Homeಮುಖಪುಟಎಂಎಸ್‌ಪಿ ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ನಿವೃತ್ತಿ: ಹರಿಯಾಣ ಸಿಎಂ ಖಟ್ಟರ್

ಎಂಎಸ್‌ಪಿ ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ನಿವೃತ್ತಿ: ಹರಿಯಾಣ ಸಿಎಂ ಖಟ್ಟರ್

ಡಿಸೆಂಬರ್ ಅಂತ್ಯದಲ್ಲಿ ನಡೆದ ಸ್ಥಳೀಯ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮತ್ತು ಜೆಜೆಪಿ ಮೈತ್ರಿಕೂಟ ತೀವ್ರ ಮುಖಭಂಗ ಅನುಭವಿಸಿದ್ದವು.

- Advertisement -
- Advertisement -

ರೈತರಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ತೊರೆಯುತ್ತೇನೆ ಎಂಬ ತಮ್ಮ ಆಶ್ವಾಸನೆಯನ್ನು ಹರಿಯಾಣ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಖಟ್ಟರ್ ಗುರುವಾರವು ಪುನರುಚ್ಛರಿಸಿದ್ದಾರೆ. ಕೇಂದ್ರದ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸುತ್ತಿರುವ ರಾಜ್ಯದ ರೈತರಿಂದ ಪ್ರತಿಭಟನೆಗಳನ್ನು ಎದುರಿಸುತ್ತಿರುವ ಖಟ್ಟರ್, ಐದು ಸ್ಥಳೀಯ ಚುನಾವಣೆಯಲ್ಲಿ ಮೂರನ್ನು ಸೋತ ನಂತರ ಈ ಹೇಳಿಕೆ ನೀಡಿದ್ದಾರೆ.

ಹರಿಯಾಣದಲ್ಲಿ ಎಂಎಸ್‌ಪಿ ಮುಂದುವರಿಕೆಗೆ ನಾವು ಬದ್ಧರಾಗಿದ್ದೇವೆ. ಯಾರಾದರೂ ಎಂಎಸ್‌ಪಿ ವ್ಯವಸ್ಥೆಯನ್ನು ಕೊನೆಗಾಣಿಸಲು ಪ್ರಯತ್ನಿಸಿದರೆ ತಾನು ರಾಜಕೀಯ ತೊರೆಯುತ್ತೇನೆ ಎಂದು ಅವರು ಹೇಳಿದ್ದಾಗಿ ಎಎನ್‌ಐ ಉಲ್ಲೇಖಿಸಿದೆ.

ಇದನ್ನೂ ಓದಿ: ಹರಿಯಾಣ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ಮೈತ್ರಿಕೂಟಕ್ಕೆ ಭಾರಿ ಮುಖಭಂಗ

ಈ ಹೇಳಿಕೆಯನ್ನು ಸ್ಥಳೀಯ ಸಂಸ್ಥೆ ಚುನಾವಣೆಗೂ ಮೊದಲು ಕೂಡಾ ಖಟ್ಟರ್ ನೀಡಿದ್ದರು. ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲ ಕೂಡ, ಎಂಎಸ್‌ಪಿ ವ್ಯವಸ್ಥೆಯನ್ನು ರದ್ದು ಮಾಡುವುದಿಲ್ಲ ಎಂದು ಪ್ರತಿಭಟನಾನಿರತ ರೈತರಿಗೆ ಆಶ್ವಾಸನೆ ನೀಡುತ್ತಾ ಬಂದಿದ್ದಾರೆ. ನಾನು ಅಧಿಕಾರದಲ್ಲಿರುವವರೆಗೆ ಎಂಎಸ್‌ಪಿ ಉಳಿಸಿಕೊಳ್ಳಲು ಯತ್ನಿಸುತ್ತೇನೆ. ಅದು ಸಾಧ್ಯವಾಗದೇ ಹೋದರೆ ಅಂದೇ ಹುದ್ದೆಯಿಂದ ಕೆಳಗಿಳಿಯುತ್ತೇನೆ ಎಂದು ಅವರು ಹೇಳುತ್ತ ಬಂದಿದ್ದರು.

ಮೂರರಲ್ಲಿ ಎರಡು ಸೋಲು ಹಿಸಾರ್‌ನ ಉಕಲಾನಾ ಮತ್ತು ರೆವರಿಯ ಧರುಹೆರಾಗಳಲ್ಲಿ ಘಟಿಸಿದ್ದು, ಇವೆರಡೂ ದುಷ್ಯಂತ್ ಅವರ ಪ್ರಾಬಲ್ಯದ ಪ್ರದೇಶಗಳಾಗಿವೆ. ಬಿಜೆಪಿ ಮತ್ತು ಮಿತ್ರಪಕ್ಷ ಜೆಜೆಪಿ ಸೊನಾಪತ್ ಮತ್ತು ಅಂಬಾಲಾದಲ್ಲೂ ಚುನಾವಣೆಯಲ್ಲಿ ಸೋಲು ಅನುಭವಿಸಿವೆ.

ಇದನ್ನೂ ಓದಿ: ರೈತ ಹೋರಾಟ: ರಾಜಸ್ಥಾನ-ಹರಿಯಾಣ ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗ್ಗಿದ ರೈತರು

ಅಂಬಾಲಾದ ಬಿಜೆಪಿ ಶಾಸಕ ಅಸೀಮ್ ಗೊಯಲ್, ಈ ಚುನಾವಣೆಯಲ್ಲಿ ಎಲ್ಲರೂ ಬಿಜೆಪಿ ವಿರುದ್ಧ ಒಂದಾಗಿದ್ದರು ಎಂದು ಬುಧವಾರ ಹೇಳಿದ್ದಲ್ಲದೇ, ರೈತರ ಪ್ರತಿಭಟನೆ ಪಕ್ಷಕ್ಕೆ ಹಿನ್ನಡೆ ಮಾಡಿದೆ ಎಂದು ಒಪ್ಪಿಕೊಂಡಿದ್ದರು. ಸರ್ಕಾರ ಒಳ್ಳೆಯ ಕೆಲಸ ಮಾಡಿದಾಗ ಅದನ್ನು ತಡೆಯಲು ವಿಪಕ್ಷದವರು ಕೈ ಜೋಡಿಸುತ್ತಾರೆ. ಹರಿಯಾಣದಲ್ಲಿ ಇದೇ ಸಂಭವಿಸುತ್ತಿದೆ. ವಿಪಕ್ಷಗಳ ಅಜೆಂಡಾ ಅರ್ಥರಹಿತವಾದದ್ದು ಮತ್ತು ಅವರಿಗೆ ಯಾವುದೇ ಗುರಿಯೂ ಇಲ್ಲ. ಬಿಜೆಪಿ ತಡೆಯುವುದೇ ಅವರ ಉದ್ದೇಶ. ಮೊದಲು ಬಿಜೆಪಿ ತಡೆಯೋಣ, ನಂತರ ನಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳೋಣ ಎಂಬ ನಿಲುವನ್ನು ಅವರು ಹೊಂದಿದ್ದಾರೆ ಎಂದು ಅಸೀಮ್ ಹೇಳಿದ್ದರು.

ಹೊಸ ಕಾನೂನುಗಳಿಂದ ದೊಡ್ಡ ಕಾರ್ಪೋರೇಟ್ ಕಂಪನಿಗಳು ಸಾಂಪ್ರದಾಯಿಕ ಬೆಳೆ ಮಾರುಕಟ್ಟೆಗಳನ್ನು ನಾಶ ಮಾಡಿ ತಮ್ಮನ್ನು ಶೋಷಿಸಲಿವೆ ಎಂದು ರೈತರು ಆತಂಕಗೊಂಡಿದ್ದಾರೆ. ಹೊಸ ಕಾಯ್ದೆಗಳು ಈಗಿರುವ ವ್ಯವಸ್ಥೆಯನ್ನು ಕೊನೆಗಾಣಿಸುವ ಉದ್ದೇಶ ಹೊಂದಿಲ್ಲ, ಬದಲಿಗೆ ರೈತರಿಗೆ ತಮ್ಮ ಬೆಳೆ ಮಾರಲು ಹೆಚ್ಚಿನ ಅವಕಾಶ ನೀಡುತ್ತವೆ ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸುತ್ತ ಬಂದಿದೆ. ಬುಧವಾರ ಕೇಂದ್ರ ಮತ್ತು ರೈತರ ನಡುವೆ ಆರನೇ ಸುತ್ತಿನ ಮಾತುಕತೆ ಯಶಸ್ವಿಯಾಗಿಲ್ಲ.

ಇದನ್ನೂ ಓದಿ: ಹರಿಯಾಣ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ರೈತರ ಮೇಲೆ ದಾಖಲಾಯ್ತು ಗಲಭೆ, ಕೊಲೆಯತ್ನದ ಕೇಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...