Homeಕರ್ನಾಟಕ70 ವರ್ಷ ಕಳೆದರೂ ದಲಿತ ಮುಖ್ಯಮಂತ್ರಿ ಅಗಿಲ್ಲ - ಡಾ. ಜಿ. ಪರಮೇಶ್ವರ್

70 ವರ್ಷ ಕಳೆದರೂ ದಲಿತ ಮುಖ್ಯಮಂತ್ರಿ ಅಗಿಲ್ಲ – ಡಾ. ಜಿ. ಪರಮೇಶ್ವರ್

ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಎಂದೋ ಆಗಬೇಕಿತ್ತು. ಆದರೆ ಸಮಾಜ ಮತ್ತು ರಾಜಕೀಯ ಮುಖಂಡರ ಮನಸ್ಥಿತಿ ಅದಕ್ಕೆ ಒಗ್ಗಿಕೊಂಡಿಲ್ಲದಿರುವುದನ್ನು ಇದು ಸೂಚಿಸುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.

- Advertisement -
- Advertisement -

ಸ್ವಾತಂತ್ರ್ಯ ಬಂದು 70 ವರ್ಷಗಳ ಬಳಿಕವಾದರೂ ರಾಜ್ಯದಲ್ಲಿ ದಲಿತರೊಬ್ಬರು ಮುಖ್ಯಮಂತ್ರಿಯಾಗಬೇಕಿತ್ತು. ಆದರೆ ನಾನು ಉಪಮುಖ್ಯಮಂತ್ರಿಯಾಗುವಂತೆ ಆಯಿತು. ಅಧಿಕಾರ ಹಂಚಿಕೆಕೊಂಡು ಸಮಾನತೆ ಕಾಣಬೇಕು ಎಂಬ ಮನಸ್ಥಿತಿ ಬಾರದೆ ಇರುವುದು ನೋವಿನ ಸಂಗತಿ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ಡಾ.ಜಿ.ಪರಮೇಶ್ವರ್ ಕಳವಳ ವ್ಯಕ್ತಪಡಿಸಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ಸೂಲಗಿತ್ತಿ ನರಸಮ್ಮ ಪುತ್ರ ಪಾವಗಡ ಶ್ರೀರಾಮ್ ಅವರ ನಿವಾಸಕ್ಕೆ ಭೇಟಿ ನೀಡಿ ಕೆಲ ಕಾಲ ಅಲ್ಲಿ ಸೇರಿದ್ದವರೊಂದಿಗೆ ಮಾತುಕತೆ ನಡೆಸಿದರು. ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಎಂದೋ ಆಗಬೇಕಿತ್ತು. ಆದರೆ ಸಮಾಜ ಮತ್ತು ರಾಜಕೀಯ ಮುಖಂಡರ ಮನಸ್ಥಿತಿ ಅದಕ್ಕೆ ಒಗ್ಗಿಕೊಂಡಿಲ್ಲದಿರುವುದನ್ನು ಇದು ಸೂಚಿಸುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಿಲ್ಲ: ಸಿದ್ದರಾಮಯ್ಯ ಮಾತಿಗೆ ರಾಜಕೀಯ ಬಣ್ಣ ಬೇಡ – ಡಾ.ಜಿ.ಪರಮೇಶ್ವರ್

ಹೋರಾಟ ನನ್ನ ಸ್ವಂತಕ್ಕೆ ಮಾಡುತ್ತಿಲ್ಲ. ಬಾಲ್ಯದಿಂದಲೂ ನಾನು ಸಮಾಜದಲ್ಲಿ ಬದಲಾವಣೆಯ ಉದ್ದೇಶಕ್ಕಾಗಿ ಶ್ರಮಿಸುತ್ತಿದ್ದೇನೆ. ಸಮಾಜದಲ್ಲಿ ಜಾತಿಪದ್ದತಿ ಇದ್ದು ಇದು ಸಮಾಜಕ್ಕೆ ಅಂಟಿದ ರೋಗ. ಜಾತಿ ಪದ್ದತಿ ಮತ್ತು ಶೋಷಣೆ ವಿರುದ್ಧ ಹೋರಾಡುತ್ತಾ ಬಂದಿದ್ದೇನೆ. ದಲಿತರು ಸುಖವಾಗಿ ಅಂದರೆ ನಮ್ಮದಿಯಿಂದ ಬದುಕು ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಬೇಕು. ಆದರೆ ಅಂತಹ ಪರಿಸ್ಥಿತಿ ಇಂದಿಗೂ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಯಾವುದೇ ಚುನಾವಣೆಗಳು ಇಲ್ಲ. ಕಾಂಗ್ರೆಸ್ ಅಧಿಕಾರದಲ್ಲೂ ಇಲ್ಲ. ಆದರೆ ಡಾ.ಜಿ.ಪರಮೇಶ್ವರ್ ದಲಿತ ಮುಖ್ಯಮಂತ್ರಿ ಆಗಬೇಕಿತ್ತು. ಆದರೆ ನಾನು ಉಪಮುಖ್ಯಮಂತ್ರಿಯಾಗಿದ್ದು ಕಾಕತಾಳೀಯ ಎಂದು ಹೇಳಿರುವುದು ಮತ್ತೊಮ್ಮೆ ದಲಿತ ಮುಖ್ಯಮಂತ್ರಿಯ ವಿಚಾರವನ್ನು ಹರಿಯಬಿಟ್ಟಂತೆ ಆಗಿದೆ. ಪಾವಗಡ ಶ್ರೀರಾಂ ದಲಿತ ಮುಖ್ಯಮಂತ್ರಿಯಾಗಬೇಕು ಎಂದು ಹೋರಾಟ ಮಾಡಿದವರಲ್ಲಿ ಒಬ್ಬರು ಎಂದು ಪರಮೇಶ್ವರ್ ನೆನಪಿಸಿದರು.

ಸೂಲಗಿತ್ತಿ ನರಸಮ್ಮ ಶಾಲೆಗೆ ಹೋಗಲಿಲ್ಲ. ಅಕ್ಷರ ಕಲಿಯಲಿಲ್ಲ. ಆದರೂ ಸಾವಿರಾರು ಹೆರಿಗೆಗಳನ್ನು ಮಾಡಿಸಿ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ. ಅವರ ಕೊಡುಗೆ ಅವಿಸ್ಮರಣೀಯ. ವೈದ್ಯರೇ ಇಲ್ಲದ ಕಾಲದಲ್ಲಿ ಬರಿಗೈಯಲ್ಲಿ ಹೆರಿಗೆ ಮಾಡಿಸುವುದು ಅಂದರೆ ಕಷ್ಟದ ಕೆಲಸ. ಅಂಥಾ ಸಂದರ್ಭದಲ್ಲಿ ಹೆರಿಗೆ ಮಾಡಿಸಿ ಹೆಣ್ಣು ಮಕ್ಕಳ ಬಾಳಿನಲ್ಲಿ ನಗುವನ್ನು ಕಂಡವರು ನರಸಮ್ಮ ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಹುದ್ದೆಯೆ ತಿರಸ್ಕರಿಸಿದ ನಾವು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪರಮೇಶ್ವರ ಅವರು ಉಪ ಮುಖ್ಯಮಂತ್ರಿ ಆಗಿದ್ದೇ ತಪ್ಪಾಗಿದೆ. ಯಾಕಂದ್ರೆ ಅವರು ಬ್ರಾಹ್ಮಣರ ಗುಲಾಮರಾಗಿ ಉಪಮುಖ್ಯಮಂತ್ರಿ ಆಗಿದ್ದಾಗಿ ವಿಧಾನ ಸೌಧ ದಲ್ಲಿ ಪೂಜೆ ಬ್ರಾಹ್ಮಣರ ನ್ನು ಕರೆಯಿಸಿ ಪೂಜೆ ಮಾಡಿ. ಬಾಬಾಸಾಹೆಬರಿಗೆ ಅಪಮಾನ್ ಮಾಡಿದ್ರು. ಬಾಬಾಸಾಹೆಬರು ತೋರಿಸಿದ್ದು ಭೌದ್ಧ ಧರ್ಮದ ದಾರಿ. ಕೊನೇಗೆ ಸರ್ಕಾರ ಬಿದ್ದಿದ್ದೆ ಒಳ್ಳೆದಾಯ್ತು. ನಮಗೆ ಬ್ರಾಹ್ಮಣರ ಗುಲಾಮರು ಮಂತ್ರಿಗಳು ಬೆಡಾ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...