Homeಕರೋನಾ ತಲ್ಲಣಡ್ರೈ ರನ್ ಎಂದರೇನು?: ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಮೂರು ಲೋಪಗಳು

ಡ್ರೈ ರನ್ ಎಂದರೇನು?: ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಮೂರು ಲೋಪಗಳು

ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳ 16 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ.

- Advertisement -
- Advertisement -

ದೇಶದಲ್ಲಿ ಎರಡನೇ ಹಂತದ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ. ದೇಶದ 116 ಜಿಲ್ಲೆಗಳ 259 ಕೇಂದ್ರಗಳಲ್ಲಿ ಲಸಿಕೆ ತಾಲೀಮು ಆರಂಭವಾಗಿದೆ. ಅತಿ ದೊಡ್ಡ ಲಸಿಕೆ ವಿತರಣೆ ಕಾರ್ಯದ ಅಂಗವಾಗಿ ದೇಶದಲ್ಲಿ ಈ ತಾಲೀಮು ನಡೆಯುತ್ತಿದೆ.

ಮೊದಲ ತಾಲೀಮು, ಅಸ್ಸಾಂ, ಆಂಧ್ರಪ್ರದೇಶ, ಪಂಜಾಬ್ ಮತ್ತು ಗುಜರಾತ್ ನಾಲ್ಕು ರಾಜ್ಯಗಳಲ್ಲಿ ಡಿಸೆಂಬರ್ 28, 29 ರಂದು ನಡೆದಿದೆ. ಈ ಪ್ರಯೋಗದಲ್ಲಿ ಮೂರು ಪ್ರಮುಖ ಲೋಪಗಳು ಕಂಡು ಬಂದಿದ್ದು, ಅವುಗಳನ್ನು ಸರಿಪಡಿಸುವ ಕೆಲಸ ಎರಡನೇ ಹಂತದ ತಾಲೀಮಿನಲ್ಲಿ ನಡೆದಿದೆ.

ಡ್ರೈ ರನ್ ಎಂದರೇನು?

ಲಸಿಕೆ ಹೇಗೆ ಕೊಡಬೇಕೆಂದು ಪೂರ್ವತಯಾರಿ ನಡೆಸಿ ತಾಲೀಮು ನಡೆಸುವುದನ್ನು ಡ್ರೈ ರನ್ ಎನ್ನುತ್ತಾರೆ. ಲಸಿಕೆ ತಾಲೀಮಿನಲ್ಲಿ ನೈಜ್ಯ ಲಸಿಕೆಯನ್ನು ಹೊರತು ಪಡಿಸಿ ಉಳಿದೆಲ್ಲಾ ಲಸಿಕೆ ವಿತರಣೆ ಯೋಜನೆಯ ಎಲ್ಲ ಪ್ರಕ್ರಿಯೆಗಳು ನಡೆಯಲಿದೆ. ಲಸಿಕೆ ಸಂಗ್ರಹಣೆ ವ್ಯವಸ್ಥೆ, ದಾಖಲೆಗಳ ಪರಿಶೀಲನೆ, ಲಸಿಕೆ ಸಾಗಣಿಕೆ, ಭದ್ರತೆ, ಮೆಲಧಿಕಾರಿಗಳಿಗೆ ವರದಿ ಒಪ್ಪಿಸುವುದು. ಲಸಿಕೆ ವಿತರಣೆಯಲ್ಲಿ ಉಂಟಾಗುವ ಲೋಪದೋಷಗಳನ್ನು ಪರೀಕ್ಷಿಸಲು ಈ ಡ್ರೈ ರನ್ ನಡೆಸಲಾಗುತ್ತಿದೆ.

ಇದನ್ನೂ ಓದಿ: ಭಾರತದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಬಳಕೆಗೆ ಹಸಿರು ನಿಶಾನೆ

ಲಸಿಕೆ ತಾಲೀಮು ನಡೆಸಲು ಸುಮಾರು 96,000 ವ್ಯಾಕ್ಸಿನೇಟರ್‌ಗಳಿಗೆ ತರಬೇತಿ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಪೈಕಿ 2,360 ಮಂದಿಗೆ ರಾಷ್ಟ್ರೀಯ ತರಬೇತುದಾರರ ತರಬೇತಿ ಕೇಂದ್ರದಲ್ಲಿ ಮತ್ತು 57,000 ಕ್ಕೂ ಹೆಚ್ಚು ಜನರಿಗೆ ಜಿಲ್ಲಾ ಮಟ್ಟದಲ್ಲಿ 719 ಜಿಲ್ಲೆಗಳಲ್ಲಿ ತರಬೇತಿ ನೀಡಲಾಗಿದೆ.

ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳ 16 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ. ಜಿಲ್ಲಾ ಮಟ್ಟದಲ್ಲಿ ಒಂದು ಕೇಂದ್ರ, ತಾಲೂಕು ಮಟ್ಟದಲ್ಲಿ ಒಂದು ಮತ್ತು ಗ್ರಾಮೀಣ ಮಟ್ಟದಲ್ಲಿ ಒಂದೊಂದು ಪ್ರಾಥಮಿಕ ಕೇಂದ್ರಗಳಲ್ಲಿ ಪ್ರಯೋಗ ನಡೆಯಲಿದೆ.

ಇದನ್ನೂ ಓದಿ: ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ಮೊದಲ ಲಸಿಕೆ ತಾಲೀಮು (ಡ್ರೈ ರನ್) ಅಸ್ಸಾಂ, ಆಂಧ್ರಪ್ರದೇಶ, ಪಂಜಾಬ್ ಮತ್ತು ಗುಜರಾತ್ ರಾಜ್ಯಗಳ ತಲಾ ನಾಲ್ಕು ಕೇಂದ್ರಗಳಲ್ಲಿ ನಡೆದಿತ್ತು. ಪ್ರತಿ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ಹಾಕುವ ಕಾರ್ಯಕ್ರಮ ಇದಾಗಿತ್ತು. ಅಂದರೆ 16 ಕೇಂದ್ರಗಳಲ್ಲಿ 1,600 ಜನರಿಗೆ ಲಸಿಕೆ ಹಾಕುವ ಪ್ರಯೋಗ. ಈ ಸಣ್ಣ ಪ್ರಮಾಣದ ಸಂಖ್ಯೆಯಿದ್ದರೂ ಹಲವು ಲೋಪಗಳು ಕಂಡುಬಂದಿದ್ದವು.

ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಲೋಪಗಳು:

1. ದೂರದ ಗ್ರಾಮಗಳ ಪಿನ್‌ಕೋಡ್ ಸಂಖ್ಯೆ ಕೊ-ವಿನ್ ಪ್ಲಾಟ್‌ಫಾರಂಗೆ ಸರಿಯಾಗಿ ಹೊಂದಾಣಿಕೆ ಆಗದೇ ಇದ್ದಿದ್ದು. ಕೊ-ವಿನ್  ವ್ಯವಸ್ಥೆ ಲಸಿಕಾ ಕಾರ್ಯಕ್ರಮದ ಮಹತ್ತರ ಡಿಜಿಟಲ್ ವ್ಯವಸ್ಥೆಯಾಗಿದ್ದು, ಅದು ಇಡೀ ಲಸಿಕಾ ಕಾರ್ಯಕ್ರಮವನ್ನು ಟ್ರ್ಯಾಕ್ ಮಾಡುತ್ತಿರುತ್ತದೆ. ಮೊದಲ ಡ್ರೈ ರನ್‌ನಲ್ಲಿ ಕೊ-ವಿನ್ ದೂರದ ಗ್ರಾಮಗಳ ಪಿನ್‌ಕೋಡ್ ಮ್ಯಾಪಿಂಗ್‌ನಲ್ಲಿ ವಿಫಲವಾದ ನಂತರ, ಆರೋಗ್ಯಾಧಿಕಾರಿಗಳು ಮ್ಯಾನುವಲ್ ಆಗಿ ಪಿನ್‌ಕೋಡ್ ದಾಖಲಿಸಿದ್ದರು. ಈಗ ಎರಡನೇ  ತಾಲೀಮಿನಲ್ಲಿ ಸಾಫ್ಟ್‌ವೇರ್ ಅನ್ನು ಸಂಪೂರ್ಣ ಸಜ್ಜುಗೊಳಿಸಲಾಗಿದೆ ಎನ್ನಲಾಗಿದೆ.

Image
PC: ANI

2. ಲಸಿಕೆ ನೀಡುವಾಗ ಅಥವಾ ನೀಡಿದ ನಂತರ ಸಂಭವಿಸಬಹುದಾದ ಅಹಿತಕರ ಘಟನೆ ಅಥವಾ ಅಡ್ಡ ಪರಿಣಾಮಗಳನ್ನು ಆಗಲೇ (ರಿಯಲ್ ಟೈಮ್‌ನಲ್ಲಿ) ದಾಖಲಿಸಿಕೊಳ್ಳಲು ಆಗದೇ ಇದ್ದುದು. ಇಂತಹ ಘಟನೆಗಳು ಇಡೀ ಸೆಷನ್ ಮುಗಿದ ನಂತರವಷ್ಟೇ (ಮೊದಲ ಹಂತದಲ್ಲಿ 100 ಜನರಿಗೆ ಲಸಿಕೆ ನೀಡಿದ ನಂತರ) ಕೊ-ವಿನ್‌ಗೆ ಒಮ್ಮೆಲೇ ಅಪ್‌ಲೋಡ್ ಆಗುತ್ತಿದ್ದವು.

3. ಲಸಿಕಾ ತಂಡಕ್ಕೆ ಸಿಕ್ಕಿರುವ ಅಸಮರ್ಪಕ ತರಬೇತಿ. ಕೆಲವು ಕಡೆ ಐವರ ಲಸಿಕಾ ತಂಡದಲ್ಲಿ, ಯಾರು ಯಾವ ಕೆಲಸ ಮಾಡಬೇಕು ಎಂಬುದೇ ಗೊಂದಲಮಯವಾಗಿತ್ತು.

ಒಬ್ಬ ಪ್ರಿಸೈಡಿಂಗ್ ಆಫೀಸರ್ ಮತ್ತು ನಾಲ್ಕು ವ್ಯಾಕಿನೇಟರ್‌ಗಳ ನಡುವೆ ಸಾಕಷ್ಟು ಗೊಂದಲವಿತ್ತು. ಯಾರು ವ್ಯಾಕಿನೇಟರ್, ಯಾರು ಪ್ರಿಸೈಡಿಂಗ್ ಆಫೀಸರ್ ಎಂಬ ಗೊಂದಲವೂ ಮೂಡಿದ ಪ್ರಕರಣಗಳು ನಡೆದಿವೆ.  ಈ ಹಿನ್ನೆಲೆ ಎರಡನೇ ತಾಲೀಮಿಗೆ ತಯಾರಾಗಿರುವ ತಂಡಗಳಿಗೆ ಸರಿಯದ ತರಬೇತಿ ನೀಡಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಹೇಳುತ್ತಿವೆ.


ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...