Homeಮುಖಪುಟಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಮಹಿಳೆಯರ ಸಾಧನೆಗೆ ಮುನ್ನುಡಿ ಹಾಡಿದ್ದ, ಭಾರತದ ಪ್ರಪ್ರಥಮ ಹೆಣ್ಣುಮಕ್ಕಳ ಶಾಲೆ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಇಂದು ಯಾವ ಸ್ಥಿತಿಗೆ ತಲುಪಿದೆ ಎನ್ನುವುದನ್ನು ನೋಡಿದರೆ, ನಿಜಕ್ಕೂ ಭಾರತೀಯರಾದ ನಮಗೆ ಅವಮಾನವಾಗುತ್ತದೆ. 

- Advertisement -
- Advertisement -

ವೈದಿಕಶಾಹಿಯ ಕಬಂದಬಾಹುವಿಗೆ ಸಿಲುಕಿದ್ದ ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಶಿಕ್ಷಣದ ಮೂಲಕ ಬೆಳಕಿಗೆ ತಂದು ಇತಿಹಾಸ ಸೃಷ್ಟಿಸಿದ್ದ ಅಕ್ಷರ ಮಾತೆ ಸಾವಿತ್ರಿ ಬಾಯಿ ಫುಲೆಯವರ ಜನ್ಮ ದಿನ ಇಂದು. 1848 ಜನವರಿ 1 ರಂದು ಮಹಾರಾ‍ಷ್ಟ್ರದ ಭೀಡೆ ವಾಡದಲ್ಲಿ ಹೆಣ್ಣುಮಕ್ಕಳಿಗಾಗಿ ಶಾಲೆ ತೆರೆದು ಶಿಕ್ಷಣ ನೀಡಲು ಪ್ರಾರಂಭಿಸಿದ್ದರು. ಭಾರತದ ಇಂದಿನ ಹೆಣ್ಣುಮಕ್ಕಳು ಏನೇ ಸಾಧನೆ ಮಾಡಿದ್ದರೂ ಅವುಗಳ ಹಿಂದೆ ಸಾವಿತ್ರಿಬಾಯಿ ಫುಲೆಯವರ ತ್ಯಾಗ ಮತ್ತು ಆಶಯವಿದೆ. ಅಂದು ಇವರು ನೀಡಿದ ಶಿಕ್ಷಣದ ನೆರಳಿನಳಿಲ್ಲಿ ಬೆಳೆದ ಭಾರತದ ಹೆಣ್ಣು ಜೀವಗಳು ಅಡುಗೆ ಮನೆಯಿಂದ ಹೊರಬಂದು, ಇಂದು ಗಗನಕ್ಕೆ ಹಾರುವವರೆಗೆ ಸಾಧನೆ ಮಾಡಿದ್ದಾರೆ.

ಇಂತಹ ಸಾಧನೆಗೆ ಮುನ್ನುಡಿ ಹಾಡಿದ್ದ, ಭಾರತದ ಪ್ರಪ್ರಥಮ ಹೆಣ್ಣುಮಕ್ಕಳ ಶಾಲೆ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಇಂದು ಯಾವ ಸ್ಥಿತಿಗೆ ತಲುಪಿದೆ ಎನ್ನುವುದನ್ನು ನೋಡಿದರೆ, ನಿಜಕ್ಕೂ ಭಾರತೀಯರಾದ ನಮಗೆ ಅವಮಾನವಾಗುತ್ತದೆ.

ಇದನ್ನೂ ಓದಿ: ಪ್ರತಿವರ್ಷ ಸಾವಿತ್ರಿ ಬಾಯಿ ಫುಲೆ ಉತ್ಸವ: ಮಹಾರಾಷ್ಟ್ರ ಸರ್ಕಾರ ಘೋಷಣೆ

ಇದನ್ನೂ ಓದಿ: ಸಾವಿರಾರು ದೀಪಗಳನ್ನು ಹಚ್ಚಿದ ಒಂದು ಬುಡ್ಡಿದೀಪವೇ ಸಾವಿತ್ರಿ ಬಾಯಿ ಫುಲೆ

ಈ ಶಾಲೆಯನ್ನು ಆರಂಭಿಸಲು ಫುಲೆ ದಂಪತಿಗಳು ಮಾಡಿದ ತ್ಯಾಗಕ್ಕೆ ಇಂದಿನ ನವ ಭಾರತ ನೀಡುತ್ತಿರುವ ಉಡುಗೊರೆ ಇದು. ಹೆಣ್ಣುಮಕ್ಕಳು ಮನೆಯಿಂದಲೇ ಹೊರಗೆ ಹೋಗಬಾರದು ಎಂದು ಕಟ್ಟಳೆ ವಿಧಿಸಿದ್ದ ಕಾಲದಲ್ಲಿ ತಾವೂ ಶಿಕ್ಷಣ ಪಡೆಯುವುದರೊಂದಿಗೆ ತಮ್ಮ ಮುಂದಿನ ಪೀಳಿಗೆಯ ಹೆಣ್ಣುಮಕ್ಕಳಿಗೂ ಶಿಕ್ಷಣ ಸಿಗಬೇಕು ಎಂದು ಆಶಿಸಿದ್ದರು ಫುಲೆ ದಂಪತಿಗಳು. ಆದರೆ, ಭಾರತದ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಆರಂಭವಾದ ಶಾಲೆಯನ್ನು ಸಂರಕ್ಷಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯಾವುದೇ ಕ್ರಮ ತೆಗೆದುಕೊಳ್ಳದಿರುವುದು, ನಮ್ಮನ್ನಾಳುವ ಸರ್ಕಾರಗಳ ವೈದಿಕಶಾಹಿ ಧೋರಣೆಯನ್ನು ಎತ್ತಿ ತೋರಿಸುತ್ತವೆ.

ಪರಂಪರೆ ಎಂದರೆ ಕೇವಲ ಬ್ರಾಹ್ಮಣರ, ಸನಾತನದ ಪರಂಪರೆ ಎಂದು ಭಾವಿಸಿರುವ ಸನಾತನಿಗಳ ಪರಂಪರೆಯ ಪಟ್ಟಿಗೆ ಈ ಶಾಲೆ ಸೇರುವುದಿಲ್ಲ. ಮಂದಿರ ಕಟ್ಟಲು ಇರುವ ಉತ್ಸಾಹ, ಶಾಲೆಯನ್ನು ಸಂರಕ್ಷಿಸಲು ಬರುವುದಿಲ್ಲ. ಜಾತಿ-ಮಠಗಳಿಗೆ ನೀಡುವ ಅನುದಾನ ಈ ಶಾಲೆಯನ್ನು ಉದ್ಧಾರ ಮಾಡಲು ನೀಡುವುದಿಲ್ಲ. ಸರ್ಕಾರದ ಜಾಹೀರಾತುಗಳಿಗೆ ಖರ್ಚು ಮಾಡುವ ಹಣ, ಈ ಶಾಲೆಯ ಅಭಿವೃದ್ಧಿಗೆ ದೊರೆಯುವುದಿಲ್ಲ.

ಇದನ್ನೂ ಓದಿ: ನನ್ನ ಮಗ ರಾಜಾ ವೇಮುಲಾ ವಕೀಲನಾಗಿದ್ದು, ಜನರಿಗಾಗಿ ಹೋರಾಡಲಿದ್ದಾನೆ: ರಾಧಿಕ ವೇಮುಲಾ

ಮಹಿಳೆ ಎರಡನೇ ದರ್ಜೆಯ ಪ್ರಜೆ ಎನ್ನುವ ಹಿಂದೂ ಮತ, ದಲಿತರನ್ನು, ದಲಿತ ಮಹಿಳೆಯರನ್ನು ಮನುಷ್ಯರು ಎಂದೇ ಪರಿಗಣಿಸಿರಲಿಲ್ಲ. ಇಂತಹವರಿಗೆ ಶಿಕ್ಷಣ ನೀಡುವ ಮೂಲಕ ಮುನ್ನೆಲೆಗೆ ತರಬೇಕು ಎನ್ನುವ ಕ್ರಾಂತಿಕಾರಿ ನಿರ್ಧಾರದಿಂದ ಆರಂಭವಾದ ಶಾಲೆಯನ್ನು ರಕ್ಷಿಸಲು ಈ ಸನಾತನವಾದಿಗಳು ಹೇಗೆ ಮನಸ್ಸು ಮಾಡುತ್ತಾರೆ. ವಿಪರ್ಯಾಸವೆಂದರೆ ಇಂದಿನ ನವಬ್ರಾಹ್ಮಣವಾದಿಗಳಾಗಿ ಮಾರ್ಪಾಡಾಗಿರುವ ದಲಿತ ನಾಯಕರು ಇದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ.

ಆದರೆ ಪ್ರಜ್ಞಾವಂತರು ಈ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕಿದೆ. ಈ ಮೂಲಕ ನಮ್ಮ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸ ಮಾಡಬೇಕಿದೆ.


ಇದನ್ನೂ ಓದಿ: “ಪಿಂಜ್ರಾ ತೋಡ್ (ಪಂಜರ ಮುರಿ)” ಎಂಬ ಪುಟ್ಟ ಆಂದೋಲನಕ್ಕೆ ಬೆದರಿತೆ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...