Homeಮುಖಪುಟಪಂಜಾಬ್: 8 ಬಾರಿ ಸಂಸದರಾಗಿದ್ದ ಕಾಂಗ್ರೆಸ್‌ ನಾಯಕ ಬೂಟಾ ಸಿಂಗ್ ನಿಧನ

ಪಂಜಾಬ್: 8 ಬಾರಿ ಸಂಸದರಾಗಿದ್ದ ಕಾಂಗ್ರೆಸ್‌ ನಾಯಕ ಬೂಟಾ ಸಿಂಗ್ ನಿಧನ

ಜವಹರಲಾಲ್ ನೆಹರೂ ಅವರ ಕಾಲದಿಂದಲೂ ಕಾಂಗ್ರೆಸ್‌ನಲ್ಲಿದ್ದ ಇವರು, ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿಯವರಿಗೆ ಅಪ್ತರಾಗಿದ್ದರು. ಕಾಂಗ್ರೆಸ್ ಸಂಪುಟದಲ್ಲಿ ವಿವಿಧ ಹುದ್ದೆಗಳನ್ನು ವಹಿಸಿಕೊಂಡಿದ್ದರು

- Advertisement -
- Advertisement -

ಪಂಜಾಬ್ ಮೂಲದ ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಬೂಟಾ ಸಿಂಗ್ ಶನಿವಾರ ನಿಧನರಾಗಿದ್ದಾರೆ. ಇವರು ಇಂದಿರಾ ಗಾಂಧಿಯವರ ಸಂಪುಟದಲ್ಲಿ ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

86 ವರ್ಷದ ಬೂಟಾ ಸಿಂಗ್ ಬಿಹಾರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದು, 2007-2010 ರವರೆಗೆ ಪರಿಶಿಷ್ಟ ವರ್ಗದ ರಾಷ್ಟ್ರೀಯ ಆಯೋಗದ ಅಧ್ಯಕ್ಷರಾಗಿದ್ದರು.

ಪತ್ರಕರ್ತರಾಗಿ ತಮ್ಮ ಜೀವನವನ್ನು ಆರಂಭಿಸಿದ ದಲಿತ ಸಮುದಾಯಕ್ಕೆ ಸೇರಿದ ಬೂಟಾ ಸಿಂಗ್, ನಂತರ ಅಕಾಲಿ ದಳ ಪಕ್ಷಕ್ಕೆ ಸೇರಿದರು. ಅಕಾಲಿ ದಳ ವಿಭಜನೆಯಾದ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. 8 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಬೂಟಾ ಸಿಂಗ್, ಜವಹರಲಾಲ್ ನೆಹರೂ ಅವರ ಕಾಲದಿಂದಲೂ ಕಾಂಗ್ರೆಸ್‌ನಲ್ಲಿದ್ದು ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿಯವರಿಗೆ ಅಪ್ತರಾಗಿದ್ದರು. ಕಾಂಗ್ರೆಸ್ ಸಂಪುಟದಲ್ಲಿ ವಿವಿಧ ಹುದ್ದೆಗಳನ್ನು ವಹಿಸಿಕೊಂಡಿದ್ದರು. 1978-80 ರಲ್ಲಿ ಕಾಂಗ್ರೆಸ್‌ನ ಜನರಲ್ ಸೆಕ್ರೆಟರಿಯಾಗಿ ಕೂಡ ಕಾರ್ಯನಿರ್ವಹಿಸಿದ್ದರು. ಇಂದಿರಾ ಗಾಂಧಿಯವರ ಆಡಳಿತದಲ್ಲಿ ರಾಷ್ಟ್ರಪತಿ ಹುದ್ದೆಗೂ ಇವರ ಹೆಸರು ನಾಮ ನಿರ್ದೇಶನವಾಗಿತ್ತು.

ಇದನ್ನೂ ಓದಿ: ಹಿಂದೂಗಳು ಮಾತ್ರ ದೇಶಭಕ್ತರಾಗಲು ಸಾಧ್ಯ: ವಿವಾದಾತ್ಮಕ ಹೇಳಿಕೆ ನೀಡಿದ ಮೋಹನ್ ಭಾಗವತ್

ಇಂದಿರಾ ಗಾಂಧಿಯವರ ಆಡಳಿತದಲ್ಲಿ ಅಮೃತಸರದ ಗೋಲ್ಡನ್ ಟೆಂಪಲ್‌ ಮೇಲೆ ದಾಳಿ (ಆಪರೇಷನ್ ಬ್ಲೂ ಸ್ಟಾರ್) ನಡೆಸಲಾಗಿತ್ತು. ನಂತರ ಇದನ್ನು ಸಹಿಸಲಾರದೆ, ಇಂದಿರಾಗಾಂಧಿಯವರನ್ನು ಅವರ ಸಿಖ್ ಅಂಗರಕ್ಷಕರೇ ಕೊಂದಿದ್ದರು. ಈ ಸಂದರ್ಭದಲ್ಲಿ ಅಂದು ಕೇಂದ್ರ ಸಚಿವರಾಗಿದ್ದ ಬೂಟಾ ಸಿಂಗ್ ಕ್ಷಮೆ ಕೇಳಬೇಕಾದ ಸಂದರ್ಭ ಎದುರಾಗಿತ್ತು. ಅದರಂತೆ ಕ್ಷಮೆ ಕೇಳಿದ್ದರು. ಇದನ್ನು ಸಹಿಸಲಾರದ ಸಿಖ್ ಸಮುದಾಯ, ಪಂಜಾಬ್‌ನ ದಲಿತ ಸಿಖ್ಖರಾದ ಬೂಟಾ ಸಿಂಗ್ ಅವರಿಗೆ ಮಂದಿರಕ್ಕೆ ಬರುವವರ ಬೂಟ್ ಪಾಲಿಶ್ ಮಾಡುವ ಶಿಕ್ಷೆ ವಿಧಿಸಿತ್ತು. ಇದನ್ನೂ ಸಹ ಅವರು ಮಾಡಿದ್ದರು.


ಇದನ್ನೂ ಓದಿ: ಷೇರು-ವ್ಯಾಪಾರ ನಿಯಮ ಉಲ್ಲಂಘನೆ: ಅಂಬಾನಿಗೆ 40 ಕೋಟಿ ದಂಡ ವಿಧಿಸಿದ SEBI

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...