Homeಕರ್ನಾಟಕಗುಂಡ್ಲುಪೇಟೆ: ಗ್ರಾ.ಪಂ ಚುನಾವಣೆ ವಿಜಯೋತ್ಸವ ನೆಪದಲ್ಲಿ ದಲಿತ ಕೇರಿಗೆ ನುಗ್ಗಿ ಹಲ್ಲೆ

ಗುಂಡ್ಲುಪೇಟೆ: ಗ್ರಾ.ಪಂ ಚುನಾವಣೆ ವಿಜಯೋತ್ಸವ ನೆಪದಲ್ಲಿ ದಲಿತ ಕೇರಿಗೆ ನುಗ್ಗಿ ಹಲ್ಲೆ

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸೋಲು ಗೆಲುವು ಅಲ್ಲ ಎನ್ನಬಾರದು. ಆಯ್ಕೆಯಾದವರು ಆಯ್ಕೆಯಾಗದವರು ಎನ್ನಬೇಕು ಎನ್ನುತ್ತಾರೆ ಕೃಷ್ಣಮೂರ್ತಿ ಚಮರಂ.

- Advertisement -
- Advertisement -

ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ಈಗ ಫಲಿತಾಂಶವೂ ಬಹತೇಕ ಹೊರಬಿದ್ದಾಗಿದೆ. ಆಯ್ಕೆಯಾದವರು ಸಂಭ್ರಮಾಚರಣೆಯಲ್ಲಿ ಮುಳುಗಿ ಹೋಗಿದ್ದಾರೆ. ಆದರೆ ಈ ಸಂಭ್ರಮಾಚರಣೆ ತನ್ನ ಗೆಲುವಿಗೆ ಸೀಮಿತವಾಗಿರಬೇಕೇ ವಿನಃ ಮತ್ತೊಬ್ಬರ ಸೋಲನ್ನು ಅಣಕಿಸುವಂತಿರಬಾರದು. ಮುಖ್ಯವಾಗಿ ಅದು ಹಾನಿಕಾರಕವಾಗಿಯಂತೂ ಇರಲೇಬಾರದು. ಆದರೆ ಇಲ್ಲೊಂದು ಪ್ರಕರಣದಲ್ಲಿ, ಗೆದ್ದವರು ತನ್ನ ಸಂಭ್ರಮಾಚರಣೆಯ ಪ್ರಯುಕ್ತ ಸೋತವರ ಮನೆಗೆ ನುಗ್ಗಿ ದಾಂಧಲೆ ಮಾಡಿ ಅಲ್ಲಿರುವವರ ಮೇಲೆ ಹಲ್ಲೆ ಮಾಡಿರುವ ಘಟನೆ ಗುಂಡ್ಲುಪೇಟೆಯ ಗ್ರಾಮವೊಂದರಲ್ಲಿ ನಡೆದಿದೆ.

ಗುಂಡ್ಲುಪೇಟೆ ತಾಲೋಕಿನ ಹೊಂಗಳ್ಳಿ ಗ್ರಾಮದಲ್ಲಿ ವೀರಶೈವ ಸಮುದಾಯಕ್ಕೆ ಸೇರಿದ ಅಭ್ಯರ್ಥಿಯೊಬ್ಬರು ದಲಿತ ಅಭ್ಯರ್ಥಿಯ ಎದುರು ಸ್ಪರ್ಧಿಸಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಆದರೆ ಈ ಆಯ್ಕೆಯಾದ ಮೇಲ್ಜಾತಿಯವರ ಸಂಭ್ರಮಾಚರಣೆ ದಲಿತರ ಕೇರಿಗೆ ನುಗ್ಗಿ ಪಟಾಕಿ ಸಿಡಿಸಿ ಸಂಭ್ರಮಿಸುವ ಮಟ್ಟಕ್ಕೆ ತಲುಪಿತ್ತು. ಇದರಿಂದ ಗಲಭೆ ಆರಂಭವಾಗಿ, ಜಾತಿನಿಂದನೆ ಮಾಡಿ, ಅಂಬೇಡ್ಕರ್‌ ಭಾವಚಿತ್ರವಿರುವ ಬ್ಯಾನರ್‌ ಮೇಲೆ ಚಪ್ಪಲಿ ಎಸೆದು ನಿಂದಿಸಿ, ಮಕ್ಕಳು ಮಹಿಳೆಯರು ಎನ್ನದೇ ಅವರ ಮೇಲೂ ಹಲ್ಲೆ ನಡೆಸಲಾಗಿದೆ.

ಇಂತಹ ವಿಕೃತ ಘಟನೆಗಳು ನಮ್ಮ ಕಣ್ಣೆದುರಿಗೆ ಸಾಕಷ್ಟಿವೆ. ಇವುಗಳಿಗೆ ಕಾರಣ ಏನೆಂಬುದನ್ನು ಹೋರಾಟಗಾರರು ಮತ್ತು ಚಿಂತಕರಾದ ಕೃಷ್ಣಮೂರ್ತಿ ಚಮರಂ ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ಆಗ ’ತುಕುಡೆ ಗ್ಯಾಂಗ್’, ಈಗ ಕೃಷಿಕರು: ಸಂಸದೆ ಶೋಭಾ ಕರಂದ್ಲಾಜೆಯ ಇಬ್ಬಂದಿತನ

ನಾನುಗೌರಿ.ಕಾಂ ಜೊತೆ ಮಾತನಾಡಿದ ಕೃಷ್ಣಮೂರ್ತಿ, “ಚುನಾವಣೆಗಳು ಯಾವುದೇ ಇರಲಿ. ಅಲ್ಲಿ ಆಯ್ಕೆಯಾದವರು ಮತ್ತು ಆಯ್ಕೆಯಾಗದವರು ಎಂಬುದಷ್ಟೇ ಮಾನದಂಡ. ಅದು ಸೋಲು ಗೆಲುವು ಎಂಬುದಲ್ಲ. ನಮ್ಮ ಪರಿಭಾಷೆಯೇ ಸರಿಯಿಲ್ಲ. ಆಯ್ಕೆಯಾದವರು ಸಂಭ್ರಮಿಸಬೇಕು. ಆದರೆ ಆ ಸಂಭ್ರಮದಲ್ಲಿ ಆಯ್ಕೆಯಾಗದವರು, ಆಯ್ಕೆಯಾಗದವರ ಬೆಂಬಲಿಗರು ಎಲ್ಲರ ಮೇಲೂ ಸಂಭ್ರಮದ ನೆಪದಲ್ಲಿ ಸಮರ ಸಾರುವುದು ಈಗ ಎಲ್ಲೆಡೆ ವ್ಯಾಪಕವಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆಗಳು ನಿಜಕ್ಕೂ ರಣರಂಗವೇ ಆಗಿವೆ. ಚುನಾವಣಾ ವ್ಯವಸ್ಥೆ ಜನರನ್ನು ಛಿದ್ರಛಿದ್ರಗೊಳಿಸುತ್ತಿರುವುದು ಆತಂಕಕಾರಿ ಬೆಳವಣಿಗೆ” ಎಂದು ಆತಂಕ ವ್ಯಕ್ತಪಡಿಸಿದರು.

“ಇಂದಿನ ಈ ಪರಿಸ್ಥಿತಿಗೆ ನಮ್ಮ ನಡುವಿನ ಮಾಧ್ಯಮಗಳ ಅನೈತಿಕತೆಯೆ ಕಾರಣವಾಗಿದೆ. ಏಕೆಂದರೆ, ಚುನಾವಣೆ ಎನ್ನುವುದು ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿನ ಒಂದು ಪ್ರಕ್ರಿಯೆಯಷ್ಟೆ. ಆದರೆ ಈ ಮಾಧ್ಯಮಗಳು ಚುನಾವಣಾ ರಣರಂಗ ಎಂದು ಬಿಂಬಿಸುತ್ತವೆ. ಜೊತೆಗೆ ತಮ್ಮ ಟಿಆರ್‌ಪಿಗಾಗಿ, ಹೀನಾಯ ಸೋಲು, ಪ್ರಚಂಡ ಗೆಲುವು, ಗದ್ದುಗೆ, ಸಿಂಹಾಸನ, ಪಟ್ಟಾಭಿಷೇಕ, ದರ್ಬಾರ್, ರಣಾಂಗಣ, ಶಕ್ತಿ ಪ್ರದರ್ಶನ, ಯುದ್ಧಭೂಮಿ ಎಂದೆಲ್ಲಾ ಅಬ್ಬರಿಸುತ್ತವೆ. ಇದನ್ನು ನೋಡುತ್ತಿರುವ ಜನ ಇಂದು ಚುನಾವಣೆಯನ್ನು ಅದರ ವಾಸ್ತವದ ಹಿನ್ನೆಲೆಯಲ್ಲಿ ನೋಡುತ್ತಿಲ್ಲ. ಇವು ಸೋಲು-ಗೆಲುವು ಲೆಕ್ಕಾಚಾರದೊಟ್ಟಿಗೆ ಮಾನ-ಅವಮಾನದ ಪ್ರಶ್ನೆಯನ್ನು ಮುಂದಿಡುತ್ತವೆ. ಈ ಕಾರಣದಿಂದಲೇ ಗುಂಡ್ಲುಪೇಟೆಯಂತಹ ಘಟನೆಗಳು ನಡೆಯುತ್ತವೆ. ಇನ್ನೂ ಮುಂದುವರಿದು ಆತ್ಮಹತ್ಯೆ, ಕೊಲೆಯಂತಹ ಘಟನೆಗಳಲ್ಲೂ ಮುಕ್ತಾಯವಾಗುತ್ತದೆ” ಎಂದು ಎಚ್ಚರಿಸಿದರು.

ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

“ಈ ಗ್ರಾಮ ನನಗೆ ಬಹಳ ಹತ್ತಿರದ್ದು. ಇಲ್ಲಿ ವೀರಶೈವರು ಪ್ರಬಲವಾಗಿದ್ದು, ಅವರ ನಂತರ ಸ್ಥಾನದಲ್ಲಿ ದಲಿತರು, ಕುರುಬರು ಉಪ್ಪಾರರು ಬರುತ್ತಾರೆ. ಇಲ್ಲಿರುವ ಬಹುಸಂಖ್ಯಾತ ವೀರಶೈವರು ಬಿಜೆಪಿಯ ಪರ. ಈಗ ನಡೆದಿರುವ ವಿಕೃತ ಘಟನೆಗೂ ಇವರೇ ಕಾರಣ. ಆಯ್ಕೆಯಾದವರು ತಮ್ಮ ಸಂಭ್ರಮವನ್ನು ತಮ್ಮ ಬೆಂಬಲಿಗರೊಂದಿಗೆ ತಾವಿರುವ ಸ್ಥಳದಲ್ಲಿ ಮಾಡಿಕೊಳ್ಳಬೇಕು. ಅದುಬಿಟ್ಟು ಸೋತವನ ಮನೆಗೆ ನುಗ್ಗುವುದು ಎಷ್ಟು ಸರಿ?. ಅಷ್ಟೇ ಅಲ್ಲದೇ, ಈ ದಲಿತರೆಲ್ಲಾ ಇಂದು ಎದ್ದು ನಿಲ್ಲಲು ಈ ಅಂಬೇಡ್ಕರ್‌ ಕಾರಣ ಎಂದು ಅವರ ಬ್ಯಾನರ್‌ ಮೇಲೆ ಚಪ್ಪಲಿ ಎಸೆಯುವುದು ಎಷ್ಟು ಸರಿ. ಹಾಗಾಗಿಯೇ ಈ ಸೋಲು-ಗೆಲುವು ಎನ್ನುವುದು ಪ್ರಾಥಮಿಕವಾಗಿಯೇ ಸರಿಯಿಲ್ಲ” ಎಂದು ಹೇಳಿದರು.

“ಭಕ್ತರ ಅಟ್ಟಹಾಸ ಈಗ ಪ್ರತೀ ಗ್ರಾಮಕ್ಕೂ ಇಳಿದಿದೆ. ಇದು ಕೇಸರಿ ಪಡೆಯ ದಾಂಧಲೆ. ಇನ್ನಾದರೂ ಬಿಜೆಪಿ ಒಳಗಿರುವ ಘಟಾನುಘಟಿ ನಾಯಕರು(!) ತಮ್ಮ ಸಮುದಾಯದ ಪರ ಬಾಯಿ ಬಿಚ್ಚುವರೇ? ಅಥವಾ ಒದೆಸಿಕೊಂಡು ನಾಶವಾಗಿ, ನಾವು ಮಾತ್ರ ಬಿಜೆಪಿಯಲ್ಲಿ ಅಧಿಕಾರ ಅನುಭವಿಸಿಕೊಂಡು ಹಾಯಾಗಿರುತ್ತೇವೆ ಎಂದುಕೊಳ್ಳುವರೋ? ಈ ಕಾರಣಕ್ಕೆ ದಲಿತರು ಬಿಜೆಪಿ ಬೆಂಬಲಿಸಬೇಕಾ?? ಯೋಚನೆ ಮಾಡಿ” ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಇತಿಹಾಸ ಸೃಷ್ಟಿಸಿದ ಮಂಗಳಮುಖಿಯರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 4 ಜನ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...