Homeಅಂತರಾಷ್ಟ್ರೀಯಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ- ಬಂಧಿತರ ಸಂಖ್ಯೆ 55 ಕ್ಕೆ ಏರಿಕೆ

ಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ- ಬಂಧಿತರ ಸಂಖ್ಯೆ 55 ಕ್ಕೆ ಏರಿಕೆ

ಟೆರ್ರಿ ಗ್ರಾಮದಲ್ಲಿರುವ ದೇವಾಲಯದ ವಿಸ್ತರಣೆ ನಡೆಯುತ್ತಿರುವುದನ್ನು ವಿರೋಧಿಸಿ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ.

- Advertisement -
- Advertisement -

ಪಾಕಿಸ್ತಾನದ ಖೈಬರ್ ಪಾಖ್ತುನ್‌‌ಟ್ವಾ ಪ್ರಾಂತ್ಯದಲ್ಲಿ ಮೂಲಭೂತವಾದಿ ಪಕ್ಷದ ಸದಸ್ಯರ ನೇತೃತ್ವದಲ್ಲಿ ಜನಸಮೂಹವೊಂದು ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿ, ಬೆಂಕಿ ಹಚ್ಚಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಪಾಕಿಸ್ತಾನ ಪೊಲೀಸರು ಮತ್ತೆ 10 ಜನರನ್ನು ಬಂಧಿಸಿದ್ದಾರೆ.

ಈ 10 ಮಂದಿಯ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 55 ಕ್ಕೆ ಏರಿದೆ. ಕಳೆದ  ಬುಧವಾರ ಖೈಬರ್ ಪಾಖ್ತುನ್‌‌ಟ್ವಾದ ಕರಕ್ ಜಿಲ್ಲೆಯ ಟೆರ್ರಿ ಗ್ರಾಮದಲ್ಲಿರುವ ದೇವಾಲಯವನ್ನು ಧ್ವಂಸಗೊಳಿಸಿದ ನಂತರ ಪೊಲೀಸರು ಪ್ರಕರಣದಲ್ಲಿ 350 ಕ್ಕೂ ಹೆಚ್ಚು ಜನರ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ.

ಟೆರ್ರಿ ಗ್ರಾಮದಲ್ಲಿರುವ ದೇವಾಲಯದ ವಿಸ್ತರಣೆ ನಡೆಯುತ್ತಿರುವುದನ್ನು ವಿರೋಧಿಸಿ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ. ಎಫ್‌ಐಆರ್‌ನಲ್ಲಿ ಹೆಸರಿಸಲಾದ ಇತರ ಆರೋಪಿಗಳನ್ನು ಬಂಧಿಸಲು ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಹಿಂದೂ ಧಾರ್ಮಿಕ ಮುಖಂಡರ ಸಮಾಧಿ ಹೊಂದಿರುವ ದಶಕಗಳಷ್ಟು ಹಳೆಯದಾದ ಈ ದೇವಾಲಯವು ತನ್ನ ಕಟ್ಟಡವನ್ನು ನವೀಕರಿಸಲು ಸ್ಥಳೀಯ ಅಧಿಕಾರಿಗಳಿಂದ ಅನುಮತಿ ಪಡೆದಿತ್ತು. ಇದರಿಂದ ಕ್ರೋಧಗೊಂಡ  ಜನಸಮೂಹ ದಾಳಿ ನಡೆಸಿದೆ.

ಕೆಲವು ಸ್ಥಳೀಯ ಮೌಲ್ವಿಗಳು ಮತ್ತು ಜಾಮಿಯತ್ ಉಲೆಮಾ-ಇ-ಇಸ್ಲಾಂ ಪಕ್ಷದ (ಫಜಲ್ ಉರ್ ರೆಹಮಾನ್ ಗುಂಪು) ಬೆಂಬಲಿಗರ ನೇತೃತ್ವದಲ್ಲಿ ಜನಸಮೂಹವು ಹೊಸದಾಗಿ ನಿರ್ಮಿಸಿದ ದೇವಾಲಯದ ಕಟ್ಟಡವನ್ನು  ನೆಲಸಮಗೊಳಿಸಿದೆ.

ದೇವಾಲಯದ ಮೇಲಿನ ದಾಳಿಯನ್ನು ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಭಾರತ ಕೂಡ ಪ್ರತಿಭಟನೆ ಮೂಲಕ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದು, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.

ಇದನ್ನೂ ಓದಿ: ಲವ್ ಜಿಹಾದ್ ಎಂಬ ಕಪೋಲಕಲ್ಪಿತ: ಮತಾಂತರ ವಿರೋಧ ಕಾಯ್ದೆಯ ಅವಾಂತರ..

ಜನವರಿ 5 ರಂದು ಸ್ಥಳೀಯ ಅಧಿಕಾರಿಗಳಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಪಾಕಿಸ್ತಾನದ ಸುಪ್ರೀಂ ಕೋರ್ಟ್ ಆದೇಶಿಸಿದೆ. ಜನವರಿ 4 ರೊಳಗೆ ವರದಿಯನ್ನು ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಅಹ್ಮದ್ ಅವರು ಅಲ್ಪಸಂಖ್ಯಾತರ ಹಕ್ಕುಗಳ ಆಯೋಗದ ಅಧ್ಯಕ್ಷರು, ಪೊಲೀಸ್ ಮುಖ್ಯಸ್ಥರು ಮತ್ತು ಪ್ರಾಂತ್ಯದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ.

ಸರ್ಕಾರವು ಹಾನಿಗೊಳಗಾದ ದೇವಾಲಯ ಮತ್ತು ಸಮಾಧಿಯನ್ನು ಆದಷ್ಟು ಕಡಿಮೆ ಸಮಯದಲ್ಲಿ ಪುನರ್‌ ನಿರ್ಮಿಸುವುದಾಗಿ ಭರವಸೆ ನೀಡುತ್ತೇವೆ. ಪ್ರಾಂತ್ಯದಲ್ಲಿ ಧಾರ್ಮಿಕ ಸಹಿಷ್ಣುತೆಯನ್ನು ಕಾಪಾಡಲಾಗುವುದು ಎಂದು ಖೈಬರ್ ಪಾಖ್ತುನ್‌‌ಟ್ವಾ ಮುಖ್ಯಮಂತ್ರಿ ಮಹಮೂದ್ ಖಾನ್ ಹೇಳಿದ್ದಾರೆ.

ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ ಬಗ್ಗೆ ಭಾರತದ ಪ್ರತಿಭಟನೆ “ಸಂಪೂರ್ಣವಾಗಿ ಅನಗತ್ಯ” ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿ ಶನಿವಾರ ಹೇಳಿದೆ.


ಇದನ್ನೂ ಓದಿ: ಫ್ಲ್ಯಾಟ್ ವಿಚಾರದಲ್ಲಿ ಕಂಗನಾ ರಾಣಾವತ್ ನಿಯಮ ಉಲ್ಲಂಘಿಸಿದ್ದಾರೆ: ಮುಂಬೈ ಸಿವಿಲ್ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...