Homeಕರ್ನಾಟಕಗುಂಡ್ಲುಪೇಟೆ: ಗ್ರಾ.ಪಂ ಚುನಾವಣೆ ವಿಜಯೋತ್ಸವ ನೆಪದಲ್ಲಿ ದಲಿತ ಕೇರಿಗೆ ನುಗ್ಗಿ ಹಲ್ಲೆ

ಗುಂಡ್ಲುಪೇಟೆ: ಗ್ರಾ.ಪಂ ಚುನಾವಣೆ ವಿಜಯೋತ್ಸವ ನೆಪದಲ್ಲಿ ದಲಿತ ಕೇರಿಗೆ ನುಗ್ಗಿ ಹಲ್ಲೆ

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸೋಲು ಗೆಲುವು ಅಲ್ಲ ಎನ್ನಬಾರದು. ಆಯ್ಕೆಯಾದವರು ಆಯ್ಕೆಯಾಗದವರು ಎನ್ನಬೇಕು ಎನ್ನುತ್ತಾರೆ ಕೃಷ್ಣಮೂರ್ತಿ ಚಮರಂ.

- Advertisement -
- Advertisement -

ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ಈಗ ಫಲಿತಾಂಶವೂ ಬಹತೇಕ ಹೊರಬಿದ್ದಾಗಿದೆ. ಆಯ್ಕೆಯಾದವರು ಸಂಭ್ರಮಾಚರಣೆಯಲ್ಲಿ ಮುಳುಗಿ ಹೋಗಿದ್ದಾರೆ. ಆದರೆ ಈ ಸಂಭ್ರಮಾಚರಣೆ ತನ್ನ ಗೆಲುವಿಗೆ ಸೀಮಿತವಾಗಿರಬೇಕೇ ವಿನಃ ಮತ್ತೊಬ್ಬರ ಸೋಲನ್ನು ಅಣಕಿಸುವಂತಿರಬಾರದು. ಮುಖ್ಯವಾಗಿ ಅದು ಹಾನಿಕಾರಕವಾಗಿಯಂತೂ ಇರಲೇಬಾರದು. ಆದರೆ ಇಲ್ಲೊಂದು ಪ್ರಕರಣದಲ್ಲಿ, ಗೆದ್ದವರು ತನ್ನ ಸಂಭ್ರಮಾಚರಣೆಯ ಪ್ರಯುಕ್ತ ಸೋತವರ ಮನೆಗೆ ನುಗ್ಗಿ ದಾಂಧಲೆ ಮಾಡಿ ಅಲ್ಲಿರುವವರ ಮೇಲೆ ಹಲ್ಲೆ ಮಾಡಿರುವ ಘಟನೆ ಗುಂಡ್ಲುಪೇಟೆಯ ಗ್ರಾಮವೊಂದರಲ್ಲಿ ನಡೆದಿದೆ.

ಗುಂಡ್ಲುಪೇಟೆ ತಾಲೋಕಿನ ಹೊಂಗಳ್ಳಿ ಗ್ರಾಮದಲ್ಲಿ ವೀರಶೈವ ಸಮುದಾಯಕ್ಕೆ ಸೇರಿದ ಅಭ್ಯರ್ಥಿಯೊಬ್ಬರು ದಲಿತ ಅಭ್ಯರ್ಥಿಯ ಎದುರು ಸ್ಪರ್ಧಿಸಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಆದರೆ ಈ ಆಯ್ಕೆಯಾದ ಮೇಲ್ಜಾತಿಯವರ ಸಂಭ್ರಮಾಚರಣೆ ದಲಿತರ ಕೇರಿಗೆ ನುಗ್ಗಿ ಪಟಾಕಿ ಸಿಡಿಸಿ ಸಂಭ್ರಮಿಸುವ ಮಟ್ಟಕ್ಕೆ ತಲುಪಿತ್ತು. ಇದರಿಂದ ಗಲಭೆ ಆರಂಭವಾಗಿ, ಜಾತಿನಿಂದನೆ ಮಾಡಿ, ಅಂಬೇಡ್ಕರ್‌ ಭಾವಚಿತ್ರವಿರುವ ಬ್ಯಾನರ್‌ ಮೇಲೆ ಚಪ್ಪಲಿ ಎಸೆದು ನಿಂದಿಸಿ, ಮಕ್ಕಳು ಮಹಿಳೆಯರು ಎನ್ನದೇ ಅವರ ಮೇಲೂ ಹಲ್ಲೆ ನಡೆಸಲಾಗಿದೆ.

ಇಂತಹ ವಿಕೃತ ಘಟನೆಗಳು ನಮ್ಮ ಕಣ್ಣೆದುರಿಗೆ ಸಾಕಷ್ಟಿವೆ. ಇವುಗಳಿಗೆ ಕಾರಣ ಏನೆಂಬುದನ್ನು ಹೋರಾಟಗಾರರು ಮತ್ತು ಚಿಂತಕರಾದ ಕೃಷ್ಣಮೂರ್ತಿ ಚಮರಂ ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ಆಗ ’ತುಕುಡೆ ಗ್ಯಾಂಗ್’, ಈಗ ಕೃಷಿಕರು: ಸಂಸದೆ ಶೋಭಾ ಕರಂದ್ಲಾಜೆಯ ಇಬ್ಬಂದಿತನ

ನಾನುಗೌರಿ.ಕಾಂ ಜೊತೆ ಮಾತನಾಡಿದ ಕೃಷ್ಣಮೂರ್ತಿ, “ಚುನಾವಣೆಗಳು ಯಾವುದೇ ಇರಲಿ. ಅಲ್ಲಿ ಆಯ್ಕೆಯಾದವರು ಮತ್ತು ಆಯ್ಕೆಯಾಗದವರು ಎಂಬುದಷ್ಟೇ ಮಾನದಂಡ. ಅದು ಸೋಲು ಗೆಲುವು ಎಂಬುದಲ್ಲ. ನಮ್ಮ ಪರಿಭಾಷೆಯೇ ಸರಿಯಿಲ್ಲ. ಆಯ್ಕೆಯಾದವರು ಸಂಭ್ರಮಿಸಬೇಕು. ಆದರೆ ಆ ಸಂಭ್ರಮದಲ್ಲಿ ಆಯ್ಕೆಯಾಗದವರು, ಆಯ್ಕೆಯಾಗದವರ ಬೆಂಬಲಿಗರು ಎಲ್ಲರ ಮೇಲೂ ಸಂಭ್ರಮದ ನೆಪದಲ್ಲಿ ಸಮರ ಸಾರುವುದು ಈಗ ಎಲ್ಲೆಡೆ ವ್ಯಾಪಕವಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆಗಳು ನಿಜಕ್ಕೂ ರಣರಂಗವೇ ಆಗಿವೆ. ಚುನಾವಣಾ ವ್ಯವಸ್ಥೆ ಜನರನ್ನು ಛಿದ್ರಛಿದ್ರಗೊಳಿಸುತ್ತಿರುವುದು ಆತಂಕಕಾರಿ ಬೆಳವಣಿಗೆ” ಎಂದು ಆತಂಕ ವ್ಯಕ್ತಪಡಿಸಿದರು.

“ಇಂದಿನ ಈ ಪರಿಸ್ಥಿತಿಗೆ ನಮ್ಮ ನಡುವಿನ ಮಾಧ್ಯಮಗಳ ಅನೈತಿಕತೆಯೆ ಕಾರಣವಾಗಿದೆ. ಏಕೆಂದರೆ, ಚುನಾವಣೆ ಎನ್ನುವುದು ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿನ ಒಂದು ಪ್ರಕ್ರಿಯೆಯಷ್ಟೆ. ಆದರೆ ಈ ಮಾಧ್ಯಮಗಳು ಚುನಾವಣಾ ರಣರಂಗ ಎಂದು ಬಿಂಬಿಸುತ್ತವೆ. ಜೊತೆಗೆ ತಮ್ಮ ಟಿಆರ್‌ಪಿಗಾಗಿ, ಹೀನಾಯ ಸೋಲು, ಪ್ರಚಂಡ ಗೆಲುವು, ಗದ್ದುಗೆ, ಸಿಂಹಾಸನ, ಪಟ್ಟಾಭಿಷೇಕ, ದರ್ಬಾರ್, ರಣಾಂಗಣ, ಶಕ್ತಿ ಪ್ರದರ್ಶನ, ಯುದ್ಧಭೂಮಿ ಎಂದೆಲ್ಲಾ ಅಬ್ಬರಿಸುತ್ತವೆ. ಇದನ್ನು ನೋಡುತ್ತಿರುವ ಜನ ಇಂದು ಚುನಾವಣೆಯನ್ನು ಅದರ ವಾಸ್ತವದ ಹಿನ್ನೆಲೆಯಲ್ಲಿ ನೋಡುತ್ತಿಲ್ಲ. ಇವು ಸೋಲು-ಗೆಲುವು ಲೆಕ್ಕಾಚಾರದೊಟ್ಟಿಗೆ ಮಾನ-ಅವಮಾನದ ಪ್ರಶ್ನೆಯನ್ನು ಮುಂದಿಡುತ್ತವೆ. ಈ ಕಾರಣದಿಂದಲೇ ಗುಂಡ್ಲುಪೇಟೆಯಂತಹ ಘಟನೆಗಳು ನಡೆಯುತ್ತವೆ. ಇನ್ನೂ ಮುಂದುವರಿದು ಆತ್ಮಹತ್ಯೆ, ಕೊಲೆಯಂತಹ ಘಟನೆಗಳಲ್ಲೂ ಮುಕ್ತಾಯವಾಗುತ್ತದೆ” ಎಂದು ಎಚ್ಚರಿಸಿದರು.

ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

“ಈ ಗ್ರಾಮ ನನಗೆ ಬಹಳ ಹತ್ತಿರದ್ದು. ಇಲ್ಲಿ ವೀರಶೈವರು ಪ್ರಬಲವಾಗಿದ್ದು, ಅವರ ನಂತರ ಸ್ಥಾನದಲ್ಲಿ ದಲಿತರು, ಕುರುಬರು ಉಪ್ಪಾರರು ಬರುತ್ತಾರೆ. ಇಲ್ಲಿರುವ ಬಹುಸಂಖ್ಯಾತ ವೀರಶೈವರು ಬಿಜೆಪಿಯ ಪರ. ಈಗ ನಡೆದಿರುವ ವಿಕೃತ ಘಟನೆಗೂ ಇವರೇ ಕಾರಣ. ಆಯ್ಕೆಯಾದವರು ತಮ್ಮ ಸಂಭ್ರಮವನ್ನು ತಮ್ಮ ಬೆಂಬಲಿಗರೊಂದಿಗೆ ತಾವಿರುವ ಸ್ಥಳದಲ್ಲಿ ಮಾಡಿಕೊಳ್ಳಬೇಕು. ಅದುಬಿಟ್ಟು ಸೋತವನ ಮನೆಗೆ ನುಗ್ಗುವುದು ಎಷ್ಟು ಸರಿ?. ಅಷ್ಟೇ ಅಲ್ಲದೇ, ಈ ದಲಿತರೆಲ್ಲಾ ಇಂದು ಎದ್ದು ನಿಲ್ಲಲು ಈ ಅಂಬೇಡ್ಕರ್‌ ಕಾರಣ ಎಂದು ಅವರ ಬ್ಯಾನರ್‌ ಮೇಲೆ ಚಪ್ಪಲಿ ಎಸೆಯುವುದು ಎಷ್ಟು ಸರಿ. ಹಾಗಾಗಿಯೇ ಈ ಸೋಲು-ಗೆಲುವು ಎನ್ನುವುದು ಪ್ರಾಥಮಿಕವಾಗಿಯೇ ಸರಿಯಿಲ್ಲ” ಎಂದು ಹೇಳಿದರು.

“ಭಕ್ತರ ಅಟ್ಟಹಾಸ ಈಗ ಪ್ರತೀ ಗ್ರಾಮಕ್ಕೂ ಇಳಿದಿದೆ. ಇದು ಕೇಸರಿ ಪಡೆಯ ದಾಂಧಲೆ. ಇನ್ನಾದರೂ ಬಿಜೆಪಿ ಒಳಗಿರುವ ಘಟಾನುಘಟಿ ನಾಯಕರು(!) ತಮ್ಮ ಸಮುದಾಯದ ಪರ ಬಾಯಿ ಬಿಚ್ಚುವರೇ? ಅಥವಾ ಒದೆಸಿಕೊಂಡು ನಾಶವಾಗಿ, ನಾವು ಮಾತ್ರ ಬಿಜೆಪಿಯಲ್ಲಿ ಅಧಿಕಾರ ಅನುಭವಿಸಿಕೊಂಡು ಹಾಯಾಗಿರುತ್ತೇವೆ ಎಂದುಕೊಳ್ಳುವರೋ? ಈ ಕಾರಣಕ್ಕೆ ದಲಿತರು ಬಿಜೆಪಿ ಬೆಂಬಲಿಸಬೇಕಾ?? ಯೋಚನೆ ಮಾಡಿ” ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಇತಿಹಾಸ ಸೃಷ್ಟಿಸಿದ ಮಂಗಳಮುಖಿಯರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 4 ಜನ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...