Homeಮುಖಪುಟವಿದ್ಯುತ್ ಕಂಪನಿಯಿಂದ ಕಿರುಕುಳ: ಪ್ರಧಾನಿಗೆ ಪತ್ರ ಬರೆದು ಪ್ರಾಣತ್ಯಾಗ ಮಾಡಿದ ರೈತ

ವಿದ್ಯುತ್ ಕಂಪನಿಯಿಂದ ಕಿರುಕುಳ: ಪ್ರಧಾನಿಗೆ ಪತ್ರ ಬರೆದು ಪ್ರಾಣತ್ಯಾಗ ಮಾಡಿದ ರೈತ

ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಬಾಕಿ ಉಳಿಸಲಾಗಿದ್ದ 87,000 ರೂ. ವಸೂಲಿಗಾಗಿ ವಿದ್ಯುತ್ ಸರಬರಾಜು ಕಂಪೆನಿ (ಡಿಸ್ಕಾಂ) ಮುನೇಂದ್ರ ರಜಪೂತ್‌ಗೆ ಸೇರಿರುವ ಹಿಟ್ಟಿನ ಗಿರಣಿ ಹಾಗೂ ಬೈಕ್ ಅನ್ನು ವಶಪಡಿಸಿಕೊಂಡಿತ್ತು.

- Advertisement -
- Advertisement -

ವಿದ್ಯುತ್ ಸರಬರಾಜು ಕಂಪೆನಿಯ ಕಿರುಕುಳ ತಾಳಲಾರದೆ ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರದ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಮುನೇಂದ್ರ ರಜಪೂತ್ ಡೆತ್ ನೋಟ್ ಬರೆದಿಟ್ಟಿದ್ದು, “ತನ್ನ ಮೃತದೇಹವನ್ನು ಸರ್ಕಾರಕ್ಕೆ ಹಸ್ತಾಂತರಿಸಿ. ದೇಹದ ಅಂಗಾಂಗಗಳನ್ನು ಮಾರಾಟ ಮಾಡಿ ಸಾಲವನ್ನು ಮರುಪಾವತಿಸಿ” ಎಂದು ಪ್ರಧಾನಿ ಮೋದಿಯವರಲ್ಲಿ ವಿನಂತಿಸಿದ್ದಾರೆ.

“ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಬಾಕಿ ಉಳಿಸಲಾಗಿದ್ದ 87,000 ರೂ. ವಸೂಲಿಗಾಗಿ ವಿದ್ಯುತ್ ಸರಬರಾಜು ಕಂಪೆನಿ (ಡಿಸ್ಕಾಂ) ಮುನೇಂದ್ರ ರಜಪೂತ್‌ಗೆ ಸೇರಿರುವ ಹಿಟ್ಟಿನ ಗಿರಣಿ ಹಾಗೂ ಬೈಕ್ ಅನ್ನು ವಶಪಡಿಸಿಕೊಂಡಿತ್ತು” ಎಂದು ಮೃತನ ಕುಟುಂಬ ಸದಸ್ಯರು ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಪತಿ ಪದಕ ವಿಜೇತ ಐಪಿಎಸ್ ಡಿ. ರೂಪಾ: 20 ವರ್ಷದಲ್ಲಿ 40 ಸಲ ವರ್ಗಾ!

ತನ್ನ ಡೆತ್‌ ನೋಟ್‌ನಲ್ಲಿ, “ದೊಡ್ಡ ರಾಜಕಾರಣಿಗಳು ಹಾಗೂ ಉದ್ಯಮಿಗಳು ಹಗರಣಗಳನ್ನು ನಡೆಸಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳವುದಿಲ್ಲ. ಅವರು ಪಡೆದ ಸಾಲದ ಮರು ಪಾವತಿಗೆ ಸಾಕಷ್ಟು ಸಮಯ ನೀಡಲಾಗುತ್ತದೆ ಅಥವಾ ಸಾಲ ಮನ್ನಾ ಮಾಡಲಾಗುತ್ತದೆ. ಆದರೆ, ಬಡವನೊಬ್ಬ ಸಣ್ಣ ಮೊತ್ತದ ಸಾಲ ಪಡೆದರೆ, ಸಾಲ ತೀರಿಸಲು ಏಕೆ ಸಾಧ್ಯವಾಗಿಲ್ಲ ಎಂದು ಕೂಡ ಕೇಳುವುದಿಲ್ಲ. ಅದರ ಬದಲಿಗೆ ಸಾರ್ವಜನಿಕವಾಗಿ ಅವರಿಗೆ ಅವಮಾನ ಮಾಡಲಾಗುತ್ತದೆ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

“ನಾವು ಬೆಳೆದಿದ್ದ ಬೆಳೆ ಹಾಳಾಗಿತ್ತು. ಇದರಿಂದಾಗಿ ವಿದ್ಯುತ್ ಬಿಲ್ ಪಾವತಿಸಲು ಸಾಧ್ಯವಾಗಲಿಲ್ಲ. ನಂತರ ಡಿಸ್ಕಾಂ 87,000 ವಸೂಲಿ ಮಾಡಲು ನೋಟಿಸ್ ನೀಡಿತ್ತು” ಎಂದು ರೈತನ ಕುಟುಂಬ ಎನ್‌ಡಿಟಿವಿಗೆ ತಿಳಿಸಿದೆ.


ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ವೀಸಾ ನಿರ್ಬಂಧಗಳನ್ನು ಮಾರ್ಚ್‌ವರೆಗೆ ವಿಸ್ತರಿಸಿದ ಟ್ರಂಪ್: ಜೋ ಬೈಡನ್ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...