Homeಅಂತರಾಷ್ಟ್ರೀಯಚುನಾವಣಾ ಫಲಿತಾಂಶ ವಿರೋಧಿಸಿ ಬೃಹತ್‌ ರ್‍ಯಾಲಿ ನಡೆಸಲಿರುವ ಟ್ರಂಪ್‌‌ ಬೆಂಬಲಿಗರು

ಚುನಾವಣಾ ಫಲಿತಾಂಶ ವಿರೋಧಿಸಿ ಬೃಹತ್‌ ರ್‍ಯಾಲಿ ನಡೆಸಲಿರುವ ಟ್ರಂಪ್‌‌ ಬೆಂಬಲಿಗರು

ರಾಷ್ಟ್ರದ ಒಳಿತಿಗಾಗಿ, ಚುನಾವಣೆಯ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ನಾವು ಏನು ಬೇಕಾದರೂ ಮಾಡುತ್ತೇವೆ ಎಂದು ಅವರ ಪರವಾಗಿರುವ ವೆಬ್‌ಸೈಟ್ ಬರೆದಿದೆ

- Advertisement -
- Advertisement -

2020 ರ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶವನ್ನು ವಿರೋಧಿಸಿ ಜನವರಿ 6 ರಂದು ಅಮೆರಿಕದ ರಾಜಧಾನಿ ವಾಷಿಂಗ್ಟನ್‌ನಲ್ಲಿ ತಮ್ಮ ಬೆಂಬಲಿಗರು ರ್‍ಯಾಲಿ ನಡೆಸಲು ಯೋಜಿಸುತ್ತಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಹೇಳಿದ್ದಾರೆ.

“ವಾಷಿಂಗ್ಟನ್ ಡಿ.ಸಿ.ಯಲ್ಲಿ ಬೃಹತ್‌ ಪ್ರತಿಭಟನಾ ರ್‍ಯಾಲಿ ಜನವರಿ 6 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಕಳ್ಳತನ ನಿಲ್ಲಿಸಿ!” ಎಂದು ಟ್ರಂಪ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದಿದ್ದಾರೆ. ಮತ್ತೊಂದು ಟ್ವೀಟ್‌ನಲ್ಲಿ, “6 ರಂದು ಬೃಹತ್ ಪ್ರಮಾಣದ ಸಾಕ್ಷ್ಯಗಳನ್ನು ಪ್ರಸ್ತುತಪಡಿಸಲಾಗುವುದು. ನಾವು ಗೆದ್ದಿದ್ದೇವೆ,ಬೃಹತ್ತಾಗಿ!” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಟ್ರಂಪ್ ನಿರ್ಗಮನದ ದಿನ ಎಣಿಸಲೆಂದೇ ಒಂದು ವೆಬ್‌ಸೈಟ್!

ರ್‍ಯಾಲಿಯ ನೇತೃತ್ವವನ್ನು ವಹಿಸಿರುವ ’ವುಮೆನ್ ಫಾರ್‌ ಅಮೆರಿಕ ಫಸ್ಟ್’ ಅಭಿಯಾನದ ’ಸ್ಪುಟ್ನಿಕ್’, “2020 ರ ಚುನಾವಣೆಯ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಅಮೆರಿಕನ್ನರು ಈ ರ್‍ಯಾಲಿಯಲ್ಲಿ ಸೇರಬೇಕು” ಎಂದು ಕರೆ ನೀಡಿದೆ.

“ಡೆಮಾಕ್ರಟಿಕ್‌‌ಗಳು ರಿಪಬ್ಲಿಕನ್ ಮತಗಳನ್ನು ನಿರಾಕರಿಸಲು ಯೋಜಿಸುತ್ತಿದ್ದಾರೆ. ಅದನ್ನು ತಡೆಯುವುದು ಅಮೆರಿಕದ ಜನರಿಗೆ ಬಿಟ್ಟದ್ದು. ಅಧ್ಯಕ್ಷ ಟ್ರಂಪ್ ಜೊತೆಗೆ, ರಾಷ್ಟ್ರದ ಒಳಿತಿಗಾಗಿ ಈ ಚುನಾವಣೆಯ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ನಾವು ಏನು ಬೇಕಾದರೂ ಮಾಡುತ್ತೇವೆ” ಎಂದು ಸ್ಪುಟ್ನಿಕ್ ಬರೆದಿದೆ.

ಇದನ್ನೂ ಓದಿ: ನಾವು ಟ್ರಂಪ್ ಹುಚ್ಚ ಎನ್ನುವುದಿಲ್ಲ; ರಾಹುಲ್ ಗಾಂಧಿ ಬಗ್ಗೆ ಮಾತನಾಡಲು ಒಬಾಮ ಯಾರು?- ಶಿವಸೇನೆ ಪ್ರಶ್ನೆ

“ದಯವಿಟ್ಟು ಜನವರಿ 6, 2021 ರಂದು ವಾಷಿಂಗ್ಟನ್ ಡಿ.ಸಿ.ಯಲ್ಲಿ ನಮ್ಮೊಂದಿಗೆ ಸೇರಿಕೊಳ್ಳಿ. ತಡವಾಗುವ ಮುನ್ನ ನಿಮ್ಮ ಬೆಂಬಲ ಅಗತ್ಯ” ಎಂದು ಅದು ಹೇಳಿದೆ.

ಡಿಸೆಂಬರ್ 14 ರಂದು ಅಮೆರಿಕಾದ ಎಲ್ಲಾ 50 ರಾಜ್ಯಗಳ ಮತದಾನ ಫಲಿತಾಂಶವನ್ನು ಅಧಿಕೃತವಾಗಿ ಘೋಷಿಸಲಾಗಿತ್ತು. ಅಧಿಕೃತ ಫಲಿತಾಂಶಗಳ ಪ್ರಕಾರ, ಬಿಡೆನ್ 306 ಚುನಾವಣಾ ಮತಗಳನ್ನು ಪಡೆದಿದ್ದು, ಟ್ರಂಪ್ ಪರ 232 ಮತಗಳು ಚಲಾವಣೆಯಾಗಿದೆ. ಜನವರಿ 20 ರಂದು ಅಮೆರಿಕಾ ಅಧ್ಯಕ್ಷರಾಗಿ ಅಧಿಕಾರ ವಹಿಸಲಿದ್ದಾರೆ.

ಇದನ್ನೂ ಓದಿ: ನೊಬೆಲ್​ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ಶಿಫಾರಸ್ಸು: ನಾರ್ವೇಯ ಸಂಸತ್ ಸದಸ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...