Homeಕರ್ನಾಟಕರಾಷ್ಟ್ರಪತಿ ಪದಕ ವಿಜೇತ ಐಪಿಎಸ್ ಡಿ. ರೂಪಾ: 20 ವರ್ಷದಲ್ಲಿ 40 ಸಲ ವರ್ಗಾ!

ರಾಷ್ಟ್ರಪತಿ ಪದಕ ವಿಜೇತ ಐಪಿಎಸ್ ಡಿ. ರೂಪಾ: 20 ವರ್ಷದಲ್ಲಿ 40 ಸಲ ವರ್ಗಾ!

ಟೆಂಡರ್ ಪ್ರಕ್ರಿಯೆಯೊಂದರಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ತಪ್ಪು ಎಸಗಿದ್ದಾರೆ ಎಂದು ಆರೋಪಿಸಿದ ಪರಿಣಾಮ ರಾಜ್ಯ ಗೃಹ ಕಾರ್ಯದರ್ಶಿ ಡಿ. ರೂಪಾರನ್ನು ವರ್ಗಾವಣೆ ಮಾಡಲಾಗಿದೆ.

- Advertisement -
- Advertisement -

ಸದ್ಯದ ವ್ಯವಸ್ಥೆಯಲ್ಲಿ ಪ್ರಬಲರು ಮತ್ತು ಅಧಿಕಾರಸ್ಥ ಬಲಾಢ್ಯರನ್ನು ಎದುರು ಹಾಕಿಕೊಂಡ ಅಧಿಕಾರಿಗೆ ಹೆಚ್ಚಿನ ಅಧಿಕಾರವಿಲ್ಲದ ಜಾಗಕ್ಕೆ ವರ್ಗಾವಣೆ ಮಾಡುವುದು ವೃತ್ತಿ ರಾಜಕಾರಣದ ಭಾಗವೇ ಆಗಿದೆ. ಅದರಂತೆ ಬುಧವಾರದವರೆಗೂ ರಾಜ್ಯ ಗೃಹ ಇಲಾಖೆಯ ಕಾರ್ಯದರ್ಶಿಯಾಗಿದ್ದ ಡಿ. ರೂಪಾ ಗುರುವಾರ ಮುಂಜಾನೆ ಹೊತ್ತಿಗೆ ಕರಕುಶಲ ನಿಗಮದ ಎಂ.ಡಿ. ಸ್ಥಾನಕ್ಕೆ ವರ್ಗಾವಣೆಗೊಂಡಿದ್ದಾರೆ.

ಅಂದಂತೆ ರೂಪಾರಿಗೆ ವರ್ಗಾವಣೆ ಹೊಸದೇನೂ ಅಲ್ಲ. ಅವರ ಸೇವಾವಧಿಯ ವರ್ಷಗಳ ಸಂಖ್ಯೆಗಿಂತ ಅವರ ವರ್ಗಾವಣೆಯ ಸಂಖ್ಯೆ ದುಪ್ಪಟ್ಟಾಗಿದೆ. ಅಂದರೆ, 20 ವರ್ಷಗಳಲ್ಲಿ ಅವರು 40 ಸಲ ವರ್ಗಾವಣೆಗೊಂಡಿದ್ದಾರೆ.

ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಹೇಮಂತ್ ನಿಂಬಾಳ್ಕರ್ (ಈಗ ಇವರನ್ನೂ ಈ ಹುದ್ದೆಯಿಂದ ವರ್ಗಾ ಮಾಡಲಾಗಿದೆ) ನಿರ್ಭಯಾ ನಿಧಿ ಅಡಿ ಕೈಗೊಳ್ಳಲಿರುವ ಬೆಂಗಳೂರು ಸುರಕ್ಷಾ ನಗರ ಪ್ರಾಜೆಕ್ಟ್‌ ಟೆಂಡರ್‌ನಲ್ಲಿ ಸ್ವ ಹಿತಾಸಕ್ತಿ ತೋರುವ ಮೂಲಕ ಪ್ರಾಜೆಕ್ಟ್ ವಿಳಂಬ ಮಾಡುತ್ತಿದ್ದಾರೆ ಎಂದು ರೂಪಾ ಅವರು ಪದೇ ಪದೇ ಆಕ್ಷೇಪಣೆ ಎತ್ತಿದ್ದೇ ಅವರ ವರ್ಗಾವಣೆಗೆ ಮೂಲ ಎನ್ನಲಾಗಿದೆ. ತಮ್ಮ ಅಧಿಕಾರ ವ್ಯಾಪ್ತಿಗೆ ಬರದಿದ್ದರೂ ರೂಪಾ ಅವರು ಟೆಂಡರ್ ವಿವರಗಳನ್ನು ಪಡೆಯಲು ಯತ್ನಿಸಿದ್ದರು ಎಂದು ನಿಂಬಾಳ್ಕರ್ ದೂರನ್ನೂ ದಾಖಲಿಸಿದ್ದರು.

ಈಗ ಆಗಿದ್ದು ಏನೆಂದರೆ, ಈ ಇಬ್ಬರನ್ನೂ ಬೇರೆ ಹುದ್ದೆಗೆ ವರ್ಗಾ ಮಾಡಿರುವ ಸರ್ಕಾರ, ಟೆಂಡರ್ ವಿವಾದ ಕುರಿತು ಏನನ್ನೂ ಹೇಳದೇ ಇರುವುದು. 2019ರಲ್ಲೇ ಮುಗಿಯಬೇಕಿದ್ದ ಟೆಂಡರ್ ಪ್ರಕ್ರಿಯೆ ವಿಳಂಬವಾಗಿದ್ದೇಕೆ? ರೂಪಾ ಮಾಡಿರುವ ಆರೋಪಗಳ ಕುರಿತು ಸರ್ಕಾರದ ನಿಲುವೇನು? ಇದು ಯಾವುದು ಸ್ಪಷ್ಟವಾಗಿಲ್ಲ.

ಒಟ್ಟಿನಲ್ಲಿ ವಿಶಲ್ ಬ್ಲೋ ಮಾಡಿದ ರೂಪಾ ಅಮೋಘ 40ನೆ ಬಾರಿಗೆ ವರ್ಗಾವಣೆಯಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಬಲರು ಮತ್ತು ಅಧಿಕಾರಸ್ಥ ಬಲಾಢ್ಯರ ಬಗ್ಗೆ ಪ್ರಶ್ನಿಸುವುದು ರಿಸ್ಕ್ ಕೆಲಸವೇ. ಆದರೂ ತಪ್ಪುಗಳಾದಾಗ ನಾನು ಧ್ವನಿ ಎತ್ತದೆ ಇರಲಾರೆ. ಆ ಹುದ್ದೆ ಈ ಹುದ್ದೆ ಯಾವುದೇ ಹುದ್ದೆ ಇರಲಿ ನಾನು ನನ್ನ ಬದ್ಧತೆಯೊಂದಿಗೆ ಕೆಲಸ ಮಾಡುತ್ತೇನೆ ಎಂದಿದ್ದರು.

‘ದಿ ಪ್ರಿಂಟ್’ ಜೊತೆ ಮಾತಾಡಿರುವ ರೂಪಾ, ಯಾವುದೇ ತಪ್ಪುಗಳ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳದೇ ಇರುವುದು ನನ್ನ ವ್ಯಕ್ತಿತ್ವದ ಭಾಗ. ಅದು ನನ್ನ ಸಹಜ ಗುಣ. ಮನಶಾಂತಿ ಬಯಸುವ ಬಹಳಷ್ಟು ಅಧಿಕಾರಿಗಳು ‘ದೊಡ್ಡವರಿಗೆ’ ಕಿರಿಕಿರಿಯಾಗುವ ವಿಷಯಗಳ ತಂಟೆಗೆ ಹೋಗುವುದಿಲ್ಲ. ಆದರೆ ಎಲ್ಲಿವರೆಗೆ ನಾನು ಸರಿಯಾದ ಮಾರ್ಗದಲ್ಲಿ ಕೆಲಸ ಮಾಡುತ್ತೇನೆಯೋ ಅಲ್ಲಿವರೆಗೆ ನಾನು ಅವ್ಯವಸ್ಥೆ ಮತ್ತು ಇಂತಹ ಸಂಘರ್ಷಗಳನ್ನು ಎದುರಿಸಲು ಹಿಂಜರಿಯುವುದಿಲ್ಲ ಎಂದಿದ್ದಾರೆ.

‘ಉನ್ನತ ಸ್ಥಾನಗಳಲ್ಲಿರುವ ಅಧಿಕಾರಿಗಳು ತಾವು ಮಾಡಬೇಕಾದ್ದನ್ನು ಮಾಡಲೇಬೇಕು. ಹೊಗಿನವರು ಬಂದು ಈ ವ್ಯವಸ್ಥೆ ಬದಲಿಸಲಾಗದು; ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಮೂರು ವರ್ಷಗಳ ಹಿಂದೆ, ಜಯಲಲಿತಾರ ಆಪ್ತೆ ಶಶಿಕಲಾ ಅವರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾನೂನುಬಾಹಿರವಾಗಿ ವಿಶೇಷ ಸವಲತ್ತು ನೀಡಲಾಗಿದೆ ಎಂದು ಆರೋಪಿಸಿದ್ದರು. ಇದಕ್ಕಾಗಿ ರೂಪಾ ಮೇಲೆ 20 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು.

2000 ಬ್ಯಾಚ್‌ನ ರೂಪಾ ಎರಡು ಸಲ (2016 ಮತ್ತು 2017) ರಾಷ್ಟ್ರಪತಿಗಳ ಚಿನ್ನದ ಪದಕ ಪಡೆದಿದ್ದಾರೆ.

ಕೃಪೆ: ದಿ ಪ್ರಿಂಟ್‌


ಇದನ್ನೂ ಓದಿ: ಫ್ಲ್ಯಾಟ್ ವಿಚಾರದಲ್ಲಿ ಕಂಗನಾ ರಾಣಾವತ್ ನಿಯಮ ಉಲ್ಲಂಘಿಸಿದ್ದಾರೆ: ಮುಂಬೈ ಸಿವಿಲ್ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...