Homeಕರ್ನಾಟಕರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ಯತ್ನಾಳ್​ ಇತ್ತೀಚೆಗೆ ಮುಖ್ಯಮಂತ್ರಿಯ ಕಾರ್ಯ ವೈಖರಿಯನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಅವರಿಗೆ ಬಹಿರಂಗ ಪತ್ರ ಬರೆದಿದ್ದರು.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರಹಾಕಿರುವ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಯಡಿಯೂರಪ್ಪ ಬೆಂಬಲಿಗರು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದೂರು ನೀಡಿದ್ದಾರೆ. “ರಾಜ್ಯ ನಾಯಕತ್ವದ ವಿರುದ್ಧ ಹೇಳಿಕೆ ನೀಡುತ್ತಿರುವ ಯತ್ನಾಳ್ ಮೇಲೆ ಕ್ರಮ ಕೈಗೊಳ್ಳಿ” ಎಂದು ಪತ್ರ ಬರೆದಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈಗಾಗಲೇ ಯತ್ನಾಳ್ ಅವರೊಂದಿಗೆ ಮಾತನಾಡಿದ್ದು, ಕೇಂದ್ರದ ಶಿಸ್ತಿನ ಸಮಿತಿ ಅವರ ಹೇಳಿಕೆಗಳನ್ನು ಗಮನಿಸುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್‌ನಲ್ಲಿ, “ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಅಧಿಕಾರದಲ್ಲಿ ಉಳಿಯುವುದಿಲ್ಲ. ಕೇಂದ್ರರು ನಾಯಕರು ಅವರಿಗೆ ಗಡುವು ನೀಡಿದ್ದಾರೆ. ಜನವರಿ 14 ರಂದು ಸಂಕ್ರಾಂತಿ ಹಬ್ಬಕ್ಕಿಂತ ಮೊದಲು ಯಡಿಯೂರಪ್ಪನನ್ನು ಬದಲಾಯಿಸಲಾಗುವುದು” ಎಂದು ಹೇಳಿದ್ದರು.

ಇದನ್ನೂ ಓದಿ: ಬಿಎಸ್​ವೈ ವಿರುದ್ಧ ಮತ್ತೆ ಅಪಸ್ವರ ಎತ್ತಿದ ಯತ್ನಾಳ್​; ಸಿಎಂ ಕಾರ್ಯವೈಖರಿ ಖಂಡಿಸಿ ಕಟೀಲ್​ಗೆ ಪತ್ರ

ಯತ್ನಾಳ್ ಮತ್ತು ಬಿಜೆಪಿ ನಡುವಿನ ಮುಸುಕಿನ ಗುದ್ದಾಟ ತುಂಬಾ ದಿನದಿಂದ ನಡೆಯುತ್ತಿದೆ. 2009 ರಲ್ಲಿ, ಎರಡು ಬಾರಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವರಾಗಿದ್ದ ಯತ್ನಾಳ್‌ ಅವರಿಗೆ ಟಿಕೆಟ್ ನಿರಾಕರಿಸಿದಾಗ, ಅವರು ಜೆಡಿಎಸ್‌ಗೆ ಪಕ್ಷಾಂತರವಾಗಿದ್ದರು. ನಂತರ 2013 ರಲ್ಲಿ ಮತ್ತೆ ಬಿಜೆಪಿಗೆ ಸೇರಿದ್ದರು. ಆದರೆ 2015 ರಲ್ಲಿ ಅವರನ್ನು ಪಕ್ಷದಿಂದ ಮತ್ತೆ ಹೊರಹಾಕಲಾಯಿತು. ಇತ್ತೀಚಿಗೆ 2018 ರಲ್ಲಿ ಮತ್ತೆ ಪಕ್ಷಕ್ಕೆ ಸೇರಿಕೊಂಡಿದ್ದರು. ಅಂದಿನ ಮುಖ್ಯಮಂತ್ರಿಯಾಗಿದ್ದ ಡಿ.ವಿ ಸದಾನಂದ ಗೌಡ ಅವರು ಪಕ್ಷದ ನಾಯಕತ್ವದ ವಿರುದ್ಧ ಹೇಳಿಕೆ ನೀಡದಂತೆ ಯತ್ನಾಳ್ ಅವರಿಗೆ ಆದೇಶಿಸಿದ್ದರು. ಆದರೆ ಯತ್ನಾಳ್‌, “ತಾನು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಸೇವೆ ಸಲ್ಲಿಸಿರುವುದಾಗಿಯೂ, ಸದಾನಂದ ಗೌಡ ತಮಗಿಂತ ಕಿರಿಯರು” ಎಂದು ತಿರುಗೇಟು ನೀಡಿದ್ದರು.

ಭಾನುವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಯತ್ನಾಳ್‌ ಅವರ ಹೇಳಿಕೆಯ ಕುರಿತು ಚರ್ಚೆ ಮಾಡುವುದಿಲ್ಲ ಎಂದು ಪಕ್ಷದ ಅಧಿಕೃತ ವಕ್ತಾರ ಗಣೇಶ್ ಕಾರ್ನಿಕ್ ಹೇಳಿದ್ದಾರೆ. “ಆದರೆ ಯತ್ನಾಳ್‌ ಅವರನ್ನು ಮೂರರಿಂದ ನಾಲ್ಕು ಪ್ರಬಲ ನಾಯಕರು ಬೆಂಬಲಿಸುತ್ತಿದ್ದಾರೆ ಎನಿಸುತ್ತದೆ. ಯಾಕೆಂದರೆ, ಉನ್ನತ ನಾಯಕರ ವಿರುದ್ಧ ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರೂ ಅವರು ಪಕ್ಷದಲ್ಲಿ ಉಳಿಯಲು ಹೇಗೆ ಸಾಧ್ಯ?” ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ಜಾತಿ-ಧರ್ಮಗಳ ನಡುವೆ ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವ ಯತ್ನಾಳ್‌ ಕುತಂತ್ರ ಫಲಿಸುವುದಿಲ್ಲ: ಕರವೇ

ಬಿಜೆಪಿ ಪಕ್ಷ ರಾಜ್ಯದಲ್ಲಿ ತಮ್ಮ ನಿರೀಕ್ಷೆಯಂತೆ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ವರ್ಷದ ಮೇಲಾಗಿದೆ. ಆದರೂ ಆಂತರಿಕ ಬಿಕ್ಕಟ್ಟು ಮಾತ್ರ ಇನ್ನೂ ಶಮನವಾಗುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಇನ್ನು, ವಿರೋಧ ಪಕ್ಷಗಳಿಗಿಂತ ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಮುಖ್ಯಮಂತ್ರಿ ಬಿಎಸ್​ವೈ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದು ಪಕ್ಷಕ್ಕೆ ಬಿಸಿತುಪ್ಪವಾಗಿ ಪರಿಣಮಿಸುತ್ತಿದೆ. ಪಕ್ಷದ ನಾಯಕರು ಎಷ್ಟೇ ಹೇಳಿದರೂ ಬಿಎಸ್​ ಯಡಿಯೂರಪ್ಪ ವಿರುದ್ಧದ ತಮ್ಮ ವಾಡಿಕೆಯ ವಾಗ್ದಾಳಿಯನ್ನು ನಿಲ್ಲಿಸಿಲ್ಲ.

ಯತ್ನಾಳ್​ ಇತ್ತೀಚೆಗೆ ಮುಖ್ಯಮಂತ್ರಿಯ ಕಾರ್ಯ ವೈಖರಿಯನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಅವರಿಗೆ ಬಹಿರಂಗ ಪತ್ರ ಬರೆದಿದ್ದರು.

ಆಡಳಿತ ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಜನವರಿ.4 ಮತ್ತು 5 ರಂದು ಬೆಂಗಳೂರಿನಲ್ಲಿ ವಿಭಾಗವಾರು ಶಾಸಕರ ಸಭೆ ಕರೆದಿದ್ದಾರೆ. ಆದರೆ, ಈ ಸಭೆಯ ವಿಚಾರವನ್ನು ಮುಂದಿಟ್ಟುಕೊಂಡು ಶಾಸಕ ಯತ್ನಾಳ್ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್​ ಕಟೀಲ್ ಅವರಿಗೆ ಪತ್ರ ಬರೆದಿದ್ದರು.


ಇದನ್ನೂ ಓದಿ: ಯತ್ನಾಳ್ ಹುಚ್ಚರಂತೆ ಮಾತನಾಡುತ್ತಿದ್ದಾರೆ: ರೇಣುಕಾಚಾರ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...