Homeಮುಖಪುಟಹೊಸ ವರ್ಷ: ಪ್ರಧಾನಿ ಮೋದಿ ಸರ್ಕಾರ ಅದಾನಿ‌ ಗ್ರೂಪ್ಸ್‌ಗೆ ನೀಡಿದ ಗಿಫ್ಟ್‌ ಏನು ಗೊತ್ತಾ?

ಹೊಸ ವರ್ಷ: ಪ್ರಧಾನಿ ಮೋದಿ ಸರ್ಕಾರ ಅದಾನಿ‌ ಗ್ರೂಪ್ಸ್‌ಗೆ ನೀಡಿದ ಗಿಫ್ಟ್‌ ಏನು ಗೊತ್ತಾ?

ಆರು ವಿಮಾನ ನಿಲ್ದಾಣಗಳನ್ನು 50 ವರ್ಷಗಳ ಕಾಲ Purchasing Power Parity (PPP) ಆಧಾರದ ಮೇಲೆ ಮುನ್ನಡೆಸಲು ಅದಾನಿ ಗ್ರೂಪ್ಸ್‌ ಬಿಡ್ ಪಡೆದುಕೊಂಡಿದೆ

- Advertisement -
- Advertisement -

ಹೊಸ ವರ್ಷದ ಪ್ರಯುಕ್ತ ಅದಾನಿ ಗ್ರೂಪ್ಸ್‌ಗೆ ಭಾರತದ ಪ್ರಧಾನಿ ಮೋದಿ ಸರ್ಕಾರ ಭರ್ಜರಿ ಗಿಫ್ಟ್‌ ನೀಡಿದ್ದು, ಒಪ್ಪಂದದಂತೆ ಭಾರತದ ವಿಮಾನ ನಿಲ್ದಾಣಗಳನ್ನು ಐವತ್ತು ವರ್ಷಗಳ ಕಾಲ ಅದಾನಿ ಗ್ರೂಪ್ಸ್‌ಗೆ ವಹಿಸಲಾಗುತ್ತಿದೆ. ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗಳನ್ನು ಮುಂದಿನ ತಿಂಗಳು ಅದಾನಿ ಗ್ರೂಪ್‌ಗೆ ಹಸ್ತಾಂತರಿಸುವ ಒಪ್ಪಂದಕ್ಕೆ ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಸಹಿ ಹಾಕಲಿದೆ. ಈ ಹಿಂದೆ ಮಂಗಳೂರು, ಲಕ್ನೋ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳನ್ನು ಅದಾನಿಗೆ ಹಸ್ತಾಂತರಿಸಲಾಗಿತ್ತು.

ಆರು ವಿಮಾನ ನಿಲ್ದಾಣಗಳನ್ನು 50 ವರ್ಷಗಳ ಕಾಲ Purchasing Power Parity (PPP) ಆಧಾರದ ಮೇಲೆ ಮುನ್ನಡೆಸಲು ಅದಾನಿ ಗ್ರೂಪ್ಸ್‌ ಬಿಡ್ ಪಡೆದುಕೊಂಡಿದೆ.

2021 ಜನವರಿ 25 ರೊಳಗೆ ಈ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಉಳಿದ ಮೂರೂ ವಿಮಾನ ನಿಲ್ದಾಣಗಳನ್ನೂ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಿದೆ ಎಂದು AAI ಅಧ್ಯಕ್ಷ ಅರವಿಂದ್ ಸಿಂಗ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ರೈಲ್ವೇ ಖಾಸಗೀಕರಣಕ್ಕೆ ಚಾಲನೆ: ಮುಂದಿನ ಕರಾಳ ದಿನಗಳಿಗೆ ಹಸಿರು ನಿಶಾನೆ

ಈ ಆರು ವಿಮಾನ ನಿಲ್ದಾಣಗಳನ್ನು ಹೊರತುಪಡಿಸಿ, ವಾರಣಾಸಿ, ಅಮೃತಸರ, ಭುವನೇಶ್ವರ, ರಾಯ್‌ಪುರ, ಇಂದೋರ್ ಮತ್ತು ತಿರುಚ್ಚಿ ಸೇರಿದಂತೆ ಇನ್ನೂ ವಿಮಾನ ನಿಲ್ದಾಣಗಳನ್ನು PPP ಅಡಿಯಲ್ಲಿ ಲೀಸ್‌ಗೆ ಕೊಡಲು ಸರ್ಕಾರ ನಿರ್ಧರಿಸಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

“ತಿರುವನಂತಪುರಂ ವಿಮಾನ ನಿಲ್ದಾಣವನ್ನು ಪಿಪಿಪಿ ಆಧಾರದ ಮೇಲೆ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕೇರಳ ಸರ್ಕಾರ ಕಾನೂನುಬದ್ಧವಾಗಿ ಪ್ರಶ್ನಿಸಿತ್ತು. ಈ ಪ್ರಕ್ರಿಯೆಯನ್ನು ಅತ್ಯಂತ ಮುಕ್ತ ಮತ್ತು ಪಾರದರ್ಶಕ ರೀತಿಯಲ್ಲಿ ನಡೆಸಲಾಗಿದ್ದರಿಂದ ಆ ನ್ಯಾಯಾಲಯದ ತೀರ್ಪು ನಮ್ಮ ಪರವಾಗಿದೆ. ಉಳಿದ ಮೂರು ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್‌ಗೆ ಹಸ್ತಾಂತರಿಸುವುದು” ಎಂದು ವಿಮಾನಯಾನ ಕಾರ್ಯದರ್ಶಿ ಪಿ ಎಸ್ ಖರೋಲಾ ತಿಳಿಸಿದ್ದಾರೆ.

ಇದನ್ನೂ ಓದಿ: ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ಲಕ್ನೋ, ಅಹಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರ ಮತ್ತು ಗುವಾಹಟಿ ವಿಮಾನ ನಿಲ್ದಾಣಗಳನ್ನು ಲೀಸ್ ಮೇಲೆ ನಿರ್ವಹಿಸುವ ಹಕ್ಕನ್ನು ಅದಾನಿ ಎಂಟರ್ ಪ್ರೈಸಸ್ ಪಡೆದುಕೊಂಡಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ ಜಾವಾಡೇಕರ್ ಈ ಹಿಂದೆ ದೆಹಲಿಯ ಸುದ್ಧಿಗೋಷ್ಠಿಯಲ್ಲಿ ಘೋಷಿಸಿದ್ದರು.

ಕೇಂದ್ರ ಸರ್ಕಾರ ಈ ಹಿಂದೆ 12 ವಿಮಾನ ನಿಲ್ದಾಣಗಳನ್ನು ಖಾಸಗಿಯವರಿಗೆ ವಹಿಸಿಕೊಡಲು ನಿರ್ಧರಿಸಿತ್ತು. ಇದರ ಬಗ್ಗೆ ಅದಾನಿ ಸಂಸ್ಥೆಯೊಂದಿಗೆ 2020 ರ ಫೆಬ್ರವರಿಯಲ್ಲಿ ಒಪ್ಪಂದ ನಡೆದಿತ್ತು. ಈ ಪ್ರಕಾರ ಮೊದಲ ಹಂತದಲ್ಲಿ 6 ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ನಡೆದ ಟೆಂಡರ್ ಪ್ರಕ್ರಿಯೆಯಲ್ಲಿ ಅದಾನಿ ಸಮೂಹ ಸಂಸ್ಥೆ ಅತ್ಯಧಿಕ ಮೊತ್ತ ನಮೂದಿಸುವ ಮೂಲಕ ಗೆದ್ದುಕೊಂಡಿದೆ ಎಂದು ಸರ್ಕಾರ ಹೇಳಿತ್ತು.

ಇದನ್ನೂ ಓದಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಖಾಸಗಿ ವಲಯಕ್ಕೆ ಮುಕ್ತ ಅವಕಾಶ: ಪ್ರಧಾನಿ ಮೋದಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಂಬಾನಿ-ಅದಾನಿಗಳಿಗಾಗಿ ಕೆಲಸ ಮಾಡುತ್ತಿದೆ ಎಂದು ಹಲವರು ಆರೋಪಿಸಿದ್ದರು. ಇದಕ್ಕೆ ಒಂದೊಂದೇ ಸಾಕ್ಷಿಗಳು ಸಿಗುತ್ತಲೇ ಇದೆ. “ಸರ್ಕಾರದ ಒಡೆತನದಲ್ಲಿರುವ ಪ್ರತಿಯೊಂದು ಸಂಸ್ಥೆಗಳನ್ನೂ ಖಾಸಗಿಯವರಿಗೆ ಮಾರುವ ಮೂಲಕ ಇಡೀ ದೇಶವನ್ನೇ ಮಾರಲು ಹೊರಟಿದ್ದಾರೆ ನಮ್ಮ ಪ್ರಧಾನಿ” ಎಂದು ಹಲವರು ಟೀಕಿಸುತ್ತಿದ್ದಾರೆ.

ಆದರೆ ಇದಾವುದಕ್ಕೂ ತಲೆಕೆಡಿಸಿಕೊಳ್ಳದ ಪ್ರಧಾನಿ ಮೋದಿ, ಈ ಹಿಂದೆ ರೈಲು ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ಅನುಮೋದನೆ ನೀಡಿದ್ದರು


ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಯಮಾಡಿ ಜಾಹೀರಾತುಗಳನ್ನು ಕಡಿಮೆ ಮಾಡಿ.ತುಂಬಾ ತೊಂದರೆಯಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...