Homeಕರೋನಾ ತಲ್ಲಣಡ್ರೈ ರನ್ ಎಂದರೇನು?: ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಮೂರು ಲೋಪಗಳು

ಡ್ರೈ ರನ್ ಎಂದರೇನು?: ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಮೂರು ಲೋಪಗಳು

ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳ 16 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ.

- Advertisement -
- Advertisement -

ದೇಶದಲ್ಲಿ ಎರಡನೇ ಹಂತದ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ. ದೇಶದ 116 ಜಿಲ್ಲೆಗಳ 259 ಕೇಂದ್ರಗಳಲ್ಲಿ ಲಸಿಕೆ ತಾಲೀಮು ಆರಂಭವಾಗಿದೆ. ಅತಿ ದೊಡ್ಡ ಲಸಿಕೆ ವಿತರಣೆ ಕಾರ್ಯದ ಅಂಗವಾಗಿ ದೇಶದಲ್ಲಿ ಈ ತಾಲೀಮು ನಡೆಯುತ್ತಿದೆ.

ಮೊದಲ ತಾಲೀಮು, ಅಸ್ಸಾಂ, ಆಂಧ್ರಪ್ರದೇಶ, ಪಂಜಾಬ್ ಮತ್ತು ಗುಜರಾತ್ ನಾಲ್ಕು ರಾಜ್ಯಗಳಲ್ಲಿ ಡಿಸೆಂಬರ್ 28, 29 ರಂದು ನಡೆದಿದೆ. ಈ ಪ್ರಯೋಗದಲ್ಲಿ ಮೂರು ಪ್ರಮುಖ ಲೋಪಗಳು ಕಂಡು ಬಂದಿದ್ದು, ಅವುಗಳನ್ನು ಸರಿಪಡಿಸುವ ಕೆಲಸ ಎರಡನೇ ಹಂತದ ತಾಲೀಮಿನಲ್ಲಿ ನಡೆದಿದೆ.

ಡ್ರೈ ರನ್ ಎಂದರೇನು?

ಲಸಿಕೆ ಹೇಗೆ ಕೊಡಬೇಕೆಂದು ಪೂರ್ವತಯಾರಿ ನಡೆಸಿ ತಾಲೀಮು ನಡೆಸುವುದನ್ನು ಡ್ರೈ ರನ್ ಎನ್ನುತ್ತಾರೆ. ಲಸಿಕೆ ತಾಲೀಮಿನಲ್ಲಿ ನೈಜ್ಯ ಲಸಿಕೆಯನ್ನು ಹೊರತು ಪಡಿಸಿ ಉಳಿದೆಲ್ಲಾ ಲಸಿಕೆ ವಿತರಣೆ ಯೋಜನೆಯ ಎಲ್ಲ ಪ್ರಕ್ರಿಯೆಗಳು ನಡೆಯಲಿದೆ. ಲಸಿಕೆ ಸಂಗ್ರಹಣೆ ವ್ಯವಸ್ಥೆ, ದಾಖಲೆಗಳ ಪರಿಶೀಲನೆ, ಲಸಿಕೆ ಸಾಗಣಿಕೆ, ಭದ್ರತೆ, ಮೆಲಧಿಕಾರಿಗಳಿಗೆ ವರದಿ ಒಪ್ಪಿಸುವುದು. ಲಸಿಕೆ ವಿತರಣೆಯಲ್ಲಿ ಉಂಟಾಗುವ ಲೋಪದೋಷಗಳನ್ನು ಪರೀಕ್ಷಿಸಲು ಈ ಡ್ರೈ ರನ್ ನಡೆಸಲಾಗುತ್ತಿದೆ.

ಇದನ್ನೂ ಓದಿ: ಭಾರತದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಬಳಕೆಗೆ ಹಸಿರು ನಿಶಾನೆ

ಲಸಿಕೆ ತಾಲೀಮು ನಡೆಸಲು ಸುಮಾರು 96,000 ವ್ಯಾಕ್ಸಿನೇಟರ್‌ಗಳಿಗೆ ತರಬೇತಿ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಪೈಕಿ 2,360 ಮಂದಿಗೆ ರಾಷ್ಟ್ರೀಯ ತರಬೇತುದಾರರ ತರಬೇತಿ ಕೇಂದ್ರದಲ್ಲಿ ಮತ್ತು 57,000 ಕ್ಕೂ ಹೆಚ್ಚು ಜನರಿಗೆ ಜಿಲ್ಲಾ ಮಟ್ಟದಲ್ಲಿ 719 ಜಿಲ್ಲೆಗಳಲ್ಲಿ ತರಬೇತಿ ನೀಡಲಾಗಿದೆ.

ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳ 16 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ. ಜಿಲ್ಲಾ ಮಟ್ಟದಲ್ಲಿ ಒಂದು ಕೇಂದ್ರ, ತಾಲೂಕು ಮಟ್ಟದಲ್ಲಿ ಒಂದು ಮತ್ತು ಗ್ರಾಮೀಣ ಮಟ್ಟದಲ್ಲಿ ಒಂದೊಂದು ಪ್ರಾಥಮಿಕ ಕೇಂದ್ರಗಳಲ್ಲಿ ಪ್ರಯೋಗ ನಡೆಯಲಿದೆ.

ಇದನ್ನೂ ಓದಿ: ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ಮೊದಲ ಲಸಿಕೆ ತಾಲೀಮು (ಡ್ರೈ ರನ್) ಅಸ್ಸಾಂ, ಆಂಧ್ರಪ್ರದೇಶ, ಪಂಜಾಬ್ ಮತ್ತು ಗುಜರಾತ್ ರಾಜ್ಯಗಳ ತಲಾ ನಾಲ್ಕು ಕೇಂದ್ರಗಳಲ್ಲಿ ನಡೆದಿತ್ತು. ಪ್ರತಿ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ಹಾಕುವ ಕಾರ್ಯಕ್ರಮ ಇದಾಗಿತ್ತು. ಅಂದರೆ 16 ಕೇಂದ್ರಗಳಲ್ಲಿ 1,600 ಜನರಿಗೆ ಲಸಿಕೆ ಹಾಕುವ ಪ್ರಯೋಗ. ಈ ಸಣ್ಣ ಪ್ರಮಾಣದ ಸಂಖ್ಯೆಯಿದ್ದರೂ ಹಲವು ಲೋಪಗಳು ಕಂಡುಬಂದಿದ್ದವು.

ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಲೋಪಗಳು:

1. ದೂರದ ಗ್ರಾಮಗಳ ಪಿನ್‌ಕೋಡ್ ಸಂಖ್ಯೆ ಕೊ-ವಿನ್ ಪ್ಲಾಟ್‌ಫಾರಂಗೆ ಸರಿಯಾಗಿ ಹೊಂದಾಣಿಕೆ ಆಗದೇ ಇದ್ದಿದ್ದು. ಕೊ-ವಿನ್  ವ್ಯವಸ್ಥೆ ಲಸಿಕಾ ಕಾರ್ಯಕ್ರಮದ ಮಹತ್ತರ ಡಿಜಿಟಲ್ ವ್ಯವಸ್ಥೆಯಾಗಿದ್ದು, ಅದು ಇಡೀ ಲಸಿಕಾ ಕಾರ್ಯಕ್ರಮವನ್ನು ಟ್ರ್ಯಾಕ್ ಮಾಡುತ್ತಿರುತ್ತದೆ. ಮೊದಲ ಡ್ರೈ ರನ್‌ನಲ್ಲಿ ಕೊ-ವಿನ್ ದೂರದ ಗ್ರಾಮಗಳ ಪಿನ್‌ಕೋಡ್ ಮ್ಯಾಪಿಂಗ್‌ನಲ್ಲಿ ವಿಫಲವಾದ ನಂತರ, ಆರೋಗ್ಯಾಧಿಕಾರಿಗಳು ಮ್ಯಾನುವಲ್ ಆಗಿ ಪಿನ್‌ಕೋಡ್ ದಾಖಲಿಸಿದ್ದರು. ಈಗ ಎರಡನೇ  ತಾಲೀಮಿನಲ್ಲಿ ಸಾಫ್ಟ್‌ವೇರ್ ಅನ್ನು ಸಂಪೂರ್ಣ ಸಜ್ಜುಗೊಳಿಸಲಾಗಿದೆ ಎನ್ನಲಾಗಿದೆ.

Image
PC: ANI

2. ಲಸಿಕೆ ನೀಡುವಾಗ ಅಥವಾ ನೀಡಿದ ನಂತರ ಸಂಭವಿಸಬಹುದಾದ ಅಹಿತಕರ ಘಟನೆ ಅಥವಾ ಅಡ್ಡ ಪರಿಣಾಮಗಳನ್ನು ಆಗಲೇ (ರಿಯಲ್ ಟೈಮ್‌ನಲ್ಲಿ) ದಾಖಲಿಸಿಕೊಳ್ಳಲು ಆಗದೇ ಇದ್ದುದು. ಇಂತಹ ಘಟನೆಗಳು ಇಡೀ ಸೆಷನ್ ಮುಗಿದ ನಂತರವಷ್ಟೇ (ಮೊದಲ ಹಂತದಲ್ಲಿ 100 ಜನರಿಗೆ ಲಸಿಕೆ ನೀಡಿದ ನಂತರ) ಕೊ-ವಿನ್‌ಗೆ ಒಮ್ಮೆಲೇ ಅಪ್‌ಲೋಡ್ ಆಗುತ್ತಿದ್ದವು.

3. ಲಸಿಕಾ ತಂಡಕ್ಕೆ ಸಿಕ್ಕಿರುವ ಅಸಮರ್ಪಕ ತರಬೇತಿ. ಕೆಲವು ಕಡೆ ಐವರ ಲಸಿಕಾ ತಂಡದಲ್ಲಿ, ಯಾರು ಯಾವ ಕೆಲಸ ಮಾಡಬೇಕು ಎಂಬುದೇ ಗೊಂದಲಮಯವಾಗಿತ್ತು.

ಒಬ್ಬ ಪ್ರಿಸೈಡಿಂಗ್ ಆಫೀಸರ್ ಮತ್ತು ನಾಲ್ಕು ವ್ಯಾಕಿನೇಟರ್‌ಗಳ ನಡುವೆ ಸಾಕಷ್ಟು ಗೊಂದಲವಿತ್ತು. ಯಾರು ವ್ಯಾಕಿನೇಟರ್, ಯಾರು ಪ್ರಿಸೈಡಿಂಗ್ ಆಫೀಸರ್ ಎಂಬ ಗೊಂದಲವೂ ಮೂಡಿದ ಪ್ರಕರಣಗಳು ನಡೆದಿವೆ.  ಈ ಹಿನ್ನೆಲೆ ಎರಡನೇ ತಾಲೀಮಿಗೆ ತಯಾರಾಗಿರುವ ತಂಡಗಳಿಗೆ ಸರಿಯದ ತರಬೇತಿ ನೀಡಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಹೇಳುತ್ತಿವೆ.


ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...