Homeಅಂತರಾಷ್ಟ್ರೀಯವೀಸಾ ನಿರ್ಬಂಧಗಳನ್ನು ಮಾರ್ಚ್‌ವರೆಗೆ ವಿಸ್ತರಿಸಿದ ಟ್ರಂಪ್: ಜೋ ಬೈಡನ್ ವಿರೋಧ

ವೀಸಾ ನಿರ್ಬಂಧಗಳನ್ನು ಮಾರ್ಚ್‌ವರೆಗೆ ವಿಸ್ತರಿಸಿದ ಟ್ರಂಪ್: ಜೋ ಬೈಡನ್ ವಿರೋಧ

ವಲಸೆ ಮತ್ತು ಉದ್ಯೋಗ ವೀಸಾಗಳ ನಿಷೇಧವು ಡಿಸೆಂಬರ್ 31ಕ್ಕೆ ಮುಗಿಯಲಿತ್ತು. ಆದರೆ ನಿರ್ಗಮಿಸುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ನಿರ್ಬಂಧಗಳನ್ನು ಮಾರ್ಚ್ 31ರವರೆಗೂ ವಿಸ್ತರಿಸಿದ್ದಾರೆ.

- Advertisement -
- Advertisement -

ಗ್ರೀನ್‌ಕಾರ್ಡ್ ಆಕಾಂಕ್ಷಿಗಳು/ಅರ್ಜಿದಾರರು ಮತ್ತು ತಾತ್ಕಾಲಿಕ ವಿದೇಶಿ ಕೆಲಸಗಾರರು ಅಮೆರಿಕ ಪ್ರವೇಶಿಸುವುದನ್ನು ತಡೆಯುವ ಎರಡು ವಲಸೆ ನಿಷೇಧ ನಿರ್ಬಂಧಗಳನ್ನು ಮಾರ್ಚ್ 31 ರವರೆಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಸ್ತರಿಸಿದ್ದಾರೆ. ಅಮೆರಿಕ ಕೆಲಸಗಾರರು ಮತ್ತು ಸಾಂಕ್ರಾಮಿಕದಿಂದ ಜರ್ಜರಿತವಾಗಿರುವ ಆರ್ಥಿಕತೆ ರಕ್ಷಿಸಲು ಈ ಕ್ರಮಗಳು ಅಗತ್ಯವಾಗಿವೆ ಎಂದು ಅವರು ತಿಳಿಸಿದ್ದಾರೆ.

2020ರ ಏಪ್ರಿಲ್, ಜೂನ್‌ನಲ್ಲಿ ವಿಧಿಸಲಾಗಿದ್ದ ಈ ನಿಷೇಧಗಳು ಡಿಸೆಂಬರ್ 31ಕ್ಕೆ ಅಂತ್ಯಗೊಳ್ಳಬೇಕಿತ್ತು. ಈಗ ಅವನ್ನು 2021ರ ಮಾರ್ಚ್ 31ರವರೆಗೂ ವಿಸ್ತರಿಸಲಾಗಿದೆ. ನಿರ್ಗಮಿಸುತ್ತಿರುವ ಟ್ರಂಪ್ ಆಡಳಿತವು ಕೊನೆ ಹಂತದಲ್ಲಿ ವಲಸೆಗೆ ಸಂಬಂಧಿಸಿದಂತೆ ಇಂತಹ ಹಲವು ನಿರ್ಧಾರಗಳನ್ನು ತೆಗೆದುಕೊಂಡಿದೆ. ನಿರ್ದಿಷ್ಟ ವಿದೇಶಿ ಕೆಲಸಗಾರರ ಮೇಲಿನ ನಿಷೇಧವನ್ನು ಅಧಿಕ ಉದ್ದಿಮೆಗಳು ವಿರೋಧಿಸಿವೆ.

ಜನವರಿ 20 ರಂದು ಅಧಿಕಾರಕ್ಕೆ ಏರಲಿರುವ ಚುನಾಯಿತ-ಅಧ್ಯಕ್ಷ ಜೋ ಬೈಡನ್ ಈ ನಿರ್ಬಂಧಗಳನ್ನು ಟೀಕಿಸಿದ್ದಾರೆ. ಆದರೆ ತಾವು ಈ ನಿರ್ಬಂಧಗಳನ್ನು ತೆಗೆದು ಹಾಕುವುದರ ಬಗ್ಗೆ ಏನನ್ನೂ ಹೇಳಿಲ್ಲ.
ಅಧ್ಯಕೀಯ ಘೋಷಣೆಗಳ ರೂಪದಲ್ಲಿ ಟ್ರಂಪ್ ಇವುಗಳನ್ನು ವಿಧಿಸಿದ್ದು, ಇವನ್ನು ಯಾವುದೇ ಕ್ಷಣದಲ್ಲಾದರೂ ರದ್ದುಗೊಳಿಸಬಹುದಾಗಿದೆ.

ದೇಶಾದ್ಯಂತ ಕೊರೊನಾ ಸೋಂಕು ಹರಡುವಿಕೆ ಮುಂದುವರೆದಿದ್ದು, 20 ಮಿಲಿಯನ್ ಜನರು ನಿರುದ್ಯೋಗ ಸವಲತ್ತುಗಳನ್ನು ಆಶ್ರಯಿಸಿ ಬದುಕುತ್ತಿದ್ದಾರೆ.

ಅಕ್ಟೋಬರ್‌ನಲ್ಲಿ ಕ್ಯಾಲಿಫೋರ್ನಿಯಾದ ಫೆಡೆರಲ್ ನ್ಯಾಯಾಧೀಶರು ವಿದೇಶಿ ಅತಿಥಿ ಕೆಲಸಗಾರರ ಮೇಲಿನ ನಿಷೇಧಕ್ಕೆ ತಡೆ ನೀಡಿ, ಇಂತಹ ನಿಷೇಧವು ಸಾವಿರಾರು ವಾಣಿಜ್ಯ ಘಟಕಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಹೀಗೆ ವಾಣಿಜ್ಯ-ವ್ಯಾಪಾರಗಳ ಕಾರ್ಯಾಚರಣೆಯಲ್ಲಿ ಹಸ್ತಕ್ಷೇಪ ಮಾಡುವುದರಿಂದ ವ್ಯಾಪಾರ-ವಾಣಿಜ್ಯಕ್ಕೆ ‘ರಿಪೇರಿ ಮಾಡಲಾಗದಷ್ಟು’ ಹಾನಿಯಾಗಲಿದ್ದು, ಇದರಿಂದ ಅವು ತಮ್ಮ ಕೆಲಸಗಾರರನ್ನು ತೆಗೆದು ಹಾಕುವ ಪರಿಸ್ಥಿತಿ ಬರಬಹುದು ಎಂದು ಅಭಿಪ್ರಾಯ ಪಟ್ಟಿದ್ದರು.

ಅಮೆರಿಕದ ಜಸ್ಟೀಸ್ ಡಿಪಾರ್ಟಮೆಂಟ್ ಟ್ರಂಪ್ ನಿರ್ಧಾರದ ವಿರುದ್ಧ ಸರ್ಕ್ಯೂಟ್ ಕೋರ್ಟ್ ಮೊರೆ ಹೋಗಿದ್ದು, ಜನವರಿ 20ಕ್ಕೆ ವಿಚಾರಣೆ ನಡೆಯಲಿದೆ.


ಇದನ್ನೂ ಓದಿ: ಪಂಜಾಬ್: ಬಿಜೆಪಿ ಮುಖಂಡನ ಮನೆಮುಂದೆ ಸಗಣಿ ಸುರಿದ ರೈತ ಹೋರಾಟಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...