Homeಚಳವಳಿಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ - ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

ಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ – ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

2021 ರಲ್ಲಿ ಕಾರ್ಪೊರೇಟ್ ಸರಕುಗಳನ್ನು ಹೊರಹಾಕಿ, ಅದನ್ನು 'A' (ಅದಾನಿ&ಅಂಬಾನಿ)ಯಿಂದಲೇ ಪ್ರಾರಂಭಿಸಿ. ರೈತರೊಂದಿಗೆ ಪ್ರಕೃತಿ ಮತ್ತು ಶ್ರಮಜೀವಿಗಳನ್ನು ಗೌರವಿಸಿ ಮತ್ತು ರಕ್ಷಿಸಿ.

- Advertisement -
- Advertisement -

ಇನ್ನೇನು ಹೊಸ ವರ್ಷಕ್ಕೆ ಕಾಲಿಡುವ ಹೊತ್ತಿಗೆ ಭಾರತದಲ್ಲಿ ಐತಿಹಾಸಿಕ ರೈತರ ಹೋರಾಟ ನಡೆಯುತ್ತಿದೆ. ಹೊಸ ಕೃಷಿಕಾನೂನುಗಳು ದೇಶದ ಅತೀ ದೊಡ್ಡ ಕಾರ್ಪೊರೇಟ್‌‌ ಧಣಿಗಳಾದ, ಅಂಬಾನಿ ಮತ್ತು ಅದಾನಿಗಳ ಲಾಭಕ್ಕಷ್ಟೆ ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಈಗಾಗಲೇ ಹಲವಾರು ರೈತ ಹೋರಾಟಗಾರರು ಆರೋಪಿಸಿದ್ದಾರೆ. ಇದೀಗ ಖ್ಯಾತ ಪರಿಸರ ಹೋರಾಟಗಾರ್ತಿ ’ನರ್ಮದಾ ಬಚಾವ್’ ಆಂದೋಲನದ ಮುಂದಾಳು ಮೇಧಾ ಪಾಟ್ಕರ್‌ ಅವರು ಪತ್ರವೊಂದು ಬರೆದಿದ್ದಾರೆ.

ಪತ್ರದಲ್ಲಿ, “2021 ರಲ್ಲಿ ನಿಜವಾದ ಸಮೃದ್ಧ ಜೀವನವನ್ನು ನಡೆಸಲು, ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ ಮತ್ತು ಹೊರಹಾಕಿ, ಅದನ್ನು ‘A'(ಅದಾನಿ&ಅಂಬಾನಿ)ಯಿಂದಲೇ ಪ್ರಾರಂಭಿಸಿ. ರೈತರೊಂದಿಗೆ ಪ್ರಕೃತಿ ಮತ್ತು ಶ್ರಮಜೀವಿಗಳನ್ನು ಗೌರವಿಸಿ ಮತ್ತು ರಕ್ಷಿಸಿ” ಎಂದು ಮೇಧಾ ಪಾಟ್ಕರ್‌ ಕರೆ ನೀಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: Jio ಇಂದ Airtel ಗೆ ಸಾಮೂಹಿಕವಾಗಿ ಪೋರ್ಟ್ ಆದ ರೈತ ಹೋರಾಟಗಾರರು!

“ಸಮೃದ್ಧಿಯು ಆಸ್ತಿಯ ಮೂಲಕ ಬರುವುದಿಲ್ಲ. ಇದನ್ನು ಸರಳತೆ ಮತ್ತು ಸ್ವಾವಲಂಬನೆಯ ಮೂಲಕ ಸಾಧಿಸಬಹುದು. ಈ ಎರಡು ಗುಣಗಳೂ ಕಳೆದುಹೋಗಿರುವುದರಿಂದ, ಕೊಳ್ಳುಬಾಕತನವು ನಮ್ಮನ್ನು ಆಕರ್ಷಿಸುವುದಲ್ಲದೆ ನಮ್ಮ ಜೀವನವನ್ನು ಸೆರೆಹಿಡಿದಿದೆ. ಈ ಕಾರ್ಪೊರೇಟ್‌‌‌ಗಳಿಂದ ಅಲಕೃತಗೊಂಡಿರುವ ಜೀವನಶೈಲಿಯು, ಒಂದು ಕಡೆ ಸುಂದರವಾಗಿ ಕಂಡರೆ, ಇನ್ನೊಂದು ಕಡೆ ರೈತರು, ಕಾರ್ಮಿಕರು ಸೇರಿದಂತೆ ಲಕ್ಷಾಂತರ ಜನರ ಅಸಮಾನತೆ ಮತ್ತು ನಿರ್ಗತಿಕತನಕ್ಕೆ ಕಾರಣವಾಗುತ್ತಿದೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ನಮಗೆ ಶ್ರಮ ಜೀವಿ ರೈತರು ಮತ್ತು ಕಾರ್ಮಿಕರು ಅನ್ನ ನೀಡುತ್ತಿದ್ದಾರೆ. ಅವರು ಈ ಸೇವೆಯನ್ನು ನಮಗೆ ನೀಡುತ್ತಿರುವಾಗ, ಅವರ ಹಕ್ಕುಗಳಿಗಾಗಿ, ಘನತೆಯ ಬದುಕಿಗಾಗಿ, ಅವರು ಅನೇಕ ಹೋರಾಟವನ್ನು ನಡೆಸುತ್ತಿದ್ದಾರೆ. ಇಂದು ಅವರು ಕೊರೆಯುವ ಚಳಿಯೊಂದಿಗೆ ರಸ್ತೆಯಲ್ಲಿ ಹುತಾತ್ಮರಾಗುತ್ತಿದ್ದಾರೆ” ಎಂದು ಬರೆದಿದ್ದಾರೆ.

“ಹೊಸ ವರ್ಷ ನಮ್ಮ ಮನೆ ಬಾಗಿಲು ತಟ್ಟುತ್ತಿರುವಾಗ, ಇದು ಸ್ವಯಂ ಆಲೋಚನೆಯೊಂದಿಗೆ ಮುಂದುವರೆಯಲು ಸರಿಯಾದ ಸಮಯವಲ್ಲವೇ? ನಮ್ಮ ಕೈಯ್ಯಲ್ಲಿರುವ ಪ್ರತಿ ಒಳ್ಳೆಯದನ್ನು ನೋಡಲು ಹಾಗೂ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲವೆ? ದಿನಕ್ಕೆ 384 ಕೋಟಿಯಿಂದ 1085 ಕೋಟಿಗೆ ಏರುತ್ತಿರುವ ದೊಡ್ಡ ಕಾರ್ಪೊರೇಟ್‌ಗಳ ಉತ್ಪನ್ನಗಳನ್ನು, ಅದರಲ್ಲೂ ಅದಾನಿ, ಅಂಬಾನಿಗಳ ಅಶ್ಲೀಲ ಮತ್ತು ಶೋಷಣೆಯ ಸಂಪತ್ತನ್ನು ಪ್ರಶ್ನಿಸಿ, ಅದನ್ನು ನಮ್ಮ ಜೀವನದಿಂದ ಹೊರಗಿಡಲು ಸಾಧ್ಯವಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

“ಹೊಸ ವರ್ಷದ ದಿನ, ಸತ್ಯ ಮತ್ತು ಪರಿವರ್ತನೆಗಾಗಿ ನಿಮ್ಮ ಸ್ವಂತ ಪ್ರತಿಜ್ಞೆಯೊಂದಿಗೆ ‘ಸತ್ಯಾಗ್ರಹ’ದ ಒಂದು ದಿನವಾಗಬಹುದು. ‘A’ ಗಳೊಂದಿಗೆ ಪ್ರಾರಂಭವಾಗುವ ದೊಡ್ಡ ಕಾರ್ಪೊರೇಟ್‌ಗಳ ಉತ್ಪನ್ನಗಳನ್ನು ಹೊರಹಾಕಲು ಪ್ರಾರಂಭಿಸಿ, ಮುಂದೆ ಸಾಗಬಹುದು. ಅದಕ್ಕಾಗಿ ನಿಮ್ಮ ಜಿಯೋ ಸಿಮ್ ಅನ್ನು ಬಿಎಸ್‌ಎನ್‌ಎಲ್ ಗೆ‌‌ ಬದಲಾಯಿಸಬಹುದು. ಅಲ್ಲದೆ ತೈಲ ಮತ್ತು ಅನಿಲವನ್ನು ತಮ್ಮಲ್ಲಿಟ್ಟುಕೊಂಡು ಶೋಷಿಸುತ್ತಿರುವ, ಅದಾನಿಯ ಫಾರ್ಚೂನ್ ಅಗ್ರೊಲೊಜಿಸ್ಟಿಕ್ಸ್ ಬಳಸುವುದನ್ನು, ರಿಲಾಯನ್ಸ್ ಅವರ ಮಾಲ್ ಹಾಗೂ ಪೆಟ್ರೋಲ್ ಬಂಕ್‌ಗೆ ಹೋಗುವುದನ್ನು ಬಿಟ್ಟುಬಿಡಬೇಕು. ಕೈಮಗ್ಗ ಮತ್ತು ಸಣ್ಣ ಪವರ್‌ಲೂಮ್‌‌ಗಳು ತಯಾರಿಸಿದ ಬಟ್ಟೆಗಳನ್ನು ಖರೀದಿಸಲು ನಿರ್ಧರಿಸಿ” ಎಂದು ಅವರು ಕರೆ ನೀಡಿದ್ದಾರೆ.

“ಗಾಂಧಿ, ಟ್ಯಾಗೋರ್ ಮಾರ್ಗದರ್ಶನದ ಹಾದಿಯಲ್ಲಿ ಸಾಗಲು ಇದೊಂದು ಮನವಿ, ಇದು ಮಾರ್ಕ್ಸ್‌ನ ಕನಸನ್ನು, ಅಧಿಕಾರವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕ್ರಿಯೆಯಾಗಿದೆ. ಇದುವೆ ನಮ್ಮ ಸಂವಿಧಾನವನ್ನು ಅನುಸರಿಸುವ ನಿಜವಾದ ಪ್ರತಿಜ್ಞೆಯಾಗಿದೆ. ಇದುವೆ ಸಮಾನತೆ, ನ್ಯಾಯ ಮತ್ತು ಭ್ರಾತೃತ್ವದ ದೃಷ್ಟಿಯನ್ನು ಹೊಂದಿದ್ದ, ಬಾಬಾಸಾಹೇಬ್ ಮತ್ತು ಭಾರತ ಸಂವಿಧಾನದ ಎಲ್ಲ ಪಿತಾಮಹಾರಿಗೆ ಸಲ್ಲಿಸುವ ಗೌರವ” ಎಂದು ಅವರು ಬರೆದಿದ್ದಾರೆ. ಪತ್ರದ ಪೂರ್ಣಪಾಠಕ್ಕೆ ಇಲ್ಲಿಕ್ಲಿಕ್‌ ಮಾಡಿ

ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...