Homeಮುಖಪುಟಹೊಸ ವರ್ಷ: ಪ್ರಧಾನಿ ಮೋದಿ ಸರ್ಕಾರ ಅದಾನಿ‌ ಗ್ರೂಪ್ಸ್‌ಗೆ ನೀಡಿದ ಗಿಫ್ಟ್‌ ಏನು ಗೊತ್ತಾ?

ಹೊಸ ವರ್ಷ: ಪ್ರಧಾನಿ ಮೋದಿ ಸರ್ಕಾರ ಅದಾನಿ‌ ಗ್ರೂಪ್ಸ್‌ಗೆ ನೀಡಿದ ಗಿಫ್ಟ್‌ ಏನು ಗೊತ್ತಾ?

ಆರು ವಿಮಾನ ನಿಲ್ದಾಣಗಳನ್ನು 50 ವರ್ಷಗಳ ಕಾಲ Purchasing Power Parity (PPP) ಆಧಾರದ ಮೇಲೆ ಮುನ್ನಡೆಸಲು ಅದಾನಿ ಗ್ರೂಪ್ಸ್‌ ಬಿಡ್ ಪಡೆದುಕೊಂಡಿದೆ

- Advertisement -
- Advertisement -

ಹೊಸ ವರ್ಷದ ಪ್ರಯುಕ್ತ ಅದಾನಿ ಗ್ರೂಪ್ಸ್‌ಗೆ ಭಾರತದ ಪ್ರಧಾನಿ ಮೋದಿ ಸರ್ಕಾರ ಭರ್ಜರಿ ಗಿಫ್ಟ್‌ ನೀಡಿದ್ದು, ಒಪ್ಪಂದದಂತೆ ಭಾರತದ ವಿಮಾನ ನಿಲ್ದಾಣಗಳನ್ನು ಐವತ್ತು ವರ್ಷಗಳ ಕಾಲ ಅದಾನಿ ಗ್ರೂಪ್ಸ್‌ಗೆ ವಹಿಸಲಾಗುತ್ತಿದೆ. ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗಳನ್ನು ಮುಂದಿನ ತಿಂಗಳು ಅದಾನಿ ಗ್ರೂಪ್‌ಗೆ ಹಸ್ತಾಂತರಿಸುವ ಒಪ್ಪಂದಕ್ಕೆ ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಸಹಿ ಹಾಕಲಿದೆ. ಈ ಹಿಂದೆ ಮಂಗಳೂರು, ಲಕ್ನೋ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳನ್ನು ಅದಾನಿಗೆ ಹಸ್ತಾಂತರಿಸಲಾಗಿತ್ತು.

ಆರು ವಿಮಾನ ನಿಲ್ದಾಣಗಳನ್ನು 50 ವರ್ಷಗಳ ಕಾಲ Purchasing Power Parity (PPP) ಆಧಾರದ ಮೇಲೆ ಮುನ್ನಡೆಸಲು ಅದಾನಿ ಗ್ರೂಪ್ಸ್‌ ಬಿಡ್ ಪಡೆದುಕೊಂಡಿದೆ.

2021 ಜನವರಿ 25 ರೊಳಗೆ ಈ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಉಳಿದ ಮೂರೂ ವಿಮಾನ ನಿಲ್ದಾಣಗಳನ್ನೂ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಿದೆ ಎಂದು AAI ಅಧ್ಯಕ್ಷ ಅರವಿಂದ್ ಸಿಂಗ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ರೈಲ್ವೇ ಖಾಸಗೀಕರಣಕ್ಕೆ ಚಾಲನೆ: ಮುಂದಿನ ಕರಾಳ ದಿನಗಳಿಗೆ ಹಸಿರು ನಿಶಾನೆ

ಈ ಆರು ವಿಮಾನ ನಿಲ್ದಾಣಗಳನ್ನು ಹೊರತುಪಡಿಸಿ, ವಾರಣಾಸಿ, ಅಮೃತಸರ, ಭುವನೇಶ್ವರ, ರಾಯ್‌ಪುರ, ಇಂದೋರ್ ಮತ್ತು ತಿರುಚ್ಚಿ ಸೇರಿದಂತೆ ಇನ್ನೂ ವಿಮಾನ ನಿಲ್ದಾಣಗಳನ್ನು PPP ಅಡಿಯಲ್ಲಿ ಲೀಸ್‌ಗೆ ಕೊಡಲು ಸರ್ಕಾರ ನಿರ್ಧರಿಸಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

“ತಿರುವನಂತಪುರಂ ವಿಮಾನ ನಿಲ್ದಾಣವನ್ನು ಪಿಪಿಪಿ ಆಧಾರದ ಮೇಲೆ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕೇರಳ ಸರ್ಕಾರ ಕಾನೂನುಬದ್ಧವಾಗಿ ಪ್ರಶ್ನಿಸಿತ್ತು. ಈ ಪ್ರಕ್ರಿಯೆಯನ್ನು ಅತ್ಯಂತ ಮುಕ್ತ ಮತ್ತು ಪಾರದರ್ಶಕ ರೀತಿಯಲ್ಲಿ ನಡೆಸಲಾಗಿದ್ದರಿಂದ ಆ ನ್ಯಾಯಾಲಯದ ತೀರ್ಪು ನಮ್ಮ ಪರವಾಗಿದೆ. ಉಳಿದ ಮೂರು ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್‌ಗೆ ಹಸ್ತಾಂತರಿಸುವುದು” ಎಂದು ವಿಮಾನಯಾನ ಕಾರ್ಯದರ್ಶಿ ಪಿ ಎಸ್ ಖರೋಲಾ ತಿಳಿಸಿದ್ದಾರೆ.

ಇದನ್ನೂ ಓದಿ: ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ಲಕ್ನೋ, ಅಹಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರ ಮತ್ತು ಗುವಾಹಟಿ ವಿಮಾನ ನಿಲ್ದಾಣಗಳನ್ನು ಲೀಸ್ ಮೇಲೆ ನಿರ್ವಹಿಸುವ ಹಕ್ಕನ್ನು ಅದಾನಿ ಎಂಟರ್ ಪ್ರೈಸಸ್ ಪಡೆದುಕೊಂಡಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ ಜಾವಾಡೇಕರ್ ಈ ಹಿಂದೆ ದೆಹಲಿಯ ಸುದ್ಧಿಗೋಷ್ಠಿಯಲ್ಲಿ ಘೋಷಿಸಿದ್ದರು.

ಕೇಂದ್ರ ಸರ್ಕಾರ ಈ ಹಿಂದೆ 12 ವಿಮಾನ ನಿಲ್ದಾಣಗಳನ್ನು ಖಾಸಗಿಯವರಿಗೆ ವಹಿಸಿಕೊಡಲು ನಿರ್ಧರಿಸಿತ್ತು. ಇದರ ಬಗ್ಗೆ ಅದಾನಿ ಸಂಸ್ಥೆಯೊಂದಿಗೆ 2020 ರ ಫೆಬ್ರವರಿಯಲ್ಲಿ ಒಪ್ಪಂದ ನಡೆದಿತ್ತು. ಈ ಪ್ರಕಾರ ಮೊದಲ ಹಂತದಲ್ಲಿ 6 ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ನಡೆದ ಟೆಂಡರ್ ಪ್ರಕ್ರಿಯೆಯಲ್ಲಿ ಅದಾನಿ ಸಮೂಹ ಸಂಸ್ಥೆ ಅತ್ಯಧಿಕ ಮೊತ್ತ ನಮೂದಿಸುವ ಮೂಲಕ ಗೆದ್ದುಕೊಂಡಿದೆ ಎಂದು ಸರ್ಕಾರ ಹೇಳಿತ್ತು.

ಇದನ್ನೂ ಓದಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಖಾಸಗಿ ವಲಯಕ್ಕೆ ಮುಕ್ತ ಅವಕಾಶ: ಪ್ರಧಾನಿ ಮೋದಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಂಬಾನಿ-ಅದಾನಿಗಳಿಗಾಗಿ ಕೆಲಸ ಮಾಡುತ್ತಿದೆ ಎಂದು ಹಲವರು ಆರೋಪಿಸಿದ್ದರು. ಇದಕ್ಕೆ ಒಂದೊಂದೇ ಸಾಕ್ಷಿಗಳು ಸಿಗುತ್ತಲೇ ಇದೆ. “ಸರ್ಕಾರದ ಒಡೆತನದಲ್ಲಿರುವ ಪ್ರತಿಯೊಂದು ಸಂಸ್ಥೆಗಳನ್ನೂ ಖಾಸಗಿಯವರಿಗೆ ಮಾರುವ ಮೂಲಕ ಇಡೀ ದೇಶವನ್ನೇ ಮಾರಲು ಹೊರಟಿದ್ದಾರೆ ನಮ್ಮ ಪ್ರಧಾನಿ” ಎಂದು ಹಲವರು ಟೀಕಿಸುತ್ತಿದ್ದಾರೆ.

ಆದರೆ ಇದಾವುದಕ್ಕೂ ತಲೆಕೆಡಿಸಿಕೊಳ್ಳದ ಪ್ರಧಾನಿ ಮೋದಿ, ಈ ಹಿಂದೆ ರೈಲು ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ಅನುಮೋದನೆ ನೀಡಿದ್ದರು


ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಯಮಾಡಿ ಜಾಹೀರಾತುಗಳನ್ನು ಕಡಿಮೆ ಮಾಡಿ.ತುಂಬಾ ತೊಂದರೆಯಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...