Homeಮುಖಪುಟಷೇರು-ವ್ಯಾಪಾರ ನಿಯಮ ಉಲ್ಲಂಘನೆ: ಅಂಬಾನಿಗೆ 40 ಕೋಟಿ ದಂಡ ವಿಧಿಸಿದ SEBI

ಷೇರು-ವ್ಯಾಪಾರ ನಿಯಮ ಉಲ್ಲಂಘನೆ: ಅಂಬಾನಿಗೆ 40 ಕೋಟಿ ದಂಡ ವಿಧಿಸಿದ SEBI

ಹಣ ಮತ್ತು ಭವಿಷ್ಯದ ಮಾರುಕಟ್ಟೆಗಳೆರಡರಲ್ಲೂ ರಿಲಯನ್ಸ್ ಪೆಟ್ರೋಲಿಯಂ ಲಿಮಿಟೆಡ್‌ನಲ್ಲಿನ ಷೇರುಗಳ ಮಾರಾಟದಿಂದ ಅನಗತ್ಯ ಲಾಭಗಳಿಸಲು ರಿಲಯನ್ಸ್ ಮತ್ತು ಅದರ ಏಜೆಂಟರು ಕಾರ್ಯ ನಿರ್ವಹಿಸಿದ್ದಾರೆ- SEBI

- Advertisement -
- Advertisement -

ಷೇರು-ವ್ಯಾಪಾರ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಉದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ಗೆ ಒಟ್ಟು 400 ಮಿಲಿಯನ್ (40 ಕೋಟಿ) ದಂಡವನ್ನು ಪಾವತಿಸಲು ಭಾರತದ ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಆದೇಶಿಸಿದೆ. 13 ವರ್ಷಗಳ ಹಿಂದೆ ಅಂಬಾನಿ ವ್ಯಾಪಾರಿ ನಿಯಮಗಳನ್ನು ಉಲ್ಲಂಘಿಸಿದ್ದರು ಎಂದು ಸಂಸ್ಥೆಯು ಹೇಳಿದೆ.

“ಹಣ ಮತ್ತು ಭವಿಷ್ಯದ ಮಾರುಕಟ್ಟೆಗಳೆರಡರಲ್ಲೂ ರಿಲಯನ್ಸ್ ಪೆಟ್ರೋಲಿಯಂ ಲಿಮಿಟೆಡ್‌ನಲ್ಲಿನ ಷೇರುಗಳ ಮಾರಾಟದಿಂದ ಅನಗತ್ಯ ಲಾಭಗಳಿಸಲು ರಿಲಯನ್ಸ್ ಮತ್ತು ಅದರ ಏಜೆಂಟರು ಕಾರ್ಯ ನಿರ್ವಹಿಸಿದ್ದಾರೆ” ಎಂದು Securities and Exchange Board of India (SEBI) ಜನವರಿ 1 ರ ತನ್ನ ಆದೇಶದಲ್ಲಿ ಹೇಳಿದೆ.

ರಿಲಯನ್ಸ್ ಇಂಡಸ್ಟ್ರೀಸ್ 400 ಮಿಲಿಯನ್ ರೂಪಾಯಿಗಳನ್ನು ಪಾವತಿಸಬೇಕಾಗಿದ್ದು, ಈ ಅಕ್ರಮ ವಹಿವಾಟಿಗೆ ಅದರ ಅಧ್ಯಕ್ಷ ಅಂಬಾನಿಯವರೇ ಹೊಣೆಗಾರರಾಗಿದ್ದಾರೆ ಎಂದು SEBI ಹೇಳಿದೆ.

ಇದನ್ನೂ ಓದಿ: ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ರಿಲಯನ್ಸ್ ವಕ್ತಾರರು ಈ ಆದೇಶದ ಬಗ್ಗೆ ತಕ್ಷಣಕ್ಕೆ ಪ್ರತಿಕ್ರಿಯಿಸಿಲ್ಲ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ರಿಲಯನ್ಸ್ ಸಂಸ್ಥೆಯು, ಪಟ್ಟಿಮಾಡದ 12 ವ್ಯಾಪಾರ ಸಂಸ್ಥೆಗಳ ಜೊತೆಗೆ ರಿಲಯನ್ಸ್ ಪೆಟ್ರೋಲಿಯಂನ ಷೇರುಗಳಲ್ಲಿ ಕಾನೂನುಬಾಹಿರ ವಹಿವಾಟು ನಡೆಸಿದೆ ಎಂದು ಹಲವು ವರ್ಷಗಳ ತನಿಖೆಯ ನಂತರ 2017 ರಲ್ಲಿ SEBI ಕಂಡುಕೊಂಡಿದೆ.

ರಿಲಯನ್ಸ್ ಪೆಟ್ರೋಲಿಯಂ 2009 ರಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌ನೊಂದಿಗೆ ವಿಲೀನಗೊಂಡಿತು. ಪೆಟ್ರೋಲಿಯಂ ಘಟಕವು ಅಂಬಾನಿ ಒಡೆತನದ ಸಂಸ್ಥೆಯ ಪಟ್ಟಿಮಾಡಿದ ಅಂಗಸಂಸ್ಥೆಯಾಗಿದೆ.


ಇದನ್ನೂ ಓದಿ: ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...