Homeಮುಖಪುಟಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ಹಣವನ್ನು ಸಂಗ್ರಹಿಸಲು ಆಯೋಜಿಸಿದ ರ್‍ಯಾಲಿಯ ಭಾಗವೇ ವಿಧ್ವಂಸಕ ಕೃತ್ಯ ಎನ್ನಲಾಗಿದೆ.

- Advertisement -
- Advertisement -

ಶಸ್ತ್ರಸಜ್ಜಿತವಾದ ಸಂಘ ಪರಿವಾರದ ಬೆಂಬಲಿಗರು ಮಂಗಳವಾರ ಮಧ್ಯಪ್ರದೇಶದ ಮಾಲ್ವಾ ಜಿಲ್ಲೆಯ ದೊರಾನಾ ಗ್ರಾಮದಲ್ಲಿ ಹಿಂಸಾಚಾರ ಮಾಡಿ, ಮಸೀದಿ, ಮನೆಗಳು ಮತ್ತು ಇತರ ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಮತ್ತು ಆಭರಣಗಳನ್ನು ಲೂಟಿ ಮಾಡಿದ್ದಾರೆ ಎಂದು ವರದಿಯಾಗಿದೆ. ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವರದಿಯಾಗಿದ್ದು, ವೈರಲ್ ಆಗದೆ.

ಸಂಘ ಪರಿವಾರದ ಗುಂಪುಗಳು ನಡೆಸಿದ ಈ ಹಿಂಸಾಚಾರದಿಂದ ಭೀತಿಗೊಳಗಾಗಿರುವ ಗ್ರಾಮಸ್ಥರು ತಮ್ಮ ಮನೆ ಮತ್ತು ವ್ಯವಹಾರಗಳನ್ನು ಬಿಟ್ಟು ಓಡಿಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ ಎಂದು ಕ್ಲಾರಿಅನ್.ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ 

“ನಮ್ಮ ಗ್ರಾಮಕ್ಕೆ ಮಧ್ಯಾಹ್ನ 2 ರ ಸುಮಾರಿಗೆ 5,000 ಮಂದಿ ಗುಂಪು ಬಂದಿತ್ತು. ಅವರು ಮೂರರಿಂದ ನಾಲ್ಕು ಗಂಟೆಗಳ ಕಾಲ ಹಿಂಸಾಚಾರ ನಡೆಸಿದ್ದಾರೆ. ಹಿಂಸಾಚಾರಕ್ಕೆ ಹೆದರಿ ಎಲ್ಲಾ ಮುಸ್ಲಿಮರು ಗ್ರಾಮವನ್ನು ತೊರೆದಿದ್ದರು. ಮುಸ್ಲಿಮರನ್ನು ಪ್ರಚೋದಿಸಲು ಅವರು ಮಸೀದಿಯ ಮುಂದೆ ಡಿಜೆ ಹಾಕಿ ಕುಣಿದಿದ್ದಾರೆ. ಆದರೆ ಅಲ್ಲಿ ಯಾರೂ ಇಲ್ಲದ ಕಾರಣ ಯಾರೂ ಈ ಬಗ್ಗೆ ಏನನ್ನೂ ಹೇಳಲಿಲ್ಲ. ನಂತರ, ಅವರು ಅಲ್ಲಿನ ಇಸ್ಲಾಮಿಕ್ ಧ್ವಜಗಳನ್ನು ತೆಗೆದು ಅಲ್ಲಿ ಕೇಸರಿ ಧ್ವಜಗಳನ್ನು ಹಾರಿಸಿದ್ದಾರೆ” ಎಂದು ಡೋರಾನಾ ನಿವಾಸಿ ಮುಹಮ್ಮದ್ ಹಕೀಮ್ ತಿಳಿಸಿದ್ದಾರೆಂದು ಕ್ಲಾರಿಅನ್ ಇಂಡಿಯಾ ಬರೆದಿದೆ.

ಕೇವಲ 80 ಮುಸ್ಲಿಮರ ಮನೆಗಳನ್ನು ಹೊಂದಿರುವ ನಾವು ಈ ಗ್ರಾಮದಿಂದ ಓಡಿಹೋಗುವುದನ್ನು ಬಿಟ್ಟು ಅಲ್ಪಸಂಖ್ಯಾತ ಸಮುದಾಯಕ್ಕೆ ಬೇರೆ ಯಾವುದೆ ದಾರಿಯಿರಲಿಲ್ಲ ಎಂದು ಅವರು ಹೇಳಿದ್ದಾರೆ.

“ಅವರು ಗ್ರಾಮಸ್ಥರಲ್ಲಿ ಭೀತಿ ತುಂಬಿ, ದೊಣ್ಣೆಗಳಿಂದ ಓಡಿಸಿದರು, ಹಾಗೂ ಅವರ ಮೇಲೆ ಗುಂಡು ಹಾರಿಸಿದರು. ಈ ಗಲಭೆಕೋರರು ಮುಖ್ಯವಾಗಿ ಏಳೆಂಟು ದೊಡ್ಡ ಮನೆಗಳನ್ನು ಗುರಿಯಾಗಿಸಿಕೊಂಡಿದ್ದರಲ್ಲದೆ, ಎರಡು ಅಂಗಡಿಗಳನ್ನೂ ಲೂಟಿ ಮಾಡಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಈ ವಿಧ್ವಂಸಕ ಹಿಂಸಾಚಾರವನ್ನು ನಡೆಸಲಾಯಿತು” ಎಂದು ಹಕೀಮ್ ಹೇಳಿದ್ದಾರೆ.

ಇದನ್ನೂ ಓದಿ: ಸಂಘ ಪರಿವಾರಕ್ಕೆ ಎಚ್.ಎಸ್.ದೊರೆಸ್ವಾಮಿಯವರೇ ಟಾರ್ಗೆಟ್‌ ಏಕೆ?

ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿಡಿಯೋಗಳಲ್ಲಿ ಗಲಭೆಕೋರರು ಜೈಶ್ರೀರಾಮ್ ಎಂದು ಘೋಷಣೆ ಹಾಕುತ್ತಾ, ಮಸೀದಿ ಮೇಲಿನ ಇಸ್ಲಾಮಿಕ್ ಧ್ವಜವನ್ನು ಕಿತ್ತು ಹಾಕಿ, ಕೇಸರಿ ಧ್ವಜವನ್ನು ನೆಡುತ್ತಿರುವುದು ಕಾಣಬಹುದಾಗಿದೆ.

ಘಟನೆಯು ಭಾರಿ ಆಕ್ರೋಶವನ್ನು ಉಂಟು ಮಾಡಿದ್ದು, ಸಂಸದ ಅಸಾದುದ್ದೀನ್ ಓವೈಸಿ ಘಟನೆಗೆ ರಾಜ್ಯದ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಹೊಣೆಗಾರರನ್ನಾಗಿಸಿದ್ದಾರೆ.

ಇದನ್ನೂ ಓದಿ: ಹತಾಶ ಸಂಘ ಪರಿವಾರದಿಂದ ಕೋಮು ಧ್ರುವೀಕರಣಕ್ಕೆ ಷಡ್ಯಂತ್ರ

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ಹಣವನ್ನು ಸಂಗ್ರಹಿಸಲು ಆಯೋಜಿಸಿದ ರ್‍ಯಾಲಿಯ ಭಾಗವೇ ವಿಧ್ವಂಸಕ ಕೃತ್ಯ ಎನ್ನಲಾಗಿದೆ. ಬೆಳಿಗ್ಗೆ 11 ಗಂಟೆಗೆ ದೊರಾನ ಗ್ರಾಮದಲ್ಲಿ ನಡೆದ ಬೈಕ್ ರ್‍ಯಾಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ದೊರಾನಗೆ ಆಗಮಿಸುವಂತೆ ಕೋರಿ ಮಂಡ್ಸೂರಿನ ವಿಶ್ವ ಹಿಂದೂ ಪರಿಷತ್‌, ಭಜರಂಗದಳ, ಶ್ರೀ ರಾಷ್ಟ್ರೀಯ ಶಿವಶಕ್ತಿ ಸಂಗಟನ್, ಶ್ರೀ ರಾಷ್ಟ್ರೀಯ ರಜಪೂತ್ ಕೆರ್ಣೀ ಸೇನಾ ಮುಂತಾದ ಸಂಘಟನೆಗಳ ಹೆಸರಿನಲ್ಲಿ ಕೋಮು ಸಂದೇಶವನ್ನು ಪ್ರಸಾರ ಮಾಡಲಾಗಿತ್ತು.

ಈ ಘಟನೆಗೆ ಸಂಬಂಧಿಸಿದಂತೆ, ಧಾರ್ಮಿಕ ಸ್ಥಳವನ್ನು ಅಪವಿತ್ರಗೊಳಿಸಿರುವುದು ಮತ್ತು ವಿಧ್ವಂಸಕ ಕೃತ್ಯ ನಡೆಸಿದ್ದಕ್ಕಾಗಿ ಪೊಲೀಸರು ನಾಲ್ಕು ಎಫ್‌ಐಆರ್ ದಾಖಲಿಸಿದ್ದಾರೆ. ಮುಸ್ಲಿಮರ ವಿರುದ್ಧ ಸಂಘ ಪರಿವಾರದ ಗುಂಪುಗಳು ಕೂಡಾ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಅವರನ್ನು ನಿಂದಿಸಲಾಗಿದೆ ಮತ್ತು ಹಲ್ಲೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಂಘಪರಿವಾರದ ಕಾರ್ಯಕರ್ತರಿಂದ ಗೋ ಕಳ್ಳತನಕ್ಕೆ ಯತ್ನ ಆರೋಪ: ಮೂವರು ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...