Homeಕರ್ನಾಟಕರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ಯತ್ನಾಳ್​ ಇತ್ತೀಚೆಗೆ ಮುಖ್ಯಮಂತ್ರಿಯ ಕಾರ್ಯ ವೈಖರಿಯನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಅವರಿಗೆ ಬಹಿರಂಗ ಪತ್ರ ಬರೆದಿದ್ದರು.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರಹಾಕಿರುವ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಯಡಿಯೂರಪ್ಪ ಬೆಂಬಲಿಗರು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದೂರು ನೀಡಿದ್ದಾರೆ. “ರಾಜ್ಯ ನಾಯಕತ್ವದ ವಿರುದ್ಧ ಹೇಳಿಕೆ ನೀಡುತ್ತಿರುವ ಯತ್ನಾಳ್ ಮೇಲೆ ಕ್ರಮ ಕೈಗೊಳ್ಳಿ” ಎಂದು ಪತ್ರ ಬರೆದಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈಗಾಗಲೇ ಯತ್ನಾಳ್ ಅವರೊಂದಿಗೆ ಮಾತನಾಡಿದ್ದು, ಕೇಂದ್ರದ ಶಿಸ್ತಿನ ಸಮಿತಿ ಅವರ ಹೇಳಿಕೆಗಳನ್ನು ಗಮನಿಸುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್‌ನಲ್ಲಿ, “ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಅಧಿಕಾರದಲ್ಲಿ ಉಳಿಯುವುದಿಲ್ಲ. ಕೇಂದ್ರರು ನಾಯಕರು ಅವರಿಗೆ ಗಡುವು ನೀಡಿದ್ದಾರೆ. ಜನವರಿ 14 ರಂದು ಸಂಕ್ರಾಂತಿ ಹಬ್ಬಕ್ಕಿಂತ ಮೊದಲು ಯಡಿಯೂರಪ್ಪನನ್ನು ಬದಲಾಯಿಸಲಾಗುವುದು” ಎಂದು ಹೇಳಿದ್ದರು.

ಇದನ್ನೂ ಓದಿ: ಬಿಎಸ್​ವೈ ವಿರುದ್ಧ ಮತ್ತೆ ಅಪಸ್ವರ ಎತ್ತಿದ ಯತ್ನಾಳ್​; ಸಿಎಂ ಕಾರ್ಯವೈಖರಿ ಖಂಡಿಸಿ ಕಟೀಲ್​ಗೆ ಪತ್ರ

ಯತ್ನಾಳ್ ಮತ್ತು ಬಿಜೆಪಿ ನಡುವಿನ ಮುಸುಕಿನ ಗುದ್ದಾಟ ತುಂಬಾ ದಿನದಿಂದ ನಡೆಯುತ್ತಿದೆ. 2009 ರಲ್ಲಿ, ಎರಡು ಬಾರಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವರಾಗಿದ್ದ ಯತ್ನಾಳ್‌ ಅವರಿಗೆ ಟಿಕೆಟ್ ನಿರಾಕರಿಸಿದಾಗ, ಅವರು ಜೆಡಿಎಸ್‌ಗೆ ಪಕ್ಷಾಂತರವಾಗಿದ್ದರು. ನಂತರ 2013 ರಲ್ಲಿ ಮತ್ತೆ ಬಿಜೆಪಿಗೆ ಸೇರಿದ್ದರು. ಆದರೆ 2015 ರಲ್ಲಿ ಅವರನ್ನು ಪಕ್ಷದಿಂದ ಮತ್ತೆ ಹೊರಹಾಕಲಾಯಿತು. ಇತ್ತೀಚಿಗೆ 2018 ರಲ್ಲಿ ಮತ್ತೆ ಪಕ್ಷಕ್ಕೆ ಸೇರಿಕೊಂಡಿದ್ದರು. ಅಂದಿನ ಮುಖ್ಯಮಂತ್ರಿಯಾಗಿದ್ದ ಡಿ.ವಿ ಸದಾನಂದ ಗೌಡ ಅವರು ಪಕ್ಷದ ನಾಯಕತ್ವದ ವಿರುದ್ಧ ಹೇಳಿಕೆ ನೀಡದಂತೆ ಯತ್ನಾಳ್ ಅವರಿಗೆ ಆದೇಶಿಸಿದ್ದರು. ಆದರೆ ಯತ್ನಾಳ್‌, “ತಾನು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಸೇವೆ ಸಲ್ಲಿಸಿರುವುದಾಗಿಯೂ, ಸದಾನಂದ ಗೌಡ ತಮಗಿಂತ ಕಿರಿಯರು” ಎಂದು ತಿರುಗೇಟು ನೀಡಿದ್ದರು.

ಭಾನುವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಯತ್ನಾಳ್‌ ಅವರ ಹೇಳಿಕೆಯ ಕುರಿತು ಚರ್ಚೆ ಮಾಡುವುದಿಲ್ಲ ಎಂದು ಪಕ್ಷದ ಅಧಿಕೃತ ವಕ್ತಾರ ಗಣೇಶ್ ಕಾರ್ನಿಕ್ ಹೇಳಿದ್ದಾರೆ. “ಆದರೆ ಯತ್ನಾಳ್‌ ಅವರನ್ನು ಮೂರರಿಂದ ನಾಲ್ಕು ಪ್ರಬಲ ನಾಯಕರು ಬೆಂಬಲಿಸುತ್ತಿದ್ದಾರೆ ಎನಿಸುತ್ತದೆ. ಯಾಕೆಂದರೆ, ಉನ್ನತ ನಾಯಕರ ವಿರುದ್ಧ ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರೂ ಅವರು ಪಕ್ಷದಲ್ಲಿ ಉಳಿಯಲು ಹೇಗೆ ಸಾಧ್ಯ?” ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ಜಾತಿ-ಧರ್ಮಗಳ ನಡುವೆ ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವ ಯತ್ನಾಳ್‌ ಕುತಂತ್ರ ಫಲಿಸುವುದಿಲ್ಲ: ಕರವೇ

ಬಿಜೆಪಿ ಪಕ್ಷ ರಾಜ್ಯದಲ್ಲಿ ತಮ್ಮ ನಿರೀಕ್ಷೆಯಂತೆ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ವರ್ಷದ ಮೇಲಾಗಿದೆ. ಆದರೂ ಆಂತರಿಕ ಬಿಕ್ಕಟ್ಟು ಮಾತ್ರ ಇನ್ನೂ ಶಮನವಾಗುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಇನ್ನು, ವಿರೋಧ ಪಕ್ಷಗಳಿಗಿಂತ ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಮುಖ್ಯಮಂತ್ರಿ ಬಿಎಸ್​ವೈ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದು ಪಕ್ಷಕ್ಕೆ ಬಿಸಿತುಪ್ಪವಾಗಿ ಪರಿಣಮಿಸುತ್ತಿದೆ. ಪಕ್ಷದ ನಾಯಕರು ಎಷ್ಟೇ ಹೇಳಿದರೂ ಬಿಎಸ್​ ಯಡಿಯೂರಪ್ಪ ವಿರುದ್ಧದ ತಮ್ಮ ವಾಡಿಕೆಯ ವಾಗ್ದಾಳಿಯನ್ನು ನಿಲ್ಲಿಸಿಲ್ಲ.

ಯತ್ನಾಳ್​ ಇತ್ತೀಚೆಗೆ ಮುಖ್ಯಮಂತ್ರಿಯ ಕಾರ್ಯ ವೈಖರಿಯನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಅವರಿಗೆ ಬಹಿರಂಗ ಪತ್ರ ಬರೆದಿದ್ದರು.

ಆಡಳಿತ ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಜನವರಿ.4 ಮತ್ತು 5 ರಂದು ಬೆಂಗಳೂರಿನಲ್ಲಿ ವಿಭಾಗವಾರು ಶಾಸಕರ ಸಭೆ ಕರೆದಿದ್ದಾರೆ. ಆದರೆ, ಈ ಸಭೆಯ ವಿಚಾರವನ್ನು ಮುಂದಿಟ್ಟುಕೊಂಡು ಶಾಸಕ ಯತ್ನಾಳ್ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್​ ಕಟೀಲ್ ಅವರಿಗೆ ಪತ್ರ ಬರೆದಿದ್ದರು.


ಇದನ್ನೂ ಓದಿ: ಯತ್ನಾಳ್ ಹುಚ್ಚರಂತೆ ಮಾತನಾಡುತ್ತಿದ್ದಾರೆ: ರೇಣುಕಾಚಾರ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...