Homeಮುಖಪುಟಹರಿಯಾಣ ಸ್ಥಳೀಯ ಸಂಸ್ಥೆ ಸೋಲಿಗೆ ಬಿಜೆಪಿ ಮುಖಂಡ ನೀಡಿದ ಕಾರಣವೇನು ಗೊತ್ತೆ?

ಹರಿಯಾಣ ಸ್ಥಳೀಯ ಸಂಸ್ಥೆ ಸೋಲಿಗೆ ಬಿಜೆಪಿ ಮುಖಂಡ ನೀಡಿದ ಕಾರಣವೇನು ಗೊತ್ತೆ?

- Advertisement -
- Advertisement -

ಹರಿಯಾಣದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳು ಸೋಲು ಕಂಡಿದ್ದವು. ಹರಿಯಾಣದ ಐದು ಮುನ್ಸಿಪಾಲ್ಟಿ ಚುನಾವಣೆಯಲ್ಲಿ ಮೂರರಲ್ಲಿ ಅನುಭವಿಸಿದ ಸೋಲಿಗೆ ಬಿಜೆಪಿ ವಿವರಣೆ ನೀಡಿದೆ. ಡಿಸೆಂಬರ್ 25, 26 ಮತ್ತು 27 ರಜಾದಿನಗಳಾಗಿದ್ದವು. ಆಗ ನಮ್ಮ ವೋಟ್‌ಬ್ಯಾಂಕ್‌ಗೆ ಸೇರಿದ ಮತದಾರರು ಲಾಂಗ್‌ಟ್ರಿಪ್ ಮೇಲೆ ಹೋಗಿದ್ದರಿಂದ ಮತದಾನದಲ್ಲಿ ಭಾಗವಹಿಸಿಲ್ಲ. ಹೀಗಾಗಿ ಹಿನ್ನಡೆಯಾಗಿದೆ ಎಂದು ಬಿಜೆಪಿ ವಿವರಣೆ ನೀಡಿದೆ!

ಹರಿಯಾಣ ಬಿಜೆಪಿ ವಕ್ತಾರ ಸಂಜಯ್ ಶರ್ಮಾ ವಿವರಣೆ ನೀಡಿದ್ದು “‘ಡಿಸೆಂಬರ್ 25, 26 ಮತ್ತು 27 ರಜಾದಿನಗಳಾಗಿದ್ದವು. ನಿಮಗೆ ಗೊತ್ತಲ್ಲ, ಅದು ವರ್ಷಾಂತ್ಯದ ಸಮಯ ಮತ್ತು ಈ ವೇಳೆ ಸಾಲು ರಜೆ ಬರುವುದರಿಂದ ಜನರು ದೂರದ ಸ್ಥಳಗಳಿಗೆ ಟ್ರಿಪ್ ಹೋಗುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ದುರದೃಷ್ಟವಶಾತ್, ಹೀಗೆ ರಜೆ ಕಳೆಯಲು ಹೋದವರಲ್ಲಿ ಅಧಿಕ ಜನರು ಬಿಜೆಪಿಯ ವೋಟ್‌ಬ್ಯಾಂಕ್‌ಗೆ ಸೇರಿದವರು. ಹೀಗಾಗಿ ಮತದಾನದಲ್ಲಿ ಅವರು ಭಾಗವಹಿಸದೇ ಇದ್ದುದೇ ನಮ್ಮ ಸೋಲಿಗೆ ಕಾರಣ” ಎಂದಿದ್ದಾರೆ.

ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಈಗಷ್ಟೇ ಒಂದು ವರ್ಷ ಮುಗಿಸಿದ ಸಂದರ್ಭದಲ್ಲಿ ಮತ್ತು ರೈತರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುವ ಸಮಯದಲ್ಲೇ ಹರಿಯಾಣ ಬಿಜೆಪಿ ಹಿನ್ನಡೆ ಅನುಭವಿಸಿ ಮುಖಭಂಗಕ್ಕೆ ಒಳಗಾಗಿದೆ.

ಬಿಜೆಪಿಯ ಮಿತ್ರ ಪಕ್ಷ ಜನತಾ ಜನ್‌ನಾಯಕ್ ಪಾರ್ಟಿ (ಜೆಜೆಪಿ) ಸೋನಾಪತ್ ಮತ್ತು ಅಂಬಾಲಾದ ಮೇಯರ್ ಚುನಾವಣೆಯಲ್ಲಿ ಭಾರಿ ಸೋಲು ಕಂಡಿದೆ. ಮೂರರಲ್ಲಿ ಎರಡು ಸೋಲುಗಳು ಉಪ ಮುಖ್ಯಮಂತ್ರಿ ಮತ್ತು ಜೆಜೆಪಿ ನಾಯಕ ದುಷ್ಯಂತ್ ಸಿಂಗ್ ಪ್ರಾಬಲ್ಯವಿರುವ ಪ್ರದೇಶಗಳಾಗಿವೆ ಮತ್ತು ದುಷ್ಯಂತ್‌ಗೆ ಈ ಹಿಂದೆ ರೈತರು ದೊಡ್ಡ ಸಂಖ್ಯೆಯಲ್ಲಿ ಬೆಂಬಲಿಸಿದ್ದರು.

ಗೃಹ ಸಚಿವ ಅನಿಲ್ ವಿಜ್ ಜಿಲ್ಲೆಯಲ್ಲಿ ಬರುವ, ಬಿಜೆಪಿ ಶಾಸಕ ಮತ್ತು ಬಿಜೆಪಿ ಸಂಸದನ ವ್ಯಾಪ್ತಿಗೆ ಒಳಪಡುವ ಅಂಬಾಲಾದಲ್ಲಿ ಬಿಜೆಪಿ ಸೋತಿದ್ದಕ್ಕೆ ರೈತರು ಸಿಹಿ ಹಂಚಿ, ಹಾಡಿ, ಕುಣಿದು ಸಂಭ್ರಮಿಸಿದ್ದರು.
ಅಂಬಾಲಾದ ಬಿಜೆಪಿ ಶಾಸಕ ಅನಿಲ್ ಅಸೀಮ್, ‘ಇಲ್ಲಿ ಎಲ್ಲರೂ ಬಿಜೆಪಿ ವಿರುದ್ಧ ಒಂದಾಗಿದ್ದರು. ಸರ್ಕಾರ ಒಳ್ಳೆಯ ಕೆಲಸ ಮಾಡಿದಾಗ ಅದನ್ನು ತಡೆಯಲು ಎಲ್ಲರೂ ಕೈ ಜೋಡಿಸುತ್ತಾರೆ. ಹರಿಯಾಣದಲ್ಲಿ ಇದೇ ಸಂಭವಿಸುತ್ತಿದೆ. ಅವರ ಅಜೆಂಡಾ ಅರ್ಥರಹಿತವಾದದ್ದು ಮತ್ತು ಅವರಿಗೆ ಯಾವುದೇ ಗುರಿಯೂ ಇಲ್ಲ. ಬಿಜೆಪಿ ತಡೆಯುವುದೇ ಅವರ ಉದ್ದೇಶ. ಮೊದಲು ಬಿಜೆಪಿ ತಡೆಯೋಣ, ನಂತರ ನಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳೋಣ ಎಂಬ ನಿಲುವನ್ನು ಹೊಂದಿದ್ದಾರೆ’ ಎಂದು ಹೇಳಿದ್ದಾರೆ.

ಆದರೆ, ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಪಕ್ಷಕ್ಕೆ ಹಿನ್ನಡೆ ಮಾಡಿದೆ ಎಂದು ಅಸೀಂ ಒಪ್ಪಿಕೊಂಡಿದ್ದಾರೆ.


ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...