Homeಚಳವಳಿರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

ರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

2021ರ ಹೊಸವರ್ಷಕ್ಕೆ ರೈತಪರವಾದ ಹೊಸ ವರ್ಷದ ನಿರ್ಣಯಗಳನ್ನು ಕೈಗೊಂಡಿರುವ ಯುವಜನರು ಸೈಕಲ್ ಜಾಥ ಮೂಲಕ ಹಳ್ಳಿ ಹಳ್ಳಿಗಳಿಗೆ ಹೊರಟಿದ್ದಾರೆ.

- Advertisement -
- Advertisement -

ದೇಶಕ್ಕೆ ಅನ್ನ ಕೊಡುವ ರೈತರು ಇಂದು ತಮ್ಮ ಉಳಿವಿಗಾಗಿ ಹೋರಾಡುತ್ತಿದ್ದಾರೆ. ದೆಹಲಿಯ ಕೊರೆಯುವ ಚಳಿಯಲ್ಲಿ ಸತತ 37 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅನ್ನದಾತರು ಸಂಕಷ್ಟದಲ್ಲಿರುವಾಗ ಅವರ ಬೆಂಬಲಕ್ಕೆ ನಿಲ್ಲುವುದು ನಮ್ಮ ಕರ್ತವ್ಯ ಎಂದು ಘೋಷಿಸಿರುವ ಯುವಜನರು ರೈತರ ಸಂಕಷ್ಟಗಳು ಅರಿತು ರೈತರಿಂದ ಕಲಿಯಲು ಮತ್ತು ಕೃಷಿ ಕಾಯ್ದೆಗಳ ಅಪಾಯಗಳ ಬಗ್ಗೆ ಜನರಿಗೆ ತಿಳಿಸಲು ಹಳ್ಳಿಗಳಿಗೆ ಹೊರಟಿದ್ದಾರೆ.

ರಾಜ್ಯದಲ್ಲಿ ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಸೈಕಲ್ ಜಾಥದ ಮೂಲಕ ಒಂದು ವಾರಗಳ ಕಾಲ ಹಲವು ಹಳ್ಳಿಗಳನ್ನು ತಲುಪಲು ವಿದ್ಯಾರ್ಥಿ – ಯುವಜನರು ನಿರ್ಧರಿಸದ್ದಾರೆ. ರಾಮನಗರ ಮತ್ತು ಗಂಗಾವತಿಯಲ್ಲಿ ಇಂದು ಸೈಕಲ್ ಜಾಥ ಉದ್ಘಾಟನೆಯಾಗಿದ್ದು ಹತ್ತಾರು ಯುವಕರು ಎರಡು ತಂಡಗಳಲ್ಲಿ ಪ್ರಚಾರಾಂದೋಲನ ಆರಂಭಿಸಿದ್ದಾರೆ.

ದೇಶಕ್ಕೆ ಈತನಕ ಅನ್ನ ಕೊಟ್ಟ ಅನ್ನದಾತರಿಂದ ಪ್ರತಿಭಟನೆಗೆ ಇಳಿದು, ದೆಹಲಿಯ ಬೀದಿಗಳಲ್ಲಿ ಪ್ರಾಣ ಕೊಡುತ್ತಿದ್ದಾರೆ. ಅವರು ಬೆವರು ರಕ್ತ ಬಸಿದು ಕೊಟ್ಟ ಅನ್ನ ತಿಂದು ಬೆಳೆದ ನಮ್ಮೆಲ್ಲರ ಮೇಲೂ ಅನ್ನದ ಋಣ ಇದೆ. ಇದರ ನಡುವೆಯೂ ಹೊಸ ವರ್ಷ ಬರುತ್ತಿದೆ. ಪ್ರತಿ ಹೊಸವರ್ಷಕ್ಕೆ ನಾವು ಸಾಧಿಸಬೇಕಾದ ನಿರ್ಣಯಗಳನ್ನು ತೆಗೆದುಕೊಳ್ಳುವುದು ರೂಢಿ. ರೈತರ ಹೋರಾಟದ ನಡುವೆ ಬರುತ್ತಿರುವ 2021ರ ಹೊಸವರ್ಷಕ್ಕೆ ರೈತಪರವಾದ ಹೊಸ ವರ್ಷದ ನಿರ್ಣಯಗಳನ್ನು ಕೈಗೊಳ್ಳೋಣ ಬನ್ನಿ ಎಂದು ಯುವಜನರು ಕರೆ ನೀಡಿದ್ದಾರೆ.

1. ಅನ್ನದಾತರು ಬೀದಿಗಿಳಿಯಲು ಕಾರಣವೇನೆಂದು ಸಮಗ್ರವಾಗಿ ಎಲ್ಲ ಆಯಾಮಗಳಿಂದ ಅಧ್ಯಯನ ಮಾಡುತ್ತೇನೆ. ಸಂಪೂರ್ಣ ವಿಚಾರ ತಿಳಿದುಕೊಳ್ಳುತ್ತೇನೆ.
2. ರೈತರ ಹಿತಾಸಕ್ತಿಯನ್ನು ಮಣ್ಣುಪಾಲು ಮಾಡಿ, ಚಿನ್ನದ ಅರಮನೆಗಳಲ್ಲಿ ಮೆರೆಯುತ್ತಿರುವ ರಿಲಾಯನ್ಸ್ ಅಂಬಾನಿಗಳಂತಹ ಕಾರ್ಪೊರೇಟ್ ಕಂಪೆನಿಗಳ ಕುರಿತ ಸತ್ಯಾಂಶಗಳನ್ನು ತಿಳಿದುಕೊಳ್ಳುತ್ತೇನೆ.
3. ನನಗೆ ಪರಿಚಿತರಾಗಿರುವ 10 ಜನರಿಗೆ ಈ ಎಲ್ಲ ವಿಚಾರದ ಕುರಿತಾಗಿ ಮಾಹಿತಿ ನೀಡುತ್ತೇನೆ.
4. ಹೊಸ ವರ್ಷದಲ್ಲಾದರೂ ಹೋರಾಡುತ್ತಿರುವ ರೈತರು ಹಿಂತಿರುಗಿ ಹೋಗಿ ತಮ್ಮ ಕುಟುಂಬಗಳನ್ನು ಸುರಕ್ಷಿತವಾಗಿ ಸೇರುವಂತೆ ರೈತರ ಹಕ್ಕೊತ್ತಾಯಗಳನ್ನು ಈಡೇರಿಸಬೇಕೆಂಬ ಆಗ್ರಹವನ್ನು ಯಾವ ರೀತಿಯಲ್ಲಿ ಸಾಧ್ಯವೋ ಹಾಗೆ ಸರ್ಕಾರಕ್ಕೆ ಮುಟ್ಟಿಸುತ್ತೇನೆ.
5. ದೆಹಲಿಯ ಹೋರಾಟನಿರತ ರೈತರು ನೀಡಿರುವ ಕರೆಗೆ ಓಗೊಡುತ್ತಾ ಜಿಯೋ ಸಿಮ್ ಗಳನ್ನೂ, ರಿಲಾಯನ್ಸ್ ಉತ್ಪನ್ನಗಳನ್ನೂ ತಿರಸ್ಕರಿಸುತ್ತೇನೆ ಎಂಬ 5 ನಿರ್ಣಯಗಳನ್ನು ಈ ಯುವಜನರು ಕೈಗೊಂಡಿದ್ದಾರೆ.

ದೇಶಪ್ರೇಮಿ ಯುವಾಂದೋಲನದ “ಹಳ್ಳಿಗಳಿಗೆ ವಿದ್ಯಾರ್ಥಿ-ಯುವಜನರ ಸೈಕಲ್ ಜಾಥಾ” ಗೆ ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಮಲ್ಲಯ್ಯನವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಲವಾರು ರೈತ ಮುಖಂಡರು, ದೇಶಪ್ರೇಮಿ ಯುವಾಂದೋಲನದ ಸರೋವರ್ ಬೆಂಕಿಕೆರೆ, ಮನೋಜ್, ಪುಷ್ಪಲತಾ, ರವಿ, ರಾಜಶೇಖರ್ ಅಂಗಡಿ, ಬಸವರಾಜ್, ಮಮತ ಇದ್ದರು.

ಜಾಥಾ ಚಾಲನೆ ಹಾಗೂ ಸಭೆಯ ನಂತರ ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ದೇಶಪ್ರೇಮಿ ಯುವಾಂದೋಲನ ತಂಡ ಕರಪತ್ರಗಳನ್ನು ಹಂಚಿ ಪ್ರಚಾರ ನಡೆಸಿತು. ನಂತರ ಚನ್ನಮಾನಹಳ್ಳಿ ಮತ್ತು ಚಿಕ್ಕೇನಹಳ್ಳಿಯಲ್ಲಿ ಮನೆ ಮನೆಗೂ ತೆರಳಿದ ಯುವಜನರು ಜನರಿಗೆ ರೈತ ಹೋರಾಟ ಮಾಹಿತಿ ನೀಡುತ್ತಿದ್ದಾರೆ.

ಇನ್ನೊಂದೆಡೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸೈಕಲ್ ಜಾಥ ಉದ್ಘಾಟನೆಗೊಂಡು ಕಂಪ್ಲಿ ಕಡೆ ಹೊರಟಿದೆ. ಜಾಥಾಗೆ ಚಿಂತಕರಾದ ಬಿ.ಪೀರ್‌ಭಾಷಾ, ಹೋರಾಟಗಾರರಾದ ಡಿ.ಎಚ್ ಪೂಜಾರ್ ಚಾಲನೆ ನೀಡಿದರು. ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂತೋಷ್ ಎಚ್. ಎಂ, ರಾಜೇಂದ್ರ, ಗುರುಬಸವ, ಮರಿಸ್ವಾಮಿ, ದುರ್ಗೇಶ್, ಶರಣಬಸವ ಮತ್ತಿತರರು ಜಾಥದಲ್ಲಿದ್ದಾರೆ.


ಇದನ್ನೂ ಓದಿ: ರಿಲಾಯನ್ಸ್ ಬಹಿಷ್ಕರಿಸಲು ಕರೆ: ರೈತ ಹೋರಾಟ ಬೆಂಬಲಿಸಿ ಸಿಂಧನೂರಿನಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...