Homeಚಳವಳಿಶ್ರದ್ಧಾಂಜಲಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರ ದನಿ ಹಮೀದಾ ಬೀ...

ಶ್ರದ್ಧಾಂಜಲಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರ ದನಿ ಹಮೀದಾ ಬೀ…

ಮಂಗಳವಾರ ತಮ್ಮ 74ನೆ ವರ್ಷದಲ್ಲಿ ನಿಧನರಾದ ಹಮೀದಾ ಬೀ ಖುದ್ದು ಅನಿಲ ದುರಂತದ ಸಂತ್ರಸ್ತೆಯಾಗಿದ್ದು, 30 ವರ್ಷಗಳ ಕಾಲ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಹೋರಾಡಿದವರು.

- Advertisement -
- Advertisement -

ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಉದ್ಯೋಗ್ ಸಂಘಟನ್ (ಬಿಜಿಪಿಎಂಯುಎಸ್) ಸಂಘಟನೆಯ ಅಧ್ಯಕ್ಷೆ ಮತ್ತು ದಣಿವರಿಯದ ಆಕ್ಟಿವಿಸ್ಟ್ ಆಗಿದ್ದ ಹಮೀದಾ ಬೀ ಡಿಸೆಂಬರ್ 29 ರಂದು ನಿಧನರಾಗಿದ್ದಾರೆ.
‘ಆಕೆಯ ಸಾವಿಗೆ ಕಾರಣ ಮುದಿ ವಯಸ್ಸಲ್ಲ; ಯುನಿಯನ್ ಕಾರ್ಬೈಡ್ ಪ್ಲ್ಯಾಂಟ್’ ಎನ್ನುತ್ತಾರೆ ಹಮೀದಾ ಬೀ ಅವರ ಬಹುಕಾಲದ ಗೆಳತಿ ಮತ್ತು ಬಿಜಿಪಿಎಂಯುಎಸ್ ಸದಸ್ಯೆ ರಯಿಸಾ ಬೀ.

ಸ್ವತಃ ಆ ದುರಂತದ ಸಂತ್ರಸ್ತೆಯಾಗಿದ್ದ ಹಮೀದಾ, ಮನುಷ್ಯ ನಿರ್ಮಿತ ಆ ದುರಂತದಿಂದ ಸಂತ್ರಸ್ತರಾದವರನ್ನು ಒಗ್ಗೂಡಿಸಿ ಭೋಪಾಲದ ಬೀದಿ-ರಸ್ತೆಗಳಲ್ಲಿ ಪ್ರತಿಭಟನೆಗಳನ್ನು ನಡೆಸುತ್ತ, ಸಂತ್ರಸ್ತರ ಹಕ್ಕುಗಳಿಗಾಗಿ ಹೋರಾಡಿದರು. ಸಂತ್ರಸ್ತರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಮತ್ತು ಪರಿಹಾರ ಲಭಿಸಬೇಕೆಂಬ ಬೇಡಿಕೆಗಳನ್ನು ಮುನ್ನೆಲೆಗೆ ತಂದಿದ್ದರು. ಇಂತಹ ಹೋರಾಟದ ಪರಿಣಾಮವಾಗಿ ಅಷ್ಟಿಷ್ಟಾದರೂ ನ್ಯಾಯ ದೊರಕಿದೆ. ಆದರೆ ಈ ಹೋರಾಟ ಮುಂದುವರೆದೇ ಇದೆ.

‘ಸಮಾಜದ ಅಶಕ್ತ ವಿಭಾಗಗಳಿಗೆ ಸೇರಿದ ಅನಿಲ ದುರಂತದ ಸಂತ್ರಸ್ತರಿಗೇಕೆ ಒಂದು ಸರಿಯಾದ ಬದುಕು ಇರಬಾರದು?’ -ಸಾಯುವ ತಿಂಗಳು ಮೊದಲು ಅವರ ಮಗಳ ಮನೆಯಲ್ಲಿ ಕಟ್ಟಿಗೆ ಮಂಚದಲ್ಲಿ ಮಲಗಿದ್ದ ಅವರು ಈ ಬರಹಗಾರರನ್ನು ಕೇಳಿದ್ದರು.

ಭೋಪಾಲ್‌ನಲ್ಲಿ ಜನಿಸಿದ ಹಮೀದಾ ಬೀ ಅವರ ಪ್ರತಿಭಟನೆ ಹೋರಾಟ ಸುದೀರ್ಘವಾದದ್ದು ಮತ್ತು ಸ್ಥಿರವಾದದ್ದು. ದುರಂತದಲ್ಲಿ ಅವರ ಸಂಬಂಧಿಗಳನೇಕರು ಅಸು ನೀಗಿದ್ದಾರೆ.

ಜನವರಿ 23, 1986ರಿಂದ ಪ್ರತಿ ಶನಿವಾರ (ಲಾಕ್‌ಡೌನ್ ಶುರುವಾಗುವವರೆಗೂ) ಬಿಜಿಪಿಎಂಯುಎಸ್ ಸಭೆಗಳಿಗೆ ಹಾಜರಾಗಲು ಇಬ್ರಾಹಿಂಪುರದ ತಮ್ಮ ಮನೆಯಿಂದ ಸೆಂಟ್ರಲ್ ಲೈಬ್ರರಿ ಸಮೀಪದ ಪಾರ್ಕಿಗೆ ಅವರು ನಡೆದೇ ಹೋಗುತ್ತಿದ್ದರು. ಅಲ್ಲಿ ಸಂತ್ರಸ್ತರ ಸಮಸ್ಯೆಗಳಿಗೆ ದನಿಯಾಗುತ್ತಿದ್ದ ಅವರು, ಹಕ್ಕು ಪಡೆಯಲು ಮುಂದೆ ಮಾಡಬೇಕಾದ ಹೋರಾಟದ ಬಗ್ಗೆ ಅವರನ್ನು ಸಂಘಟಿಸುತ್ತಿದ್ದರು.

ವಾರದ ಉಳಿದ ದಿನಗಳಂದು ಬಿಜಿಪಿಎಂಯುಎಸ್‌ನ ಸ್ವಾಭಿಮಾನ ಕೇಂದ್ರದಲ್ಲಿ ಸಂತ್ರಸ್ತ ಮಹಿಳೆಯರಿಗೆ ಹೊಲಿಗೆ, ಹೆಣಿಕೆ ತರಹದ ಜೀವನೋಪಾಯದ ಕೌಶಲ್ಯಗಳನ್ನು ಕಲಿಸುತ್ತಿದ್ದರು.

ಹೋರಾಟದ ಮೂಲಕ ಮತ್ತು ನ್ಯಾಯಾಲಯದ ಮೂಲಕ ಸಂತ್ರಸ್ತರಿಗೆ ಎಷ್ಟು ಸಾಧ್ಯವೋ ಅಷ್ಟು ನೆರವು-ಪರಿಹಾರ, ಚಿಕಿತ್ಸೆ ಸಿಗುವಂತೆ ಹಮೀದಾ ಶ್ರಮಿಸಿದರು. ಬಿಜಿಪಿಎಂಯುಎಸ್ ಸಂಘಟನೆಯ ಸಂಚಾಲಕರಾಗಿ ಸಂತ್ರಸ್ತರ ಹೋರಾಟಕ್ಕೆ ಒಂದು ದೃಢ ಸಂಕಲ್ಪ ರೂಪಿಸಿದ್ದ ಅಬ್ದುಲ್ ಜಬ್ಬಾರ್ ನಿಧನದ ನಂತರ ಹಮೀದಾರನ್ನು ಅಧ್ಯಕ್ಷೆಯನ್ನಾಗಿ ಸಂತ್ರಸ್ತರು ನೇಮಿಸಿಕೊಂಡಿದ್ದರು.

ಅವರ ಪತಿ ಇದ್ರಿಸ್ ಭಾಯ್ ಕೂಡ ಈ ಹೋರಾಟಕ್ಕೆ ಜೀವನ ಮೀಸಲಿಟ್ಟು ನಿಧನರಾದರು. ಹೋರಾಟಗಾರ್ತಿಯಾಗುವ ಮೊದಲು ಸಾಮಾನ್ಯ ಗೃಹಿಣಿಯಾಗಿದ್ದ ಅವರು ಸಂಪ್ರದಾಯಸ್ಥ ವ್ಯವಸ್ಥೆಯ ನಿರ್ಬಂಧಗಳಲ್ಲೇ ಬದುಕಿದ್ದರು. ಆದರೆ ಆ ಮನುಷ್ಯ ನಿರ್ಮಿತ ದುರಂತ ಉಂಟು ಮಾಡಿದ ಆಘಾತ, ನೋವು ಅವರನ್ನು ಸಂತ್ರಸ್ತರ ದನಿಯಾಗುವಂತೆ ಪ್ರೇರೆಪಿಸಿತು.

-ಅನೂಪ್ ದತ್ತಾ

(ಬರಹ ಕೃಪೆ: ದಿ ವೈರ್)


ಇದನ್ನೂ ಓದಿ; ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...