Homeಚಳವಳಿಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ - ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

ಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ – ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

2021 ರಲ್ಲಿ ಕಾರ್ಪೊರೇಟ್ ಸರಕುಗಳನ್ನು ಹೊರಹಾಕಿ, ಅದನ್ನು 'A' (ಅದಾನಿ&ಅಂಬಾನಿ)ಯಿಂದಲೇ ಪ್ರಾರಂಭಿಸಿ. ರೈತರೊಂದಿಗೆ ಪ್ರಕೃತಿ ಮತ್ತು ಶ್ರಮಜೀವಿಗಳನ್ನು ಗೌರವಿಸಿ ಮತ್ತು ರಕ್ಷಿಸಿ.

- Advertisement -
- Advertisement -

ಇನ್ನೇನು ಹೊಸ ವರ್ಷಕ್ಕೆ ಕಾಲಿಡುವ ಹೊತ್ತಿಗೆ ಭಾರತದಲ್ಲಿ ಐತಿಹಾಸಿಕ ರೈತರ ಹೋರಾಟ ನಡೆಯುತ್ತಿದೆ. ಹೊಸ ಕೃಷಿಕಾನೂನುಗಳು ದೇಶದ ಅತೀ ದೊಡ್ಡ ಕಾರ್ಪೊರೇಟ್‌‌ ಧಣಿಗಳಾದ, ಅಂಬಾನಿ ಮತ್ತು ಅದಾನಿಗಳ ಲಾಭಕ್ಕಷ್ಟೆ ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಈಗಾಗಲೇ ಹಲವಾರು ರೈತ ಹೋರಾಟಗಾರರು ಆರೋಪಿಸಿದ್ದಾರೆ. ಇದೀಗ ಖ್ಯಾತ ಪರಿಸರ ಹೋರಾಟಗಾರ್ತಿ ’ನರ್ಮದಾ ಬಚಾವ್’ ಆಂದೋಲನದ ಮುಂದಾಳು ಮೇಧಾ ಪಾಟ್ಕರ್‌ ಅವರು ಪತ್ರವೊಂದು ಬರೆದಿದ್ದಾರೆ.

ಪತ್ರದಲ್ಲಿ, “2021 ರಲ್ಲಿ ನಿಜವಾದ ಸಮೃದ್ಧ ಜೀವನವನ್ನು ನಡೆಸಲು, ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ ಮತ್ತು ಹೊರಹಾಕಿ, ಅದನ್ನು ‘A'(ಅದಾನಿ&ಅಂಬಾನಿ)ಯಿಂದಲೇ ಪ್ರಾರಂಭಿಸಿ. ರೈತರೊಂದಿಗೆ ಪ್ರಕೃತಿ ಮತ್ತು ಶ್ರಮಜೀವಿಗಳನ್ನು ಗೌರವಿಸಿ ಮತ್ತು ರಕ್ಷಿಸಿ” ಎಂದು ಮೇಧಾ ಪಾಟ್ಕರ್‌ ಕರೆ ನೀಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: Jio ಇಂದ Airtel ಗೆ ಸಾಮೂಹಿಕವಾಗಿ ಪೋರ್ಟ್ ಆದ ರೈತ ಹೋರಾಟಗಾರರು!

“ಸಮೃದ್ಧಿಯು ಆಸ್ತಿಯ ಮೂಲಕ ಬರುವುದಿಲ್ಲ. ಇದನ್ನು ಸರಳತೆ ಮತ್ತು ಸ್ವಾವಲಂಬನೆಯ ಮೂಲಕ ಸಾಧಿಸಬಹುದು. ಈ ಎರಡು ಗುಣಗಳೂ ಕಳೆದುಹೋಗಿರುವುದರಿಂದ, ಕೊಳ್ಳುಬಾಕತನವು ನಮ್ಮನ್ನು ಆಕರ್ಷಿಸುವುದಲ್ಲದೆ ನಮ್ಮ ಜೀವನವನ್ನು ಸೆರೆಹಿಡಿದಿದೆ. ಈ ಕಾರ್ಪೊರೇಟ್‌‌‌ಗಳಿಂದ ಅಲಕೃತಗೊಂಡಿರುವ ಜೀವನಶೈಲಿಯು, ಒಂದು ಕಡೆ ಸುಂದರವಾಗಿ ಕಂಡರೆ, ಇನ್ನೊಂದು ಕಡೆ ರೈತರು, ಕಾರ್ಮಿಕರು ಸೇರಿದಂತೆ ಲಕ್ಷಾಂತರ ಜನರ ಅಸಮಾನತೆ ಮತ್ತು ನಿರ್ಗತಿಕತನಕ್ಕೆ ಕಾರಣವಾಗುತ್ತಿದೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ನಮಗೆ ಶ್ರಮ ಜೀವಿ ರೈತರು ಮತ್ತು ಕಾರ್ಮಿಕರು ಅನ್ನ ನೀಡುತ್ತಿದ್ದಾರೆ. ಅವರು ಈ ಸೇವೆಯನ್ನು ನಮಗೆ ನೀಡುತ್ತಿರುವಾಗ, ಅವರ ಹಕ್ಕುಗಳಿಗಾಗಿ, ಘನತೆಯ ಬದುಕಿಗಾಗಿ, ಅವರು ಅನೇಕ ಹೋರಾಟವನ್ನು ನಡೆಸುತ್ತಿದ್ದಾರೆ. ಇಂದು ಅವರು ಕೊರೆಯುವ ಚಳಿಯೊಂದಿಗೆ ರಸ್ತೆಯಲ್ಲಿ ಹುತಾತ್ಮರಾಗುತ್ತಿದ್ದಾರೆ” ಎಂದು ಬರೆದಿದ್ದಾರೆ.

“ಹೊಸ ವರ್ಷ ನಮ್ಮ ಮನೆ ಬಾಗಿಲು ತಟ್ಟುತ್ತಿರುವಾಗ, ಇದು ಸ್ವಯಂ ಆಲೋಚನೆಯೊಂದಿಗೆ ಮುಂದುವರೆಯಲು ಸರಿಯಾದ ಸಮಯವಲ್ಲವೇ? ನಮ್ಮ ಕೈಯ್ಯಲ್ಲಿರುವ ಪ್ರತಿ ಒಳ್ಳೆಯದನ್ನು ನೋಡಲು ಹಾಗೂ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲವೆ? ದಿನಕ್ಕೆ 384 ಕೋಟಿಯಿಂದ 1085 ಕೋಟಿಗೆ ಏರುತ್ತಿರುವ ದೊಡ್ಡ ಕಾರ್ಪೊರೇಟ್‌ಗಳ ಉತ್ಪನ್ನಗಳನ್ನು, ಅದರಲ್ಲೂ ಅದಾನಿ, ಅಂಬಾನಿಗಳ ಅಶ್ಲೀಲ ಮತ್ತು ಶೋಷಣೆಯ ಸಂಪತ್ತನ್ನು ಪ್ರಶ್ನಿಸಿ, ಅದನ್ನು ನಮ್ಮ ಜೀವನದಿಂದ ಹೊರಗಿಡಲು ಸಾಧ್ಯವಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

“ಹೊಸ ವರ್ಷದ ದಿನ, ಸತ್ಯ ಮತ್ತು ಪರಿವರ್ತನೆಗಾಗಿ ನಿಮ್ಮ ಸ್ವಂತ ಪ್ರತಿಜ್ಞೆಯೊಂದಿಗೆ ‘ಸತ್ಯಾಗ್ರಹ’ದ ಒಂದು ದಿನವಾಗಬಹುದು. ‘A’ ಗಳೊಂದಿಗೆ ಪ್ರಾರಂಭವಾಗುವ ದೊಡ್ಡ ಕಾರ್ಪೊರೇಟ್‌ಗಳ ಉತ್ಪನ್ನಗಳನ್ನು ಹೊರಹಾಕಲು ಪ್ರಾರಂಭಿಸಿ, ಮುಂದೆ ಸಾಗಬಹುದು. ಅದಕ್ಕಾಗಿ ನಿಮ್ಮ ಜಿಯೋ ಸಿಮ್ ಅನ್ನು ಬಿಎಸ್‌ಎನ್‌ಎಲ್ ಗೆ‌‌ ಬದಲಾಯಿಸಬಹುದು. ಅಲ್ಲದೆ ತೈಲ ಮತ್ತು ಅನಿಲವನ್ನು ತಮ್ಮಲ್ಲಿಟ್ಟುಕೊಂಡು ಶೋಷಿಸುತ್ತಿರುವ, ಅದಾನಿಯ ಫಾರ್ಚೂನ್ ಅಗ್ರೊಲೊಜಿಸ್ಟಿಕ್ಸ್ ಬಳಸುವುದನ್ನು, ರಿಲಾಯನ್ಸ್ ಅವರ ಮಾಲ್ ಹಾಗೂ ಪೆಟ್ರೋಲ್ ಬಂಕ್‌ಗೆ ಹೋಗುವುದನ್ನು ಬಿಟ್ಟುಬಿಡಬೇಕು. ಕೈಮಗ್ಗ ಮತ್ತು ಸಣ್ಣ ಪವರ್‌ಲೂಮ್‌‌ಗಳು ತಯಾರಿಸಿದ ಬಟ್ಟೆಗಳನ್ನು ಖರೀದಿಸಲು ನಿರ್ಧರಿಸಿ” ಎಂದು ಅವರು ಕರೆ ನೀಡಿದ್ದಾರೆ.

“ಗಾಂಧಿ, ಟ್ಯಾಗೋರ್ ಮಾರ್ಗದರ್ಶನದ ಹಾದಿಯಲ್ಲಿ ಸಾಗಲು ಇದೊಂದು ಮನವಿ, ಇದು ಮಾರ್ಕ್ಸ್‌ನ ಕನಸನ್ನು, ಅಧಿಕಾರವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕ್ರಿಯೆಯಾಗಿದೆ. ಇದುವೆ ನಮ್ಮ ಸಂವಿಧಾನವನ್ನು ಅನುಸರಿಸುವ ನಿಜವಾದ ಪ್ರತಿಜ್ಞೆಯಾಗಿದೆ. ಇದುವೆ ಸಮಾನತೆ, ನ್ಯಾಯ ಮತ್ತು ಭ್ರಾತೃತ್ವದ ದೃಷ್ಟಿಯನ್ನು ಹೊಂದಿದ್ದ, ಬಾಬಾಸಾಹೇಬ್ ಮತ್ತು ಭಾರತ ಸಂವಿಧಾನದ ಎಲ್ಲ ಪಿತಾಮಹಾರಿಗೆ ಸಲ್ಲಿಸುವ ಗೌರವ” ಎಂದು ಅವರು ಬರೆದಿದ್ದಾರೆ. ಪತ್ರದ ಪೂರ್ಣಪಾಠಕ್ಕೆ ಇಲ್ಲಿಕ್ಲಿಕ್‌ ಮಾಡಿ

ಇದನ್ನೂ ಓದಿ: ರೈತರ ಕೈಯಲ್ಲಿರುವ ರೊಟ್ಟಿಯನ್ನು ಕಿತ್ತುಕೊಳ್ಳಬೇಡಿ: ಭಾವನಾತ್ಮಕ ಟ್ವೀಟ್ ಮಾಡಿದ ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....