Homeಚಳವಳಿಪ್ರತಿಭಟನಾ ಸ್ಥಳದಲ್ಲಿಯೇ ನನ್ನ ಅಂತ್ಯಕ್ರಿಯೆ ಮಾಡಿ: ಡೆತ್‌ನೋಟ್ ಬರೆದಿಟ್ಟು ಪ್ರಾಣಬಿಟ್ಟ ಹೋರಾಟನಿರತ ರೈತ

ಪ್ರತಿಭಟನಾ ಸ್ಥಳದಲ್ಲಿಯೇ ನನ್ನ ಅಂತ್ಯಕ್ರಿಯೆ ಮಾಡಿ: ಡೆತ್‌ನೋಟ್ ಬರೆದಿಟ್ಟು ಪ್ರಾಣಬಿಟ್ಟ ಹೋರಾಟನಿರತ ರೈತ

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ದೆಹಲಿಯ ಗಡಿಗಳಲ್ಲೊಂದಾದ ದೆಹಲಿ- ಗಾಜಿಪುರ್ ಗಡಿಯಲ್ಲಿ ಉತ್ತರ ಪ್ರದೇಶದ 75 ವರ್ಷದ ರೈತನ ಮೃತ ದೇಹವೊಂದು ಡೆತ್‌ನೋಟ್‌ನೊಂದಿಗೆ ಪತ್ತೆಯಾಗಿದೆ.

ಉತ್ತರ ಪ್ರದೇಶದ ಕಾಶ್ಮೀರ್ ಸಿಂಗ್ ಲಧಿ ಎಂಬುವವರು ಗಡಿಯಲ್ಲಿನ ಶೌಚಾಲಯವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮೃತದೇಹದ ಜೊತೆಗೆ ಆತ್ಮಹತ್ಯಾ ಪತ್ರ ಸಹ ದೊರಕಿದೆ. ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂತೆಗದುಕೊಳ್ಳದೆ ರೈತರೊಂದಿಗೆ ಕೇವಲ ಮಾತುಕತೆ ನಡೆಸುತ್ತಿದೆ ಎಂದು ಅವರು ಹತಾಶೆಗೊಂಡಿದ್ದರು. ಹಾಗಾಗಿ ಅವರ ಸಾವಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಭಾರತೀಯ ಕಿಸಾನ್ ಯೂನಿಯನ್ ಆರೋಪಿಸಿದೆ.

“ನಾವು ಎಷ್ಟು ದಿನ ಎಂದು ಈ ಕೊರೆಯುವ ಚಳಿಯಲ್ಲಿ ಪ್ರತಿಭಟನೆ ನಡೆಸಬೇಕು? ಕೇಂದ್ರ ಸರ್ಕಾರವಂತೂ ನಮ್ಮ ಮಾತುಗಳನ್ನು ಕೇಳಿಸಿಕೊಳ್ಳುತ್ತಿಲ್ಲ. ಹಾಗಾಗಿ ನಾನು ಪ್ರಾಣ ಬಿಡಲು ನಿರ್ಧರಿಸುತ್ತಿದ್ದೇನೆ. ಇದರಿಂದಾದರೂ ಕೆಲ ಪರಿಹಾರ ಸಿಗಲಿ. ನನ್ನ ಮೊಮ್ಮಕ್ಕಳು ಇದೇ ಪ್ರತಿಭಟನಾ ಸ್ಥಳದಲ್ಲಿ ನನ್ನ ಅಂತ್ಯಕ್ರಿಯೆ ಮಾಡಲಿ” ಎಂದು ಆತ್ಮಹತ್ಯಾ ಪತ್ರದಲ್ಲಿ ಬರೆಯಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಉತ್ತರ ಪ್ರದೇಶದ ರಾಂಪುರ್ ಜಿಲ್ಲೆಯ ಬಿಲಾಸ್ಪುರ್ ಪ್ರದೇಶದವರಾದ ಕಾಶ್ಮೀರ್ ಸಿಂಗ್ ಲಧಿಯವರು ಮಕ್ಕಳು ಮತ್ತು ಮೊಮ್ಮಕ್ಕಳು ಸಹ ಗಾಜಿಪುರ್ ಗಡಿಯಲ್ಲಿ ರೈತ ಹೋರಾಟದಲ್ಲಿ ನಿರತರಾಗಿದ್ದಾರೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ 38ನೇ ದಿನ ಪ್ರವೇಶಿಸಿದೆ. ಕೇಂದ್ರದ ಕಾಯ್ದೆಗಳು ರೈತರನ್ನು ಬೀದಿಗೆ ತಳ್ಳಿ ಕಾರ್ಪೊರೇಟ್ ಲೂಟಿಗೆ ಅನುಕೂಲ ಮಾಡಿಕೊಡಲಿದೆ ಎಂದು ರೈತರು ದೂರಿದ್ದಾರೆ. ಇದುವರೆಗೂ ಪ್ರತಿಭಟನಾ ಸ್ಥಳದಲ್ಲಿ 30ಕ್ಕೂ ಹೆಚ್ಚು ರೈತರು ಪ್ರಾಣ ಬಿಟ್ಟಿದ್ದಾರೆ. ಕೆಲವರು ತೀವ್ರ ಚಳಿಗೆ ಮೃತಪಟ್ಟರೆ ಮತ್ತೆ ಕೆಲವರು ಕೃಷಿ ಕಾಯ್ದೆಗಳನ್ನು ಹಿಂಪಡೆಯದೇ ಇರುವುದರಿಂದ ಹತಾಶೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಷ್ಟೆಲ್ಲ ರೈತರು ಸಾಯುತ್ತಿದ್ದರೂ ಮೋದಿ ಸರ್ಕಾರ ಕಾಯ್ದೆಗಳ ಕುರಿತಾಗಿ ಹಠಮಾರಿ ಧೋರಣೆ ಮುಂದುವರೆಸುತ್ತಿದೆ ಎಂಬ ಟೀಕೆ ವ್ಯಾಪಕವಾಗಿ ಕೇಳಿಬಂದಿದೆ.

ಹೊಸ ವರ್ಷ ಅಂತೆ! ಎಂತ ಹೊಸ ವರ್ಷ?
ಗಾಜಿಪುರಗಡಿಯಲ್ಲಿ ಎರಡು ಗಂಟೆ ಹಿಂದೆಯಷ್ಟೇ ಮತ್ತೊಬ್ಬ ರೈತ ಹೋರಾಟಗಾರ ಆತ್ಮಹತ್ಯೆ ಮಾಡಿಕೊಂಡ.
ಮತ್ತೆ ಕೇಳಬೇಕಾದ ಪ್ರಶ್ನೆ – ಈ ಸರಕಾರದ ಹೃದಯ ಕರಗಲು ಇನ್ನೆಷ್ಟು ರೈತರ ಬಲಿದಾನ ಆಗಬೇಕು? ಎಂದು ಕನ್ನಡದ ಚಿಂತಕರಾದ ಶ್ರೀನಿವಾಸ ಕಾರ್ಕಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ವಿದ್ಯುತ್ ಕಂಪನಿಯಿಂದ ಕಿರುಕುಳ: ಪ್ರಧಾನಿಗೆ ಪತ್ರ ಬರೆದು ಪ್ರಾಣತ್ಯಾಗ ಮಾಡಿದ ರೈತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...