Homeಮುಖಪುಟಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಮಹಿಳೆಯರ ಸಾಧನೆಗೆ ಮುನ್ನುಡಿ ಹಾಡಿದ್ದ, ಭಾರತದ ಪ್ರಪ್ರಥಮ ಹೆಣ್ಣುಮಕ್ಕಳ ಶಾಲೆ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಇಂದು ಯಾವ ಸ್ಥಿತಿಗೆ ತಲುಪಿದೆ ಎನ್ನುವುದನ್ನು ನೋಡಿದರೆ, ನಿಜಕ್ಕೂ ಭಾರತೀಯರಾದ ನಮಗೆ ಅವಮಾನವಾಗುತ್ತದೆ. 

- Advertisement -
- Advertisement -

ವೈದಿಕಶಾಹಿಯ ಕಬಂದಬಾಹುವಿಗೆ ಸಿಲುಕಿದ್ದ ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಶಿಕ್ಷಣದ ಮೂಲಕ ಬೆಳಕಿಗೆ ತಂದು ಇತಿಹಾಸ ಸೃಷ್ಟಿಸಿದ್ದ ಅಕ್ಷರ ಮಾತೆ ಸಾವಿತ್ರಿ ಬಾಯಿ ಫುಲೆಯವರ ಜನ್ಮ ದಿನ ಇಂದು. 1848 ಜನವರಿ 1 ರಂದು ಮಹಾರಾ‍ಷ್ಟ್ರದ ಭೀಡೆ ವಾಡದಲ್ಲಿ ಹೆಣ್ಣುಮಕ್ಕಳಿಗಾಗಿ ಶಾಲೆ ತೆರೆದು ಶಿಕ್ಷಣ ನೀಡಲು ಪ್ರಾರಂಭಿಸಿದ್ದರು. ಭಾರತದ ಇಂದಿನ ಹೆಣ್ಣುಮಕ್ಕಳು ಏನೇ ಸಾಧನೆ ಮಾಡಿದ್ದರೂ ಅವುಗಳ ಹಿಂದೆ ಸಾವಿತ್ರಿಬಾಯಿ ಫುಲೆಯವರ ತ್ಯಾಗ ಮತ್ತು ಆಶಯವಿದೆ. ಅಂದು ಇವರು ನೀಡಿದ ಶಿಕ್ಷಣದ ನೆರಳಿನಳಿಲ್ಲಿ ಬೆಳೆದ ಭಾರತದ ಹೆಣ್ಣು ಜೀವಗಳು ಅಡುಗೆ ಮನೆಯಿಂದ ಹೊರಬಂದು, ಇಂದು ಗಗನಕ್ಕೆ ಹಾರುವವರೆಗೆ ಸಾಧನೆ ಮಾಡಿದ್ದಾರೆ.

ಇಂತಹ ಸಾಧನೆಗೆ ಮುನ್ನುಡಿ ಹಾಡಿದ್ದ, ಭಾರತದ ಪ್ರಪ್ರಥಮ ಹೆಣ್ಣುಮಕ್ಕಳ ಶಾಲೆ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಇಂದು ಯಾವ ಸ್ಥಿತಿಗೆ ತಲುಪಿದೆ ಎನ್ನುವುದನ್ನು ನೋಡಿದರೆ, ನಿಜಕ್ಕೂ ಭಾರತೀಯರಾದ ನಮಗೆ ಅವಮಾನವಾಗುತ್ತದೆ.

ಇದನ್ನೂ ಓದಿ: ಪ್ರತಿವರ್ಷ ಸಾವಿತ್ರಿ ಬಾಯಿ ಫುಲೆ ಉತ್ಸವ: ಮಹಾರಾಷ್ಟ್ರ ಸರ್ಕಾರ ಘೋಷಣೆ

ಇದನ್ನೂ ಓದಿ: ಸಾವಿರಾರು ದೀಪಗಳನ್ನು ಹಚ್ಚಿದ ಒಂದು ಬುಡ್ಡಿದೀಪವೇ ಸಾವಿತ್ರಿ ಬಾಯಿ ಫುಲೆ

ಈ ಶಾಲೆಯನ್ನು ಆರಂಭಿಸಲು ಫುಲೆ ದಂಪತಿಗಳು ಮಾಡಿದ ತ್ಯಾಗಕ್ಕೆ ಇಂದಿನ ನವ ಭಾರತ ನೀಡುತ್ತಿರುವ ಉಡುಗೊರೆ ಇದು. ಹೆಣ್ಣುಮಕ್ಕಳು ಮನೆಯಿಂದಲೇ ಹೊರಗೆ ಹೋಗಬಾರದು ಎಂದು ಕಟ್ಟಳೆ ವಿಧಿಸಿದ್ದ ಕಾಲದಲ್ಲಿ ತಾವೂ ಶಿಕ್ಷಣ ಪಡೆಯುವುದರೊಂದಿಗೆ ತಮ್ಮ ಮುಂದಿನ ಪೀಳಿಗೆಯ ಹೆಣ್ಣುಮಕ್ಕಳಿಗೂ ಶಿಕ್ಷಣ ಸಿಗಬೇಕು ಎಂದು ಆಶಿಸಿದ್ದರು ಫುಲೆ ದಂಪತಿಗಳು. ಆದರೆ, ಭಾರತದ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಆರಂಭವಾದ ಶಾಲೆಯನ್ನು ಸಂರಕ್ಷಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯಾವುದೇ ಕ್ರಮ ತೆಗೆದುಕೊಳ್ಳದಿರುವುದು, ನಮ್ಮನ್ನಾಳುವ ಸರ್ಕಾರಗಳ ವೈದಿಕಶಾಹಿ ಧೋರಣೆಯನ್ನು ಎತ್ತಿ ತೋರಿಸುತ್ತವೆ.

ಪರಂಪರೆ ಎಂದರೆ ಕೇವಲ ಬ್ರಾಹ್ಮಣರ, ಸನಾತನದ ಪರಂಪರೆ ಎಂದು ಭಾವಿಸಿರುವ ಸನಾತನಿಗಳ ಪರಂಪರೆಯ ಪಟ್ಟಿಗೆ ಈ ಶಾಲೆ ಸೇರುವುದಿಲ್ಲ. ಮಂದಿರ ಕಟ್ಟಲು ಇರುವ ಉತ್ಸಾಹ, ಶಾಲೆಯನ್ನು ಸಂರಕ್ಷಿಸಲು ಬರುವುದಿಲ್ಲ. ಜಾತಿ-ಮಠಗಳಿಗೆ ನೀಡುವ ಅನುದಾನ ಈ ಶಾಲೆಯನ್ನು ಉದ್ಧಾರ ಮಾಡಲು ನೀಡುವುದಿಲ್ಲ. ಸರ್ಕಾರದ ಜಾಹೀರಾತುಗಳಿಗೆ ಖರ್ಚು ಮಾಡುವ ಹಣ, ಈ ಶಾಲೆಯ ಅಭಿವೃದ್ಧಿಗೆ ದೊರೆಯುವುದಿಲ್ಲ.

ಇದನ್ನೂ ಓದಿ: ನನ್ನ ಮಗ ರಾಜಾ ವೇಮುಲಾ ವಕೀಲನಾಗಿದ್ದು, ಜನರಿಗಾಗಿ ಹೋರಾಡಲಿದ್ದಾನೆ: ರಾಧಿಕ ವೇಮುಲಾ

ಮಹಿಳೆ ಎರಡನೇ ದರ್ಜೆಯ ಪ್ರಜೆ ಎನ್ನುವ ಹಿಂದೂ ಮತ, ದಲಿತರನ್ನು, ದಲಿತ ಮಹಿಳೆಯರನ್ನು ಮನುಷ್ಯರು ಎಂದೇ ಪರಿಗಣಿಸಿರಲಿಲ್ಲ. ಇಂತಹವರಿಗೆ ಶಿಕ್ಷಣ ನೀಡುವ ಮೂಲಕ ಮುನ್ನೆಲೆಗೆ ತರಬೇಕು ಎನ್ನುವ ಕ್ರಾಂತಿಕಾರಿ ನಿರ್ಧಾರದಿಂದ ಆರಂಭವಾದ ಶಾಲೆಯನ್ನು ರಕ್ಷಿಸಲು ಈ ಸನಾತನವಾದಿಗಳು ಹೇಗೆ ಮನಸ್ಸು ಮಾಡುತ್ತಾರೆ. ವಿಪರ್ಯಾಸವೆಂದರೆ ಇಂದಿನ ನವಬ್ರಾಹ್ಮಣವಾದಿಗಳಾಗಿ ಮಾರ್ಪಾಡಾಗಿರುವ ದಲಿತ ನಾಯಕರು ಇದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ.

ಆದರೆ ಪ್ರಜ್ಞಾವಂತರು ಈ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕಿದೆ. ಈ ಮೂಲಕ ನಮ್ಮ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸ ಮಾಡಬೇಕಿದೆ.


ಇದನ್ನೂ ಓದಿ: “ಪಿಂಜ್ರಾ ತೋಡ್ (ಪಂಜರ ಮುರಿ)” ಎಂಬ ಪುಟ್ಟ ಆಂದೋಲನಕ್ಕೆ ಬೆದರಿತೆ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...