Homeಕರ್ನಾಟಕಬಿಎಸ್​ವೈ ವಿರುದ್ಧ ಮತ್ತೆ ಅಪಸ್ವರ ಎತ್ತಿದ ಯತ್ನಾಳ್​; ಸಿಎಂ ಕಾರ್ಯವೈಖರಿ ಖಂಡಿಸಿ ಕಟೀಲ್​ಗೆ ಪತ್ರ

ಬಿಎಸ್​ವೈ ವಿರುದ್ಧ ಮತ್ತೆ ಅಪಸ್ವರ ಎತ್ತಿದ ಯತ್ನಾಳ್​; ಸಿಎಂ ಕಾರ್ಯವೈಖರಿ ಖಂಡಿಸಿ ಕಟೀಲ್​ಗೆ ಪತ್ರ

ಜ.4 ಮತ್ತು 5 ರಂದು ವಿಭಾಗವಾರು ಶಾಸಕರ ಬದಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು. ಈ ಹಿಂದಿನ ವಿಭಾಗವಾರು ಸಭೆಗಳು ವಿಫಲವಾಗಿವೆ ಎಂದು ಬಸನಗೌಡ ಪಾಟೀಲ್​ ತಿಳಿಸಿದ್ದಾರೆ.

- Advertisement -
- Advertisement -

ಬಿಜೆಪಿ ಪಕ್ಷ ರಾಜ್ಯದಲ್ಲಿ ತಮ್ಮ ನಿರೀಕ್ಷೆಯಂತೆ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ವರ್ಷದ ಮೇಲಾಗಿದೆ. ಆದರೂ ಆಂತರಿಕ ಬಿಕ್ಕಟ್ಟು ಮಾತ್ರ ಇನ್ನೂ ಶಮನವಾಗುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಇನ್ನೂ ವಿರೋಧ ಪಕ್ಷಗಳಿಗಿಂತ ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಮುಖ್ಯಮಂತ್ರಿ ಬಿಎಸ್​ವೈ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದು ಪಕ್ಷಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದೆ. ಪಕ್ಷದ ನಾಯಕರು ಎಷ್ಟೇ ಹೇಳಿದರೂ ಬಿಎಸ್​ ಯಡಿಯೂರಪ್ಪ ವಿರುದ್ಧದ ತಮ್ಮ ಎಂದಿನ ವಾಗ್ದಾಳಿಯನ್ನು ನಿಲ್ಲಿಸಲು ಯತ್ನಾಳ್​ ಇಂದೂ ಸಹ ಅವರ ಕಾರ್ಯ ವೈಖರಿಯನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಆಡಳಿತ ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಜನವರಿ.4 ಮತ್ತು 5 ರಂದು ಬೆಂಗಳೂರಿನಲ್ಲಿ ವಿಭಾಗವಾರು ಶಾಸಕರ ಸಭೆ ಕರೆದಿದ್ದಾರೆ. ಆದರೆ, ಈ ಸಭೆಯ ವಿಚಾರವನ್ನು ಮುಂದಿಟ್ಟುಕೊಂಡು ಶಾಸಕ ಯತ್ನಾಳ್ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್​ ಕಟೀಲ್ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದ ಸಾರಾಂಶ ಹೀಗಿದೆ:

ಜ.4 ಮತ್ತು 5 ರಂದು ವಿಭಾಗವಾರು ಶಾಸಕರ ಬದಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು. ಈ ಹಿಂದಿನ ವಿಭಾಗವಾರು ಸಭೆಗಳು ವಿಫಲವಾಗಿವೆ. ಈ ಮೊದಲು ವಿಭಾಗವಾರು ಶಾಸಕರ ಸಭೆ ಕರೆಯಲಾಗಿತ್ತು. ಆ ಸಭೆಯಲ್ಲಿ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಮನವಿ ಸಲ್ಲಿಸಲಾಗಿತ್ತು. ಸಿಎಂ ತಕ್ಷಣ ಹಣ ಬಿಡುಗಡೆ ಮಾಡಿ ಎಂದು ಷರಾ ಬರೆದಿದ್ದರು. ಆದರೂ, ಈವರೆಗೆ ಹಣ ಬಿಡುಗಡೆಯಾಗಿಲ್ಲ ಎಂದು ಯತ್ನಾಳ ಪತ್ರದಲ್ಲಿ ತಿಳಿಸಿದ್ದಾರೆ.

ಯತ್ನಾಳ್ ಬರೆದಿರುವ ಪತ್ರ.

ಈ ಹಿಂದೆ ನಡೆದ ವಿಭಾಗವಾರು ಶಾಸಕರ ಸಭೆಯಿಂದಾಗಿ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಶಾಸಕರ ಮನಸ್ಸಿಗೆ ನೋವಾಗಿದೆ. ಉದಾಹರಣೆಗೆ ನನ್ನ ಮತಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಬಿಡುಗಡೆಯಾಗಿಲ್ಲ. ಶಾಸಕರು ಸಿಎಂ ಭೇಟಿಗೆ ಹೋದರೂ ಮುಖ್ಯಮಂತ್ರಿಗಳು ಸಿಗುತ್ತಿಲ್ಲ. ಬಹುಷಃ ಸಿಎಂ ಅನಾರೋಗ್ಯದ ದೃಷ್ಠಿಯಿಂದ ಸಿಗುತ್ತಿಲ್ಲ ಎಂದು ಭಾವಿಸುತ್ತೇನೆ ಎಂದು ಸಿಎಂ ಆರೋಗ್ಯದ ಬಗ್ಗೆಯೂ ಯತ್ನಾಳ ಪ್ರಸ್ತಾಪಿಸಿದ್ದಾರೆ.

ಇತ್ತೀಚೆಗೆ ನಡೆದ ನಾನಾ ನಿಗಮ ಮತ್ತು ಮಂಡಳಿಗಳಿಗೆ, ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಅಲ್ಲದೇ, ಹಲವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಈ ವಿಚಾರದಲ್ಲಿಯೂ ಬಿಜೆಪಿ ಶಾಸಕರನ್ನು ಕಡೆಗಣನೆ ಮಾಡಲಾಗಿದೆ. ಇದರಿಂದ ಕಾರ್ಯಕರ್ತರಿಗೂ ನೋವಾಗಿದೆ” ಎಂದು ಯತ್ನಾಳ ಸಿಎಂ ವಿರುದ್ಧದ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

ಆದ್ದರಿಂದ, ರಾಜ್ಯಾಧ್ಯಕ್ಷರು, ಸಿಎಂ ಜ. 4 ಮತ್ತು 5 ರಂದು ಬೆಳಿಗ್ಗೆಯಿಂದ ಸಂಜೆಯವರೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು. ಈ ಮೂಲಕ ಬಿಜೆಪಿ ಶಾಸಕರಲ್ಲಿ ಇರುವ ಅಸಮಾಧಾನ ಹೋಗಲಾಡಿಸಬೇಕು ಎಂದು ಯತ್ನಾಳ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್​ ಕಟೀಲ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...