Homeಮುಖಪುಟಒಕ್ಕೂಟ ಸರ್ಕಾರ ತನ್ನ ’ಸೂಟ್-ಬೂಟ್’‌ ಗೆಳೆಯರ ಬಗ್ಗೆ ಅನುಭೂತಿ ಹೊಂದಿದೆ: ಕಾಂಗ್ರೆಸ್

ಒಕ್ಕೂಟ ಸರ್ಕಾರ ತನ್ನ ’ಸೂಟ್-ಬೂಟ್’‌ ಗೆಳೆಯರ ಬಗ್ಗೆ ಅನುಭೂತಿ ಹೊಂದಿದೆ: ಕಾಂಗ್ರೆಸ್

ಭಾನುವಾರ ಟ್ವೀಟ್ ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಚಂಪಾರನ್ ಹೋರಾಟದಂತಹ ಪರಿಸ್ಥಿತಿಯನ್ನು ಭಾರತವು ಎದುರಿಸುತ್ತಿದೆ ಎಂದು ಬರೆದಿದ್ದಾರೆ.

- Advertisement -
- Advertisement -

ಒಕ್ಕೂಟ ಸರ್ಕಾರವು ರೈತರ ಬಗ್ಗೆ ನಿರಾಸಕ್ತಿ ತೋರುತ್ತಿದೆ ಮತ್ತು ತನ್ನ “ಸೂಟ್-ಬೂಟ್ ಗೆಳೆಯರ” ಬಗ್ಗೆ ಅನುಭೂತಿ ಹೊಂದಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಭಾನುವಾರ ಟ್ವೀಟ್ ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಚಂಪಾರನ್ ಹೋರಾಟದಂತಹ ಪರಿಸ್ಥಿತಿಯನ್ನು ಭಾರತವು ಎದುರಿಸುತ್ತಿದೆ ಎಂದು ಬರೆದಿದ್ದಾರೆ.

ರಾಹುಲ್ ಗಾಂಧಿ ತಮ್ಮ ಟ್ವೀಟ್‌ನಲ್ಲಿ, “ದೇಶವು ಮತ್ತೊಮ್ಮೆ ಚಂಪಾರನ್ ನಂತಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಆಗ, ಬ್ರಿಟಿಷ್ ಕಂಪನಿ ಬಲಶಾಲಿಯಾಗಿದ್ದು, ಈಗ ಮೋದಿ ಮತ್ತು ಸ್ನೇಹಿತರ ಕಂಪೆನಿಗಳು ಬಲಶಾಲಿಗಳಾಗಿದ್ದಾರೆ. ಆದರೆ ಪ್ರತಿ ಆಂದೋಲನ ಮಾಡುತ್ತಿರುವ ಪ್ರತಿಯೊಬ್ಬ ರೈತ ಹಾಗೂ ಕಾರ್ಮಿಕರು ಸತ್ಯಾಗ್ರಹಿಯಾಗಿದ್ದು, ಅವರು ತಮ್ಮ ಹಕ್ಕುಗಳನ್ನು ಪಡೆದೇ ತೀರುತ್ತಾರೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆಯ 190ನೇ ಜನ್ಮದಿನ: ಗಣ್ಯರ ಶುಭಾಶಯ

 

ಒಕ್ಕೂಟ ಸರ್ಕಾರದ ಸಚಿವರು ಬುಧವಾರ ಪ್ರತಿಭಟನಾ ನಿರತ ರೈತ ಮುಖಂಡರೊಂದಿಗೆ ಆರನೇ ಸುತ್ತಿನ ಮಾತುಕತೆ ನಡೆಸಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರ ಅಭಿಪ್ರಾಯಗಳು ವ್ಯಕ್ತವಾಗಿದೆ.

ನವದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಗೌರಭ್ ವಲ್ಲಭ್, ಗಡಿಯಲ್ಲಿ ರೈತರು ಹುತಾತ್ಮರಾಗುತ್ತಿದ್ದಾರೆ. ಕೊರೆಯುವ ಚಳಿಯ ಬಗ್ಗೆ ತಿಳಿದು, ರೈತರ ಬೇಡಿಕೆಗಳನ್ನು ತುರ್ತಾಗಿ ಪರಿಹರಿಸಬೇಕು ಮತ್ತು ಕಾನೂನುಗಳನ್ನು ರದ್ದುಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

“ಒಂದು ಕಡೆ, ಪ್ರತಿಭಟನಾ ನಿರತ ರೈತರ ಅವಸ್ಥೆ ಮತ್ತು ಅವರ ಬೇಡಿಕೆಗಳ ಬಗ್ಗೆ ಸಂಪೂರ್ಣ ಅಸೂಕ್ಷ್ಮತೆ ಮತ್ತೊಂದೆಡೆ ಬಿಜೆಪಿ ಸರ್ಕಾರದ ಆಪ್ತ ಸ್ನೇಹಿತರು ತಮ್ಮ ವ್ಯವಹಾರದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾಬಲ್ಯವನ್ನು ವಿಸ್ತರಿಸಲು ಸಂಪೂರ್ಣ ಅನುಭೂತಿ ಮತ್ತು ಆಶೀರ್ವಾದಗಳನ್ನು ಪಡೆಯುತ್ತಿದ್ದಾರೆ” ವಲ್ಲಭ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

“ರೈತರು ತಮ್ಮ ಪ್ರತಿಭಟನೆಗೆ ಪ್ರತಿಯಾಗಿ ಸುಳ್ಳು ಭರವಸೆಗಳನ್ನು ಮಾತ್ರ ಪಡೆಯುತ್ತಿದ್ದಾರೆ, ಆದರೆ ಸರ್ಕಾರದ ಸ್ನೇಹಿತರು ತಮ್ಮ ಜೇಬುಗಳನ್ನು ತುಂಬಲು ಒಪ್ಪಂದಗಳ ಮೇಲೆ ಒಪ್ಪಂದಗಳನ್ನು ಪಡೆಯುತ್ತಿದ್ದಾರೆ. ರೈತರು ಪ್ರತಿಭಟನೆ ಮುಂದುವರಿಸುತ್ತಿರುವುದರ ಹೊರತಾಗಿಯೂ, ಇದೆಲ್ಲ ನಡೆಯುತ್ತಿದೆ. ಇದು ಗಂಭೀರ ಕಳವಳಕಾರಿ ಸಂಗತಿಯಾಗಿದೆ. ಸರ್ಕಾರವು ದೇಶವನ್ನು ಮರುಳು ಮಾಡುತ್ತಿದೆ” ಎಂದು ಅವರು ಹೇಳಿದರು.

ಆಹಾರ ಧಾನ್ಯವನ್ನು ಶೇಖರಿಸಿಡಲು ಅದಾನಿ ಆಗ್ರೋ ಲಾಜಿಸ್ಟಿಕ್ಸ್ ಲಿಮಿಟೆಡ್‌ಗೆ 30 ವರ್ಷಗಳ ಅವಧಿಯ ಒಪ್ಪಂದವನ್ನು ನೀಡಲಾಗಿದೆ. ಈ ಮೂಲಕ ಅವರ ಸೇವೆಗಳನ್ನು ಪಡೆಯುತ್ತೇವೆಂದು ಅವರಿಗೆ ಭರವಸೆ ನೀಡಲಾಗಿದೆ. ಆದರೆ ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಭರವಸೆಯನ್ನು ಸರ್ಕಾರ ನೀಡುತ್ತಿಲ್ಲ ಎಂದು ಅವರು ಸೂಚಿಸಿದ್ದಾರೆ.

ರೈತರ ಹೋರಾಟ 37 ನೇ ದಿನಕ್ಕೆ ಕಾಲಿಟ್ಟಿದೆ. ಆರನೇ ಸುತ್ತಿನ ಮಾತುಕತೆಯಲ್ಲಿ ವಿದ್ಯುತ್ ತಿದ್ದುಪಡಿ ಕಾಯ್ದೆ ಮತ್ತು ವಾಯುಮಾಲಿನ್ಯ ಕಾಯ್ದೆಯನ್ನು ಪರಿಶೀಲನೆ ನಡೆಸಲಿದೆ ಎಂದು ಒಕ್ಕೂಟ ಸರ್ಕಾರ ಹೇಳಿದೆ. ಆದರೆ ರೈತರ ಪ್ರಮುಖ ಬೇಡಿಕೆಯಾದ ಕನಿಷ್ಠ ಬೆಂಬಲ ಬೆಲೆ ಮತ್ತು ಮೂರು ಕೃಷಿ ಕಾಯ್ದೆಗಳ ಬಗ್ಗೆ ತನ್ನ ಹಠಮಾರಿ ಧೋರಣೆಯಿಂದ ಒಕ್ಕೂಟ ಸರ್ಕಾರ ಹಿಂದೆ ಸರಿದಿಲ್ಲ. ರೈತರು ತಮ್ಮ ಪಟ್ಟನ್ನು ಬಿಗಿಗೊಳಿಸಿದ್ದು, ಕೃಷಿಕಾನೂನನ್ನು ರದ್ದುಪಡಿಸದೆ ಯಾವುದೇ ಕಾರಣಕ್ಕೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಘೋಷಿಸಿದ್ದಾರೆ. ಒಕ್ಕೂಟ ಸರ್ಕಾರ ಏಳನೇ ಸುತ್ತಿನ ಮಾತುಕತೆಗೆ ರೈತರನ್ನು ಸೋಮವಾರ ಆಹ್ವಾನಿಸಿದೆ.

ಇದನ್ನೂ ಓದಿ: ಬಿಜೆಪಿ ಮೇಲೆ ನಂಬಿಕೆಯಿಲ್ಲ, ಕೊರೊನಾ ಲಸಿಕೆ ತೆಗೆದುಕೊಳ್ಳುವುದಿಲ್ಲ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...