Homeಕರೋನಾ ತಲ್ಲಣಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? - ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? – ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ಮೂರನೇ ಹಂತದ ಟ್ರಯಲ್ ಅಪೂರ್ಣವಾಗಿದ್ದರೂ, ವಿಷಯವಾರು ತಜ್ಞ ಸಮಿತಿಯು ಕೊವಾಕ್ಸಿನ್ ತುರ್ತು ಬಳಕೆಗೆ ಅನುಮತಿ ನೀಡಿದ್ದನ್ನು ಐಸಿಎಂಆರ್ ಮುಖ್ಯಸ್ಥ ಡಾ.ಬಲರಾಮ್ ಸಮರ್ಥಿಸಿಕೊಳ್ಳುತ್ತಿದ್ದಾರೆ

- Advertisement -
- Advertisement -

ಎಲ್ಲ ಸಂದರ್ಭಗಳನ್ನೂ ತನ್ನ ಹಿತಾಸಕ್ತಿಗೆ ಬಳಸಿಕೊಳ್ಳುವ ಅರೆ-ಸರ್ವಾಧಿಕಾರಿ ’ಡೆಮಾಕ್ರಸಿ’ಯನ್ನು ಕೊರೊನಾ ವೈರಸ್ ಬಯಲು ಮಾಡಿತ್ತು. ಈಗ ಸಾಂಕ್ರಾಮಿಕವನ್ನು ನಿವಾರಿಸುವ ಲಸಿಕೆಯನ್ನೂ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲಾಗುತ್ತಿದೆಯೇ?

ಭಾರತದಲ್ಲಿ ಕೊರೊನಾ ಶಮನಕ್ಕೆ ನಾಲ್ಕು ಲಸಿಕೆ ಸಿದ್ಧವಾಗಿವೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ. ಕಳೆದ ಐದಾರು ದಿನದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಆಗಾಗ ಲಸಿಕೆಯ ಪ್ರಸ್ತಾಪ ಮಾಡುವುದು, ಟಿವಿ ಮಾಧ್ಯಮಗಳು ಮೋದಿನೇ ಲಸಿಕೆ ಕಂಡು ಹಿಡಿದರು ಎಂಬಂತೆ ಸ್ಟೋರಿ ಮಾಡುವುದು ನಡೆದೇ ಇದೆ.

ಆಕ್ಸ್‌ಫರ್ಡ್-ಅಸ್ಟ್ರಾಜೆನಿಕಾ ಲಸಿಕೆ, ಫಿಜರ್ ಲಸಿಕೆ-ಯಾವುದೇ ಇರಲಿ, ಅದು ಪಾಕಿಸ್ತಾನ, ನೈಜಿರಿಯಾ ಸೇರಿದಂತೆ ಎಲ್ಲ ದೇಶಗಳಿಗೂ ಲಭ್ಯವಾಗಲಿದೆ. ಭಾರತವೂ ಸೇರಿ ಕಡಿಮೆ ಆದಾಯದ ದೇಶಗಳ ಜನರಿಗೆ ಸುಲಭವಾಗಿ ಲಸಿಕೆ ಸಿಗುವಂತೆ ಮಾಡಲು ಬಿಲ್ ಗೇಟ್ಸ್ ಫೌಂಡೇಶನ್‌ನಂತಹ ಹಲವಾರು ಎನ್‌ಜಿಒಗಳು ಈಗಾಗಲೇ ಸಕಲ ವ್ಯವಸ್ಥೆ ಮಾಡಿವೆ.

ಆದರೆ, ಭಾರತದಲ್ಲಿ ಮಾತ್ರ, ಒಂದು ಗುಂಪು ಲಸಿಕೆಯ ವಿಷಯದಲ್ಲೂ ರಾಜಕೀಯ ಲಾಭ ಮಾಡಿಕೊಳ್ಳಲು ಹವಣಿಸುತ್ತಿದೆ ಎಂಬ ಅನುಮಾನ ಮೂಡತೊಡಗಿದೆ.

ಇದನ್ನೂ ಓದಿ: ಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಲಭ್ಯವಾಗಲಿರುವ (ಲಭ್ಯ ಆಗಬಹುದಾದ!) ನಾಲ್ಕು ಲಸಿಕೆಗಳ ಪೈಕಿ ಒಂದು ’ದೇಸಿ’ ಲಸಿಕೆಯಿದೆ. ಅದು ’ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್’ (ಐಸಿಎಂಆರ್) ಸಹಯೋಗದಲ್ಲಿ ಹೈದರಾಬಾದಿನ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೊವಾಕ್ಸಿನ್ ಎಂಬ ಲಸಿಕೆ.

ಶನಿವಾರ ಈ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಮೂರನೇ ಹಂತದ ಟ್ರಯಲ್‌ಗಳನ್ನು ಪೂರ್ಣಗೊಳಿಸದೇ ಇದ್ದರೂ, ಕೆಲವು ಕಂಡಿಷನ್‌ಗಳ ಮೇಲೆ ಈ ಲಸಿಕೆಯ ಬಳಕೆಗೆ ಅನುಮತಿ ನೀಡಲಾಗಿದೆ. ಸಂಪೂರ್ಣ ಸಿದ್ಧವಾದ ಮೂರು ಲಸಿಕೆ ಇರುವಾಗ, ಸದಾ ವಿವಾದಾತ್ಮಕವಾಗಿಯೇ ತನ್ನ ಪ್ರಕ್ರಿಯೆ ನಡೆಸಿರುವ ಈ ಕೊವಾಕ್ಸಿನ್ ಎಂಬ ದೇಸಿ ತಳಿಯ ಅಗತ್ಯವಾದರೂ ಏನಿತ್ತು ಎಂಬ ಸಂಶಯ ಕಾಡುತ್ತದೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಮಸೂದೆ: ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ರಾಜ್ಯ ಸರ್ಕಾರ

2020 ರ ನವಂಬರ್ 9 ರಂದು ಕೊವಾಕ್ಸಿನ್ ಮೂರನೇ ಹಂತವು, ’ಕ್ಲಿನಿಕಲ್ ಟ್ರಯಲ್ ರಿಜಿಸ್ಟ್ರಿ ಆಫ್ ಇಂಡಿಯಾ’ದಲ್ಲಿ ನೋಂದಣಿಯಾಗಿತ್ತು. 25,800 ಸ್ವಯಂಸೇವಕರ ಮೇಲೆ ಪ್ಲಾಸೆಬೊ ಆಧರಿತ ವಿವಿಧ ಪ್ರಯೋಗ ನಡೆಸಬೇಕಿತ್ತು. ಈ ಪ್ರಕ್ರಿಯೆಗೆ ಸ್ವಯಂಸೇವಕರ ಸೇರ್ಪಡೆ (ರಿಕ್ರೂಟ್‌ಮೆಂಟ್) ಶುರುವಾಗಿದ್ದೇ 2020ರ ನವಂಬರ್ 16 ರಂದು. ತನಗೆ ಸ್ವಯಂಸೇವಕರ ಕೊರತೆಯಿದೆ ಎಂದು ಭಾರತ್ ಬಯೋಟೆಕ್ ಒಪ್ಪಿಕೊಂಡ ಕೆಲವೇ ವಾರಗಳಲ್ಲಿ ಇದೀಗ ದೇಶದ ಔಷಧ ನಿಯಂತ್ರಣ ಮಂಡಳಿ ರಚಿಸಿದ ವಿಷಯವಾರು ತಜ್ಞ ಸಮಿತಿ ಕೊವಾಕ್ಷಿನ್ ತುರ್ತು ಬಳಕೆಗೆ ಅವಕಾಶ ನೀಡಿಬಿಟ್ಟಿದೆ!

ಬಾಕ್ಸ್ ಲಸಿಕೆಯನ್ನು ಎಲ್ಲರಿಗೂ ಉಚಿತವಾಗಿ ನೀಡಬೇಕಾದ್ದು ಸರ್ಕಾರದ ಕರ್ತವ್ಯ. ಇದಕ್ಕೇನೂ ಪಿಎಂ-ಕೇರ್ಸ್ ಹೆಸರಲ್ಲಿ ಗುಡ್ಡೆ ಹಾಕಿದ ಹಣ ನೀಡುವುದೂ ಬೇಡ. ಆರೋಗ್ಯ ಇಲಾಖೆಯ ಬಜೆಟ್, ವಿಪತ್ತು ನಿರ್ವಹಣಾ ನಿಧಿ ಬಳಸಿಕೊಂಡರೆ ಸಾಕು. ಆದರೆ, 3 ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಉಚಿತ ಲಸಿಕೆ ಎಂದು ಸರ್ಕಾರ ಹೇಳಿದೊಡನೆ, ಉಳಿದವರು ರೊಕ್ಕ ಕೊಡಬೇಕು ಎಂದಾಗುತ್ತದೆ. ನಂತರದಲ್ಲಿ ಎಲ್ಲರಿಗೂ ಉಚಿತ ಎಂದು ಹೇಳುವ ಮೂಲಕ ತಾವೇನೋ ಮಹಾನ್ ಸಾಧನೆ ಮಾಡುತ್ತಿದ್ದೇವೆ ಎಂಬಂತೆ ಪೋಸ್ ಕೊಡಲಾಗುತ್ತಿದೆ.
ಏನೇ ಇರಲಿ, ಪ್ರಧಾನಮಂತ್ರಿ, ಗೃಹ ಮಂತ್ರಿ, ಆರೋಗ್ಯ ಮಂತ್ರಿ ಮತ್ತು ಇತರೆಲ್ಲ ಕೇಂದ್ರ ಸಚಿವರು ಕೊವಾಕ್ಸಿನ್ ಲಸಿಕೆ ಹಾಕಿಸಿಕೊಳ್ಳಲೇಬೇಕು. ಆ ಮೂಲಕ ದೇಸಿ ಲಸಿಕೆಗೆ ಗೌರವ ತೋರಬೇಕು ಅಲ್ಲವಾ?

ಇದನ್ನೂ ಓದಿ: ರೈತರ ಪ್ರತಿಭಟನೆ ಕುರಿತು ಅವಹೇಳನ: ಮೂವರು ಬಿಜೆಪಿ ನಾಯಕರಿಗೆ ಲೀಗಲ್ ನೋಟಿಸ್

ಐಸಿಎಂಆರ್ ಭಾರತ್ ಬಯೋಟೆಕ್‌ಗೆ ಸಹಯೋಗ ನೀಡಿದೆ. ಹೀಗಾಗಿ ಕೊವಾಕ್ಸಿನ್ ವಿವಾದ ಶುರುವಾಗುವುದೇ ಐಸಿಎಂಆರ್‌ನಿಂದ. ಐಸಿಎಂಆರ್ ಮುಖ್ಯಸ್ಥ ಡಾ.ಬಲರಾಮ್ ಭಾರ್ಗವ್ ಜುಲೈ 2 ರಂದು ಕೊವಾಕ್ಸಿನ್ ಉಸ್ತುವಾರಿ ನೋಡಿಕೊಳ್ಳುವ ಅಧಿಕಾರಿಗಳಿಗೆ ಒಂದು ಪತ್ರ ಬರೆದಿದ್ದರು. ಅಗಸ್ಟ್ 15 ರೊಳಗೆ ಲಸಿಕೆ ಸಿದ್ಧವಾಗಬೇಕು ಎಂದು ಆದೇಶಿಸಿದ್ದರು. ಆಗಿನ್ನೂ ಕೊವಾಕ್ಸಿನ್ ಮೊದಲ ಹಂತದ ಟ್ರಯಲ್ ಕೂಡ ಆರಂಭಿಸಿರಲಿಲ್ಲ. ಇದು ಟೀಕೆಗೆ ಒಳಗಾದ ನಂತರ ಡಾ. ಬಲರಾಮ್, ’ಹಾಗಲ್ಲ, ಕೆಲಸ ಬೇಗ ಬೇಗ ನಡೆಯಲಿ ಎಂಬ ಕಾರಣಕ್ಕೆ ಆ ಪತ್ರ ಬರೆದಿದ್ದು’ ಎಂದು ಲೋಕಲ್ ಪುಢಾರಿಯ ಧಾಟಿಯಲ್ಲಿ ಸಮಜಾಯಿಷಿ ನೀಡಿದ್ದರು! ಹೇಗಾದರೂ ಮಾಡಿ ಅಗಸ್ಟ್ 15 ರಂದು ಕೆಂಪುಕೋಟೆಯ ಮೇಲೆಯೇ ಲಸಿಕೆ ಬಿಡುಗಡೆ ಮಾಡಬೇಕು ಎಂದು ಅಂದುಕೊಂಡಿದ್ದರೇನೋ?

ಕೊವಾಕ್ಸಿನ್ 3 ನೆ ಮತ್ತು ಕೊನೆ ಹಂತದ ಟ್ರಯಲ್‌ನಲ್ಲಿ ಡಿಸೆಂಬರ್ 28 ರೊಳಗೆ ದೇಶದ ವಿವಿಧ ಭಾಗಗಳಲ್ಲಿ 26,000 ಸ್ವಯಂಸೇವಕರ ಮೇಲೆ ಪ್ರಯೋಗ ನಡೆಯಬೇಕಿತ್ತು. ಆದರೆ ದಾಖಲೆಗಳ ಪ್ರಕಾರ, ಭಾರತ್ ಬಯೋಟೆಕ್ ಕಂಪನಿಯು ಡಿಸೆಂಬರ್ 22 ರವರೆಗೆ ಕೇವಲ 13,000 ಸ್ವಯಂಸೇವಕರನ್ನು ನೋಂದಣಿ ಮಾಡಿಕೊಳ್ಳಲು ಶಕ್ತವಾಗಿತ್ತಷ್ಟೇ!

ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ಮೂರನೇ ಹಂತದ ಟ್ರಯಲ್ ಅಪೂರ್ಣವಾಗಿದ್ದರೂ, ವಿಷಯವಾರು ತಜ್ಞ ಸಮಿತಿಯು ಕೊವಾಕ್ಸಿನ್ ತುರ್ತು ಬಳಕೆಗೆ ಅನುಮತಿ ನೀಡಿದ್ದನ್ನು ಐಸಿಎಂಆರ್ ಮುಖ್ಯಸ್ಥ ಡಾ.ಬಲರಾಮ್ ಸಮರ್ಥಿಸಿಕೊಳ್ಳುತ್ತಿದ್ದಾರೆ. ’ಲಸಿಕೆಯ ವಿಷಯದಲ್ಲಿ ಉಪಯೋಗ ಮತ್ತು ರಿಸ್ಕ್ ಎರಡೂ ಇರುತ್ತವೆ. ರಿಸ್ಕ್‌ಗಿಂತ ಉಪಯೋಗವೇ ಹೆಚ್ಚಿದೆ ಎಂದು ಅನಿಸಿದ ಕಾರಣಕ್ಕೆ ಔಷಧ ನಿಯಂತ್ರಕ ಮಂಡಳಿ ನೇಮಿಸಿದ ತಜ್ಞರ ಸಮಿತಿಯು ತುರ್ತು ಬಳಕೆಗೆ ಅವಕಾಶ ನೀಡಿದೆ. ಈ ತುರ್ತು ಕಾಲದಲ್ಲಿ ಇದು ಸರಿಯಾದ ತೀರ್ಮಾನವೇ ಆಗಿದೆ’ ಎಂದು ಕೊವಾಕ್ಸಿನ್ ಅನ್ನು ಬೆಂಬಲಿಸಿದ್ದಾರೆ.

ನೆನಪಿರಲಿ, ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಸಹಯೋಗದಲ್ಲಿ ಈ ಕೊವಾಕ್ಸಿನ್ ಲಸಿಕೆ ತಯಾರಾಗಿದೆ. ಇದು ಈಗ ಏಕೈಕ ಸಂಪೂರ್ಣ ’ದೇಸಿ’ ಲಸಿಕೆ! ಆತ್ಮನಿರ್ಭರ ಅಂತಾ ಅದೇನೋ ಹೇಳ್ತಾರಲ್ಲ, ಅಂತಹದ್ದು ಇದು!


ಇದನ್ನೂ ಓದಿ: ಬಿಜೆಪಿ ಮೇಲೆ ನಂಬಿಕೆಯಿಲ್ಲ, ಕೊರೊನಾ ಲಸಿಕೆ ತೆಗೆದುಕೊಳ್ಳುವುದಿಲ್ಲ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...