Homeಕರ್ನಾಟಕರಿಲಾಯನ್ಸ್ ಬಹಿಷ್ಕರಿಸಲು ಕರೆ: ರೈತ ಹೋರಾಟ ಬೆಂಬಲಿಸಿ ಸಿಂಧನೂರಿನಲ್ಲಿ ಪ್ರತಿಭಟನೆ

ರಿಲಾಯನ್ಸ್ ಬಹಿಷ್ಕರಿಸಲು ಕರೆ: ರೈತ ಹೋರಾಟ ಬೆಂಬಲಿಸಿ ಸಿಂಧನೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ದೇಶದ ಬೃಹತ್‌ ಕಾರ್ಪೊರೇಟ್‌‌‌ಗಳಾದ ಅಂಬಾನಿ-ಅದಾನಿಗಳಿಗೆ ಅನುಕೂಲ ಮಾಡಲು, ಕೇಂದ್ರದ ಬಿಜೆಪಿ ಸರ್ಕಾರ ರೈತವಿರೋಧಿ ಕಾನೂನಗಳನ್ನು ಜಾರಿಗೆ ತಂದಿದೆ ಎಂದು ಆರೋಪಿಸಿ, ಸಿಂಧನೂರಿನ ರಿಲಾಯನ್ಸ್ ಪೆಟ್ರೋಲ್ ಬಂಕ್‌‌ ಮುಂದೆ ’ಸಿಂಧನೂರು ರೈತವಿರೋಧಿ ಕೃಷಿ ಕಾನೂನು ರದ್ದತಿ ಹೋರಾಟ ಸಮಿತಿ’ ಶುಕ್ರವಾರ ಪ್ರತಿಭಟನೆ ನಡೆಸಿತು.

ಕೇಂದ್ರ ಹಾಗೂ ಜಿಯೋ ರಿಲಾಯನ್ಸ್ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾಕಾರರು, ರಿಲಯನ್ಸ್ ಸರಕುಗಳನ್ನು ಬಹಿಷ್ಕರಿಸುವಂತೆ ಸಾರ್ವಜನಿಕರಲ್ಲಿ ವಿನಂತಿ ಮಾಡಿದರು. ಕೇಂದ್ರ ಸರಕಾರ ಅಪ್ರಜಾತಾಂತ್ರಿಕ ಮತ್ತು ಅಸಂವಿಧಾನಿಕವಾಗಿ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿರುವ ನೂತನ ಕೃಷಿ ಕಾನೂನುಗಳನ್ನು ವಾಪಸ್‌ ಪಡೆಯುವಂತೆ ಒತ್ತಾಯಿಸಿದರು.

ಇದನ್ನೂ ಓದಿ: ರೈತ ಹೋರಾಟ: ರಾಜಸ್ಥಾನ-ಹರಿಯಾಣ ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗ್ಗಿದ ರೈತರು

“ದೇಶೀಯ ಮತ್ತು ವಿದೇಶೀಯ ಕಾರ್ಪೊರೇಟ್‌ ಕಂಪನಿಗಳಿಗೆ ಕೃಷಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಕ್ಷೇತ್ರವನ್ನು ಮಾರಾಟ ಮಾಡಲು ಹೊರಟಿರುವ ಕೇಂದ್ರ ಸರಕಾರದ ನಡೆ ರೈತ ವಿರೋಧಿಯಾಗಿದೆ. ಕಾರ್ಪೊರೇಟ್ ಕುಳಗಳಾದ ರಿಲಾಯನ್ಸ್ ಅಂಬಾನಿ, ಅದಾನಿಗಳ ಸಂಪತ್ತು ಹೆಚ್ಚಿಸುವುದಕ್ಕಾಗಿ ದೇಶದ ಸಮಸ್ತ ರೈತರ ಕೃಷಿ ಭೂಮಿ ಹಾಗೂ ಉತ್ಪನ್ನಕ್ಕೆ ಕನ್ನ ಹಾಕಲು ಹೊರಟಿರುವುದು ದೇಶದ ರೈತರಗೆ ಮಾಡಿದ ದ್ರೋಹವಾಗಿದೆ” ಎಂದು ಹೋರಾಟ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಕೇಂದ್ರ ಸರಕಾರದ ಈ ಕಾನೂನುಗಳು ಜಾರಿಯಾದರೆ ದೇಶದ ಕೃಷಿ ಭೂಮಿ ಮತ್ತು ಮಾರುಕಟ್ಟೆ ಕಾರ್ಪೊರೇಟ್‌ ಬಂಡವಾಳಶಾಹಿಗಳ ಶಕ್ತಿಗಳ ಏಕಸ್ವಾಮ್ಯಕ್ಕೆ ಒಳಪಚ್ಚು ರೈತರು ಬೀದಿಗೆ ಬೀಳಲಿದ್ದಾರೆ ಎಂದು ಎಚ್ಚರಿಸಿರುವ ಹೋರಾಟ ಸಮಿತಿಯು, “ಕೃಷಿ ಸೇರಿದಂತೆ ಇನ್ನಿತರೆ ಸಬ್ಸಿಡಿಯನ್ನು ವರ್ಷದಿಂದ ವರ್ಷಕ್ಕೆ ಕಡಿತಗೊಳಿಸುತ್ತಿರುವ ಕೇಂದ್ರ ಸರಕಾರ, ಈಗ ಕೃಷಿ ಭೂಮಿಯನ್ನು ಬಂಡವಾಳಗರಿಗೆ ಒತ್ತೆಯಿಡಲು ಹೊರಟಿದೆ. ಯಾವುದೆ ಚರ್ಚೆಯಲ್ಲದೇ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿರುವುದು ಕೃಷಿಯನ್ನೇ ನಂಬಿ ಬದುಕುತ್ತಿರುವ ರೈತರ ಪಾಲಿಗೆ ಮರಣ ಶಾಸನವಾಗಿದೆ” ಎಂದು ಅದು ಹೇಳಿದೆ.

“ಈ ಕಾಯ್ದೆಗಳ ಜಾರಿಯ ಹಿಂದೆ ರಿಲಯನ್ಸ್‌ ಫ್ರೆಶ್‌, ಬಿಗ್ ಬಝಾರ್‌, ಅಮೆಜಾನ್‌ ಸೇರಿದಂತೆ ದೈತ್ಯ ಕಾರ್ಪೊರೇಟ್‌ ಕಂಪೆನಿಳಿಗೆ ಅನುಕೂಲ ಮಾಡಿಕೊಡುವ ಹುನ್ನಾರ ಅಡಗಿದೆ. ಈ ಕಾಯ್ದೆಗಳ ಜಾರಿಯಿಂದ ಇಡೀ ಕೃಷಿ ವಲಯವೆ ಸಂಕಷ್ಟಕ್ಕೀಡಾಗಲಿ. ಆದ್ದರಿಂದ ಕೇಂದ್ರ ಸರ್ಕಾರವು ದೇಶದ ರೈತರೊಂದಿಗೆ ಬೇಷರತ್ತಾಗಿ‌ ಕ್ಷಮೆಯಾಚಿಸಿ, ಈ ಕೂಡಲೇ ರೈತವಿರೋಧಿ ಕೃಷಿ ಕಾನೂನುಗಳನ್ನು ವಾಪಸ್‌ ಪಡೆಯಬೇಕು” ಎಂದು ಹೋರಾಟ ಸಮಿತಿಯು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಪ್ರತಿಭಟನೆಯನ್ನು ಉದ್ದೇಶಿಸಿ ಚಂದ್ರಶೇಖರ್ ಗೋರೆಬಾಳ್, ಡಿ.ಎಚ್ ಕಂಬಳಿ, ಬಸವರಾಜ ಗೂಗೆಬಾಳ್, ಎಸ್‌ ದೇವೇಂದ್ರ ಗೌಡ ಮಾತನಾಡಿದರು. ಹುಷೇನ್ ಸಾಬ್, ನಾಗರಾಜ್ ಪೂಜಾರ್, ಶೇಕ್ಷಾ ಖಾದ್ರಿ, ರಮೇಶ್ ಪಾಟೀಲ್, ಶಂಕರ್ ವಾಲೇಕರ್, ಬಸವರಾಜ ಬಾದರ್ಲಿ, ಅಬ್ದುಲ್ ಸಮದ್ ಚೌದ್ರಿ ಸೇರಿದಂತೆ ಇತರರು ಭಾಗವಹಿಸಿದ್ದರು.


ಇದನ್ನೂ ಓದಿ: ಕಾರ್ಮಿಕರ ಹೋರಾಟವನ್ನು ಹತ್ತಿಕ್ಕಿದ ಶ್ರೀರಂಗಪಟ್ಟಣದ ಗಾರ್ಮೆಂಟ್ಸ್‌: ಅಧ್ಯಯನ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...