Homeಕರೋನಾ ತಲ್ಲಣ3 ನೇ ಹಂತದ ಪ್ರಯೋಗ ಮುಗಿಸದೆ ’ಕೊವ್ಯಾಕ್ಸಿನ್’‌ಗೆ ಅನುಮತಿ ನೀಡಿದ ಒಕ್ಕೂಟ ಸರ್ಕಾರ?

3 ನೇ ಹಂತದ ಪ್ರಯೋಗ ಮುಗಿಸದೆ ’ಕೊವ್ಯಾಕ್ಸಿನ್’‌ಗೆ ಅನುಮತಿ ನೀಡಿದ ಒಕ್ಕೂಟ ಸರ್ಕಾರ?

- Advertisement -
- Advertisement -

ಭಾರತೀಯ ಔಷಧ ನಿಯಂತ್ರಕ ಈಗಾಗಲೇ ಕೋವಿಶೀಲ್ಡ್‌ ಹಾಗೂ ಕೊವ್ಯಾಕ್ಸಿನ್‌ ಕೊರೊನಾ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಿದೆ. ಇದರ ಬೆನ್ನಿಗೆ ದೇಶಿಯವಾಗಿ ಅಭಿವೃದ್ಧಿ ಪಡಿಸಲಾಗಿರುವ ’ಕೊವ್ಯಾಕ್ಸಿನ್’ ಲಸಿಕೆಯ ಬಗ್ಗೆ ಹಲವಾರು ಅನುಮಾನಗಳು ಎದ್ದಿದೆ. ಕಾಂಗ್ರೆಸ್ ಪಕ್ಷವು ಕೋವ್ಯಾಕ್ಸಿನ್‌ ಲಸಿಕೆಯ 3 ನೇ ಹಂತದ ಪ್ರಯೋಗ ಇನ್ನೂ ಮುಗಿದಿಲ್ಲ. ಒಕ್ಕೂಟ ಸರ್ಕಾರದ ನಿರ್ಧಾರವು ಅಕಾಲಿಕವಾಗಿದ್ದು, ಅಪಾಯಕಾರಿ ಎನಿಸಿಕೊಳ್ಳಬಹುದು ಎಂದು ಎಚ್ಚರಿಸಿದೆ.

ಇದನ್ನೂ ಓದಿ: ಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? – ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ಗೃಹ ಸಚಿವಾಲಯದ ಸಂಸದೀಯ ಸಮಿತಿಯ ಮುಖ್ಯಸ್ಥರಾಗಿರುವ, ಕಾಂಗ್ರೆಸ್‌ನ ಹಿರಿಯ ಮುಖಂಡ ಆನಂದ್ ಶರ್ಮಾ, “ತಜ್ಞರ ಸಮಿತಿಯ ಮುಂದೆ ಸಲ್ಲಿಸಿದ ವರದಿ ಪ್ರಕಾರ, ಮೂರನೇ ಹಂತದ ಪ್ರಯೋಗಗಳು ಪೂರ್ಣಗೊಂಡಿಲ್ಲ. ಸುರಕ್ಷತೆ, ಪರಿಣಾಮಕಾರಿತ್ವದ ಅಂಕಿಅಂಶವನ್ನು ಪರಿಶೀಲಿಸಲಾಗಿಲ್ಲ. ಕಡ್ಡಾಯ ಮೂರನೇ ಹಂತದ ಪ್ರಯೋಗಗಳು ಹಾಗೂ ದತ್ತಾಂಶ ಪರಿಶೀಲನೆಯನ್ನು ಯಾವುದೇ ದೇಶ ವಿತರಿಸದ ಕಾರಣ ಲಸಿಕೆ ಬಳಕೆಗೆ ಅನುಮತಿ ನೀಡುವ ವಿಷಯವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕಾಗಿದೆ” ಎಂದು ಎಚ್ಚರಿಸಿದ್ದಾರೆ.

ಅಲ್ಲದೆ, ಕಾಂಗ್ರೆಸ್‌ನ ಮತ್ತೊಬ್ಬ ನಾಯಕ ಶಶಿ ತರೂರ್‌ ಕೂಡಾ ಕೊವ್ಯಾಕ್ಸಿನ್‌ ಲಸಿಕಯ ತರ್ತು ಬಳಕೆಯ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದಾರೆ. “ಕೊವ್ಯಾಕ್ಸಿನ್ ಇನ್ನೂ 3ನೇ ಹಂತದ ಪ್ರಯೋಗವನ್ನು ಮುಗಿಸಿಲ್ಲ. ಈ ನಿರ್ಧಾರವು ಅಕಾಲಿಕವಾಗಿದ್ದು, ಅಪಾಯಕಾರಿ ಎನಿಸಿಕೊಳ್ಳಬಹುದು. ಸಂಪೂರ್ಣ ಕ್ಲಿನಿಕಲ್ ಪ್ರಯೋಗಗಳು ಮುಗಿಯುವವರೆಗೂ ಇದರ ಬಳಕೆಯನ್ನು ತಪ್ಪಿಸಬೇಕು. ಈ ಮಧ್ಯೆ ಆಸ್ಟ್ರಾಝೆನೆಕಾ ಲಸಿಕೆಯೊಂದಿಗೆ ಭಾರತ ಮುಂದುವರಿಯಬಹುದು” ಎಂದು ಹೇಳಿರುವ ಶಶಿ ತರೂರ್, ಇದರ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರಿಂದಲೂ ಸ್ಪಷ್ಟನೆ ಕೇಳಿದ್ದಾರೆ.

ಇದನ್ನೂ ಓದಿ: ಕೋವಿಶೀಲ್ಡ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಿದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...