Homeಅಂತರಾಷ್ಟ್ರೀಯವೀಸಾ ನಿರ್ಬಂಧಗಳನ್ನು ಮಾರ್ಚ್‌ವರೆಗೆ ವಿಸ್ತರಿಸಿದ ಟ್ರಂಪ್: ಜೋ ಬೈಡನ್ ವಿರೋಧ

ವೀಸಾ ನಿರ್ಬಂಧಗಳನ್ನು ಮಾರ್ಚ್‌ವರೆಗೆ ವಿಸ್ತರಿಸಿದ ಟ್ರಂಪ್: ಜೋ ಬೈಡನ್ ವಿರೋಧ

ವಲಸೆ ಮತ್ತು ಉದ್ಯೋಗ ವೀಸಾಗಳ ನಿಷೇಧವು ಡಿಸೆಂಬರ್ 31ಕ್ಕೆ ಮುಗಿಯಲಿತ್ತು. ಆದರೆ ನಿರ್ಗಮಿಸುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ನಿರ್ಬಂಧಗಳನ್ನು ಮಾರ್ಚ್ 31ರವರೆಗೂ ವಿಸ್ತರಿಸಿದ್ದಾರೆ.

- Advertisement -
- Advertisement -

ಗ್ರೀನ್‌ಕಾರ್ಡ್ ಆಕಾಂಕ್ಷಿಗಳು/ಅರ್ಜಿದಾರರು ಮತ್ತು ತಾತ್ಕಾಲಿಕ ವಿದೇಶಿ ಕೆಲಸಗಾರರು ಅಮೆರಿಕ ಪ್ರವೇಶಿಸುವುದನ್ನು ತಡೆಯುವ ಎರಡು ವಲಸೆ ನಿಷೇಧ ನಿರ್ಬಂಧಗಳನ್ನು ಮಾರ್ಚ್ 31 ರವರೆಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಸ್ತರಿಸಿದ್ದಾರೆ. ಅಮೆರಿಕ ಕೆಲಸಗಾರರು ಮತ್ತು ಸಾಂಕ್ರಾಮಿಕದಿಂದ ಜರ್ಜರಿತವಾಗಿರುವ ಆರ್ಥಿಕತೆ ರಕ್ಷಿಸಲು ಈ ಕ್ರಮಗಳು ಅಗತ್ಯವಾಗಿವೆ ಎಂದು ಅವರು ತಿಳಿಸಿದ್ದಾರೆ.

2020ರ ಏಪ್ರಿಲ್, ಜೂನ್‌ನಲ್ಲಿ ವಿಧಿಸಲಾಗಿದ್ದ ಈ ನಿಷೇಧಗಳು ಡಿಸೆಂಬರ್ 31ಕ್ಕೆ ಅಂತ್ಯಗೊಳ್ಳಬೇಕಿತ್ತು. ಈಗ ಅವನ್ನು 2021ರ ಮಾರ್ಚ್ 31ರವರೆಗೂ ವಿಸ್ತರಿಸಲಾಗಿದೆ. ನಿರ್ಗಮಿಸುತ್ತಿರುವ ಟ್ರಂಪ್ ಆಡಳಿತವು ಕೊನೆ ಹಂತದಲ್ಲಿ ವಲಸೆಗೆ ಸಂಬಂಧಿಸಿದಂತೆ ಇಂತಹ ಹಲವು ನಿರ್ಧಾರಗಳನ್ನು ತೆಗೆದುಕೊಂಡಿದೆ. ನಿರ್ದಿಷ್ಟ ವಿದೇಶಿ ಕೆಲಸಗಾರರ ಮೇಲಿನ ನಿಷೇಧವನ್ನು ಅಧಿಕ ಉದ್ದಿಮೆಗಳು ವಿರೋಧಿಸಿವೆ.

ಜನವರಿ 20 ರಂದು ಅಧಿಕಾರಕ್ಕೆ ಏರಲಿರುವ ಚುನಾಯಿತ-ಅಧ್ಯಕ್ಷ ಜೋ ಬೈಡನ್ ಈ ನಿರ್ಬಂಧಗಳನ್ನು ಟೀಕಿಸಿದ್ದಾರೆ. ಆದರೆ ತಾವು ಈ ನಿರ್ಬಂಧಗಳನ್ನು ತೆಗೆದು ಹಾಕುವುದರ ಬಗ್ಗೆ ಏನನ್ನೂ ಹೇಳಿಲ್ಲ.
ಅಧ್ಯಕೀಯ ಘೋಷಣೆಗಳ ರೂಪದಲ್ಲಿ ಟ್ರಂಪ್ ಇವುಗಳನ್ನು ವಿಧಿಸಿದ್ದು, ಇವನ್ನು ಯಾವುದೇ ಕ್ಷಣದಲ್ಲಾದರೂ ರದ್ದುಗೊಳಿಸಬಹುದಾಗಿದೆ.

ದೇಶಾದ್ಯಂತ ಕೊರೊನಾ ಸೋಂಕು ಹರಡುವಿಕೆ ಮುಂದುವರೆದಿದ್ದು, 20 ಮಿಲಿಯನ್ ಜನರು ನಿರುದ್ಯೋಗ ಸವಲತ್ತುಗಳನ್ನು ಆಶ್ರಯಿಸಿ ಬದುಕುತ್ತಿದ್ದಾರೆ.

ಅಕ್ಟೋಬರ್‌ನಲ್ಲಿ ಕ್ಯಾಲಿಫೋರ್ನಿಯಾದ ಫೆಡೆರಲ್ ನ್ಯಾಯಾಧೀಶರು ವಿದೇಶಿ ಅತಿಥಿ ಕೆಲಸಗಾರರ ಮೇಲಿನ ನಿಷೇಧಕ್ಕೆ ತಡೆ ನೀಡಿ, ಇಂತಹ ನಿಷೇಧವು ಸಾವಿರಾರು ವಾಣಿಜ್ಯ ಘಟಕಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಹೀಗೆ ವಾಣಿಜ್ಯ-ವ್ಯಾಪಾರಗಳ ಕಾರ್ಯಾಚರಣೆಯಲ್ಲಿ ಹಸ್ತಕ್ಷೇಪ ಮಾಡುವುದರಿಂದ ವ್ಯಾಪಾರ-ವಾಣಿಜ್ಯಕ್ಕೆ ‘ರಿಪೇರಿ ಮಾಡಲಾಗದಷ್ಟು’ ಹಾನಿಯಾಗಲಿದ್ದು, ಇದರಿಂದ ಅವು ತಮ್ಮ ಕೆಲಸಗಾರರನ್ನು ತೆಗೆದು ಹಾಕುವ ಪರಿಸ್ಥಿತಿ ಬರಬಹುದು ಎಂದು ಅಭಿಪ್ರಾಯ ಪಟ್ಟಿದ್ದರು.

ಅಮೆರಿಕದ ಜಸ್ಟೀಸ್ ಡಿಪಾರ್ಟಮೆಂಟ್ ಟ್ರಂಪ್ ನಿರ್ಧಾರದ ವಿರುದ್ಧ ಸರ್ಕ್ಯೂಟ್ ಕೋರ್ಟ್ ಮೊರೆ ಹೋಗಿದ್ದು, ಜನವರಿ 20ಕ್ಕೆ ವಿಚಾರಣೆ ನಡೆಯಲಿದೆ.


ಇದನ್ನೂ ಓದಿ: ಪಂಜಾಬ್: ಬಿಜೆಪಿ ಮುಖಂಡನ ಮನೆಮುಂದೆ ಸಗಣಿ ಸುರಿದ ರೈತ ಹೋರಾಟಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...