Homeಚಳವಳಿರೈತ ಹೋರಾಟ: 70,000 ಕೋಟಿ ನಷ್ಟವಾಗಿದೆ ಎಂದ ವಾಣಿಜ್ಯ-ಕೈಗಾರಿಕಾ ಮಂಡಳಿ

ರೈತ ಹೋರಾಟ: 70,000 ಕೋಟಿ ನಷ್ಟವಾಗಿದೆ ಎಂದ ವಾಣಿಜ್ಯ-ಕೈಗಾರಿಕಾ ಮಂಡಳಿ

ಆಹಾರ ಸಂಸ್ಕರಣೆ, ಹತ್ತಿ ಜವಳಿ, ಉಡುಪುಗಳು, ಆಟೋಮೊಬೈಲ್, ಕೃಷಿ ಯಂತ್ರೋಪಕರಣಗಳು, ಮಾಹಿತಿ ತಂತ್ರಜ್ಞಾನ, ವ್ಯಾಪಾರ, ಪ್ರವಾಸೋದ್ಯಮ ಮತ್ತು ಸಾರಿಗೆ ಸೇರಿದಂತೆ ಮುಂತಾದ ಕ್ಷೇತ್ರಗಳ ಮೇಲೆ ತೀವ್ರವಾಗಿ ಪರಿಣಾಮ ಉಂಟಾಗಿದೆ- ಸಂಜಯ್ ಅಗರ್ವಾಲ್

- Advertisement -
- Advertisement -

ಹೊಸ ಕೃಷಿ ಕಾನೂನುಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟದ ಪರಿಣಾಮವಾಗಿ ಪ್ರಸಕ್ತ ಹಣಕಾಸು ವರ್ಷದ 3 ನೇ ತ್ರೈಮಾಸಿಕದಲ್ಲಿ 70,000 ಕೋಟಿ ರೂ.ಗಳ ಆರ್ಥಿಕ ನಷ್ಟವಾಗಲಿದೆ ಎಂದು PHD ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ತಿಳಿಸಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ರೈತ ವಿರೋಧಿಯಾಗಿದೆ ಎಂದು ಆರೋಪಿಸಿ ದೇಶದಾದ್ಯಂತ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಪರಿಣಾಮವಾಗಿ ಪಂಜಾಬ್ -ಹರಿಯಾಣದ ರೈತರು ದೆಹಲಿಯ ಪ್ರಮುಖ ಗಡಿಗಳು ಮತ್ತು ಹೆದ್ದಾರಿಗಳನ್ನು ಮುಚ್ಚಿದ್ದಾರೆ. ಹಾಗಾಗಿ ಸರಬರಾಜು ಮತ್ತು ವ್ಯಾಪಾರ ವಹಿವಾಟುಗಳಿಗೆ ತೊಂದರೆಯಾಗಿ ಬೃಹತ್ ಆರ್ಥಿಕ ನಷ್ಟ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಹತ್ರಾಸ್‌ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಮ್ಯಾಜಿಸ್ಟ್ರೇಟ್ ವರ್ಗಾವಣೆ!

ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ ಸಂಜಯ್ ಅಗರ್ವಾಲ್ ಮಾತನಾಡಿ, “ಇದುವರೆಗಿನ 36 ದಿನಗಳ ಕೃಷಿ ಆಂದೋಲನದಿಂದ ಭಾರತವು, 2020-21ರ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ 70,000 ಕೋಟಿ ರೂ.ಗಳಿಗಿಂತ ಹೆಚ್ಚಿನ ಆರ್ಥಿಕ ನಷ್ಟವನ್ನು ಅನುಭವಿಸಲಿದೆ. ಸರಬರಾಜು ಸೇರಿದಂತೆ ದಿನನಿತ್ಯದ ಆರ್ಥಿಕ ಚಟುವಟಿಕೆಗಳಿಗೆ ತೊಂದರೆಯಾಗಿದೆ” ಎಂದು ಹೇಳಿದ್ದಾರೆ.

“ಆಹಾರ ಸಂಸ್ಕರಣೆ, ಹತ್ತಿ ಜವಳಿ, ಉಡುಪುಗಳು, ಆಟೋಮೊಬೈಲ್, ಕೃಷಿ ಯಂತ್ರೋಪಕರಣಗಳು, ಮಾಹಿತಿ ತಂತ್ರಜ್ಞಾನ, ವ್ಯಾಪಾರ, ಪ್ರವಾಸೋದ್ಯಮ ಮತ್ತು ಸಾರಿಗೆ ಸೇರಿದಂತೆ ಮುಂತಾದ ಕ್ಷೇತ್ರಗಳ ಮೇಲೆ ತೀವ್ರವಾಗಿ ಪರಿಣಾಮ ಉಂಟಾಗಿದೆ. ಇದು ಉದ್ಯಮಕ್ಕೆ ಸಾಗಿಸಬೇಕಾದ ಕಚ್ಚಾ ವಸ್ತುಗಳ ಸರಬರಾಜನ್ನೂ ಅಡ್ಡಿಪಡಿಸಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಅನ್ಯಾಯದ ವಿರುದ್ಧ ಹೋರಾಡುತ್ತಿರುವ ರೈತರು, ಕಾರ್ಮಿಕರ ಜೊತೆ ನನ್ನ ಹೃದಯವಿದೆ: ರಾಹುಲ್ ಗಾಂಧಿ

ಕಳೆದ ಒಂದು ತಿಂಗಳಿನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಜೊತೆ ಆರು ಸುತ್ತಿನ ಮಾತುಕತೆಗಳು ನಡೆದಿದ್ದು, ಅವುಗಳೆಲ್ಲವೂ ವಿಫಲವಾಗಿವೆ.

“ಡಿಸಂಬರ್ 30 ರಂದು ನಡೆದ ಆರನೇ ಸುತ್ತಿನ ಮಾತುಕತೆಯಲ್ಲಿ, ರೈತರ 4 ಪ್ರಮುಖ ಬೇಡಿಕೆಗಳಲ್ಲಿ ಕೇಂದ್ರ ಸರ್ಕಾರ ಎರಡಕ್ಕೆ ಒಪ್ಪಿಗೆ ನೀಡಲಾಗಿದ್ದು, ಉಳಿದ ಎರಡು ಬೇಡಿಕೆಗಳ ಕುರಿತಂತೆ ಜನವರಿ 4 ರಂದು ಮತ್ತೊಂದು ಸುತ್ತಿನ ಮಾತುಕತೆಯಲ್ಲಿ ತೀರ್ಮಾನವಾಗಲಿದೆ. ಅಲ್ಲಿ ತಮ್ಮ ಬೇಡಿಕೆಗಳನ್ನು ಈಡೆರಿಸದಿದ್ದರೆ ದೇಶದಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ರೈತರು ಎಚ್ಚರಿಕೆ ಕೊಟ್ಟಿದ್ದಾರೆ.


ಇದನ್ನೂ ಓದಿ: ಹೊಸ ವರ್ಷ: ಪ್ರಧಾನಿ ಮೋದಿ ಸರ್ಕಾರ ಅದಾನಿ‌ ಗ್ರೂಪ್ಸ್‌ಗೆ ನೀಡಿದ ಗಿಫ್ಟ್‌ ಏನು ಗೊತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...