Homeಚಳವಳಿಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ - ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

ಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ – ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

2021 ರಲ್ಲಿ ಕಾರ್ಪೊರೇಟ್ ಸರಕುಗಳನ್ನು ಹೊರಹಾಕಿ, ಅದನ್ನು 'A' (ಅದಾನಿ&ಅಂಬಾನಿ)ಯಿಂದಲೇ ಪ್ರಾರಂಭಿಸಿ. ರೈತರೊಂದಿಗೆ ಪ್ರಕೃತಿ ಮತ್ತು ಶ್ರಮಜೀವಿಗಳನ್ನು ಗೌರವಿಸಿ ಮತ್ತು ರಕ್ಷಿಸಿ.

- Advertisement -
- Advertisement -

ಇನ್ನೇನು ಹೊಸ ವರ್ಷಕ್ಕೆ ಕಾಲಿಡುವ ಹೊತ್ತಿಗೆ ಭಾರತದಲ್ಲಿ ಐತಿಹಾಸಿಕ ರೈತರ ಹೋರಾಟ ನಡೆಯುತ್ತಿದೆ. ಹೊಸ ಕೃಷಿಕಾನೂನುಗಳು ದೇಶದ ಅತೀ ದೊಡ್ಡ ಕಾರ್ಪೊರೇಟ್‌‌ ಧಣಿಗಳಾದ, ಅಂಬಾನಿ ಮತ್ತು ಅದಾನಿಗಳ ಲಾಭಕ್ಕಷ್ಟೆ ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಈಗಾಗಲೇ ಹಲವಾರು ರೈತ ಹೋರಾಟಗಾರರು ಆರೋಪಿಸಿದ್ದಾರೆ. ಇದೀಗ ಖ್ಯಾತ ಪರಿಸರ ಹೋರಾಟಗಾರ್ತಿ ’ನರ್ಮದಾ ಬಚಾವ್’ ಆಂದೋಲನದ ಮುಂದಾಳು ಮೇಧಾ ಪಾಟ್ಕರ್‌ ಅವರು ಪತ್ರವೊಂದು ಬರೆದಿದ್ದಾರೆ.

ಪತ್ರದಲ್ಲಿ, “2021 ರಲ್ಲಿ ನಿಜವಾದ ಸಮೃದ್ಧ ಜೀವನವನ್ನು ನಡೆಸಲು, ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ ಮತ್ತು ಹೊರಹಾಕಿ, ಅದನ್ನು ‘A'(ಅದಾನಿ&ಅಂಬಾನಿ)ಯಿಂದಲೇ ಪ್ರಾರಂಭಿಸಿ. ರೈತರೊಂದಿಗೆ ಪ್ರಕೃತಿ ಮತ್ತು ಶ್ರಮಜೀವಿಗಳನ್ನು ಗೌರವಿಸಿ ಮತ್ತು ರಕ್ಷಿಸಿ” ಎಂದು ಮೇಧಾ ಪಾಟ್ಕರ್‌ ಕರೆ ನೀಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: Jio ಇಂದ Airtel ಗೆ ಸಾಮೂಹಿಕವಾಗಿ ಪೋರ್ಟ್ ಆದ ರೈತ ಹೋರಾಟಗಾರರು!

“ಸಮೃದ್ಧಿಯು ಆಸ್ತಿಯ ಮೂಲಕ ಬರುವುದಿಲ್ಲ. ಇದನ್ನು ಸರಳತೆ ಮತ್ತು ಸ್ವಾವಲಂಬನೆಯ ಮೂಲಕ ಸಾಧಿಸಬಹುದು. ಈ ಎರಡು ಗುಣಗಳೂ ಕಳೆದುಹೋಗಿರುವುದರಿಂದ, ಕೊಳ್ಳುಬಾಕತನವು ನಮ್ಮನ್ನು ಆಕರ್ಷಿಸುವುದಲ್ಲದೆ ನಮ್ಮ ಜೀವನವನ್ನು ಸೆರೆಹಿಡಿದಿದೆ. ಈ ಕಾರ್ಪೊರೇಟ್‌‌‌ಗಳಿಂದ ಅಲಕೃತಗೊಂಡಿರುವ ಜೀವನಶೈಲಿಯು, ಒಂದು ಕಡೆ ಸುಂದರವಾಗಿ ಕಂಡರೆ, ಇನ್ನೊಂದು ಕಡೆ ರೈತರು, ಕಾರ್ಮಿಕರು ಸೇರಿದಂತೆ ಲಕ್ಷಾಂತರ ಜನರ ಅಸಮಾನತೆ ಮತ್ತು ನಿರ್ಗತಿಕತನಕ್ಕೆ ಕಾರಣವಾಗುತ್ತಿದೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ನಮಗೆ ಶ್ರಮ ಜೀವಿ ರೈತರು ಮತ್ತು ಕಾರ್ಮಿಕರು ಅನ್ನ ನೀಡುತ್ತಿದ್ದಾರೆ. ಅವರು ಈ ಸೇವೆಯನ್ನು ನಮಗೆ ನೀಡುತ್ತಿರುವಾಗ, ಅವರ ಹಕ್ಕುಗಳಿಗಾಗಿ, ಘನತೆಯ ಬದುಕಿಗಾಗಿ, ಅವರು ಅನೇಕ ಹೋರಾಟವನ್ನು ನಡೆಸುತ್ತಿದ್ದಾರೆ. ಇಂದು ಅವರು ಕೊರೆಯುವ ಚಳಿಯೊಂದಿಗೆ ರಸ್ತೆಯಲ್ಲಿ ಹುತಾತ್ಮರಾಗುತ್ತಿದ್ದಾರೆ” ಎಂದು ಬರೆದಿದ್ದಾರೆ.

“ಹೊಸ ವರ್ಷ ನಮ್ಮ ಮನೆ ಬಾಗಿಲು ತಟ್ಟುತ್ತಿರುವಾಗ, ಇದು ಸ್ವಯಂ ಆಲೋಚನೆಯೊಂದಿಗೆ ಮುಂದುವರೆಯಲು ಸರಿಯಾದ ಸಮಯವಲ್ಲವೇ? ನಮ್ಮ ಕೈಯ್ಯಲ್ಲಿರುವ ಪ್ರತಿ ಒಳ್ಳೆಯದನ್ನು ನೋಡಲು ಹಾಗೂ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲವೆ? ದಿನಕ್ಕೆ 384 ಕೋಟಿಯಿಂದ 1085 ಕೋಟಿಗೆ ಏರುತ್ತಿರುವ ದೊಡ್ಡ ಕಾರ್ಪೊರೇಟ್‌ಗಳ ಉತ್ಪನ್ನಗಳನ್ನು, ಅದರಲ್ಲೂ ಅದಾನಿ, ಅಂಬಾನಿಗಳ ಅಶ್ಲೀಲ ಮತ್ತು ಶೋಷಣೆಯ ಸಂಪತ್ತನ್ನು ಪ್ರಶ್ನಿಸಿ, ಅದನ್ನು ನಮ್ಮ ಜೀವನದಿಂದ ಹೊರಗಿಡಲು ಸಾಧ್ಯವಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

“ಹೊಸ ವರ್ಷದ ದಿನ, ಸತ್ಯ ಮತ್ತು ಪರಿವರ್ತನೆಗಾಗಿ ನಿಮ್ಮ ಸ್ವಂತ ಪ್ರತಿಜ್ಞೆಯೊಂದಿಗೆ ‘ಸತ್ಯಾಗ್ರಹ’ದ ಒಂದು ದಿನವಾಗಬಹುದು. ‘A’ ಗಳೊಂದಿಗೆ ಪ್ರಾರಂಭವಾಗುವ ದೊಡ್ಡ ಕಾರ್ಪೊರೇಟ್‌ಗಳ ಉತ್ಪನ್ನಗಳನ್ನು ಹೊರಹಾಕಲು ಪ್ರಾರಂಭಿಸಿ, ಮುಂದೆ ಸಾಗಬಹುದು. ಅದಕ್ಕಾಗಿ ನಿಮ್ಮ ಜಿಯೋ ಸಿಮ್ ಅನ್ನು ಬಿಎಸ್‌ಎನ್‌ಎಲ್ ಗೆ‌‌ ಬದಲಾಯಿಸಬಹುದು. ಅಲ್ಲದೆ ತೈಲ ಮತ್ತು ಅನಿಲವನ್ನು ತಮ್ಮಲ್ಲಿಟ್ಟುಕೊಂಡು ಶೋಷಿಸುತ್ತಿರುವ, ಅದಾನಿಯ ಫಾರ್ಚೂನ್ ಅಗ್ರೊಲೊಜಿಸ್ಟಿಕ್ಸ್ ಬಳಸುವುದನ್ನು, ರಿಲಾಯನ್ಸ್ ಅವರ ಮಾಲ್ ಹಾಗೂ ಪೆಟ್ರೋಲ್ ಬಂಕ್‌ಗೆ ಹೋಗುವುದನ್ನು ಬಿಟ್ಟುಬಿಡಬೇಕು. ಕೈಮಗ್ಗ ಮತ್ತು ಸಣ್ಣ ಪವರ್‌ಲೂಮ್‌‌ಗಳು ತಯಾರಿಸಿದ ಬಟ್ಟೆಗಳನ್ನು ಖರೀದಿಸಲು ನಿರ್ಧರಿಸಿ” ಎಂದು ಅವರು ಕರೆ ನೀಡಿದ್ದಾರೆ.

“ಗಾಂಧಿ, ಟ್ಯಾಗೋರ್ ಮಾರ್ಗದರ್ಶನದ ಹಾದಿಯಲ್ಲಿ ಸಾಗಲು ಇದೊಂದು ಮನವಿ, ಇದು ಮಾರ್ಕ್ಸ್‌ನ ಕನಸನ್ನು, ಅಧಿಕಾರವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕ್ರಿಯೆಯಾಗಿದೆ. ಇದುವೆ ನಮ್ಮ ಸಂವಿಧಾನವನ್ನು ಅನುಸರಿಸುವ ನಿಜವಾದ ಪ್ರತಿಜ್ಞೆಯಾಗಿದೆ. ಇದುವೆ ಸಮಾನತೆ, ನ್ಯಾಯ ಮತ್ತು ಭ್ರಾತೃತ್ವದ ದೃಷ್ಟಿಯನ್ನು ಹೊಂದಿದ್ದ, ಬಾಬಾಸಾಹೇಬ್ ಮತ್ತು ಭಾರತ ಸಂವಿಧಾನದ ಎಲ್ಲ ಪಿತಾಮಹಾರಿಗೆ ಸಲ್ಲಿಸುವ ಗೌರವ” ಎಂದು ಅವರು ಬರೆದಿದ್ದಾರೆ. ಪತ್ರದ ಪೂರ್ಣಪಾಠಕ್ಕೆ ಇಲ್ಲಿಕ್ಲಿಕ್‌ ಮಾಡಿ

ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...