Homeಚಳವಳಿರೈತ ಹೋರಾಟ: 70,000 ಕೋಟಿ ನಷ್ಟವಾಗಿದೆ ಎಂದ ವಾಣಿಜ್ಯ-ಕೈಗಾರಿಕಾ ಮಂಡಳಿ

ರೈತ ಹೋರಾಟ: 70,000 ಕೋಟಿ ನಷ್ಟವಾಗಿದೆ ಎಂದ ವಾಣಿಜ್ಯ-ಕೈಗಾರಿಕಾ ಮಂಡಳಿ

ಆಹಾರ ಸಂಸ್ಕರಣೆ, ಹತ್ತಿ ಜವಳಿ, ಉಡುಪುಗಳು, ಆಟೋಮೊಬೈಲ್, ಕೃಷಿ ಯಂತ್ರೋಪಕರಣಗಳು, ಮಾಹಿತಿ ತಂತ್ರಜ್ಞಾನ, ವ್ಯಾಪಾರ, ಪ್ರವಾಸೋದ್ಯಮ ಮತ್ತು ಸಾರಿಗೆ ಸೇರಿದಂತೆ ಮುಂತಾದ ಕ್ಷೇತ್ರಗಳ ಮೇಲೆ ತೀವ್ರವಾಗಿ ಪರಿಣಾಮ ಉಂಟಾಗಿದೆ- ಸಂಜಯ್ ಅಗರ್ವಾಲ್

- Advertisement -
- Advertisement -

ಹೊಸ ಕೃಷಿ ಕಾನೂನುಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟದ ಪರಿಣಾಮವಾಗಿ ಪ್ರಸಕ್ತ ಹಣಕಾಸು ವರ್ಷದ 3 ನೇ ತ್ರೈಮಾಸಿಕದಲ್ಲಿ 70,000 ಕೋಟಿ ರೂ.ಗಳ ಆರ್ಥಿಕ ನಷ್ಟವಾಗಲಿದೆ ಎಂದು PHD ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ತಿಳಿಸಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ರೈತ ವಿರೋಧಿಯಾಗಿದೆ ಎಂದು ಆರೋಪಿಸಿ ದೇಶದಾದ್ಯಂತ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಪರಿಣಾಮವಾಗಿ ಪಂಜಾಬ್ -ಹರಿಯಾಣದ ರೈತರು ದೆಹಲಿಯ ಪ್ರಮುಖ ಗಡಿಗಳು ಮತ್ತು ಹೆದ್ದಾರಿಗಳನ್ನು ಮುಚ್ಚಿದ್ದಾರೆ. ಹಾಗಾಗಿ ಸರಬರಾಜು ಮತ್ತು ವ್ಯಾಪಾರ ವಹಿವಾಟುಗಳಿಗೆ ತೊಂದರೆಯಾಗಿ ಬೃಹತ್ ಆರ್ಥಿಕ ನಷ್ಟ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಹತ್ರಾಸ್‌ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಮ್ಯಾಜಿಸ್ಟ್ರೇಟ್ ವರ್ಗಾವಣೆ!

ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ ಸಂಜಯ್ ಅಗರ್ವಾಲ್ ಮಾತನಾಡಿ, “ಇದುವರೆಗಿನ 36 ದಿನಗಳ ಕೃಷಿ ಆಂದೋಲನದಿಂದ ಭಾರತವು, 2020-21ರ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ 70,000 ಕೋಟಿ ರೂ.ಗಳಿಗಿಂತ ಹೆಚ್ಚಿನ ಆರ್ಥಿಕ ನಷ್ಟವನ್ನು ಅನುಭವಿಸಲಿದೆ. ಸರಬರಾಜು ಸೇರಿದಂತೆ ದಿನನಿತ್ಯದ ಆರ್ಥಿಕ ಚಟುವಟಿಕೆಗಳಿಗೆ ತೊಂದರೆಯಾಗಿದೆ” ಎಂದು ಹೇಳಿದ್ದಾರೆ.

“ಆಹಾರ ಸಂಸ್ಕರಣೆ, ಹತ್ತಿ ಜವಳಿ, ಉಡುಪುಗಳು, ಆಟೋಮೊಬೈಲ್, ಕೃಷಿ ಯಂತ್ರೋಪಕರಣಗಳು, ಮಾಹಿತಿ ತಂತ್ರಜ್ಞಾನ, ವ್ಯಾಪಾರ, ಪ್ರವಾಸೋದ್ಯಮ ಮತ್ತು ಸಾರಿಗೆ ಸೇರಿದಂತೆ ಮುಂತಾದ ಕ್ಷೇತ್ರಗಳ ಮೇಲೆ ತೀವ್ರವಾಗಿ ಪರಿಣಾಮ ಉಂಟಾಗಿದೆ. ಇದು ಉದ್ಯಮಕ್ಕೆ ಸಾಗಿಸಬೇಕಾದ ಕಚ್ಚಾ ವಸ್ತುಗಳ ಸರಬರಾಜನ್ನೂ ಅಡ್ಡಿಪಡಿಸಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಅನ್ಯಾಯದ ವಿರುದ್ಧ ಹೋರಾಡುತ್ತಿರುವ ರೈತರು, ಕಾರ್ಮಿಕರ ಜೊತೆ ನನ್ನ ಹೃದಯವಿದೆ: ರಾಹುಲ್ ಗಾಂಧಿ

ಕಳೆದ ಒಂದು ತಿಂಗಳಿನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಜೊತೆ ಆರು ಸುತ್ತಿನ ಮಾತುಕತೆಗಳು ನಡೆದಿದ್ದು, ಅವುಗಳೆಲ್ಲವೂ ವಿಫಲವಾಗಿವೆ.

“ಡಿಸಂಬರ್ 30 ರಂದು ನಡೆದ ಆರನೇ ಸುತ್ತಿನ ಮಾತುಕತೆಯಲ್ಲಿ, ರೈತರ 4 ಪ್ರಮುಖ ಬೇಡಿಕೆಗಳಲ್ಲಿ ಕೇಂದ್ರ ಸರ್ಕಾರ ಎರಡಕ್ಕೆ ಒಪ್ಪಿಗೆ ನೀಡಲಾಗಿದ್ದು, ಉಳಿದ ಎರಡು ಬೇಡಿಕೆಗಳ ಕುರಿತಂತೆ ಜನವರಿ 4 ರಂದು ಮತ್ತೊಂದು ಸುತ್ತಿನ ಮಾತುಕತೆಯಲ್ಲಿ ತೀರ್ಮಾನವಾಗಲಿದೆ. ಅಲ್ಲಿ ತಮ್ಮ ಬೇಡಿಕೆಗಳನ್ನು ಈಡೆರಿಸದಿದ್ದರೆ ದೇಶದಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ರೈತರು ಎಚ್ಚರಿಕೆ ಕೊಟ್ಟಿದ್ದಾರೆ.


ಇದನ್ನೂ ಓದಿ: ಹೊಸ ವರ್ಷ: ಪ್ರಧಾನಿ ಮೋದಿ ಸರ್ಕಾರ ಅದಾನಿ‌ ಗ್ರೂಪ್ಸ್‌ಗೆ ನೀಡಿದ ಗಿಫ್ಟ್‌ ಏನು ಗೊತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...