Homeಮುಖಪುಟಅನ್ಯಾಯದ ವಿರುದ್ಧ ಹೋರಾಡುತ್ತಿರುವ ರೈತರು, ಕಾರ್ಮಿಕರ ಜೊತೆ ನನ್ನ ಹೃದಯವಿದೆ: ರಾಹುಲ್ ಗಾಂಧಿ

ಅನ್ಯಾಯದ ವಿರುದ್ಧ ಹೋರಾಡುತ್ತಿರುವ ರೈತರು, ಕಾರ್ಮಿಕರ ಜೊತೆ ನನ್ನ ಹೃದಯವಿದೆ: ರಾಹುಲ್ ಗಾಂಧಿ

ಹೊಸವರ್ಷದಂದು, ನಾವು ಕಳೆದುಕೊಂಡವರನ್ನು, ನಮ್ಮನ್ನು ರಕ್ಷಿಸಿದವರು ಮತ್ತು ನಮಗಾಗಿ ತ್ಯಾಗ ಮಾಡಿದವರನ್ನು ನೆನಪಿಸಿಕೊಳ್ಳೊಣ ಎಂದಿದ್ದಾರೆ ರಾಹುಲ್ ಗಾಂಧಿ.

- Advertisement -
- Advertisement -

ಹೊಸ ವರ್ಷದಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ದೇಶದ ಜನರಿಗೆ ಶುಭಾಶಯ ಕೋರಿದ್ದಾರೆ. ಕೊರೊನಾ ಪರಿಸ್ಥಿತಿಯಿಂದ ಉಂಟಾಗುವ ಸವಾಲುಗಳನ್ನು ಒಗ್ಗಟ್ಟಿನಿಂದ ಎದುರಿಸೋಣ ಎಂದು ರಾಷ್ಟ್ರಪತಿ ಶುಭಕೋರಿದ್ದಾರೆ. ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿ ನಿಮ್ಮದಾಗಲಿ ಎಂದು ಪ್ರಧಾನಿ ಹೇಳಿದ್ದಾರೆ.

ಹೊಸವರ್ಷದಂದು ನಾವು ಕಳೆದುಕೊಂಡವರನ್ನು, ನಮ್ಮನ್ನು ರಕ್ಷಿಸಿದವರು ಮತ್ತು ನಮಗಾಗಿ ತ್ಯಾಗ ಮಾಡಿದವರನ್ನು ರಾಹುಲ್ ಗಾಂಧಿ ನೆನಪಿಸಿಕೊಂಡಿದ್ದಾರೆ. ಅನ್ಯಾಯದ ವಿರುದ್ಧ ಘನತೆ ಮತ್ತು ಗೌರವದಿಂದ ಹೋರಾಡುತ್ತಿರುವ ರೈತರು ಮತ್ತು ಕಾರ್ಮಿಕರ ಜೊತೆಗೆ ನನ್ನ ಹೃದಯವಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕೈ ಮುಗಿದು, ತಲೆಬಾಗಿ ರೈತರೊಡನೆ ಚರ್ಚಿಸಲು ಸಿದ್ದನಿದ್ದೇನೆ: ನರೇಂದ್ರ ಮೋದಿ

ಕಳೆದ ತಿಂಗಳಿನಿಂದಲೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ತಮ್ಮ ಬೆಂಬಲವನ್ನು ಮತ್ತೆ ದೃಢಪಡಿಸಿದ್ದಾರೆ. ರೈತರ ಹೋರಾಟಕ್ಕೆ ಮೊದಲಿನಿಂದಲೂ ಸಾಥ್ ನೀಡಿರುವ ರಾಹುಲ್ ಗಾಂಧಿ ಮುಂದೆಯೂ ತಾವು ರೈತರ ಜೊತೆಗಿರುವುದಾಗಿ ತಿಳಿಸಿದ್ದಾರೆ.

ಇತ್ತ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಶುಭಾಶಯ ತಿಳಿಸಿದ್ದು, ಈ ವರ್ಷ ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಭರವಸೆ ಮತ್ತು ಸ್ವಾಸ್ಥ್ಯದ ಮನೋಭಾವ ಮೇಲುಗೈ ಸಾಧಿಸಲಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ: ನರೇಂದ್ರ ಮೋದಿ

ರಾಷ್ಟ್ರಪತಿ ರಾಮನಾಥ್ ಕೋವಿಂದ್, 2020 ರ ಕೊರೊನಾ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು, ಹೊಸ ಆರಂಭಕ್ಕೆ ಹೊಸ ಅವಕಾಶ ಎಂದಿದ್ದಾರೆ.

“ಹೊಸ ವರ್ಷವು ಹೊಸ ಆರಂಭವನ್ನು ನೀಡಲು ಮತ್ತು ವೈಯಕ್ತಿಕ ಮತ್ತು ಸಾಮೂಹಿಕ ಅಭಿವೃದ್ಧಿಗೆ ಪರಿಹಾರವನ್ನು ಒದಗಿಸುತ್ತದೆ. ಕೊರೊನಾ ಪರಿಸ್ಥಿತಿಯಿಂದ ಉಂಟಾಗುವ ಸವಾಲುಗಳು ಒಗ್ಗಟ್ಟಿನಿಂದ ಎದುರಿಸುವ ನಮ್ಮ ದೃಢ ನಿರ್ಧಾರವನ್ನು ಬಲಪಡಿಸುತ್ತವೆ” ಎಂದು ರಾಷ್ಟ್ರಪತಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ರಾಜಸ್ಥಾನ-ಹರಿಯಾಣ ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗ್ಗಿದ ರೈತರು

ಪ್ರೀತಿ ಮತ್ತು ಸಹಾನುಭೂತಿಯ ಮನೋಭಾವದಿಂದ ಕೂಡಿದ ಸಮಾಜವನ್ನು ಸೃಷ್ಟಿಸಲು ನಾವು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸೋಣ ಎಂದು ದೇಶದ ಜನರಿಗೆ ಕರೆ ನೀಡಿದ್ದಾರೆ.

ದೇಶದಲ್ಲಿ ಹೆಚ್ಚು ಚರ್ಚೆಗೆ ಒಳಗಾಗುತ್ತಿರುವ ರೈತ ಪ್ರತಿಭಟನೆಯಲ್ಲಿ, ಹೆಚ್ಚಾಗಿ ಪಂಜಾಬ್, ಹರಿಯಾಣ ಮತ್ತು ಇತರ ರಾಜ್ಯಗಳ ರೈತರು ದೆಹಲಿಯ ಗಡಿಯಲ್ಲಿ ಬೀಡುಬಿಟ್ಟಿದ್ದಾರೆ. ವಿವಾದಿತ ಕೃಷಿ ಕಾನೂನುಗಳು ಕನಿಷ್ಟ ಬೆಂಬಲ ಬೆಲೆ ವ್ಯವಸ್ಥೆಯನ್ನು ಹಾಳುಗೆಡವುತ್ತವೆ ಮತ್ತು ದೊಡ್ಡ ಕಾರ್ಪೊರೇಟ್ ಸಂಸ್ಥೆಗಳ ಪರವಾಗಿವೆ ಎಂದು  ಲಕ್ಷಾಂತರ ಮಂದಿ ರೈತರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.

ರೈತ ನಾಯಕರು ಮತ್ತು ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದು ವಿಫಲಗೊಂಡಿವೆ. ಪ್ರಧಾನಿ ಮೋದಿ ಅವರ ಅನೇಕ ಆಶ್ವಾಸನೆಗಳು ರೈತರ ಪ್ರತಿಭಟನೆಯನ್ನು ತಡೆಯುವಲ್ಲಿ ವಿಫಲವಾಗಿವೆ.

ಈ ಹಿನ್ನೆಲೆ ದೇಶದ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ರೈತರ ಬಗ್ಗೆ ಹೊಸ ವರ್ಷದಂದು ಯಾವುದಾದರೂ ಸಿಹಿ ಸುದ್ದಿ ನೀಡಬಹುದು ಎಂಬ ನಿರೀಕ್ಷೆಯನ್ನು ರಾಷ್ಟ್ರಪತಿ ಮತ್ತು ಪ್ರಧಾನಿ ನರೇಂದ್ರ ಮೋದಿ ಹುಸಿ ಮಾಡಿದ್ದಾರೆ. ರೈತ ಹೋರಾಟ ಆರಂಭದಿಂದಲೂ ರೈತರಿಗೆ ಬೆಂಬಲ ನೀಡಿರುವ ರಾಹುಲ್ ಗಾಂಧಿ ತಮ್ಮ ಬೆಂಬಲ ಮುಂದುವರಿಸುವುದಾಗಿ ಮತ್ತೆ ತಿಳಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ-6 ನೇ ಸುತ್ತಿನ ಮಾತುಕತೆಯು ವಿಫಲ; ಹೋರಾಟ ಮುಂದುವರೆಯಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...