Homeಕರ್ನಾಟಕಗುಂಡ್ಲುಪೇಟೆ: ಗ್ರಾ.ಪಂ ಚುನಾವಣೆ ವಿಜಯೋತ್ಸವ ನೆಪದಲ್ಲಿ ದಲಿತ ಕೇರಿಗೆ ನುಗ್ಗಿ ಹಲ್ಲೆ

ಗುಂಡ್ಲುಪೇಟೆ: ಗ್ರಾ.ಪಂ ಚುನಾವಣೆ ವಿಜಯೋತ್ಸವ ನೆಪದಲ್ಲಿ ದಲಿತ ಕೇರಿಗೆ ನುಗ್ಗಿ ಹಲ್ಲೆ

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸೋಲು ಗೆಲುವು ಅಲ್ಲ ಎನ್ನಬಾರದು. ಆಯ್ಕೆಯಾದವರು ಆಯ್ಕೆಯಾಗದವರು ಎನ್ನಬೇಕು ಎನ್ನುತ್ತಾರೆ ಕೃಷ್ಣಮೂರ್ತಿ ಚಮರಂ.

- Advertisement -
- Advertisement -

ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ಈಗ ಫಲಿತಾಂಶವೂ ಬಹತೇಕ ಹೊರಬಿದ್ದಾಗಿದೆ. ಆಯ್ಕೆಯಾದವರು ಸಂಭ್ರಮಾಚರಣೆಯಲ್ಲಿ ಮುಳುಗಿ ಹೋಗಿದ್ದಾರೆ. ಆದರೆ ಈ ಸಂಭ್ರಮಾಚರಣೆ ತನ್ನ ಗೆಲುವಿಗೆ ಸೀಮಿತವಾಗಿರಬೇಕೇ ವಿನಃ ಮತ್ತೊಬ್ಬರ ಸೋಲನ್ನು ಅಣಕಿಸುವಂತಿರಬಾರದು. ಮುಖ್ಯವಾಗಿ ಅದು ಹಾನಿಕಾರಕವಾಗಿಯಂತೂ ಇರಲೇಬಾರದು. ಆದರೆ ಇಲ್ಲೊಂದು ಪ್ರಕರಣದಲ್ಲಿ, ಗೆದ್ದವರು ತನ್ನ ಸಂಭ್ರಮಾಚರಣೆಯ ಪ್ರಯುಕ್ತ ಸೋತವರ ಮನೆಗೆ ನುಗ್ಗಿ ದಾಂಧಲೆ ಮಾಡಿ ಅಲ್ಲಿರುವವರ ಮೇಲೆ ಹಲ್ಲೆ ಮಾಡಿರುವ ಘಟನೆ ಗುಂಡ್ಲುಪೇಟೆಯ ಗ್ರಾಮವೊಂದರಲ್ಲಿ ನಡೆದಿದೆ.

ಗುಂಡ್ಲುಪೇಟೆ ತಾಲೋಕಿನ ಹೊಂಗಳ್ಳಿ ಗ್ರಾಮದಲ್ಲಿ ವೀರಶೈವ ಸಮುದಾಯಕ್ಕೆ ಸೇರಿದ ಅಭ್ಯರ್ಥಿಯೊಬ್ಬರು ದಲಿತ ಅಭ್ಯರ್ಥಿಯ ಎದುರು ಸ್ಪರ್ಧಿಸಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಆದರೆ ಈ ಆಯ್ಕೆಯಾದ ಮೇಲ್ಜಾತಿಯವರ ಸಂಭ್ರಮಾಚರಣೆ ದಲಿತರ ಕೇರಿಗೆ ನುಗ್ಗಿ ಪಟಾಕಿ ಸಿಡಿಸಿ ಸಂಭ್ರಮಿಸುವ ಮಟ್ಟಕ್ಕೆ ತಲುಪಿತ್ತು. ಇದರಿಂದ ಗಲಭೆ ಆರಂಭವಾಗಿ, ಜಾತಿನಿಂದನೆ ಮಾಡಿ, ಅಂಬೇಡ್ಕರ್‌ ಭಾವಚಿತ್ರವಿರುವ ಬ್ಯಾನರ್‌ ಮೇಲೆ ಚಪ್ಪಲಿ ಎಸೆದು ನಿಂದಿಸಿ, ಮಕ್ಕಳು ಮಹಿಳೆಯರು ಎನ್ನದೇ ಅವರ ಮೇಲೂ ಹಲ್ಲೆ ನಡೆಸಲಾಗಿದೆ.

ಇಂತಹ ವಿಕೃತ ಘಟನೆಗಳು ನಮ್ಮ ಕಣ್ಣೆದುರಿಗೆ ಸಾಕಷ್ಟಿವೆ. ಇವುಗಳಿಗೆ ಕಾರಣ ಏನೆಂಬುದನ್ನು ಹೋರಾಟಗಾರರು ಮತ್ತು ಚಿಂತಕರಾದ ಕೃಷ್ಣಮೂರ್ತಿ ಚಮರಂ ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ಆಗ ’ತುಕುಡೆ ಗ್ಯಾಂಗ್’, ಈಗ ಕೃಷಿಕರು: ಸಂಸದೆ ಶೋಭಾ ಕರಂದ್ಲಾಜೆಯ ಇಬ್ಬಂದಿತನ

ನಾನುಗೌರಿ.ಕಾಂ ಜೊತೆ ಮಾತನಾಡಿದ ಕೃಷ್ಣಮೂರ್ತಿ, “ಚುನಾವಣೆಗಳು ಯಾವುದೇ ಇರಲಿ. ಅಲ್ಲಿ ಆಯ್ಕೆಯಾದವರು ಮತ್ತು ಆಯ್ಕೆಯಾಗದವರು ಎಂಬುದಷ್ಟೇ ಮಾನದಂಡ. ಅದು ಸೋಲು ಗೆಲುವು ಎಂಬುದಲ್ಲ. ನಮ್ಮ ಪರಿಭಾಷೆಯೇ ಸರಿಯಿಲ್ಲ. ಆಯ್ಕೆಯಾದವರು ಸಂಭ್ರಮಿಸಬೇಕು. ಆದರೆ ಆ ಸಂಭ್ರಮದಲ್ಲಿ ಆಯ್ಕೆಯಾಗದವರು, ಆಯ್ಕೆಯಾಗದವರ ಬೆಂಬಲಿಗರು ಎಲ್ಲರ ಮೇಲೂ ಸಂಭ್ರಮದ ನೆಪದಲ್ಲಿ ಸಮರ ಸಾರುವುದು ಈಗ ಎಲ್ಲೆಡೆ ವ್ಯಾಪಕವಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆಗಳು ನಿಜಕ್ಕೂ ರಣರಂಗವೇ ಆಗಿವೆ. ಚುನಾವಣಾ ವ್ಯವಸ್ಥೆ ಜನರನ್ನು ಛಿದ್ರಛಿದ್ರಗೊಳಿಸುತ್ತಿರುವುದು ಆತಂಕಕಾರಿ ಬೆಳವಣಿಗೆ” ಎಂದು ಆತಂಕ ವ್ಯಕ್ತಪಡಿಸಿದರು.

“ಇಂದಿನ ಈ ಪರಿಸ್ಥಿತಿಗೆ ನಮ್ಮ ನಡುವಿನ ಮಾಧ್ಯಮಗಳ ಅನೈತಿಕತೆಯೆ ಕಾರಣವಾಗಿದೆ. ಏಕೆಂದರೆ, ಚುನಾವಣೆ ಎನ್ನುವುದು ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿನ ಒಂದು ಪ್ರಕ್ರಿಯೆಯಷ್ಟೆ. ಆದರೆ ಈ ಮಾಧ್ಯಮಗಳು ಚುನಾವಣಾ ರಣರಂಗ ಎಂದು ಬಿಂಬಿಸುತ್ತವೆ. ಜೊತೆಗೆ ತಮ್ಮ ಟಿಆರ್‌ಪಿಗಾಗಿ, ಹೀನಾಯ ಸೋಲು, ಪ್ರಚಂಡ ಗೆಲುವು, ಗದ್ದುಗೆ, ಸಿಂಹಾಸನ, ಪಟ್ಟಾಭಿಷೇಕ, ದರ್ಬಾರ್, ರಣಾಂಗಣ, ಶಕ್ತಿ ಪ್ರದರ್ಶನ, ಯುದ್ಧಭೂಮಿ ಎಂದೆಲ್ಲಾ ಅಬ್ಬರಿಸುತ್ತವೆ. ಇದನ್ನು ನೋಡುತ್ತಿರುವ ಜನ ಇಂದು ಚುನಾವಣೆಯನ್ನು ಅದರ ವಾಸ್ತವದ ಹಿನ್ನೆಲೆಯಲ್ಲಿ ನೋಡುತ್ತಿಲ್ಲ. ಇವು ಸೋಲು-ಗೆಲುವು ಲೆಕ್ಕಾಚಾರದೊಟ್ಟಿಗೆ ಮಾನ-ಅವಮಾನದ ಪ್ರಶ್ನೆಯನ್ನು ಮುಂದಿಡುತ್ತವೆ. ಈ ಕಾರಣದಿಂದಲೇ ಗುಂಡ್ಲುಪೇಟೆಯಂತಹ ಘಟನೆಗಳು ನಡೆಯುತ್ತವೆ. ಇನ್ನೂ ಮುಂದುವರಿದು ಆತ್ಮಹತ್ಯೆ, ಕೊಲೆಯಂತಹ ಘಟನೆಗಳಲ್ಲೂ ಮುಕ್ತಾಯವಾಗುತ್ತದೆ” ಎಂದು ಎಚ್ಚರಿಸಿದರು.

ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

“ಈ ಗ್ರಾಮ ನನಗೆ ಬಹಳ ಹತ್ತಿರದ್ದು. ಇಲ್ಲಿ ವೀರಶೈವರು ಪ್ರಬಲವಾಗಿದ್ದು, ಅವರ ನಂತರ ಸ್ಥಾನದಲ್ಲಿ ದಲಿತರು, ಕುರುಬರು ಉಪ್ಪಾರರು ಬರುತ್ತಾರೆ. ಇಲ್ಲಿರುವ ಬಹುಸಂಖ್ಯಾತ ವೀರಶೈವರು ಬಿಜೆಪಿಯ ಪರ. ಈಗ ನಡೆದಿರುವ ವಿಕೃತ ಘಟನೆಗೂ ಇವರೇ ಕಾರಣ. ಆಯ್ಕೆಯಾದವರು ತಮ್ಮ ಸಂಭ್ರಮವನ್ನು ತಮ್ಮ ಬೆಂಬಲಿಗರೊಂದಿಗೆ ತಾವಿರುವ ಸ್ಥಳದಲ್ಲಿ ಮಾಡಿಕೊಳ್ಳಬೇಕು. ಅದುಬಿಟ್ಟು ಸೋತವನ ಮನೆಗೆ ನುಗ್ಗುವುದು ಎಷ್ಟು ಸರಿ?. ಅಷ್ಟೇ ಅಲ್ಲದೇ, ಈ ದಲಿತರೆಲ್ಲಾ ಇಂದು ಎದ್ದು ನಿಲ್ಲಲು ಈ ಅಂಬೇಡ್ಕರ್‌ ಕಾರಣ ಎಂದು ಅವರ ಬ್ಯಾನರ್‌ ಮೇಲೆ ಚಪ್ಪಲಿ ಎಸೆಯುವುದು ಎಷ್ಟು ಸರಿ. ಹಾಗಾಗಿಯೇ ಈ ಸೋಲು-ಗೆಲುವು ಎನ್ನುವುದು ಪ್ರಾಥಮಿಕವಾಗಿಯೇ ಸರಿಯಿಲ್ಲ” ಎಂದು ಹೇಳಿದರು.

“ಭಕ್ತರ ಅಟ್ಟಹಾಸ ಈಗ ಪ್ರತೀ ಗ್ರಾಮಕ್ಕೂ ಇಳಿದಿದೆ. ಇದು ಕೇಸರಿ ಪಡೆಯ ದಾಂಧಲೆ. ಇನ್ನಾದರೂ ಬಿಜೆಪಿ ಒಳಗಿರುವ ಘಟಾನುಘಟಿ ನಾಯಕರು(!) ತಮ್ಮ ಸಮುದಾಯದ ಪರ ಬಾಯಿ ಬಿಚ್ಚುವರೇ? ಅಥವಾ ಒದೆಸಿಕೊಂಡು ನಾಶವಾಗಿ, ನಾವು ಮಾತ್ರ ಬಿಜೆಪಿಯಲ್ಲಿ ಅಧಿಕಾರ ಅನುಭವಿಸಿಕೊಂಡು ಹಾಯಾಗಿರುತ್ತೇವೆ ಎಂದುಕೊಳ್ಳುವರೋ? ಈ ಕಾರಣಕ್ಕೆ ದಲಿತರು ಬಿಜೆಪಿ ಬೆಂಬಲಿಸಬೇಕಾ?? ಯೋಚನೆ ಮಾಡಿ” ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಇತಿಹಾಸ ಸೃಷ್ಟಿಸಿದ ಮಂಗಳಮುಖಿಯರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 4 ಜನ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...