Homeಮುಖಪುಟಅಮಿತ್ ಶಾ & ಹಿಂದೂ ದೇವತೆಗಳಿಗೆ ಅವಮಾನ ಆರೋಪ: ಹಾಸ್ಯ ಕಲಾವಿದನ ಬಂಧನ

ಅಮಿತ್ ಶಾ & ಹಿಂದೂ ದೇವತೆಗಳಿಗೆ ಅವಮಾನ ಆರೋಪ: ಹಾಸ್ಯ ಕಲಾವಿದನ ಬಂಧನ

ಹಿಂದೂ ರಕ್ಷಕ ಸಂಘಟನೆಯ ಮುಖಂಡ ಮತ್ತು ಬಿಜೆಪಿ ಶಾಸಕ ಮಾಲಿನಿ ಗೌರ್ ಅವರ ಪುತ್ರ ಏಕಲವ್ಯ ಗೌರ್ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ.

- Advertisement -
- Advertisement -

ಮಧ್ಯಪ್ರದೇಶದ ಇಂಧೋರ್‌ನಲ್ಲಿ ನಡೆದ ಹೊಸ ವರ್ಷಾಚರಣೆಯ ಕಾರ್ಯಕ್ರಮವೊಂದರಲ್ಲಿ ‘ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆಯುಂಟು ಮಾಡಿದ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅವಮಾನಿಸಿದ್ದಾರೆ’ ಎಂದು ಆರೋಪಿಸಿ ಹಾಸ್ಯ ಕಲಾವಿದ ಮತ್ತು ಇತರೆ ನಾಲ್ಕು ಜನ ಕಾರ್ಯಕ್ರಮ ಸಂಘಟಕರನ್ನು ಬಂಧಿಸಲಾಗಿದೆ.

ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ ಹಿಂದೂ ಕಾರ್ಯಕರ್ತರ ಗುಂಪೊಂದು ಕಾರ್ಯಕ್ರಮದಲ್ಲಿ ಹಾಜರಿತ್ತು. ಈ ವೇಳೆ ಇವರಿಗೆ ಇಷ್ಟವಿಲ್ಲದ ಹೇಳಿಕೆಗಳನ್ನು ಕಲಾವಿದರು ನೀಡಿದ್ದಕ್ಕಾಗಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದ ಹಿಂದೂ ಕಾರ್ಯಕರ್ತರು ಕಲಾವಿದರನ್ನು ಬಂಧಿಸುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ…

ಇಂಧೋರ್‌ನ ಡುಕಾನ್ ಪ್ರದೇಶದ ಕೆಫೆಯೊಂದರಲ್ಲಿ ಕಾರ್ಯಕ್ರಮ ನೀಡಿದ್ದ ಹಾಸ್ಯ ಕಲಾವಿದ ಮುನ್ವರ್ ಫಾರುಕಿ ಅವರನ್ನು ಶುಕ್ರವಾರ ಬಂಧಿಸಲಾಯಿತು. ಇವರ ಜೊತೆಗೆ ಪ್ರಖರ್ ವ್ಯಾಸ್, ಪ್ರಿಯಮ್ ವ್ಯಾಸ್, ನಳಿನ್ ಯಾದವ್ ಮತ್ತು ಕಾರ್ಯಕ್ರಮ ಸಂಯೋಜಕ ಎಡ್ವಿನ್ ಆಂಥೋನಿ ಎಂಬುವವರನ್ನು ಬಂಧಿಸಲಾಗಿದೆ.

“ಬಂಧನಕ್ಕೊಳಗಾದವರ ಮೇಲೆ ಐಪಿಸಿ ಸೆಕ್ಷನ್ 188, 269, 34 ಮತ್ತು 295 (ಎ) ಅಡಿಯಲ್ಲಿ ಈವೆಂಟ್ ಆಯೋಜನೆಗೆ ಅನುಮತಿ, ಕೊರೊನಾ ಸುರಕ್ಷತಾ ಮಾನದಂಡಗಳ ಉಲ್ಲಂಘನೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ” ಎನ್ನುವ ಪ್ರಕರಣಗಳಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಇಂಧೋರ್‌ನ ಟುಕೊಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಕಲ್ಮೇಶ್ ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮೇಲೆ ನಂಬಿಕೆಯಿಲ್ಲ, ಕೊರೊನಾ ಲಸಿಕೆ ತೆಗೆದುಕೊಳ್ಳುವುದಿಲ್ಲ: ಅಖಿಲೇಶ್ ಯಾದವ್

ಹಿಂದೂ ರಕ್ಷಕ ಸಂಘಟನೆಯ ಮುಖಂಡ ಮತ್ತು ಬಿಜೆಪಿ ಶಾಸಕ ಮಾಲಿನಿ ಗೌರ್ ಅವರ ಪುತ್ರ ಏಕಲವ್ಯ ಗೌರ್ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ.

“ಮುನ್ವರ್ ಫಾರುಕಿಯ ಮೇಲೆ ಸರಣಿ ಆರೋಪಗಳಿದ್ದು, ಈ ಹಿಂದೆ ತಮ್ಮ ಪ್ರದರ್ಶನಗಳಲ್ಲಿ ಹಿಂದೂ ದೇವತೆಗಳನ್ನು ಅವಮಾನ ಮಾಡಿದ್ದರು. ಇದರ ಬಗ್ಗೆ ತಿಳಿದುಕೊಳ್ಳಲು ನಾವು ಕೂಡ ಟಿಕೆಟ್ ಖರೀದಿಸಿ ಕಾರ್ಯಕ್ರಮಕ್ಕೆ ಹೋಗಿದ್ದೆವು. ಅಲ್ಲಿ ಪ್ರದರ್ಶನ ನೀಡಿದವರು ಒಕ್ಕೂಟ ವ್ಯವಸ್ಥೆಯ ಬಗ್ಗೆ ವ್ಯಂಗ್ಯ ಮಾಡಿದ್ದಾರೆ. ಗೋಧ್ರಾ ಹತ್ಯಾಕಾಂಡದಲ್ಲಿ ಗೃಹ ಸಚಿವ ಅಮಿತ್ ಶಾ ಅವರ ಹೆಸರನ್ನು ವಿನಾಃಕಾರಣ ಬಳಸಿದ್ದಾರೆ” ಎಂದು ಮಾಲಿನಿ ಗೌರ್ ಹೇಳಿದರು.

“ನಾವು ಕಾರ್ಯಕ್ರಮವನ್ನು ತಕ್ಷಣವೇ ನಿಲ್ಲಿಸಿದೆವು. ನಂತರ ಪ್ರೇಕ್ಷಕರನ್ನು ಹೊರಗೆ ಕಳುಹಿಸಿ, ಕಲಾವಿದರನ್ನು ಮತ್ತು ಕಾರ್ಯಕ್ರಮ ಸಂಘಟಕರನ್ನು ಸ್ಥಳೀಯ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದೇವೆ” ಎಂದು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ರೈತ ಹೋರಾಟದ ಕುರಿತು ವಿವಾದಾತ್ಮಕ ಹೇಳಿಕೆಯ ಆರೋಪ: ಕಾಂಗ್ರೆಸ್ ಸಂಸದನ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...