Homeಚಳವಳಿರೈತರ ಪ್ರತಿಭಟನೆ ಕುರಿತು ಅವಹೇಳನ: ಮೂವರು ಬಿಜೆಪಿ ನಾಯಕರಿಗೆ ಲೀಗಲ್ ನೋಟಿಸ್

ರೈತರ ಪ್ರತಿಭಟನೆ ಕುರಿತು ಅವಹೇಳನ: ಮೂವರು ಬಿಜೆಪಿ ನಾಯಕರಿಗೆ ಲೀಗಲ್ ನೋಟಿಸ್

ಹಲವಾರು ರಾಜಕೀಯ ನಾಯಕರು ಸದುದ್ದೇಶವಿಲ್ಲದ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡುವ ಮೂಲಕ ರೈತರ ಪ್ರತಿಭಟನೆಗೆ ಕಳಂಕ ತರಲು ಯತ್ನಿಸಿದ್ದಾರೆ ಎಂದು ನೋಟಿಸ್‌ನಲ್ಲಿ ಅಪಾದಿಸಲಾಗಿದೆ.

- Advertisement -
- Advertisement -

ಮೂರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸಿತ್ತಿರುವ ಪಂಜಾಬ್ ಮೂಲದ ರೈತರು, ಪ್ರತಿಭಟನೆ ಮತ್ತು ಪ್ರತಿಭಟನಾಕಾರರನ್ನು ಅವಹೇಳನ ಮಾಡಿದ ಆರೋಪದ ಮೇಲೆ ಮೂವರು ಬಿಜೆಪಿ ನಾಯಕರಿಗೆ ಲೀಗಲ್ ನೋಟಿಸ್ ಕಳಿಸಿದ್ದಾರೆ.

ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಮತ್ತು ಬಿಜೆಪಿ ನಾಯಕ ರಾಮ್ ಮಾಧವ್ ಅವರಿಗೆ ನೋಟಿಸ್‌ ಕಳಿಸಲಾಗಿದ್ದು, ಪಂಜಾಬಿನಲ್ಲಿ ಆಮ್ ಆದ್ಮಿ ಪಕ್ಷದ ಸಹ-ಉಸ್ತುವಾರಿಯಾಗಿರುವ ರಾಘವ್ ಛಡ್ಡಾ, ರೈತರಿಗೆ ಅಗತ್ಯವಾದ ಎಲ್ಲ ಕಾನೂನು ನೆರವುಗಳನ್ನು ಒದಗಿಸುತ್ತೇವೆ ಎಂದಿದ್ದಾರೆ.

ಈ ಮೂವರು ಬಿಜೆಪಿ ನಾಯಕರು ಬೇಷರತ್ ಕ್ಷಮೆಯಾಚಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ ಎಂಬುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಹಲವಾರು ರಾಜಕೀಯ ನಾಯಕರು ದುರುದ್ದೇಶಪೂರ್ವಕವಾಗಿ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡುವ ಮೂಲಕ ರೈತರ ಪ್ರತಿಭಟನೆಗೆ ಕಳಂಕ ತರಲು ಯತ್ನಿಸಿದ್ದಾರೆ ಎಂದು ನೋಟಿಸ್‌ನಲ್ಲಿ ಅಪಾದಿಸಲಾಗಿದೆ.

ಇದನ್ನೂ ಓದಿ: ರಫ್ತಿನಲ್ಲಿ ಶೇ.0.8 ಕುಸಿತ: 15.71 ಬಿಲಿಯನ್ ಡಾಲರ್‌ಗೇರಿದ‌ ಭಾರತದ ವ್ಯಾಪಾರ ಕೊರತೆ

ಒಂದು ಕಡೆ ಪ್ರಧಾನಿ ಮೋದಿ ಮತ್ತು ಅವರ ಸಹಚರರು ರೈತರೊಂದಿಗೆ ಸಹಮತ ಸಾಧಿಸುವ ಮಾತನಾಡುತ್ತಿದ್ದರೆ, ಅವರದೇ ಗುಂಪಿನ ಹಲವರು, “ರೈತರನ್ನು ದಾರಿ ತಪ್ಪಿಸಲಾಗಿದೆ, ಪ್ರತ್ಯೇಕವಾದಿಗಳು ಮತ್ತು ದೇಶದ್ರೋಹಿಗಳು ರೈತರ ಹಿಂದಿದ್ದಾರೆ” ಎಂಬಂತಹ ಅಭಿಪ್ರಾಯ ಸೃಷ್ಟಿಸುವ ಯತ್ನ ಮಾಡಲಾಗಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಅಮೃತಸರ್‌ದ ರೈತ ಜಸ್ಕರಣ್ ಸಿಂಗ್ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರಿಗೆ ನೋಟಿಸ್ ಕಳಿಸಿದ್ದು, ಬೇಷರತ್ ಕ್ಷಮೆ ಯಾಚಿಸಲು ಆಗ್ರಹಿಸಿದ್ದಾರೆ. ಸಂದರ್ಶನವೊಂದರಲ್ಲಿ, “ವಿದೇಶಿ ಶಕ್ತಿಗಳು ಪ್ರತಿಭಟನೆಯಲ್ಲಿ ಸೇರಿವೆ. ಪ್ರತಿಭಟನೆಯಲ್ಲಿ ಖಲಿಸ್ತಾನ್ ಮತ್ತು ಶರ್ಜಿಜ್ ಇಮಾಮ್ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ” ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದರು.

ಇದನ್ನೂ ಓದಿ: ಸುರಿವ ಮಳೆ – ಕೊರೆವ ಚಳಿಯಲ್ಲಿಯೂ ಪಟ್ಟು ಬಿಡದ ಪ್ರತಿಭಟನಾ ನಿರತ ರೈತರು!

ಜಲಂದರ್‌ನ ರೈತ ರಮ್ನೀಕ್ ಸಿಂಗ್ ರಂಧಾವಾ ಅವರು ಗುಜರಾತ್ ಡಿಸಿಎಂ ನಿತಿನ್ ಪಟೇಲ್‌ಗೆ ನೋಟಿಸ್ ಕಳಿಸಿದ್ದಾರೆ. “ರೈತರ ಹೆಸರಲ್ಲಿ ದೇಶದ್ರೋಹಿ ಶಕ್ತಿಗಳು, ಕಮ್ಯುನಿಸ್ಟರು, ಖಲಿಸ್ತಾನಿಗಳು ಮತ್ತು ಚೀನಾ ಪರ ಇರುವವರು ಪ್ರತಿಭಟನೆಯಲ್ಲಿ ಸೇರಿಕೊಂಡಿದ್ದು, ದೇಶದ್ರೋಹಿಗಳು ಈ ಪ್ರತಿಭಟನೆಗೆ ಧನ ಸಹಾಯ ಮಾಡುತ್ತಿದ್ದಾರೆ” ಎಂದು ಗುಜರಾತ್ ಡಿಸಿಎಂ ನಿತಿನ್ ಪಟೇಲ್ ಹೇಳಿದ್ದರು. “ಪ್ರತಿಭಟನಾನಿರತ ರೈತರು ಪಿಜ್ಜಾ, ಪಕೋಡಾ ತಿನ್ನೋದನ್ನ ನೋಡಿದ್ದೇವೆ, ಅವೆಲ್ಲ ಅವರಿಗೆ ಉಚಿತವಾಗಿ ಬರುತ್ತಿವೆ” ಎಂದೂ ಪಟೇಲ್ ಹೇಳಿದ್ದರು.

ಸಂಗ್ರೂರ್‌ನ ಸುಖ್‌ವಿಂದರ್ ಸಿಂಗ್ ಸಿಧು, ಬಿಜೆಪಿ ರಾಷ್ಟ್ರ ನಾಯಕ ರಾಮ್ ಮಾಧವರಿಗೆ ನೋಟಿಸ್ ಕಳಿಸಿದ್ದಾರೆ. ಟ್ವೀಟ್‌ಗಳ ಮೂಲಕ ಮಾಧವ್ ರೈತ ಪ್ರತಿಭಟನೆಗೆ ಕಳಂಕ ಹಚ್ಚಲು ಯತ್ನಿಸಿದ್ದಾರೆ ಎಂದು ದೂರಲಾಗಿದೆ.

ಇದೇ ಸಂದರ್ಭದಲ್ಲಿ ಪಂಜಾಬ್ ಆಮ್ ಆದ್ಮಿ ಪಾರ್ಟಿಯ ಸಹ ಉಸ್ತುವಾರಿ ಆಗಿ ನೇಮಕವಾಗಿರುವ ದೆಹಲಿ ಶಾಸಕ ರಾಘವ್ ಛಡ್ಡಾ, ನೋಟಿಸ್ ಕಳಿಸಿದ ಈ ಮೂವರು ರೈತರಿಗೆ ಉಚಿತ ಕಾನೂನು ನೆರವು ಮತ್ತು ಸೇವೆಯನ್ನು ಒದಗಿಸಲಾಗುವುದು ಎಂದು ಶನಿವಾರ ಪ್ರಕಟಿಸಿದ್ದಾರೆ.


ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...