ನು ಅಪ್‌ಡೇಟ್‌ ಮಾಡಲಾಗುವುದು.


ಇದನ್ನೂ ಓದಿ: ಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ – ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...