Homeಮುಖಪುಟಹೊಸ ವರ್ಷ: ಪ್ರಧಾನಿ ಮೋದಿ ಸರ್ಕಾರ ಅದಾನಿ‌ ಗ್ರೂಪ್ಸ್‌ಗೆ ನೀಡಿದ ಗಿಫ್ಟ್‌ ಏನು ಗೊತ್ತಾ?

ಹೊಸ ವರ್ಷ: ಪ್ರಧಾನಿ ಮೋದಿ ಸರ್ಕಾರ ಅದಾನಿ‌ ಗ್ರೂಪ್ಸ್‌ಗೆ ನೀಡಿದ ಗಿಫ್ಟ್‌ ಏನು ಗೊತ್ತಾ?

ಆರು ವಿಮಾನ ನಿಲ್ದಾಣಗಳನ್ನು 50 ವರ್ಷಗಳ ಕಾಲ Purchasing Power Parity (PPP) ಆಧಾರದ ಮೇಲೆ ಮುನ್ನಡೆಸಲು ಅದಾನಿ ಗ್ರೂಪ್ಸ್‌ ಬಿಡ್ ಪಡೆದುಕೊಂಡಿದೆ

- Advertisement -
- Advertisement -

ಹೊಸ ವರ್ಷದ ಪ್ರಯುಕ್ತ ಅದಾನಿ ಗ್ರೂಪ್ಸ್‌ಗೆ ಭಾರತದ ಪ್ರಧಾನಿ ಮೋದಿ ಸರ್ಕಾರ ಭರ್ಜರಿ ಗಿಫ್ಟ್‌ ನೀಡಿದ್ದು, ಒಪ್ಪಂದದಂತೆ ಭಾರತದ ವಿಮಾನ ನಿಲ್ದಾಣಗಳನ್ನು ಐವತ್ತು ವರ್ಷಗಳ ಕಾಲ ಅದಾನಿ ಗ್ರೂಪ್ಸ್‌ಗೆ ವಹಿಸಲಾಗುತ್ತಿದೆ. ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗಳನ್ನು ಮುಂದಿನ ತಿಂಗಳು ಅದಾನಿ ಗ್ರೂಪ್‌ಗೆ ಹಸ್ತಾಂತರಿಸುವ ಒಪ್ಪಂದಕ್ಕೆ ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಸಹಿ ಹಾಕಲಿದೆ. ಈ ಹಿಂದೆ ಮಂಗಳೂರು, ಲಕ್ನೋ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳನ್ನು ಅದಾನಿಗೆ ಹಸ್ತಾಂತರಿಸಲಾಗಿತ್ತು.

ಆರು ವಿಮಾನ ನಿಲ್ದಾಣಗಳನ್ನು 50 ವರ್ಷಗಳ ಕಾಲ Purchasing Power Parity (PPP) ಆಧಾರದ ಮೇಲೆ ಮುನ್ನಡೆಸಲು ಅದಾನಿ ಗ್ರೂಪ್ಸ್‌ ಬಿಡ್ ಪಡೆದುಕೊಂಡಿದೆ.

2021 ಜನವರಿ 25 ರೊಳಗೆ ಈ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಉಳಿದ ಮೂರೂ ವಿಮಾನ ನಿಲ್ದಾಣಗಳನ್ನೂ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಿದೆ ಎಂದು AAI ಅಧ್ಯಕ್ಷ ಅರವಿಂದ್ ಸಿಂಗ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ರೈಲ್ವೇ ಖಾಸಗೀಕರಣಕ್ಕೆ ಚಾಲನೆ: ಮುಂದಿನ ಕರಾಳ ದಿನಗಳಿಗೆ ಹಸಿರು ನಿಶಾನೆ

ಈ ಆರು ವಿಮಾನ ನಿಲ್ದಾಣಗಳನ್ನು ಹೊರತುಪಡಿಸಿ, ವಾರಣಾಸಿ, ಅಮೃತಸರ, ಭುವನೇಶ್ವರ, ರಾಯ್‌ಪುರ, ಇಂದೋರ್ ಮತ್ತು ತಿರುಚ್ಚಿ ಸೇರಿದಂತೆ ಇನ್ನೂ ವಿಮಾನ ನಿಲ್ದಾಣಗಳನ್ನು PPP ಅಡಿಯಲ್ಲಿ ಲೀಸ್‌ಗೆ ಕೊಡಲು ಸರ್ಕಾರ ನಿರ್ಧರಿಸಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

“ತಿರುವನಂತಪುರಂ ವಿಮಾನ ನಿಲ್ದಾಣವನ್ನು ಪಿಪಿಪಿ ಆಧಾರದ ಮೇಲೆ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕೇರಳ ಸರ್ಕಾರ ಕಾನೂನುಬದ್ಧವಾಗಿ ಪ್ರಶ್ನಿಸಿತ್ತು. ಈ ಪ್ರಕ್ರಿಯೆಯನ್ನು ಅತ್ಯಂತ ಮುಕ್ತ ಮತ್ತು ಪಾರದರ್ಶಕ ರೀತಿಯಲ್ಲಿ ನಡೆಸಲಾಗಿದ್ದರಿಂದ ಆ ನ್ಯಾಯಾಲಯದ ತೀರ್ಪು ನಮ್ಮ ಪರವಾಗಿದೆ. ಉಳಿದ ಮೂರು ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್‌ಗೆ ಹಸ್ತಾಂತರಿಸುವುದು” ಎಂದು ವಿಮಾನಯಾನ ಕಾರ್ಯದರ್ಶಿ ಪಿ ಎಸ್ ಖರೋಲಾ ತಿಳಿಸಿದ್ದಾರೆ.

ಇದನ್ನೂ ಓದಿ: ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ಲಕ್ನೋ, ಅಹಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರ ಮತ್ತು ಗುವಾಹಟಿ ವಿಮಾನ ನಿಲ್ದಾಣಗಳನ್ನು ಲೀಸ್ ಮೇಲೆ ನಿರ್ವಹಿಸುವ ಹಕ್ಕನ್ನು ಅದಾನಿ ಎಂಟರ್ ಪ್ರೈಸಸ್ ಪಡೆದುಕೊಂಡಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ ಜಾವಾಡೇಕರ್ ಈ ಹಿಂದೆ ದೆಹಲಿಯ ಸುದ್ಧಿಗೋಷ್ಠಿಯಲ್ಲಿ ಘೋಷಿಸಿದ್ದರು.

ಕೇಂದ್ರ ಸರ್ಕಾರ ಈ ಹಿಂದೆ 12 ವಿಮಾನ ನಿಲ್ದಾಣಗಳನ್ನು ಖಾಸಗಿಯವರಿಗೆ ವಹಿಸಿಕೊಡಲು ನಿರ್ಧರಿಸಿತ್ತು. ಇದರ ಬಗ್ಗೆ ಅದಾನಿ ಸಂಸ್ಥೆಯೊಂದಿಗೆ 2020 ರ ಫೆಬ್ರವರಿಯಲ್ಲಿ ಒಪ್ಪಂದ ನಡೆದಿತ್ತು. ಈ ಪ್ರಕಾರ ಮೊದಲ ಹಂತದಲ್ಲಿ 6 ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ನಡೆದ ಟೆಂಡರ್ ಪ್ರಕ್ರಿಯೆಯಲ್ಲಿ ಅದಾನಿ ಸಮೂಹ ಸಂಸ್ಥೆ ಅತ್ಯಧಿಕ ಮೊತ್ತ ನಮೂದಿಸುವ ಮೂಲಕ ಗೆದ್ದುಕೊಂಡಿದೆ ಎಂದು ಸರ್ಕಾರ ಹೇಳಿತ್ತು.

ಇದನ್ನೂ ಓದಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಖಾಸಗಿ ವಲಯಕ್ಕೆ ಮುಕ್ತ ಅವಕಾಶ: ಪ್ರಧಾನಿ ಮೋದಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಂಬಾನಿ-ಅದಾನಿಗಳಿಗಾಗಿ ಕೆಲಸ ಮಾಡುತ್ತಿದೆ ಎಂದು ಹಲವರು ಆರೋಪಿಸಿದ್ದರು. ಇದಕ್ಕೆ ಒಂದೊಂದೇ ಸಾಕ್ಷಿಗಳು ಸಿಗುತ್ತಲೇ ಇದೆ. “ಸರ್ಕಾರದ ಒಡೆತನದಲ್ಲಿರುವ ಪ್ರತಿಯೊಂದು ಸಂಸ್ಥೆಗಳನ್ನೂ ಖಾಸಗಿಯವರಿಗೆ ಮಾರುವ ಮೂಲಕ ಇಡೀ ದೇಶವನ್ನೇ ಮಾರಲು ಹೊರಟಿದ್ದಾರೆ ನಮ್ಮ ಪ್ರಧಾನಿ” ಎಂದು ಹಲವರು ಟೀಕಿಸುತ್ತಿದ್ದಾರೆ.

ಆದರೆ ಇದಾವುದಕ್ಕೂ ತಲೆಕೆಡಿಸಿಕೊಳ್ಳದ ಪ್ರಧಾನಿ ಮೋದಿ, ಈ ಹಿಂದೆ ರೈಲು ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ಅನುಮೋದನೆ ನೀಡಿದ್ದರು


ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಯಮಾಡಿ ಜಾಹೀರಾತುಗಳನ್ನು ಕಡಿಮೆ ಮಾಡಿ.ತುಂಬಾ ತೊಂದರೆಯಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...