Homeಅಂಕಣಗಳುಸಂಪಾದಕೀಯ

ಸಂಪಾದಕೀಯ

- Advertisement -
- Advertisement -

ಕವಿದ ಕತ್ತಲ ನಡುವೆ ಬೆಳಕಿನ ಭರವಸೆಗಳು

ಸಂಪಾದಕೀಯ ತಂಡದ ಪರವಾಗಿ
@ ದೊಡ್ಡಿಪಾಳ್ಯ ನರಸಿಂಹಮೂರ್ತಿ

ಹಸುಗೂಸು ಆಸಿಫಾಳ ಮೇಲೆ ನಡೆದ ಆ ಕ್ರೌರ್ಯ ಕಲ್ಲುಹೃದಯಗಳನ್ನೂ ಕಲಕಿಬಿಟ್ಟಿದೆ. ಸೂಕ್ಷ್ಮಸಂವೇದನೆಯ ಅದೆಷ್ಟೋ ಮಂದಿ ಈ ಆಘಾತದ ವಿವರ ಕೇಳಿ ಮಂಕುಬಡಿದವರಂತಾಗಿದ್ದಾರೆ. ಆಸಿಫಾಳ ಪ್ರಸ್ತಾಪ ಬಂದಾಕ್ಷಣ ತೀವ್ರ ವ್ಯಾಕುಲತೆಗೆ ಜಾರುವವರಿದ್ದಾರೆ. ‘ಪ್ಲೀಸ್, ಆ ವಿಷ್ಯ ನಿಲ್ಸಿ, ಮತ್ತೆ ನೆನಪಿಸಬೇಡಿ’ ಎಂದು ಮರೆಯಲೆತ್ನಿಸುವವರೂ ಇದ್ದಾರೆ. ಹೌದು, ಇವೆಲ್ಲಾ ಮನುಷ್ಯರ ಸಹಜ ಪ್ರತಿಕ್ರಿಯೆಗಳು.

ಆದರೆ ಪಾತಕಿಗಳ ಪರವಾಗಿ ನಿಂತು ಆ ಮುಗ್ದ ಕೂಸಿನ ಮೇಲೆ ನಡೆದ ಕ್ರೌರ್ಯವನ್ನು ಮುಚ್ಚಿಹಾಕಲು ಹರಸಾಹಸಪಟ್ಟ ಕಥುವಾದ ಪೊಲೀಸರೂ ಮನುಷ್ಯರೇ ತಾನೆ? ಭಾರತ್ ಮಾತಾ ಕಿ ಜೈ ಘೋಷಣೆಯ ಅಬ್ಬರದಡಿ ನ್ಯಾಯದ ಕೂಗನ್ನು ಮುಚ್ಚಿಹಾಕಲು ಹೆಣಗುತ್ತಿರುವವರು, ತ್ರಿವರ್ಣದ್ವಜವನ್ನು ಪಟಪಟಿಸಿ ಅದರಡಿಯಲ್ಲಿ ಪಾತಕಿಗಳಿಗೆ ರಕ್ಷಣೆ ಒದಗಿಸಿದ್ದವರಿಗೂ ಕೂಡ ಮನುಷ್ಯ ರೂಪವೇ ಇತ್ತಲ್ಲಾ? ಅತ್ಯಾಚಾರಿ, ಕೊಲೆಗಡುಕರ ಪರವಾಗಿ ಭಾರೀ ರ್ಯಾಲಿ ಏರ್ಪಡಿಸಿದ ಸಂಘಿ ಕೂಟದ ‘ಹಿಂದೂ ಏಕತಾ ಮಂಚ್’ನವರ ಅಸಲಿಯತ್ತಾದರೂ ಏನು? ‘ಯಾರೊಬ್ಬರನ್ನೂ ಅರೆಸ್ಟ್ ಮಾಡುವಂತಿಲ್ಲ’ ಎಂದು ಬಿಜೆಪಿಯ ಕೈಗಾರಿಕಾ ಸಚಿವ ಚಂದ್ರಪ್ರಕಾಶ್ ಗಂಗ ಈ ಬಹಿರಂಗ ರ್ಯಾಲಿಗಳಲ್ಲೇ ಧಮಕಿ ಹಾಕುತ್ತಾನೆಂದರೆ ಅಲ್ಲಿ ಎಂಥಾ ವ್ಯವಸ್ಥೆ ಇರಬಹುದು? ‘ಒಬ್ಬ ಹುಡುಗಿಯಷ್ಟೇ ಸತ್ತಿರೋದು, ಇನ್ನೂ ಬಹಳ ಹೆಣ್ಣುಮಕ್ಕಳು ನಮ್ಮ ಮುಂದೆಯೇ ಇದ್ದಾರೆ’ ಎಂದು ಉಗ್ರಹಿಂದುತ್ವದ ಭಾಷಣ ಮಾಡಿ ಘೋರಪಾತಕಗಳಿಗೆ ಬಹಿರಂಗ ಪ್ರಚೋದನೆ ನೀಡಿದ ಲಾಲ್‍ಸಿಂಗ್ ಆ ರಾಜ್ಯದ ಅರಣ್ಯ ಸಚಿವನೆಂದರೆ ನಂಬುವುದಾದರೂ ಹೇಗೆ?

ಕಥುವಾ ಮತ್ತು ಉನ್ನಾವೊಗಳಲ್ಲಿ ಪಾತಕಿಗಳು, ಪೊಲೀಸರು ಮತ್ತು ಸರ್ಕಾರ ಎಲ್ಲರೂ ಒಂದೇ ಗ್ಯಾಂಗಿನ ಸದಸ್ಯರೆಂಬಂತೆ ವರ್ತಿಸಿದ್ದಾರೆ. ಇಷ್ಟು ಸಾಲದು ಎಂಬಂತೆ ಕೋಮುವ್ಯಾಧಿ ವೈರಸ್ ಹರಡುತ್ತಿರುವ ಶಕ್ತಿಗಳು ಈ ಪಾತಕಗಳಿಗೆ ಸಾಮಾಜಿಕ ಬೆಂಬಲ ಕೂಡಿಸುವ ಪಾಪದಲ್ಲಿ ತೊಡಗಿವೆ. ದೇಶಾದ್ಯಂತ ಈ ಜಾಲ ವೇಗವಾಗಿ ವಿಸ್ತರಿಸುತ್ತಿದೆ. ಹೀಗೇ ಮುಂದುವರೆದರೆ ಮನುಷ್ಯತ್ವಕ್ಕೆ ಉಳಿಗಾಲವಿದೆಯೆ? ನಮ್ಮ ಪ್ರಜಾತಂತ್ರಕ್ಕೆ ಭವಿಷ್ಯವಿದೆಯೆ ಎಂಬ ಆತಂಕ ಕಾಡುತ್ತದೆ. ನಾವು ಸಿನಿಕತೆಗೆ ಜಾರುವುದು ಇಂಥ ಸನ್ನಿವೇಶಗಳಲ್ಲೇ.

ಕೋರ್ಟ್ ಆವರಣದಲ್ಲಿ ದೀಪಿಕಾ ಸಿಂಗ್

ಇಂಥಾ ಕರಾಳ ಸನ್ನಿವೇಶದಲ್ಲೂ ಆಸಿಫಾಳ ಪೋಷಕರ ಪರ ನ್ಯಾಯಾಲಯದಲ್ಲಿ ದೃಡವಾಗಿ ಹೋರಾಡಿದ ಯುವ ವಕೀಲೆ ದೀಪಿಕಾ ಸಿಂಗ್ ರಜಾವತ್ ನಮಗೆ ಭರವಸೆಯ ಬೆಳಕಾಗಿ ಕಾಣುತ್ತಾರೆ. ಈ ಕೇಸು ಕೈಗೆತ್ತಿಕೊಂಡಿದ್ದಕ್ಕಾಗಿ ಸೋದರಿ ದೀಪಿಕಾರನ್ನು ಹಿಂದೂವಿರೋಧಿಯೆಂದು ಆರೋಪಿಸಿ ಹಿಂದೂ ಏಕತಾ ಮಂಚ್ ಗದ್ದಲವೆಬ್ಬಿಸಿತು. ಅವರ ಓಡಾಟಕ್ಕೇ ಆತಂಕ ಒಡ್ಡಲಾಯ್ತು. ಅತ್ಯಾಚಾರ ಮಾಡಿ ಕೊಲ್ಲುವ ಬೆದರಿಕೆಗಳೂ ಬಂದವು.

ದೀಪಿಕಾಗೆ ಸೂಕ್ತ ಭದ್ರತೆ ಒದಗಿಸುವಂತೆ ರಾಜ್ಯಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ಕೊಟ್ಟಿದೆಯೆಂದರೆ ಆಕೆ ಎದುರಿಸುತ್ತಿರುವ ಪರಿಸ್ಥಿತಿಯನ್ನು ಯಾರಾದರೂ ಗ್ರಹಿಸಬಹುದು. ‘ಆಸಿಫಾ ನನ್ನ ಮಗಳು, ಆಕೆಯ ಪರವಾಗಿ ನನ್ನ ಉಸಿರಿರುವವರೆಗೂ ಹೋರಾಡುತ್ತೇನೆ’ ಎಂದ ದೀಪಿಕಾ ನಮ್ಮ ಭರವಸೆ.

ಈ ಪ್ರಕರಣದಲ್ಲಿ ಪಾತಕಿಗಳನ್ನು ಪತ್ತೆಹಚ್ಚಿ, ಕಂಬಿಗಳ ಹಿಂದೆ ಕಳಿಸುವಲ್ಲಿ ಬಹುಮುಖ್ಯಪಾತ್ರ ವಹಿಸಿದವರು ಎಸ್‍ಐಟಿಯ ಡಿವೈಎಸ್‍ಪಿ ಶ್ವೇತಾಂಬರಿ ಶರ್ಮ. ಅವರ ಮಾತುಗಳನ್ನೇ ಕೇಳೋಣ.

“ಬಹುತೇಕ ಆರೋಪಿಗಳು ಬ್ರಾಹ್ಮಣರೇ ಆಗಿದ್ದುದರಿಂದ ಅವರು ತಮ್ಮ ಸರ್‍ನೇಮ್‍ಗಳನ್ನು ಒತ್ತಿ ಒತ್ತಿ ಹೇಳುತ್ತಿದ್ದರು. ನಾವೂ ನೀವೂ ಒಂದೇ ಜಾತಿಯವರು, ಒಂದೇ ಧರ್ಮದವರು. ಆದ್ದರಿಂದ ಆ ಮುಸ್ಲಿಂ ಹುಡುಗಿಯ ರೇಪ್ & ಮರ್ಡರ್ ಕೇಸಿನಿಂದ ತಮ್ಮನ್ನು ತಪ್ಪಿಸಬೇಕೆಂದು ನಾನಾ ವಿಧಾನದಲ್ಲಿ ಪ್ರಭಾವ ಬೀರಲು ಯತ್ನಿಸಿದರು. ಪೊಲೀಸ್ ಅಧಿಕಾರಿಯಾಗಿರುವ ನನಗೆ ಯಾವುದೇ ಧರ್ಮವಿಲ್ಲ, ನಾನು ತೊಟ್ಟಿರುವ ಸಮವಸ್ತ್ರವೇ ನನ್ನ ಧರ್ಮ ಎಂದು ಅವರಿಗೆ ಹೇಳಿ ಕಳಿಸಿದೆ.”

ರಮೇಶ ಕುಮಾರ್ ಜಲ್ಲಾ

ಈ ತನಿಖೆಯ ಮೇಲ್ವಿಚಾರಣಾಧಿಕಾರಿ ಎಸ್‍ಪಿ ರಮೇಶ್ ಕುಮಾರ್ ಜಲ್ಲಾ ಅತಿ ಸೂಕ್ಷ್ಮ ಕೇಸುಗಳನ್ನು ನಿಭಾಯಿಸಿದ ಅನುಭವಿ. ಅವರು ಆಸಿಫಾ ಕೇಸನ್ನು ಎಷ್ಟು ಮನಸ್ಸಿಗೆ ಹಚ್ಚಿಕೊಂಡಿದ್ದರೆಂದರೆ ‘ಎರಡು ತಿಂಗಳು ಹಗಲಿರುಳು ಶ್ರಮಿಸಿದ ನಂತರ ಅಂತಿಮವಾಗಿ ಚಾರ್ಜ್‍ಶೀಟ್ ದಾಖಲಿಸಲು ಸಾಧ್ಯವಾಯ್ತು. ನಂತರವಷ್ಟೇ ಕಣ್ತುಂಬಾ ನಿದ್ದೆ ಮಾಡಿದ್ದು’ ಎಂದು ವಿವರಿಸುತ್ತಾರೆ. ಶಿಸ್ತಿನ ಈ ಅಧಿಕಾರಿ ನುಸುಳುಕೋರರ ವಿರುದ್ಧದ ಹೋರಾಟದಲ್ಲಿ ಖ್ಯಾತಿ ಪಡೆದಿರುವವರು.

ಮಾನವೀಯತೆ ಹಾಗೂ ಕಾನೂನು ಆಡಳಿತದ ಪರವಾಗಿ ದಿಟ್ಟವಾಗಿ ನಿಂತ ಇಂಥಾ ಮಹಾನ್‍ವ್ಯಕ್ತಿಗಳ ಪ್ರಯತ್ನದಿಂದಲೇ ನಮ್ಮ ಸಮಾಜ ಇಷ್ಟಾದರೂ ಸಹ್ಯವಾಗಿ ಉಳಿದುಕೊಂಡಿದೆ. ಈ ದಿಟ್ಟ ದನಿಗಳಿಗೆ ಈಗ ದೇಶದಾದ್ಯಂತ ಕೋಟ್ಯಾಂತರ ಜನರು ಮಾರ್ದನಿಯಾಗಿದ್ದಾರೆ. ಮಾನವೀಯ ಭವಿಷ್ಯದ ಕನಸಿಗೆ ಮತ್ತಷ್ಟು ಕಸುವು ತುಂಬುತ್ತಿದ್ದಾರೆ.

ಕೊನೆಯದಾಗಿ, ಇನ್ಸ್‍ಟಾಗ್ರಾಮ್ ಮೂಲಕ ಪ್ರಧಾನಿ ಮೋದಿಗೆ ಪತ್ರ ಬರೆದ ಒಬ್ಬ ಮೋದಿ ಅಭಿಮಾನಿಯ ಮಾತನ್ನು ಕೇಳೋಣ.
“ಮಾನ್ಯ ಪ್ರಧಾನಿಯವರೆ,
ತಾವು ರಾತ್ರೋರಾತ್ರಿ ಕರೆನ್ಸಿ ನೋಟು ಬದಲಾಯಿಸಿಬಿಟ್ಟಿರಿ.
ರಾತ್ರೋರಾತ್ರಿ ತೆರಿಗೆ ವ್ಯವಸ್ಥೆಯನ್ನು ಬದಲಾಯಿಸಿಬಿಟ್ಟಿರಿ.
ರಾತ್ರೋರಾತ್ರಿ ಸರ್ಕಾರಗಳನ್ನೂ ಬದಲಾಯಿಬಿಡುತ್ತಿದ್ದೀರಿ.
ನೀವೀಗ ಈ ಅತ್ಯಾಚಾರದ ಸಂಸ್ಕøತಿಯನ್ನು ಬದಲಾಯಿಸದಿದ್ದರೆ, ಅತ್ಯಾಚಾರಿಗಳಿಗೆ ಶಿಕ್ಷೆಯಾಗುವಂತೆ ಮಾಡದಿದ್ದರೆ, ಆಗ ನಾನು ನನ್ನ ಓಟನ್ನು ರಾತ್ರೋರಾತ್ರಿ ಬದಲಿಸಬಲ್ಲೆ. 2019 ಬಹಳ ದೂರವೇನಿಲ್ಲ.”

ತಾವು ಬೆಂಬಲಿಸುವ ಬಿಜೆಪಿ ಪಕ್ಷದ ಮುಖಂಡರೇ ಘೋರ ಕೃತ್ಯಗಳಲ್ಲಿ ತೊಡಗಿದಾಗ, ಅದನ್ನು ಖಂಡಿಸಿ ಮಾನವೀಯತೆಯ ಪರವಾಗಿ ನಿಂತ ಸಹಸ್ರ ಸಹಸ್ರ ಮನುಷ್ಯರಿದ್ದಾರೆ. ಭವಿಷ್ಯದಲ್ಲಿ ಭರವಸೆ ಇಡೋಣ. ದನಿಗೂಡಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...