Homeಕರ್ನಾಟಕನಾಳೆಯೇ ಚುನಾವಣೆ ನಡೆದರೂ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ: ಸಿದ್ದರಾಮಯ್ಯ

ನಾಳೆಯೇ ಚುನಾವಣೆ ನಡೆದರೂ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ: ಸಿದ್ದರಾಮಯ್ಯ

ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಯಡಿಯೂರಪ್ಪನವರು ಬಿಜೆಪಿ 60% ಪಂಚಾಯತಿಗಳಲ್ಲಿ ಗೆದ್ದಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ಗೆದ್ದ ಹೆಚ್ಚಿನ ಸಂಖ್ಯೆಯ ಪಂಚಾಯತಿ ಸದಸ್ಯರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದಾರೆ...

- Advertisement -
- Advertisement -

“ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನೆಗಳು. ನಮ್ಮ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳೆನ್ನದೆ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ಮತ ನೀಡಿ, ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ – ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌…

“ಗ್ರಾಮಗಳ ಪ್ರಗತಿಯಲ್ಲಿ ದೇಶದ ಉನ್ನತಿ ಅಡಗಿದೆ. ಈ ಕಾರಣಕ್ಕಾಗಿ ಈ ಬಾರಿಯ ಚುನಾವಣೆಯಲ್ಲಿ ಜಯಗಳಿಸಿದ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ಗ್ರಾಮವನ್ನು ಸದೃಢಗೊಳಿಸುವ ಕಾರ್ಯದಲ್ಲಿ ಪಕ್ಷಾತೀತವಾಗಿ ಕೆಲಸ ಮಾಡಬೇಕೆಂಬುದು ನನ್ನ ಸಲಹೆ”

ಇದನ್ನೂ ಓದಿ: ಗ್ರಾಮ ಪಂಚಾಯತ್‌‌‌‌ ಚುನಾವಣೆ: ಮತ ಎಣಿಕೆಯಲ್ಲಿ ಲೋಪ ಅಭ್ಯರ್ಥಿ ರಾಜಣ್ಣ ಅವರಿಂದ ಜಿಲ್ಲಾಧಿಕಾರಿಗೆ ದೂರು

“ಇನ್ನೂ ಹಲವು ಜಿಲ್ಲೆಗಳಲ್ಲಿ ಮತ ಎಣಿಕೆ ಕಾರ್ಯ ಪೂರ್ಣಗೊಂಡು ಫಲಿತಾಂಶ ಹೊರಬಂದಿಲ್ಲ, ಮೀಸಲಾತಿ ಅಡಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಹಂಚಿಕೆಯಾಗಿಲ್ಲ, ಆಗಲೇ ಯಡಿಯೂರಪ್ಪ ಅವರು ನಮ್ಮ ಪಕ್ಷ 3800ಕ್ಕೂ ಅಧಿಕ ಪಂಚಾಯತಿಗಳಲ್ಲಿ ಗೆದ್ದಿದೆ ಎಂದು ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ”

ಇದನ್ನೂ ಓದಿ: ಗುಂಡ್ಲುಪೇಟೆ: ಗ್ರಾ.ಪಂ ಚುನಾವಣೆ ವಿಜಯೋತ್ಸವ ನೆಪದಲ್ಲಿ ದಲಿತ ಕೇರಿಗೆ ನುಗ್ಗಿ ಹಲ್ಲೆ

“ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಯಡಿಯೂರಪ್ಪನವರು ಬಿಜೆಪಿ 60% ಪಂಚಾಯತಿಗಳಲ್ಲಿ ಗೆದ್ದಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ಗೆದ್ದ ಹೆಚ್ಚಿನ ಸಂಖ್ಯೆಯ ಪಂಚಾಯತಿ ಸದಸ್ಯರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದಾರೆ”

ಇದನ್ನೂ ಓದಿ: ಆಗ ’ತುಕುಡೆ ಗ್ಯಾಂಗ್’, ಈಗ ಕೃಷಿಕರು: ಸಂಸದೆ ಶೋಭಾ ಕರಂದ್ಲಾಜೆಯ ಇಬ್ಬಂದಿತನ

“ಯಡಿಯೂರಪ್ಪನವರ ಮುಖ್ಯಮಂತ್ರಿ ಕುರ್ಚಿಯೇ ಅಲ್ಲಾಡ್ತಿದೆ, ಅದರ ನಡುವೆಯೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ಹಗಲುಗನಸು ಕಾಣ್ತಿದ್ದಾರೆ. ಒಂದು ವೇಳೆ ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ಇದು ನೂರಕ್ಕೆ ನೂರು ಸತ್ಯ”

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧದ ನಿರ್ಣಯ ಬೆಂಬಲಿಸಿದ ಕೇರಳದ ಬಿಜೆಪಿ ಶಾಸಕ!

“ಬ್ರಿಟನ್ ನಿಂದ ರಾಜ್ಯಕ್ಕೆ ಬಂದವರನ್ನು ವಿಮಾನ ನಿಲ್ದಾಣದಲ್ಲಿ ಸೂಕ್ತ ಪರೀಕ್ಷೆಗೆ ಒಳಪಡಿಸದಿರುವುದು ದೊಡ್ಡ ತಪ್ಪು. ಈಗ ಬ್ರಿಟನ್ ನಿಂದ ಬಂದವರು ತಲೆಮರೆಸಿಕೊಂಡಿದ್ದಾರೆ, ಪ್ರಯಾಣಿಕರ ವಿಳಾಸ ಸಿಗ್ತಿಲ್ಲ ಅಂದರೆ ಅದು ಸರ್ಕಾರದ ಬೇಜವಾಬ್ದಾರಿಯನ್ನು ತೋರಿಸುತ್ತೆ. ಸರ್ಕಾರ ಕಳೆದ ಬಾರಿ ಮಾಡಿದ್ದ ತಪ್ಪನ್ನೆ ಮತ್ತೆ ಮಾಡುತ್ತಿದೆ”


ಇದನ್ನೂ ಓದಿ: ಮೆಹಮೂದ್ ಪ್ರಾಚಾ ಪರ ನಿಲ್ಲಲು ವಕೀಲ ಸಂಘಕ್ಕೆ ಪತ್ರ ಬರೆದ ವಕೀಲ ಅನೀಸ್ ಪಾಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...