Homeಕರೋನಾ ತಲ್ಲಣಡ್ರೈ ರನ್ ಎಂದರೇನು?: ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಮೂರು ಲೋಪಗಳು

ಡ್ರೈ ರನ್ ಎಂದರೇನು?: ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಮೂರು ಲೋಪಗಳು

ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳ 16 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ.

- Advertisement -
- Advertisement -

ದೇಶದಲ್ಲಿ ಎರಡನೇ ಹಂತದ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ. ದೇಶದ 116 ಜಿಲ್ಲೆಗಳ 259 ಕೇಂದ್ರಗಳಲ್ಲಿ ಲಸಿಕೆ ತಾಲೀಮು ಆರಂಭವಾಗಿದೆ. ಅತಿ ದೊಡ್ಡ ಲಸಿಕೆ ವಿತರಣೆ ಕಾರ್ಯದ ಅಂಗವಾಗಿ ದೇಶದಲ್ಲಿ ಈ ತಾಲೀಮು ನಡೆಯುತ್ತಿದೆ.

ಮೊದಲ ತಾಲೀಮು, ಅಸ್ಸಾಂ, ಆಂಧ್ರಪ್ರದೇಶ, ಪಂಜಾಬ್ ಮತ್ತು ಗುಜರಾತ್ ನಾಲ್ಕು ರಾಜ್ಯಗಳಲ್ಲಿ ಡಿಸೆಂಬರ್ 28, 29 ರಂದು ನಡೆದಿದೆ. ಈ ಪ್ರಯೋಗದಲ್ಲಿ ಮೂರು ಪ್ರಮುಖ ಲೋಪಗಳು ಕಂಡು ಬಂದಿದ್ದು, ಅವುಗಳನ್ನು ಸರಿಪಡಿಸುವ ಕೆಲಸ ಎರಡನೇ ಹಂತದ ತಾಲೀಮಿನಲ್ಲಿ ನಡೆದಿದೆ.

ಡ್ರೈ ರನ್ ಎಂದರೇನು?

ಲಸಿಕೆ ಹೇಗೆ ಕೊಡಬೇಕೆಂದು ಪೂರ್ವತಯಾರಿ ನಡೆಸಿ ತಾಲೀಮು ನಡೆಸುವುದನ್ನು ಡ್ರೈ ರನ್ ಎನ್ನುತ್ತಾರೆ. ಲಸಿಕೆ ತಾಲೀಮಿನಲ್ಲಿ ನೈಜ್ಯ ಲಸಿಕೆಯನ್ನು ಹೊರತು ಪಡಿಸಿ ಉಳಿದೆಲ್ಲಾ ಲಸಿಕೆ ವಿತರಣೆ ಯೋಜನೆಯ ಎಲ್ಲ ಪ್ರಕ್ರಿಯೆಗಳು ನಡೆಯಲಿದೆ. ಲಸಿಕೆ ಸಂಗ್ರಹಣೆ ವ್ಯವಸ್ಥೆ, ದಾಖಲೆಗಳ ಪರಿಶೀಲನೆ, ಲಸಿಕೆ ಸಾಗಣಿಕೆ, ಭದ್ರತೆ, ಮೆಲಧಿಕಾರಿಗಳಿಗೆ ವರದಿ ಒಪ್ಪಿಸುವುದು. ಲಸಿಕೆ ವಿತರಣೆಯಲ್ಲಿ ಉಂಟಾಗುವ ಲೋಪದೋಷಗಳನ್ನು ಪರೀಕ್ಷಿಸಲು ಈ ಡ್ರೈ ರನ್ ನಡೆಸಲಾಗುತ್ತಿದೆ.

ಇದನ್ನೂ ಓದಿ: ಭಾರತದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಬಳಕೆಗೆ ಹಸಿರು ನಿಶಾನೆ

ಲಸಿಕೆ ತಾಲೀಮು ನಡೆಸಲು ಸುಮಾರು 96,000 ವ್ಯಾಕ್ಸಿನೇಟರ್‌ಗಳಿಗೆ ತರಬೇತಿ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಪೈಕಿ 2,360 ಮಂದಿಗೆ ರಾಷ್ಟ್ರೀಯ ತರಬೇತುದಾರರ ತರಬೇತಿ ಕೇಂದ್ರದಲ್ಲಿ ಮತ್ತು 57,000 ಕ್ಕೂ ಹೆಚ್ಚು ಜನರಿಗೆ ಜಿಲ್ಲಾ ಮಟ್ಟದಲ್ಲಿ 719 ಜಿಲ್ಲೆಗಳಲ್ಲಿ ತರಬೇತಿ ನೀಡಲಾಗಿದೆ.

ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳ 16 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ. ಜಿಲ್ಲಾ ಮಟ್ಟದಲ್ಲಿ ಒಂದು ಕೇಂದ್ರ, ತಾಲೂಕು ಮಟ್ಟದಲ್ಲಿ ಒಂದು ಮತ್ತು ಗ್ರಾಮೀಣ ಮಟ್ಟದಲ್ಲಿ ಒಂದೊಂದು ಪ್ರಾಥಮಿಕ ಕೇಂದ್ರಗಳಲ್ಲಿ ಪ್ರಯೋಗ ನಡೆಯಲಿದೆ.

ಇದನ್ನೂ ಓದಿ: ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ಮೊದಲ ಲಸಿಕೆ ತಾಲೀಮು (ಡ್ರೈ ರನ್) ಅಸ್ಸಾಂ, ಆಂಧ್ರಪ್ರದೇಶ, ಪಂಜಾಬ್ ಮತ್ತು ಗುಜರಾತ್ ರಾಜ್ಯಗಳ ತಲಾ ನಾಲ್ಕು ಕೇಂದ್ರಗಳಲ್ಲಿ ನಡೆದಿತ್ತು. ಪ್ರತಿ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ಹಾಕುವ ಕಾರ್ಯಕ್ರಮ ಇದಾಗಿತ್ತು. ಅಂದರೆ 16 ಕೇಂದ್ರಗಳಲ್ಲಿ 1,600 ಜನರಿಗೆ ಲಸಿಕೆ ಹಾಕುವ ಪ್ರಯೋಗ. ಈ ಸಣ್ಣ ಪ್ರಮಾಣದ ಸಂಖ್ಯೆಯಿದ್ದರೂ ಹಲವು ಲೋಪಗಳು ಕಂಡುಬಂದಿದ್ದವು.

ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಲೋಪಗಳು:

1. ದೂರದ ಗ್ರಾಮಗಳ ಪಿನ್‌ಕೋಡ್ ಸಂಖ್ಯೆ ಕೊ-ವಿನ್ ಪ್ಲಾಟ್‌ಫಾರಂಗೆ ಸರಿಯಾಗಿ ಹೊಂದಾಣಿಕೆ ಆಗದೇ ಇದ್ದಿದ್ದು. ಕೊ-ವಿನ್  ವ್ಯವಸ್ಥೆ ಲಸಿಕಾ ಕಾರ್ಯಕ್ರಮದ ಮಹತ್ತರ ಡಿಜಿಟಲ್ ವ್ಯವಸ್ಥೆಯಾಗಿದ್ದು, ಅದು ಇಡೀ ಲಸಿಕಾ ಕಾರ್ಯಕ್ರಮವನ್ನು ಟ್ರ್ಯಾಕ್ ಮಾಡುತ್ತಿರುತ್ತದೆ. ಮೊದಲ ಡ್ರೈ ರನ್‌ನಲ್ಲಿ ಕೊ-ವಿನ್ ದೂರದ ಗ್ರಾಮಗಳ ಪಿನ್‌ಕೋಡ್ ಮ್ಯಾಪಿಂಗ್‌ನಲ್ಲಿ ವಿಫಲವಾದ ನಂತರ, ಆರೋಗ್ಯಾಧಿಕಾರಿಗಳು ಮ್ಯಾನುವಲ್ ಆಗಿ ಪಿನ್‌ಕೋಡ್ ದಾಖಲಿಸಿದ್ದರು. ಈಗ ಎರಡನೇ  ತಾಲೀಮಿನಲ್ಲಿ ಸಾಫ್ಟ್‌ವೇರ್ ಅನ್ನು ಸಂಪೂರ್ಣ ಸಜ್ಜುಗೊಳಿಸಲಾಗಿದೆ ಎನ್ನಲಾಗಿದೆ.

Image
PC: ANI

2. ಲಸಿಕೆ ನೀಡುವಾಗ ಅಥವಾ ನೀಡಿದ ನಂತರ ಸಂಭವಿಸಬಹುದಾದ ಅಹಿತಕರ ಘಟನೆ ಅಥವಾ ಅಡ್ಡ ಪರಿಣಾಮಗಳನ್ನು ಆಗಲೇ (ರಿಯಲ್ ಟೈಮ್‌ನಲ್ಲಿ) ದಾಖಲಿಸಿಕೊಳ್ಳಲು ಆಗದೇ ಇದ್ದುದು. ಇಂತಹ ಘಟನೆಗಳು ಇಡೀ ಸೆಷನ್ ಮುಗಿದ ನಂತರವಷ್ಟೇ (ಮೊದಲ ಹಂತದಲ್ಲಿ 100 ಜನರಿಗೆ ಲಸಿಕೆ ನೀಡಿದ ನಂತರ) ಕೊ-ವಿನ್‌ಗೆ ಒಮ್ಮೆಲೇ ಅಪ್‌ಲೋಡ್ ಆಗುತ್ತಿದ್ದವು.

3. ಲಸಿಕಾ ತಂಡಕ್ಕೆ ಸಿಕ್ಕಿರುವ ಅಸಮರ್ಪಕ ತರಬೇತಿ. ಕೆಲವು ಕಡೆ ಐವರ ಲಸಿಕಾ ತಂಡದಲ್ಲಿ, ಯಾರು ಯಾವ ಕೆಲಸ ಮಾಡಬೇಕು ಎಂಬುದೇ ಗೊಂದಲಮಯವಾಗಿತ್ತು.

ಒಬ್ಬ ಪ್ರಿಸೈಡಿಂಗ್ ಆಫೀಸರ್ ಮತ್ತು ನಾಲ್ಕು ವ್ಯಾಕಿನೇಟರ್‌ಗಳ ನಡುವೆ ಸಾಕಷ್ಟು ಗೊಂದಲವಿತ್ತು. ಯಾರು ವ್ಯಾಕಿನೇಟರ್, ಯಾರು ಪ್ರಿಸೈಡಿಂಗ್ ಆಫೀಸರ್ ಎಂಬ ಗೊಂದಲವೂ ಮೂಡಿದ ಪ್ರಕರಣಗಳು ನಡೆದಿವೆ.  ಈ ಹಿನ್ನೆಲೆ ಎರಡನೇ ತಾಲೀಮಿಗೆ ತಯಾರಾಗಿರುವ ತಂಡಗಳಿಗೆ ಸರಿಯದ ತರಬೇತಿ ನೀಡಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಹೇಳುತ್ತಿವೆ.


ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...