Homeಚಳವಳಿರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

ರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

2021ರ ಹೊಸವರ್ಷಕ್ಕೆ ರೈತಪರವಾದ ಹೊಸ ವರ್ಷದ ನಿರ್ಣಯಗಳನ್ನು ಕೈಗೊಂಡಿರುವ ಯುವಜನರು ಸೈಕಲ್ ಜಾಥ ಮೂಲಕ ಹಳ್ಳಿ ಹಳ್ಳಿಗಳಿಗೆ ಹೊರಟಿದ್ದಾರೆ.

- Advertisement -
- Advertisement -

ದೇಶಕ್ಕೆ ಅನ್ನ ಕೊಡುವ ರೈತರು ಇಂದು ತಮ್ಮ ಉಳಿವಿಗಾಗಿ ಹೋರಾಡುತ್ತಿದ್ದಾರೆ. ದೆಹಲಿಯ ಕೊರೆಯುವ ಚಳಿಯಲ್ಲಿ ಸತತ 37 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅನ್ನದಾತರು ಸಂಕಷ್ಟದಲ್ಲಿರುವಾಗ ಅವರ ಬೆಂಬಲಕ್ಕೆ ನಿಲ್ಲುವುದು ನಮ್ಮ ಕರ್ತವ್ಯ ಎಂದು ಘೋಷಿಸಿರುವ ಯುವಜನರು ರೈತರ ಸಂಕಷ್ಟಗಳು ಅರಿತು ರೈತರಿಂದ ಕಲಿಯಲು ಮತ್ತು ಕೃಷಿ ಕಾಯ್ದೆಗಳ ಅಪಾಯಗಳ ಬಗ್ಗೆ ಜನರಿಗೆ ತಿಳಿಸಲು ಹಳ್ಳಿಗಳಿಗೆ ಹೊರಟಿದ್ದಾರೆ.

ರಾಜ್ಯದಲ್ಲಿ ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಸೈಕಲ್ ಜಾಥದ ಮೂಲಕ ಒಂದು ವಾರಗಳ ಕಾಲ ಹಲವು ಹಳ್ಳಿಗಳನ್ನು ತಲುಪಲು ವಿದ್ಯಾರ್ಥಿ – ಯುವಜನರು ನಿರ್ಧರಿಸದ್ದಾರೆ. ರಾಮನಗರ ಮತ್ತು ಗಂಗಾವತಿಯಲ್ಲಿ ಇಂದು ಸೈಕಲ್ ಜಾಥ ಉದ್ಘಾಟನೆಯಾಗಿದ್ದು ಹತ್ತಾರು ಯುವಕರು ಎರಡು ತಂಡಗಳಲ್ಲಿ ಪ್ರಚಾರಾಂದೋಲನ ಆರಂಭಿಸಿದ್ದಾರೆ.

ದೇಶಕ್ಕೆ ಈತನಕ ಅನ್ನ ಕೊಟ್ಟ ಅನ್ನದಾತರಿಂದ ಪ್ರತಿಭಟನೆಗೆ ಇಳಿದು, ದೆಹಲಿಯ ಬೀದಿಗಳಲ್ಲಿ ಪ್ರಾಣ ಕೊಡುತ್ತಿದ್ದಾರೆ. ಅವರು ಬೆವರು ರಕ್ತ ಬಸಿದು ಕೊಟ್ಟ ಅನ್ನ ತಿಂದು ಬೆಳೆದ ನಮ್ಮೆಲ್ಲರ ಮೇಲೂ ಅನ್ನದ ಋಣ ಇದೆ. ಇದರ ನಡುವೆಯೂ ಹೊಸ ವರ್ಷ ಬರುತ್ತಿದೆ. ಪ್ರತಿ ಹೊಸವರ್ಷಕ್ಕೆ ನಾವು ಸಾಧಿಸಬೇಕಾದ ನಿರ್ಣಯಗಳನ್ನು ತೆಗೆದುಕೊಳ್ಳುವುದು ರೂಢಿ. ರೈತರ ಹೋರಾಟದ ನಡುವೆ ಬರುತ್ತಿರುವ 2021ರ ಹೊಸವರ್ಷಕ್ಕೆ ರೈತಪರವಾದ ಹೊಸ ವರ್ಷದ ನಿರ್ಣಯಗಳನ್ನು ಕೈಗೊಳ್ಳೋಣ ಬನ್ನಿ ಎಂದು ಯುವಜನರು ಕರೆ ನೀಡಿದ್ದಾರೆ.

1. ಅನ್ನದಾತರು ಬೀದಿಗಿಳಿಯಲು ಕಾರಣವೇನೆಂದು ಸಮಗ್ರವಾಗಿ ಎಲ್ಲ ಆಯಾಮಗಳಿಂದ ಅಧ್ಯಯನ ಮಾಡುತ್ತೇನೆ. ಸಂಪೂರ್ಣ ವಿಚಾರ ತಿಳಿದುಕೊಳ್ಳುತ್ತೇನೆ.
2. ರೈತರ ಹಿತಾಸಕ್ತಿಯನ್ನು ಮಣ್ಣುಪಾಲು ಮಾಡಿ, ಚಿನ್ನದ ಅರಮನೆಗಳಲ್ಲಿ ಮೆರೆಯುತ್ತಿರುವ ರಿಲಾಯನ್ಸ್ ಅಂಬಾನಿಗಳಂತಹ ಕಾರ್ಪೊರೇಟ್ ಕಂಪೆನಿಗಳ ಕುರಿತ ಸತ್ಯಾಂಶಗಳನ್ನು ತಿಳಿದುಕೊಳ್ಳುತ್ತೇನೆ.
3. ನನಗೆ ಪರಿಚಿತರಾಗಿರುವ 10 ಜನರಿಗೆ ಈ ಎಲ್ಲ ವಿಚಾರದ ಕುರಿತಾಗಿ ಮಾಹಿತಿ ನೀಡುತ್ತೇನೆ.
4. ಹೊಸ ವರ್ಷದಲ್ಲಾದರೂ ಹೋರಾಡುತ್ತಿರುವ ರೈತರು ಹಿಂತಿರುಗಿ ಹೋಗಿ ತಮ್ಮ ಕುಟುಂಬಗಳನ್ನು ಸುರಕ್ಷಿತವಾಗಿ ಸೇರುವಂತೆ ರೈತರ ಹಕ್ಕೊತ್ತಾಯಗಳನ್ನು ಈಡೇರಿಸಬೇಕೆಂಬ ಆಗ್ರಹವನ್ನು ಯಾವ ರೀತಿಯಲ್ಲಿ ಸಾಧ್ಯವೋ ಹಾಗೆ ಸರ್ಕಾರಕ್ಕೆ ಮುಟ್ಟಿಸುತ್ತೇನೆ.
5. ದೆಹಲಿಯ ಹೋರಾಟನಿರತ ರೈತರು ನೀಡಿರುವ ಕರೆಗೆ ಓಗೊಡುತ್ತಾ ಜಿಯೋ ಸಿಮ್ ಗಳನ್ನೂ, ರಿಲಾಯನ್ಸ್ ಉತ್ಪನ್ನಗಳನ್ನೂ ತಿರಸ್ಕರಿಸುತ್ತೇನೆ ಎಂಬ 5 ನಿರ್ಣಯಗಳನ್ನು ಈ ಯುವಜನರು ಕೈಗೊಂಡಿದ್ದಾರೆ.

ದೇಶಪ್ರೇಮಿ ಯುವಾಂದೋಲನದ “ಹಳ್ಳಿಗಳಿಗೆ ವಿದ್ಯಾರ್ಥಿ-ಯುವಜನರ ಸೈಕಲ್ ಜಾಥಾ” ಗೆ ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಮಲ್ಲಯ್ಯನವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಲವಾರು ರೈತ ಮುಖಂಡರು, ದೇಶಪ್ರೇಮಿ ಯುವಾಂದೋಲನದ ಸರೋವರ್ ಬೆಂಕಿಕೆರೆ, ಮನೋಜ್, ಪುಷ್ಪಲತಾ, ರವಿ, ರಾಜಶೇಖರ್ ಅಂಗಡಿ, ಬಸವರಾಜ್, ಮಮತ ಇದ್ದರು.

ಜಾಥಾ ಚಾಲನೆ ಹಾಗೂ ಸಭೆಯ ನಂತರ ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ದೇಶಪ್ರೇಮಿ ಯುವಾಂದೋಲನ ತಂಡ ಕರಪತ್ರಗಳನ್ನು ಹಂಚಿ ಪ್ರಚಾರ ನಡೆಸಿತು. ನಂತರ ಚನ್ನಮಾನಹಳ್ಳಿ ಮತ್ತು ಚಿಕ್ಕೇನಹಳ್ಳಿಯಲ್ಲಿ ಮನೆ ಮನೆಗೂ ತೆರಳಿದ ಯುವಜನರು ಜನರಿಗೆ ರೈತ ಹೋರಾಟ ಮಾಹಿತಿ ನೀಡುತ್ತಿದ್ದಾರೆ.

ಇನ್ನೊಂದೆಡೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸೈಕಲ್ ಜಾಥ ಉದ್ಘಾಟನೆಗೊಂಡು ಕಂಪ್ಲಿ ಕಡೆ ಹೊರಟಿದೆ. ಜಾಥಾಗೆ ಚಿಂತಕರಾದ ಬಿ.ಪೀರ್‌ಭಾಷಾ, ಹೋರಾಟಗಾರರಾದ ಡಿ.ಎಚ್ ಪೂಜಾರ್ ಚಾಲನೆ ನೀಡಿದರು. ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂತೋಷ್ ಎಚ್. ಎಂ, ರಾಜೇಂದ್ರ, ಗುರುಬಸವ, ಮರಿಸ್ವಾಮಿ, ದುರ್ಗೇಶ್, ಶರಣಬಸವ ಮತ್ತಿತರರು ಜಾಥದಲ್ಲಿದ್ದಾರೆ.


ಇದನ್ನೂ ಓದಿ: ರಿಲಾಯನ್ಸ್ ಬಹಿಷ್ಕರಿಸಲು ಕರೆ: ರೈತ ಹೋರಾಟ ಬೆಂಬಲಿಸಿ ಸಿಂಧನೂರಿನಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...